Homeಮುಖಪುಟಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಸ್ವಾತಂತ್ರ್ಯೋತ್ಸವ: ದೇಶಭಕ್ತಿ ಸಾರುವ ಕನ್ನಡದ ಸಿನಿಮಾಗಳು

ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

- Advertisement -
- Advertisement -

ಜನರಲ್ಲಿ ದೇಶಭಕ್ತಿ ಕುರಿತಂತೆ ಜಾಗೃತಿ ಮೂಡಿಸುವಲ್ಲಿ  ಸಿನಿಮಾಗಳ ಪಾಲೂ ದೊಡ್ಡದಿದೆ. ದೇಶಭಕ್ತಿ ಸಾರುವ ಹತ್ತಾರು ಸಿನಿಮಾಗಳು ಕನ್ನಡದಲ್ಲಿ ಆಗಿಂದಾಗ್ಗೆ ತಯಾರಾಗಿವೆ. ನೈಜ ಘಟನೆಗಳನ್ನು ಆಧರಿಸಿದ ಚಿತ್ರಗಳ ಜೊತೆಗೆ ಕಮರ್ಷಿಯಲ್ ಹಾದಿಯಲ್ಲಿನ ಪ್ರಯೋಗಗಳೂ ಕಾಣಿಸುತ್ತವೆ.

***

ದೇಶಭಕ್ತಿ ಸಾರುವ ಹತ್ತಾರು ಶ್ರೇಷ್ಠ ಚಿತ್ರಗಳು ಕನ್ನಡದಲ್ಲಿ ತಯಾರಾಗಿವೆ. ಪ್ರಾದೇಶಿಕ ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ದೇಶಭಕ್ತಿ ಚಿತ್ರಗಳು ದೊಡ್ಡ ಯಶಸ್ಸು ಕಂಡಿವೆ. ಬಿ.ಆರ್.ಪಂಥುಲು ನಿರ್ದೇಶನದ ‘ಕಿತ್ತೂರು ರಾಣಿ ಚೆನ್ನಮ್ಮ’ (1962) ಈ ಹಾದಿಯಲ್ಲಿ ಪ್ರಮುಖ ಚಿತ್ರ. ಬ್ರಿಟಿಷರ ವಿರುದ್ಧ ಹೋರಾಡುವ ರಾಣಿ ಚೆನ್ನಮ್ಮನಾಗಿ ನಟಿ ಬಿ.ಸರೋಜಾದೇವಿ ನಟಿಸಿದ್ದರು. ಹತ್ತಾರು ಪುರಸ್ಕಾರಗಳಿಗೆ ಭಾಜನವಾದ ಚಿತ್ರ ಶತದಿನೋತ್ಸವ ಆಚರಿಸಿಕೊಂಡಿತ್ತು.

ಕಿತ್ತೂರು ರಾಣಿ ಚೆನ್ನಮ್ಮ

ಮಾಡಿ ಮಡಿದವರು

ಡಾ.ರಾಜ್‌ಕುಮಾರ್, ಕಲ್ಪನಾ, ಅಶ್ವತ್ಥ್ ಅಭಿನಯದ ‘ಸರ್ವಮಂಗಳ’ (1968) ಚಿತ್ರದಲ್ಲಿ ಸ್ವಾತಂತ್ರ್ಯ ಹೋರಾಟದ ಪ್ರಸ್ತಾಪವಿತ್ತು. ಇದು ಕಾದಂಬರಿಕಾರ ಚದುರಂಗರ ಪ್ರಮುಖ ಕೃತಿ. ಚಿತ್ರದ ನಿರ್ದೇಶಕರು ಕೂಡ ಅವರೇ ಎನ್ನುವುದು ಬಹುತೇಕರಿಗೆ ತಿಳಿದಿರಲಿಕ್ಕಿಲ್ಲ.

