Homeಮುಖಪುಟಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

- Advertisement -
- Advertisement -

ಜನರಲ್ಲಿ ದೇಶಭಕ್ತಿ ಕುರಿತಂತೆ ಜಾಗೃತಿ ಮೂಡಿಸುವಲ್ಲಿ  ಸಿನಿಮಾಗಳ ಪಾಲೂ ದೊಡ್ಡದಿದೆ. ದೇಶಭಕ್ತಿ ಸಾರುವ ಹತ್ತಾರು ಸಿನಿಮಾಗಳು ಕನ್ನಡದಲ್ಲಿ ಆಗಿಂದಾಗ್ಗೆ ತಯಾರಾಗಿವೆ. ನೈಜ ಘಟನೆಗಳನ್ನು ಆಧರಿಸಿದ ಚಿತ್ರಗಳ ಜೊತೆಗೆ ಕಮರ್ಷಿಯಲ್ ಹಾದಿಯಲ್ಲಿನ ಪ್ರಯೋಗಗಳೂ ಕಾಣಿಸುತ್ತವೆ.

***

ದೇಶಭಕ್ತಿ ಸಾರುವ ಹತ್ತಾರು ಶ್ರೇಷ್ಠ ಚಿತ್ರಗಳು ಕನ್ನಡದಲ್ಲಿ ತಯಾರಾಗಿವೆ. ಪ್ರಾದೇಶಿಕ ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ದೇಶಭಕ್ತಿ ಚಿತ್ರಗಳು ದೊಡ್ಡ ಯಶಸ್ಸು ಕಂಡಿವೆ. ಬಿ.ಆರ್.ಪಂಥುಲು ನಿರ್ದೇಶನದ ‘ಕಿತ್ತೂರು ರಾಣಿ ಚೆನ್ನಮ್ಮ’ (1962) ಈ ಹಾದಿಯಲ್ಲಿ ಪ್ರಮುಖ ಚಿತ್ರ. ಬ್ರಿಟಿಷರ ವಿರುದ್ಧ ಹೋರಾಡುವ ರಾಣಿ ಚೆನ್ನಮ್ಮನಾಗಿ ನಟಿ ಬಿ.ಸರೋಜಾದೇವಿ ನಟಿಸಿದ್ದರು. ಹತ್ತಾರು ಪುರಸ್ಕಾರಗಳಿಗೆ ಭಾಜನವಾದ ಚಿತ್ರ ಶತದಿನೋತ್ಸವ ಆಚರಿಸಿಕೊಂಡಿತ್ತು.

ಕಿತ್ತೂರು ರಾಣಿ ಚೆನ್ನಮ್ಮ

ಮಾಡಿ ಮಡಿದವರು

ಡಾ.ರಾಜ್‌ಕುಮಾರ್, ಕಲ್ಪನಾ, ಅಶ್ವತ್ಥ್ ಅಭಿನಯದ ‘ಸರ್ವಮಂಗಳ’ (1968) ಚಿತ್ರದಲ್ಲಿ ಸ್ವಾತಂತ್ರ್ಯ ಹೋರಾಟದ ಪ್ರಸ್ತಾಪವಿತ್ತು. ಇದು ಕಾದಂಬರಿಕಾರ ಚದುರಂಗರ ಪ್ರಮುಖ ಕೃತಿ. ಚಿತ್ರದ ನಿರ್ದೇಶಕರು ಕೂಡ ಅವರೇ ಎನ್ನುವುದು ಬಹುತೇಕರಿಗೆ ತಿಳಿದಿರಲಿಕ್ಕಿಲ್ಲ.

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿನ ನೈಜ ಘಟನೆಗಳನ್ನು ಆಧರಿಸಿ ತಯಾರಾದ ಚಿತ್ರ ‘ಮಾಡಿ ಮಡಿದವರು’ (1974). ಲೇಖಕ ಬಸವರಾಜ ಕಟ್ಟೀಮನಿ ಅವರ ಕಾದಂಬರಿ ಆಧರಿಸಿದ ಪ್ರಯೋಗ. ಕೆ.ಎಂ.ಶಂಕರಪ್ಪ ನಿರ್ದೇಶನ, ಯು.ಎಂ.ಎನ್.ಷರೀಫ್ ಛಾಯಾಗ್ರಹಣ, ಕೃಷ್ಣಮೂರ್ತಿ ಶಬ್ಧಗ್ರಹಣ ಮತ್ತು ಉಮೇಶ್ ಕುಲಕರ್ಣಿ ಸಂಕಲನ ಚಿತ್ರಕ್ಕಿತ್ತು. ವಿಶೇಷವೆಂದರೆ ಇವರೆಲ್ಲರೂ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್ನಲ್ಲಿ ಪದವಿ ಪಡೆದವರು ಮತ್ತು ಇದು ಅವರು ಕೆಲಸ ಮಾಡಿದ ಮೊದಲ ಚಲನಚಿತ್ರವಾಗಿತ್ತು. ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದ ರಾಮಗೋಪಾಲ್, ಗಿರಿಜಾ, ಸುಧೀರ್ ಅವರಿಗೆ ಇದು ಚೊಚ್ಚಲ ಸಿನಿಮಾ. ರಂಗಕರ್ಮಿ ಏಣಗಿ ಬಾಳಪ್ಪ, ಢಿಕ್ಕಿ ಮಾಧವರಾವ್, ಸಾಹಿತಿ ಚಂದ್ರಶೇಖರ ಕಂಬಾರರು ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸಾಗರದ ರಾಮದಾಸ್ ಚಿತ್ರದ ನಿರ್ಮಾಪಕರು. ಪ್ರಗತಿ ಅಶ್ವತ್ಥ ನಾರಾಯಣ ಅವರು ಚಿತ್ರದ ಸ್ಥಿರಚಿತ್ರ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದರು.

