Homeಮುಖಪುಟಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

- Advertisement -
- Advertisement -

ಜನರಲ್ಲಿ ದೇಶಭಕ್ತಿ ಕುರಿತಂತೆ ಜಾಗೃತಿ ಮೂಡಿಸುವಲ್ಲಿ  ಸಿನಿಮಾಗಳ ಪಾಲೂ ದೊಡ್ಡದಿದೆ. ದೇಶಭಕ್ತಿ ಸಾರುವ ಹತ್ತಾರು ಸಿನಿಮಾಗಳು ಕನ್ನಡದಲ್ಲಿ ಆಗಿಂದಾಗ್ಗೆ ತಯಾರಾಗಿವೆ. ನೈಜ ಘಟನೆಗಳನ್ನು ಆಧರಿಸಿದ ಚಿತ್ರಗಳ ಜೊತೆಗೆ ಕಮರ್ಷಿಯಲ್ ಹಾದಿಯಲ್ಲಿನ ಪ್ರಯೋಗಗಳೂ ಕಾಣಿಸುತ್ತವೆ.

***

ದೇಶಭಕ್ತಿ ಸಾರುವ ಹತ್ತಾರು ಶ್ರೇಷ್ಠ ಚಿತ್ರಗಳು ಕನ್ನಡದಲ್ಲಿ ತಯಾರಾಗಿವೆ. ಪ್ರಾದೇಶಿಕ ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ದೇಶಭಕ್ತಿ ಚಿತ್ರಗಳು ದೊಡ್ಡ ಯಶಸ್ಸು ಕಂಡಿವೆ. ಬಿ.ಆರ್.ಪಂಥುಲು ನಿರ್ದೇಶನದ ‘ಕಿತ್ತೂರು ರಾಣಿ ಚೆನ್ನಮ್ಮ’ (1962) ಈ ಹಾದಿಯಲ್ಲಿ ಪ್ರಮುಖ ಚಿತ್ರ. ಬ್ರಿಟಿಷರ ವಿರುದ್ಧ ಹೋರಾಡುವ ರಾಣಿ ಚೆನ್ನಮ್ಮನಾಗಿ ನಟಿ ಬಿ.ಸರೋಜಾದೇವಿ ನಟಿಸಿದ್ದರು. ಹತ್ತಾರು ಪುರಸ್ಕಾರಗಳಿಗೆ ಭಾಜನವಾದ ಚಿತ್ರ ಶತದಿನೋತ್ಸವ ಆಚರಿಸಿಕೊಂಡಿತ್ತು.

ಕಿತ್ತೂರು ರಾಣಿ ಚೆನ್ನಮ್ಮ

ಮಾಡಿ ಮಡಿದವರು

ಡಾ.ರಾಜ್‌ಕುಮಾರ್, ಕಲ್ಪನಾ, ಅಶ್ವತ್ಥ್ ಅಭಿನಯದ ‘ಸರ್ವಮಂಗಳ’ (1968) ಚಿತ್ರದಲ್ಲಿ ಸ್ವಾತಂತ್ರ್ಯ ಹೋರಾಟದ ಪ್ರಸ್ತಾಪವಿತ್ತು. ಇದು ಕಾದಂಬರಿಕಾರ ಚದುರಂಗರ ಪ್ರಮುಖ ಕೃತಿ. ಚಿತ್ರದ ನಿರ್ದೇಶಕರು ಕೂಡ ಅವರೇ ಎನ್ನುವುದು ಬಹುತೇಕರಿಗೆ ತಿಳಿದಿರಲಿಕ್ಕಿಲ್ಲ.

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿನ ನೈಜ ಘಟನೆಗಳನ್ನು ಆಧರಿಸಿ ತಯಾರಾದ ಚಿತ್ರ ‘ಮಾಡಿ ಮಡಿದವರು’ (1974). ಲೇಖಕ ಬಸವರಾಜ ಕಟ್ಟೀಮನಿ ಅವರ ಕಾದಂಬರಿ ಆಧರಿಸಿದ ಪ್ರಯೋಗ. ಕೆ.ಎಂ.ಶಂಕರಪ್ಪ ನಿರ್ದೇಶನ, ಯು.ಎಂ.ಎನ್.ಷರೀಫ್ ಛಾಯಾಗ್ರಹಣ, ಕೃಷ್ಣಮೂರ್ತಿ ಶಬ್ಧಗ್ರಹಣ ಮತ್ತು ಉಮೇಶ್ ಕುಲಕರ್ಣಿ ಸಂಕಲನ ಚಿತ್ರಕ್ಕಿತ್ತು. ವಿಶೇಷವೆಂದರೆ ಇವರೆಲ್ಲರೂ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್ನಲ್ಲಿ ಪದವಿ ಪಡೆದವರು ಮತ್ತು ಇದು ಅವರು ಕೆಲಸ ಮಾಡಿದ ಮೊದಲ ಚಲನಚಿತ್ರವಾಗಿತ್ತು. ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದ ರಾಮಗೋಪಾಲ್, ಗಿರಿಜಾ, ಸುಧೀರ್ ಅವರಿಗೆ ಇದು ಚೊಚ್ಚಲ ಸಿನಿಮಾ. ರಂಗಕರ್ಮಿ ಏಣಗಿ ಬಾಳಪ್ಪ, ಢಿಕ್ಕಿ ಮಾಧವರಾವ್, ಸಾಹಿತಿ ಚಂದ್ರಶೇಖರ ಕಂಬಾರರು ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸಾಗರದ ರಾಮದಾಸ್ ಚಿತ್ರದ ನಿರ್ಮಾಪಕರು. ಪ್ರಗತಿ ಅಶ್ವತ್ಥ ನಾರಾಯಣ ಅವರು ಚಿತ್ರದ ಸ್ಥಿರಚಿತ್ರ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದರು.