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿನ ನೈಜ ಘಟನೆಗಳನ್ನು ಆಧರಿಸಿ ತಯಾರಾದ ಚಿತ್ರ ‘ಮಾಡಿ ಮಡಿದವರು’ (1974). ಲೇಖಕ ಬಸವರಾಜ ಕಟ್ಟೀಮನಿ ಅವರ ಕಾದಂಬರಿ ಆಧರಿಸಿದ ಪ್ರಯೋಗ. ಕೆ.ಎಂ.ಶಂಕರಪ್ಪ ನಿರ್ದೇಶನ, ಯು.ಎಂ.ಎನ್.ಷರೀಫ್ ಛಾಯಾಗ್ರಹಣ, ಕೃಷ್ಣಮೂರ್ತಿ ಶಬ್ಧಗ್ರಹಣ ಮತ್ತು ಉಮೇಶ್ ಕುಲಕರ್ಣಿ ಸಂಕಲನ ಚಿತ್ರಕ್ಕಿತ್ತು. ವಿಶೇಷವೆಂದರೆ ಇವರೆಲ್ಲರೂ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್ನಲ್ಲಿ ಪದವಿ ಪಡೆದವರು ಮತ್ತು ಇದು ಅವರು ಕೆಲಸ ಮಾಡಿದ ಮೊದಲ ಚಲನಚಿತ್ರವಾಗಿತ್ತು. ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದ ರಾಮಗೋಪಾಲ್, ಗಿರಿಜಾ, ಸುಧೀರ್ ಅವರಿಗೆ ಇದು ಚೊಚ್ಚಲ ಸಿನಿಮಾ. ರಂಗಕರ್ಮಿ ಏಣಗಿ ಬಾಳಪ್ಪ, ಢಿಕ್ಕಿ ಮಾಧವರಾವ್, ಸಾಹಿತಿ ಚಂದ್ರಶೇಖರ ಕಂಬಾರರು ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸಾಗರದ ರಾಮದಾಸ್ ಚಿತ್ರದ ನಿರ್ಮಾಪಕರು. ಪ್ರಗತಿ ಅಶ್ವತ್ಥ ನಾರಾಯಣ ಅವರು ಚಿತ್ರದ ಸ್ಥಿರಚಿತ್ರ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದರು.

ಸಂಗೊಳ್ಳಿ ರಾಯಣ್ಣ

ವೃತ್ತಿರಂಗಭೂಮಿ ಕಲಾವಿದರು ಸ್ವಾತಂತ್ರ್ಯ ಹೋರಾಟಗಾರರ ಜೀವನಕಥೆಗಳನ್ನಾಧರಿಸಿದ ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ರಂಗಕಲಾವಿದರೇ ನಟಿಸಿದ್ದ `ಸಂಗೊಳ್ಳಿ ರಾಯಣ್ಣ’ ಸಿನೆಮಾ 1967ರಲ್ಲಿ ತೆರೆಕಂಡಿತ್ತು. ಅನಂತ್ ಹಿರೇಗೌಡರ್ ಚಿತ್ರದ ನಿರ್ದೇಶಕ. ಮೇರು ಗಾಯಕಿ ಲತಾ ಮಂಗೇಶ್ಕರ್ ಈ ಚಿತ್ರದ ‘ಬೆಳ್ಳಾನೆ ಬೆಳಗಾಯಿತು…’ ಗೀತೆಗೆ ದನಿಯಾಗಿದ್ದರು. ಇದೇ ಸಂದರ್ಭದಲ್ಲಿ ರಂಗಕಲಾವಿದರೇ ಅಭಿನಯಿಸಿದ್ದ ಸ್ವಾತಂತ್ರ್ಯವೀರ `ಸಿಂಧೂರ ಲಕ್ಷ್ಮಣ’ ಚಿತ್ರ ತೆರೆಗೆ ಬಂದಿತ್ತು. 2012ರಲ್ಲಿ  ನಾಗಣ್ಣ ನಿರ್ದೇಶನದಲ್ಲಿ ಮತ್ತೊಮ್ಮೆ ‘ಸಂಗೊಳ್ಳಿ ರಾಯಣ್ಣ’ ಸಿನಿಮಾ ತೆರೆಗೆ ಬಂದಿತ್ತು. ಅದ್ಧೂರಿ ಬಜೆಟ್, ಬಹುತಾರಾಗಣದಲ್ಲಿ ತಯಾರಾದ ಚಿತ್ರದ ಶೀರ್ಷಿಕೆ ಪಾತ್ರದಲ್ಲಿ ದರ್ಶನ್ ಅಭಿನಯಿಸಿದ್ದರು.

