Homeಕರ್ನಾಟಕರಾಜ್ಯ ಸರ್ಕಾರದ ವಿರುದ್ಧ ಸಾರಿಗೆದಾರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ರಾಜ್ಯ ಸರ್ಕಾರದ ವಿರುದ್ಧ ಸಾರಿಗೆದಾರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

- Advertisement -
- Advertisement -

ರಾಜ್ಯ ಸರ್ಕಾರದ “ಸಾರಿಗೆ ವಿರೋಧಿ ವ್ಯಾಪಾರ ನೀತಿಗಳನ್ನು” ವಿರೋಧಿಸಿ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದ ಭಾಗವಾಗಿ ಸೋಮವಾರ ಮಧ್ಯರಾತ್ರಿಯಿಂದ ಆರು ಲಕ್ಷಕ್ಕೂ ಹೆಚ್ಚು ಸಾರಿಗೆ ವಾಹನಗಳು ಭಾಗಿಯಾಗಲಿವೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಆದಾಗ್ಯೂ, ಹಾಲು, ತರಕಾರಿಗಳು ಮತ್ತು ಹಣ್ಣುಗಳಂತಹ ಅಗತ್ಯ ಸರಕುಗಳನ್ನು ಸಾಗಿಸುವ ವಾಹನಗಳು ಮತ್ತು ಇತರ ಅಗತ್ಯ ಸೇವೆಗಳ ವಾಹನಗಳು ಮುಷ್ಕರದಲ್ಲಿ ಭಾಗವಹಿಸುವುದಿಲ್ಲ ಎಂದು ವರದಿ ಉಲ್ಲೇಖಿಸಿದೆ.

ರಾಜ್ಯದ ಟ್ರಕ್ಕರ್‌ಗಳು, ಸಾಗಣೆದಾರರು, ಪ್ರವಾಸಿ ಟ್ಯಾಕ್ಸಿಗಳು ಮತ್ತು ಮ್ಯಾಕ್ಸಿ ಕ್ಯಾಬ್ ನಿರ್ವಾಹಕರ ಪ್ರಮುಖ ಒಕ್ಕೂಟ ಎಂದು ಹೇಳಿಕೊಳ್ಳುವ ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್‌ಗಳ ಸಂಘ (FOKSLOAA) ಈ ಮುಷ್ಕರಕ್ಕೆ ಕರೆ ನೀಡಿದೆ. ರಾಜ್ಯದ 31 ಜಿಲ್ಲೆಯ 236 ತಾಲ್ಲೂಕು ಮಟ್ಟದ ಮತ್ತು ಸ್ಥಳೀಯ ಸಾರಿಗೆ ಸಂಘಗಳು ಈ ಸಂಘಟನೆಯೊಂದಿಗೆ ಸಂಯೋಜಿತವಾಗಿವೆ ಎಂದು ಅದು ಪ್ರತಿಪಾದಿಸಿದೆ.

ಪೆಟ್ರೋಲ್ ಪಂಪ್ ಮಾಲೀಕರು, LPG ಬಲ್ಕ್ ಆಪರೇಟರ್‌ಗಳ ಸಂಘ, ವಿಮಾನ ನಿಲ್ದಾಣ ಟ್ಯಾಕ್ಸಿ ಸಂಘಗಳು, ಚಾಲಕ ಸಂಘಗಳು ಮತ್ತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಾರಿಗೆ ಸಂಘಗಳು ಸೇರಿದಂತೆ ವಿವಿಧ ಮಿತ್ರ ವಲಯಗಳಿಂದ ಮುಷ್ಕರಕ್ಕೆ ಬೆಂಬಲ ದೊರೆತಿದೆ ಎಂದು FOKSLOAA ತಿಳಿಸಿದೆ ಎಂದು ವರದಿ ಉಲ್ಲೇಖಿಸಿದೆ.

ಆದಾಗ್ಯೂ, ಕರ್ನಾಟಕ ಲಾರಿ ಮಾಲೀಕರ ಸಂಘದ ಒಕ್ಕೂಟವು ಮುಷ್ಕರವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿ ಪ್ರತಿಭಟನೆಯಿಂದ ದೂರ ಉಳಿದಿದೆ ಎಂದು ವರದಿ ತಿಳಿಸಿದೆ.

