Homeಮುಖಪುಟಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

- Advertisement -
- Advertisement -

ಜನರಲ್ಲಿ ದೇಶಭಕ್ತಿ ಕುರಿತಂತೆ ಜಾಗೃತಿ ಮೂಡಿಸುವಲ್ಲಿ  ಸಿನಿಮಾಗಳ ಪಾಲೂ ದೊಡ್ಡದಿದೆ. ದೇಶಭಕ್ತಿ ಸಾರುವ ಹತ್ತಾರು ಸಿನಿಮಾಗಳು ಕನ್ನಡದಲ್ಲಿ ಆಗಿಂದಾಗ್ಗೆ ತಯಾರಾಗಿವೆ. ನೈಜ ಘಟನೆಗಳನ್ನು ಆಧರಿಸಿದ ಚಿತ್ರಗಳ ಜೊತೆಗೆ ಕಮರ್ಷಿಯಲ್ ಹಾದಿಯಲ್ಲಿನ ಪ್ರಯೋಗಗಳೂ ಕಾಣಿಸುತ್ತವೆ.

***

ದೇಶಭಕ್ತಿ ಸಾರುವ ಹತ್ತಾರು ಶ್ರೇಷ್ಠ ಚಿತ್ರಗಳು ಕನ್ನಡದಲ್ಲಿ ತಯಾರಾಗಿವೆ. ಪ್ರಾದೇಶಿಕ ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ದೇಶಭಕ್ತಿ ಚಿತ್ರಗಳು ದೊಡ್ಡ ಯಶಸ್ಸು ಕಂಡಿವೆ. ಬಿ.ಆರ್.ಪಂಥುಲು ನಿರ್ದೇಶನದ ‘ಕಿತ್ತೂರು ರಾಣಿ ಚೆನ್ನಮ್ಮ’ (1962) ಈ ಹಾದಿಯಲ್ಲಿ ಪ್ರಮುಖ ಚಿತ್ರ. ಬ್ರಿಟಿಷರ ವಿರುದ್ಧ ಹೋರಾಡುವ ರಾಣಿ ಚೆನ್ನಮ್ಮನಾಗಿ ನಟಿ ಬಿ.ಸರೋಜಾದೇವಿ ನಟಿಸಿದ್ದರು. ಹತ್ತಾರು ಪುರಸ್ಕಾರಗಳಿಗೆ ಭಾಜನವಾದ ಚಿತ್ರ ಶತದಿನೋತ್ಸವ ಆಚರಿಸಿಕೊಂಡಿತ್ತು.

ಕಿತ್ತೂರು ರಾಣಿ ಚೆನ್ನಮ್ಮ

ಮಾಡಿ ಮಡಿದವರು

ಡಾ.ರಾಜ್‌ಕುಮಾರ್, ಕಲ್ಪನಾ, ಅಶ್ವತ್ಥ್ ಅಭಿನಯದ ‘ಸರ್ವಮಂಗಳ’ (1968) ಚಿತ್ರದಲ್ಲಿ ಸ್ವಾತಂತ್ರ್ಯ ಹೋರಾಟದ ಪ್ರಸ್ತಾಪವಿತ್ತು. ಇದು ಕಾದಂಬರಿಕಾರ ಚದುರಂಗರ ಪ್ರಮುಖ ಕೃತಿ. ಚಿತ್ರದ ನಿರ್ದೇಶಕರು ಕೂಡ ಅವರೇ ಎನ್ನುವುದು ಬಹುತೇಕರಿಗೆ ತಿಳಿದಿರಲಿಕ್ಕಿಲ್ಲ.

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿನ ನೈಜ ಘಟನೆಗಳನ್ನು ಆಧರಿಸಿ ತಯಾರಾದ ಚಿತ್ರ ‘ಮಾಡಿ ಮಡಿದವರು’ (1974). ಲೇಖಕ ಬಸವರಾಜ ಕಟ್ಟೀಮನಿ ಅವರ ಕಾದಂಬರಿ ಆಧರಿಸಿದ ಪ್ರಯೋಗ. ಕೆ.ಎಂ.ಶಂಕರಪ್ಪ ನಿರ್ದೇಶನ, ಯು.ಎಂ.ಎನ್.ಷರೀಫ್ ಛಾಯಾಗ್ರಹಣ, ಕೃಷ್ಣಮೂರ್ತಿ ಶಬ್ಧಗ್ರಹಣ ಮತ್ತು ಉಮೇಶ್ ಕುಲಕರ್ಣಿ ಸಂಕಲನ ಚಿತ್ರಕ್ಕಿತ್ತು. ವಿಶೇಷವೆಂದರೆ ಇವರೆಲ್ಲರೂ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್ನಲ್ಲಿ ಪದವಿ ಪಡೆದವರು ಮತ್ತು ಇದು ಅವರು ಕೆಲಸ ಮಾಡಿದ ಮೊದಲ ಚಲನಚಿತ್ರವಾಗಿತ್ತು. ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದ ರಾಮಗೋಪಾಲ್, ಗಿರಿಜಾ, ಸುಧೀರ್ ಅವರಿಗೆ ಇದು ಚೊಚ್ಚಲ ಸಿನಿಮಾ. ರಂಗಕರ್ಮಿ ಏಣಗಿ ಬಾಳಪ್ಪ, ಢಿಕ್ಕಿ ಮಾಧವರಾವ್, ಸಾಹಿತಿ ಚಂದ್ರಶೇಖರ ಕಂಬಾರರು ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸಾಗರದ ರಾಮದಾಸ್ ಚಿತ್ರದ ನಿರ್ಮಾಪಕರು. ಪ್ರಗತಿ ಅಶ್ವತ್ಥ ನಾರಾಯಣ ಅವರು ಚಿತ್ರದ ಸ್ಥಿರಚಿತ್ರ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದರು.

