Homeಮುಖಪುಟಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

- Advertisement -
- Advertisement -

ಜನರಲ್ಲಿ ದೇಶಭಕ್ತಿ ಕುರಿತಂತೆ ಜಾಗೃತಿ ಮೂಡಿಸುವಲ್ಲಿ  ಸಿನಿಮಾಗಳ ಪಾಲೂ ದೊಡ್ಡದಿದೆ. ದೇಶಭಕ್ತಿ ಸಾರುವ ಹತ್ತಾರು ಸಿನಿಮಾಗಳು ಕನ್ನಡದಲ್ಲಿ ಆಗಿಂದಾಗ್ಗೆ ತಯಾರಾಗಿವೆ. ನೈಜ ಘಟನೆಗಳನ್ನು ಆಧರಿಸಿದ ಚಿತ್ರಗಳ ಜೊತೆಗೆ ಕಮರ್ಷಿಯಲ್ ಹಾದಿಯಲ್ಲಿನ ಪ್ರಯೋಗಗಳೂ ಕಾಣಿಸುತ್ತವೆ.

***

ದೇಶಭಕ್ತಿ ಸಾರುವ ಹತ್ತಾರು ಶ್ರೇಷ್ಠ ಚಿತ್ರಗಳು ಕನ್ನಡದಲ್ಲಿ ತಯಾರಾಗಿವೆ. ಪ್ರಾದೇಶಿಕ ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ದೇಶಭಕ್ತಿ ಚಿತ್ರಗಳು ದೊಡ್ಡ ಯಶಸ್ಸು ಕಂಡಿವೆ. ಬಿ.ಆರ್.ಪಂಥುಲು ನಿರ್ದೇಶನದ ‘ಕಿತ್ತೂರು ರಾಣಿ ಚೆನ್ನಮ್ಮ’ (1962) ಈ ಹಾದಿಯಲ್ಲಿ ಪ್ರಮುಖ ಚಿತ್ರ. ಬ್ರಿಟಿಷರ ವಿರುದ್ಧ ಹೋರಾಡುವ ರಾಣಿ ಚೆನ್ನಮ್ಮನಾಗಿ ನಟಿ ಬಿ.ಸರೋಜಾದೇವಿ ನಟಿಸಿದ್ದರು. ಹತ್ತಾರು ಪುರಸ್ಕಾರಗಳಿಗೆ ಭಾಜನವಾದ ಚಿತ್ರ ಶತದಿನೋತ್ಸವ ಆಚರಿಸಿಕೊಂಡಿತ್ತು.

ಕಿತ್ತೂರು ರಾಣಿ ಚೆನ್ನಮ್ಮ

ಮಾಡಿ ಮಡಿದವರು

ಡಾ.ರಾಜ್‌ಕುಮಾರ್, ಕಲ್ಪನಾ, ಅಶ್ವತ್ಥ್ ಅಭಿನಯದ ‘ಸರ್ವಮಂಗಳ’ (1968) ಚಿತ್ರದಲ್ಲಿ ಸ್ವಾತಂತ್ರ್ಯ ಹೋರಾಟದ ಪ್ರಸ್ತಾಪವಿತ್ತು. ಇದು ಕಾದಂಬರಿಕಾರ ಚದುರಂಗರ ಪ್ರಮುಖ ಕೃತಿ. ಚಿತ್ರದ ನಿರ್ದೇಶಕರು ಕೂಡ ಅವರೇ ಎನ್ನುವುದು ಬಹುತೇಕರಿಗೆ ತಿಳಿದಿರಲಿಕ್ಕಿಲ್ಲ.

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿನ ನೈಜ ಘಟನೆಗಳನ್ನು ಆಧರಿಸಿ ತಯಾರಾದ ಚಿತ್ರ ‘ಮಾಡಿ ಮಡಿದವರು’ (1974). ಲೇಖಕ ಬಸವರಾಜ ಕಟ್ಟೀಮನಿ ಅವರ ಕಾದಂಬರಿ ಆಧರಿಸಿದ ಪ್ರಯೋಗ. ಕೆ.ಎಂ.ಶಂಕರಪ್ಪ ನಿರ್ದೇಶನ, ಯು.ಎಂ.ಎನ್.ಷರೀಫ್ ಛಾಯಾಗ್ರಹಣ, ಕೃಷ್ಣಮೂರ್ತಿ ಶಬ್ಧಗ್ರಹಣ ಮತ್ತು ಉಮೇಶ್ ಕುಲಕರ್ಣಿ ಸಂಕಲನ ಚಿತ್ರಕ್ಕಿತ್ತು. ವಿಶೇಷವೆಂದರೆ ಇವರೆಲ್ಲರೂ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್ನಲ್ಲಿ ಪದವಿ ಪಡೆದವರು ಮತ್ತು ಇದು ಅವರು ಕೆಲಸ ಮಾಡಿದ ಮೊದಲ ಚಲನಚಿತ್ರವಾಗಿತ್ತು. ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದ ರಾಮಗೋಪಾಲ್, ಗಿರಿಜಾ, ಸುಧೀರ್ ಅವರಿಗೆ ಇದು ಚೊಚ್ಚಲ ಸಿನಿಮಾ. ರಂಗಕರ್ಮಿ ಏಣಗಿ ಬಾಳಪ್ಪ, ಢಿಕ್ಕಿ ಮಾಧವರಾವ್, ಸಾಹಿತಿ ಚಂದ್ರಶೇಖರ ಕಂಬಾರರು ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸಾಗರದ ರಾಮದಾಸ್ ಚಿತ್ರದ ನಿರ್ಮಾಪಕರು. ಪ್ರಗತಿ ಅಶ್ವತ್ಥ ನಾರಾಯಣ ಅವರು ಚಿತ್ರದ ಸ್ಥಿರಚಿತ್ರ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದರು.