ಸಂಗೊಳ್ಳಿ ರಾಯಣ್ಣ

ವೃತ್ತಿರಂಗಭೂಮಿ ಕಲಾವಿದರು ಸ್ವಾತಂತ್ರ್ಯ ಹೋರಾಟಗಾರರ ಜೀವನಕಥೆಗಳನ್ನಾಧರಿಸಿದ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ರಂಗಕಲಾವಿದರೇ ನಟಿಸಿದ್ದ `ಸಂಗೊಳ್ಳಿ ರಾಯಣ್ಣ’ ಸಿನೆಮಾ 1967ರಲ್ಲಿ ತೆರೆಕಂಡಿತ್ತು. ಅನಂತ್ ಹಿರೇಗೌಡರ್ ಚಿತ್ರದ ನಿರ್ದೇಶಕ. ಮೇರು ಗಾಯಕಿ ಲತಾ ಮಂಗೇಶ್ಕರ್ ಈ ಚಿತ್ರದ ‘ಬೆಳ್ಳಾನೆ ಬೆಳಗಾಯಿತು…’ ಗೀತೆಗೆ ದನಿಯಾಗಿದ್ದರು. ಇದೇ ಸಂದರ್ಭದಲ್ಲಿ ರಂಗಕಲಾವಿದರೇ ಅಭಿನಯಿಸಿದ್ದ ಸ್ವಾತಂತ್ರ್ಯವೀರ `ಸಿಂಧೂರ ಲಕ್ಷ್ಮಣ’ ಚಿತ್ರ ತೆರೆಗೆ ಬಂದಿತ್ತು. 2012ರಲ್ಲಿ  ನಾಗಣ್ಣ ನಿರ್ದೇಶನದಲ್ಲಿ ಮತ್ತೊಮ್ಮೆ ‘ಸಂಗೊಳ್ಳಿ ರಾಯಣ್ಣ’ ಸಿನಿಮಾ ತೆರೆಗೆ ಬಂದಿತ್ತು. ಅದ್ಧೂರಿ ಬಜೆಟ್, ಬಹುತಾರಾಗಣದಲ್ಲಿ ತಯಾರಾದ ಚಿತ್ರದ ಶೀರ್ಷಿಕೆ ಪಾತ್ರದಲ್ಲಿ ದರ್ಶನ್ ಅಭಿನಯಿಸಿದ್ದರು.

ಸಂಗೊಳ್ಳಿ ರಾಯಣ್ಣ

ಮುತ್ತಿನ ಹಾರ

ಯುದ್ಧದ ಚಿತ್ರಣವಿದ್ದ ‘ಮುತ್ತಿನ ಹಾರ’ (1990) ಕನ್ನಡದ ಪ್ರಮುಖ ರಾಷ್ಟ್ರಪ್ರೇಮದ ಚಿತ್ರಗಳಲ್ಲೊಂದು. ಎಸ್.ವಿ.ರಾಜೇಂದ್ರಸಿಂಗ್ ಬಾಬು ನಿರ್ದೇಶನದಲ್ಲಿ ವಿಷ್ಣುವರ್ಧನ್, ಸುಹಾಸಿನಿ, ಅಶ್ವತ್ಥ್ ಅಮೋಘ ಅಭಿನಯ ನೀಡಿದ್ದರು. ಟಿ.ಎಸ್.ನಾಗಾಭರಣ ನಿರ್ದೇಶನದ `ಮೈಸೂರು ಮಲ್ಲಿಗೆ’ (1991) ಕನ್ನಡದ ಮತ್ತೊಂದು ಪ್ರಮುಖ ಸಿನೆಮಾ. ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಪ್ರೇಮಕಥೆಯ ಸುಂದರ ನಿರೂಪಣೆಯಿತ್ತು. ಪ್ರಶಸ್ತಿ, ಪುರಸ್ಕಾರಗಳೊಂದಿಗೆ ಜನಮನ್ನಣೆಯನ್ನೂ ಗಳಿಸಿದ ಚಿತ್ರಗಳಿವು.

ಮುತ್ತಿನ ಹಾರ

ವೀರಪ್ಪನಾಯ್ಕ

ವಿಷ್ಣುವರ್ಧನ್ ಅಭಿಯನದ `ವೀರಪ್ಪನಾಯ್ಕ’ (1999) ಚಿತ್ರದಲ್ಲಿ ಗಾಂಧಿವಾದ ಮತ್ತು ನಕ್ಸಲಿಸಂನ ಸಂಘರ್ಷದ ಚಿತ್ರಣವಿತ್ತು. ಎಸ್.ನಾರಾಯಣ್ ಚಿತ್ರದ ನಿರ್ದೇಶಕ. ಶಿವರಾಜ್‌ಕುಮಾರ್ ಅಭಿನಯದ ‘ಸಾರ್ವಭೌಮ’, ಯೋಗೀಶ್ವರ್‌ರವರ `ಸೈನಿಕ’ ಚಿತ್ರಗಳಲ್ಲಿ ಯೋಧರ ಕಥೆಗಳಿದ್ದವು. `ಜೈಹಿಂದ್’, `ಎಕೆ 47′ `ವಂದೇಮಾತರಂ’, `ಇಂಡಿಪೆಂಡೆನ್ಸ್ ಡೇ’ ಸೇರಿದಂತೆ ಕೆಲವು ಕಮರ್ಷಿಯಲ್ ಚಿತ್ರಗಳಲ್ಲಿ ರಾಷ್ಟ್ರಪ್ರೇಮದ ಝಲಕ್ ಇತ್ತು. ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ, ಡಿ.ಸಿ.ನಾಗೇಶ್


ಇದನ್ನೂ ಓದಿ: ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...