ಸಂಗೊಳ್ಳಿ ರಾಯಣ್ಣ

ಮುತ್ತಿನ ಹಾರ

ಯುದ್ಧದ ಚಿತ್ರಣವಿದ್ದ ‘ಮುತ್ತಿನ ಹಾರ’ (1990) ಕನ್ನಡದ ಪ್ರಮುಖ ರಾಷ್ಟ್ರಪ್ರೇಮದ ಚಿತ್ರಗಳಲ್ಲೊಂದು. ಎಸ್.ವಿ.ರಾಜೇಂದ್ರಸಿಂಗ್ ಬಾಬು ನಿರ್ದೇಶನದಲ್ಲಿ ವಿಷ್ಣುವರ್ಧನ್, ಸುಹಾಸಿನಿ, ಅಶ್ವತ್ಥ್ ಅಮೋಘ ಅಭಿನಯ ನೀಡಿದ್ದರು. ಟಿ.ಎಸ್.ನಾಗಾಭರಣ ನಿರ್ದೇಶನದ `ಮೈಸೂರು ಮಲ್ಲಿಗೆ’ (1991) ಕನ್ನಡದ ಮತ್ತೊಂದು ಪ್ರಮುಖ ಸಿನೆಮಾ. ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯಲ್ಲಿ ಪ್ರೇಮಕಥೆಯ ಸುಂದರ ನಿರೂಪಣೆಯಿತ್ತು. ಪ್ರಶಸ್ತಿ, ಪುರಸ್ಕಾರಗಳೊಂದಿಗೆ ಜನಮನ್ನಣೆಯನ್ನೂ ಗಳಿಸಿದ ಚಿತ್ರಗಳಿವು.

ಮುತ್ತಿನ ಹಾರ

ವೀರಪ್ಪನಾಯ್ಕ

ವಿಷ್ಣುವರ್ಧನ್ ಅಭಿಯನದ `ವೀರಪ್ಪನಾಯ್ಕ’ (1999) ಚಿತ್ರದಲ್ಲಿ ಗಾಂಧಿವಾದ ಮತ್ತು ನಕ್ಸಲಿಸಂನ ಸಂಘರ್ಷದ ಚಿತ್ರಣವಿತ್ತು. ಎಸ್.ನಾರಾಯಣ್ ಚಿತ್ರದ ನಿರ್ದೇಶಕ. ಶಿವರಾಜ್‌ಕುಮಾರ್ ಅಭಿನಯದ ‘ಸಾರ್ವಭೌಮ’, ಯೋಗೀಶ್ವರ್‌ರವರ `ಸೈನಿಕ’ ಚಿತ್ರಗಳಲ್ಲಿ ಯೋಧರ ಕಥೆಗಳಿದ್ದವು. `ಜೈಹಿಂದ್’, `ಎಕೆ 47′ `ವಂದೇಮಾತರಂ’, `ಇಂಡಿಪೆಂಡೆನ್ಸ್ ಡೇ’ ಸೇರಿದಂತೆ ಕೆಲವು ಕಮರ್ಷಿಯಲ್ ಚಿತ್ರಗಳಲ್ಲಿ ರಾಷ್ಟ್ರಪ್ರೇಮದ ಝಲಕ್ ಇತ್ತು. ಬ್ರಿಟೀಷರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕನ ಕುರಿತ ಚಿತ್ರ ಸೆಟ್ಟೇರುವ ಸೂಚನೆಯಿದೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋ: ಪ್ರಗತಿ ಅಶ್ವತ್ಥ ನಾರಾಯಣ, ಡಿ.ಸಿ.ನಾಗೇಶ್


ಇದನ್ನೂ ಓದಿ: ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...