ಸಂಗೊಳ್ಳಿ ರಾಯಣ್ಣ

ವೃತ್ತಿರಂಗಭೂಮಿ ಕಲಾವಿದರು ಸ್ವಾತಂತ್ರ್ಯ ಹೋರಾಟಗಾರರ ಜೀವನಕಥೆಗಳನ್ನಾಧರಿಸಿದ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ರಂಗಕಲಾವಿದರೇ ನಟಿಸಿದ್ದ `ಸಂಗೊಳ್ಳಿ ರಾಯಣ್ಣ’ ಸಿನೆಮಾ 1967ರಲ್ಲಿ ತೆರೆಕಂಡಿತ್ತು. ಅನಂತ್ ಹಿರೇಗೌಡರ್ ಚಿತ್ರದ ನಿರ್ದೇಶಕ. ಮೇರು ಗಾಯಕಿ ಲತಾ ಮಂಗೇಶ್ಕರ್ ಈ ಚಿತ್ರದ ‘ಬೆಳ್ಳಾನೆ ಬೆಳಗಾಯಿತು…’ ಗೀತೆಗೆ ದನಿಯಾಗಿದ್ದರು. ಇದೇ ಸಂದರ್ಭದಲ್ಲಿ ರಂಗಕಲಾವಿದರೇ ಅಭಿನಯಿಸಿದ್ದ ಸ್ವಾತಂತ್ರ್ಯವೀರ `ಸಿಂಧೂರ ಲಕ್ಷ್ಮಣ’ ಚಿತ್ರ ತೆರೆಗೆ ಬಂದಿತ್ತು. 2012ರಲ್ಲಿ  ನಾಗಣ್ಣ ನಿರ್ದೇಶನದಲ್ಲಿ ಮತ್ತೊಮ್ಮೆ ‘ಸಂಗೊಳ್ಳಿ ರಾಯಣ್ಣ’ ಸಿನಿಮಾ ತೆರೆಗೆ ಬಂದಿತ್ತು. ಅದ್ಧೂರಿ ಬಜೆಟ್, ಬಹುತಾರಾಗಣದಲ್ಲಿ ತಯಾರಾದ ಚಿತ್ರದ ಶೀರ್ಷಿಕೆ ಪಾತ್ರದಲ್ಲಿ ದರ್ಶನ್ ಅಭಿನಯಿಸಿದ್ದರು.

ಸಂಗೊಳ್ಳಿ ರಾಯಣ್ಣ

ಮುತ್ತಿನ ಹಾರ

ಯುದ್ಧದ ಚಿತ್ರಣವಿದ್ದ ‘ಮುತ್ತಿನ ಹಾರ’ (1990) ಕನ್ನಡದ ಪ್ರಮುಖ ರಾಷ್ಟ್ರಪ್ರೇಮದ ಚಿತ್ರಗಳಲ್ಲೊಂದು. ಎಸ್.ವಿ.ರಾಜೇಂದ್ರಸಿಂಗ್ ಬಾಬು ನಿರ್ದೇಶನದಲ್ಲಿ ವಿಷ್ಣುವರ್ಧನ್, ಸುಹಾಸಿನಿ, ಅಶ್ವತ್ಥ್ ಅಮೋಘ ಅಭಿನಯ ನೀಡಿದ್ದರು. ಟಿ.ಎಸ್.ನಾಗಾಭರಣ ನಿರ್ದೇಶನದ `ಮೈಸೂರು ಮಲ್ಲಿಗೆ’ (1991) ಕನ್ನಡದ ಮತ್ತೊಂದು ಪ್ರಮುಖ ಸಿನೆಮಾ. ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಪ್ರೇಮಕಥೆಯ ಸುಂದರ ನಿರೂಪಣೆಯಿತ್ತು. ಪ್ರಶಸ್ತಿ, ಪುರಸ್ಕಾರಗಳೊಂದಿಗೆ ಜನಮನ್ನಣೆಯನ್ನೂ ಗಳಿಸಿದ ಚಿತ್ರಗಳಿವು.

ಮುತ್ತಿನ ಹಾರ

ವೀರಪ್ಪನಾಯ್ಕ

ವಿಷ್ಣುವರ್ಧನ್ ಅಭಿಯನದ `ವೀರಪ್ಪನಾಯ್ಕ’ (1999) ಚಿತ್ರದಲ್ಲಿ ಗಾಂಧಿವಾದ ಮತ್ತು ನಕ್ಸಲಿಸಂನ ಸಂಘರ್ಷದ ಚಿತ್ರಣವಿತ್ತು. ಎಸ್.ನಾರಾಯಣ್ ಚಿತ್ರದ ನಿರ್ದೇಶಕ. ಶಿವರಾಜ್‌ಕುಮಾರ್ ಅಭಿನಯದ ‘ಸಾರ್ವಭೌಮ’, ಯೋಗೀಶ್ವರ್‌ರವರ `ಸೈನಿಕ’ ಚಿತ್ರಗಳಲ್ಲಿ ಯೋಧರ ಕಥೆಗಳಿದ್ದವು. `ಜೈಹಿಂದ್’, `ಎಕೆ 47′ `ವಂದೇಮಾತರಂ’, `ಇಂಡಿಪೆಂಡೆನ್ಸ್ ಡೇ’ ಸೇರಿದಂತೆ ಕೆಲವು ಕಮರ್ಷಿಯಲ್ ಚಿತ್ರಗಳಲ್ಲಿ ರಾಷ್ಟ್ರಪ್ರೇಮದ ಝಲಕ್ ಇತ್ತು. ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ, ಡಿ.ಸಿ.ನಾಗೇಶ್


ಇದನ್ನೂ ಓದಿ: ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...