FOKSLOAA ಒಟ್ಟು ಆರು ಬೇಡಿಕೆಗಳನ್ನು ಮುಂದಿಟ್ಟಿದ್ದು, ಇತ್ತೀಚೆಗೆ ಏರಿಕೆ ಮಾಡಿರುವ ಇಂಧನ ಬೆಲೆ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ. ರಾಜ್ಯ ಸರ್ಕಾರ ಇತ್ತೀಚೆಗೆ ಮಾರಾಟ ತೆರಿಗೆಯನ್ನು ಹೆಚ್ಚಿಸಿತ್ತು. ಹಾಗಾಗಿ ರಾಜ್ಯದಲ್ಲಿ ಪೆಟ್ರೋಲ್ ಲೀಟರ್‌ಗೆ ರೂ. 3 ಮತ್ತು ಡೀಸೆಲ್ ರೂ. 3.02 ರಷ್ಟು ದುಬಾರಿಯಾಗಿದೆ.

“ಸುಲಿಗೆ ಮತ್ತು ಕಿರುಕುಳದ ಕೇಂದ್ರಗಳಾಗಿ” ಮಾರ್ಪಟ್ಟಿರುವ 18 ರಾಜ್ಯ ಟೋಲ್ ಪ್ಲಾಜಾಗಳನ್ನು ರದ್ದುಗೊಳಿಸಿ ಎಂದು FOKSLOAA ಆಗ್ರಹಿಸಿದ್ದು, ಜಿಎಸ್‌ಟಿ ನಂತರದ ಯುಗದಲ್ಲಿ “ಅನಗತ್ಯ”ವಾಗಿರುವ ಚೆಕ್ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದೆ.

ಹಳೆಯ ವಾಹನ ಫಿಟ್‌ನೆಸ್ ನವೀಕರಣ ಶುಲ್ಕವನ್ನು ರೂ. 15,000 ವರೆಗೆ ಹೆಚ್ಚಿಸುವ ಪ್ರಸ್ತಾವಿತ ಹೆಚ್ಚಳವನ್ನು ಮರುಪರಿಶೀಲಿಸುವಂತೆ ಸಂಘವು ಒತ್ತಾಯಿಸಿದ್ದು, ಬೆಂಗಳೂರು ನಗರಕ್ಕೆ ವಾಣಿಜ್ಯ ವಾಹನಗಳಿಗೆ ಪ್ರವೇಶ ಸಮಯವನ್ನು ವಿಸ್ತರಿಸುವಂತೆ ಮತ್ತು NBFCಗಳು ಮತ್ತು ಕಿರುಬಂಡವಾಳ ಪೂರೈಕೆದಾರರಿಂದ ನೀಡಲಾಗುತ್ತಿರುವ ಕಿರುಕುಳವನ್ನು ನಿಲ್ಲಿಸುವಂತೆ ಕೇಳಿಕೊಂಡಿದೆ.

ಸಮಸ್ಯೆಯನ್ನು ಪರಿಹರಿಸದಿದ್ದರೆ ರಾಜ್ಯದಾದ್ಯಂತ ಸರಕು ಮತ್ತು ಪ್ರಯಾಣಿಕರ ಚಲನೆಗೆ ತೀವ್ರ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು FOKSLOAA ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ಎಚ್ಚರಿಸಿದ್ದಾರೆ. ಪಾಲುದಾರರೊಂದಿಗೆ ರಚನಾತ್ಮಕವಾಗಿ ತೊಡಗಿಸಿಕೊಳ್ಳುವ ಮೂಲಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸುವಂತೆ ಹಾಗೂ ಈ ಮೂಲಕ ಬಿಕ್ಕಟ್ಟನ್ನು ತಪ್ಪಿಸಲು ಸರ್ಕಾರ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಮುಷ್ಕರದ ಭಾಗವಾಗಿ, FOKSLOAA ಸದಸ್ಯರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಅತ್ತಿಬೆಲೆ ಮತ್ತು ರಾಜ್ಯದ ಇತರ ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಹೇಳಿದೆ. ರಾಜ್ಯ ಸರ್ಕಾರದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಏಪ್ರಿಲ್ 17ರ ಸಚಿವ ಸಂಪುಟ ಚರ್ಚೆಯ ನಂತರ ಜಾತಿ ಸಮೀಕ್ಷೆ ಬಗ್ಗೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ಏಪ್ರಿಲ್ 17ರ ಸಚಿವ ಸಂಪುಟ ಚರ್ಚೆಯ ನಂತರ ಜಾತಿ ಸಮೀಕ್ಷೆ ಬಗ್ಗೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...