ಸಂಗೊಳ್ಳಿ ರಾಯಣ್ಣ

ವೃತ್ತಿರಂಗಭೂಮಿ ಕಲಾವಿದರು ಸ್ವಾತಂತ್ರ್ಯ ಹೋರಾಟಗಾರರ ಜೀವನಕಥೆಗಳನ್ನಾಧರಿಸಿದ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ರಂಗಕಲಾವಿದರೇ ನಟಿಸಿದ್ದ `ಸಂಗೊಳ್ಳಿ ರಾಯಣ್ಣ’ ಸಿನೆಮಾ 1967ರಲ್ಲಿ ತೆರೆಕಂಡಿತ್ತು. ಅನಂತ್ ಹಿರೇಗೌಡರ್ ಚಿತ್ರದ ನಿರ್ದೇಶಕ. ಮೇರು ಗಾಯಕಿ ಲತಾ ಮಂಗೇಶ್ಕರ್ ಈ ಚಿತ್ರದ ‘ಬೆಳ್ಳಾನೆ ಬೆಳಗಾಯಿತು…’ ಗೀತೆಗೆ ದನಿಯಾಗಿದ್ದರು. ಇದೇ ಸಂದರ್ಭದಲ್ಲಿ ರಂಗಕಲಾವಿದರೇ ಅಭಿನಯಿಸಿದ್ದ ಸ್ವಾತಂತ್ರ್ಯವೀರ `ಸಿಂಧೂರ ಲಕ್ಷ್ಮಣ’ ಚಿತ್ರ ತೆರೆಗೆ ಬಂದಿತ್ತು. 2012ರಲ್ಲಿ  ನಾಗಣ್ಣ ನಿರ್ದೇಶನದಲ್ಲಿ ಮತ್ತೊಮ್ಮೆ ‘ಸಂಗೊಳ್ಳಿ ರಾಯಣ್ಣ’ ಸಿನಿಮಾ ತೆರೆಗೆ ಬಂದಿತ್ತು. ಅದ್ಧೂರಿ ಬಜೆಟ್, ಬಹುತಾರಾಗಣದಲ್ಲಿ ತಯಾರಾದ ಚಿತ್ರದ ಶೀರ್ಷಿಕೆ ಪಾತ್ರದಲ್ಲಿ ದರ್ಶನ್ ಅಭಿನಯಿಸಿದ್ದರು.

ಸಂಗೊಳ್ಳಿ ರಾಯಣ್ಣ

ಮುತ್ತಿನ ಹಾರ

ಯುದ್ಧದ ಚಿತ್ರಣವಿದ್ದ ‘ಮುತ್ತಿನ ಹಾರ’ (1990) ಕನ್ನಡದ ಪ್ರಮುಖ ರಾಷ್ಟ್ರಪ್ರೇಮದ ಚಿತ್ರಗಳಲ್ಲೊಂದು. ಎಸ್.ವಿ.ರಾಜೇಂದ್ರಸಿಂಗ್ ಬಾಬು ನಿರ್ದೇಶನದಲ್ಲಿ ವಿಷ್ಣುವರ್ಧನ್, ಸುಹಾಸಿನಿ, ಅಶ್ವತ್ಥ್ ಅಮೋಘ ಅಭಿನಯ ನೀಡಿದ್ದರು. ಟಿ.ಎಸ್.ನಾಗಾಭರಣ ನಿರ್ದೇಶನದ `ಮೈಸೂರು ಮಲ್ಲಿಗೆ’ (1991) ಕನ್ನಡದ ಮತ್ತೊಂದು ಪ್ರಮುಖ ಸಿನೆಮಾ. ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಪ್ರೇಮಕಥೆಯ ಸುಂದರ ನಿರೂಪಣೆಯಿತ್ತು. ಪ್ರಶಸ್ತಿ, ಪುರಸ್ಕಾರಗಳೊಂದಿಗೆ ಜನಮನ್ನಣೆಯನ್ನೂ ಗಳಿಸಿದ ಚಿತ್ರಗಳಿವು.

ಮುತ್ತಿನ ಹಾರ

ವೀರಪ್ಪನಾಯ್ಕ

ವಿಷ್ಣುವರ್ಧನ್ ಅಭಿಯನದ `ವೀರಪ್ಪನಾಯ್ಕ’ (1999) ಚಿತ್ರದಲ್ಲಿ ಗಾಂಧಿವಾದ ಮತ್ತು ನಕ್ಸಲಿಸಂನ ಸಂಘರ್ಷದ ಚಿತ್ರಣವಿತ್ತು. ಎಸ್.ನಾರಾಯಣ್ ಚಿತ್ರದ ನಿರ್ದೇಶಕ. ಶಿವರಾಜ್‌ಕುಮಾರ್ ಅಭಿನಯದ ‘ಸಾರ್ವಭೌಮ’, ಯೋಗೀಶ್ವರ್‌ರವರ `ಸೈನಿಕ’ ಚಿತ್ರಗಳಲ್ಲಿ ಯೋಧರ ಕಥೆಗಳಿದ್ದವು. `ಜೈಹಿಂದ್’, `ಎಕೆ 47′ `ವಂದೇಮಾತರಂ’, `ಇಂಡಿಪೆಂಡೆನ್ಸ್ ಡೇ’ ಸೇರಿದಂತೆ ಕೆಲವು ಕಮರ್ಷಿಯಲ್ ಚಿತ್ರಗಳಲ್ಲಿ ರಾಷ್ಟ್ರಪ್ರೇಮದ ಝಲಕ್ ಇತ್ತು. ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ, ಡಿ.ಸಿ.ನಾಗೇಶ್


ಇದನ್ನೂ ಓದಿ: ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...