ಸಂಗೊಳ್ಳಿ ರಾಯಣ್ಣ

ವೃತ್ತಿರಂಗಭೂಮಿ ಕಲಾವಿದರು ಸ್ವಾತಂತ್ರ್ಯ ಹೋರಾಟಗಾರರ ಜೀವನಕಥೆಗಳನ್ನಾಧರಿಸಿದ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ರಂಗಕಲಾವಿದರೇ ನಟಿಸಿದ್ದ `ಸಂಗೊಳ್ಳಿ ರಾಯಣ್ಣ’ ಸಿನೆಮಾ 1967ರಲ್ಲಿ ತೆರೆಕಂಡಿತ್ತು. ಅನಂತ್ ಹಿರೇಗೌಡರ್ ಚಿತ್ರದ ನಿರ್ದೇಶಕ. ಮೇರು ಗಾಯಕಿ ಲತಾ ಮಂಗೇಶ್ಕರ್ ಈ ಚಿತ್ರದ ‘ಬೆಳ್ಳಾನೆ ಬೆಳಗಾಯಿತು…’ ಗೀತೆಗೆ ದನಿಯಾಗಿದ್ದರು. ಇದೇ ಸಂದರ್ಭದಲ್ಲಿ ರಂಗಕಲಾವಿದರೇ ಅಭಿನಯಿಸಿದ್ದ ಸ್ವಾತಂತ್ರ್ಯವೀರ `ಸಿಂಧೂರ ಲಕ್ಷ್ಮಣ’ ಚಿತ್ರ ತೆರೆಗೆ ಬಂದಿತ್ತು. 2012ರಲ್ಲಿ  ನಾಗಣ್ಣ ನಿರ್ದೇಶನದಲ್ಲಿ ಮತ್ತೊಮ್ಮೆ ‘ಸಂಗೊಳ್ಳಿ ರಾಯಣ್ಣ’ ಸಿನಿಮಾ ತೆರೆಗೆ ಬಂದಿತ್ತು. ಅದ್ಧೂರಿ ಬಜೆಟ್, ಬಹುತಾರಾಗಣದಲ್ಲಿ ತಯಾರಾದ ಚಿತ್ರದ ಶೀರ್ಷಿಕೆ ಪಾತ್ರದಲ್ಲಿ ದರ್ಶನ್ ಅಭಿನಯಿಸಿದ್ದರು.

ಸಂಗೊಳ್ಳಿ ರಾಯಣ್ಣ

ಮುತ್ತಿನ ಹಾರ

ಯುದ್ಧದ ಚಿತ್ರಣವಿದ್ದ ‘ಮುತ್ತಿನ ಹಾರ’ (1990) ಕನ್ನಡದ ಪ್ರಮುಖ ರಾಷ್ಟ್ರಪ್ರೇಮದ ಚಿತ್ರಗಳಲ್ಲೊಂದು. ಎಸ್.ವಿ.ರಾಜೇಂದ್ರಸಿಂಗ್ ಬಾಬು ನಿರ್ದೇಶನದಲ್ಲಿ ವಿಷ್ಣುವರ್ಧನ್, ಸುಹಾಸಿನಿ, ಅಶ್ವತ್ಥ್ ಅಮೋಘ ಅಭಿನಯ ನೀಡಿದ್ದರು. ಟಿ.ಎಸ್.ನಾಗಾಭರಣ ನಿರ್ದೇಶನದ `ಮೈಸೂರು ಮಲ್ಲಿಗೆ’ (1991) ಕನ್ನಡದ ಮತ್ತೊಂದು ಪ್ರಮುಖ ಸಿನೆಮಾ. ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಪ್ರೇಮಕಥೆಯ ಸುಂದರ ನಿರೂಪಣೆಯಿತ್ತು. ಪ್ರಶಸ್ತಿ, ಪುರಸ್ಕಾರಗಳೊಂದಿಗೆ ಜನಮನ್ನಣೆಯನ್ನೂ ಗಳಿಸಿದ ಚಿತ್ರಗಳಿವು.

ಮುತ್ತಿನ ಹಾರ

ವೀರಪ್ಪನಾಯ್ಕ

ವಿಷ್ಣುವರ್ಧನ್ ಅಭಿಯನದ `ವೀರಪ್ಪನಾಯ್ಕ’ (1999) ಚಿತ್ರದಲ್ಲಿ ಗಾಂಧಿವಾದ ಮತ್ತು ನಕ್ಸಲಿಸಂನ ಸಂಘರ್ಷದ ಚಿತ್ರಣವಿತ್ತು. ಎಸ್.ನಾರಾಯಣ್ ಚಿತ್ರದ ನಿರ್ದೇಶಕ. ಶಿವರಾಜ್‌ಕುಮಾರ್ ಅಭಿನಯದ ‘ಸಾರ್ವಭೌಮ’, ಯೋಗೀಶ್ವರ್‌ರವರ `ಸೈನಿಕ’ ಚಿತ್ರಗಳಲ್ಲಿ ಯೋಧರ ಕಥೆಗಳಿದ್ದವು. `ಜೈಹಿಂದ್’, `ಎಕೆ 47′ `ವಂದೇಮಾತರಂ’, `ಇಂಡಿಪೆಂಡೆನ್ಸ್ ಡೇ’ ಸೇರಿದಂತೆ ಕೆಲವು ಕಮರ್ಷಿಯಲ್ ಚಿತ್ರಗಳಲ್ಲಿ ರಾಷ್ಟ್ರಪ್ರೇಮದ ಝಲಕ್ ಇತ್ತು. ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ, ಡಿ.ಸಿ.ನಾಗೇಶ್


ಇದನ್ನೂ ಓದಿ: ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...