Homeಮುಖಪುಟ3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

- Advertisement -
- Advertisement -

75ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಪ್ರಧಾನಿಯವರ ಭಾಷಣ ಈಗ ಟ್ರೋಲ್‌ಗೆ ಒಳಗಾಗಿದ್ದು, ಮೂರು ವರ್ಷವೂ ಒಂದೇ ಪ್ರಾಮಿಸ್ ಮಾಡಿದ್ದಾರೆ ಎಂದು ನೆಟ್ಟಿಗರು ಮೋದಿಯವರ ಕಾಲೆಳೆಯುತ್ತಿದ್ದಾರೆ.

ಆಗಸ್ಟ್ 15, 2019, 2020, 2021 ಈ ಮೂರು ವರ್ಷವೂ 100 ಲಕ್ಷ ಕೋಟಿ ರೂಪಾಯಿಗಳನ್ನು ಆಧುನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ವಿನಿಯೋಗಿಸಲಾಗುತ್ತದೆ ಎಂದು ಹೇಳಿದ್ದಾರೆ ಎಂಬ ಮೀಮ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ರಾಷ್ಟ್ರದ ಜನರನ್ನು ಒಂದೇ ಭರವಸೆ, ಯೋಜನೆಯ ಹೆಸರಿನಲ್ಲಿ ಮೂರು ವರ್ಷಗಳಿಂದ ಪ್ರಧಾನಿ ಮೋದಿ ಮೂರ್ಖರನ್ನಾಗಿಸಿದ್ದಾರೆ ಎಂದು ಹೇಳಲಾಗುತ್ತಿದೆ. 73, 74 ಮತ್ತು 75ನೇ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಇದೇ ಮಾತನ್ನು ಹೇಳಲಾಗಿದೆ ಎಂದು ಪತ್ರಿಕಾ ವರದಿಗಳನ್ನು ಕೊಲಾಜ್ ಮಾಡಿ ಶೇರ್‌ ಮಾಡಲಾಗುತ್ತಿದೆ.

ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ:’ಅಮೃತ’ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಕರ್ನಾಟಕ ಕಾಂಗ್ರೆಸ್ ಕೂಡ ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಹೇಳಿಕೆಯನ್ನು ಆಧರಿಸಿ ಟ್ವೀಟ್ ಮಾಡಿದೆ.

“ಆಗಸ್ಟ್ 15, 2019ಕ್ಕೆ ಎರಡು ವರ್ಷಗಳು ಕಳೆದಿವೆ. ಕನಿಷ್ಟ ಪಕ್ಷ 100 ಲಕ್ಷ ಕೋಟಿಗಳ ಸಂಖ್ಯೆಯನ್ನಾದರೂ ಬದಲಿಸ ಬಹುದಿತ್ತು!” ಎಂದು ಮೋದಿಯವರ ಭಾಷಣಕ್ಕೆ ವ್ಯಂಗ್ಯದ ಪ್ರತಿಕ್ರಿಯೆ ನೀಡಿದೆ.

ಮೀಮ್‌ಗಳ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೂರು ವರ್ಷಗಳ ಭಾಷಣದ ವಿಡಿಯೊ ಕೂಡ ಕೊಲಾಜ್ ಮಾಡಿ ಹಂಚಿಕೊಳ್ಳಲಾಗುತ್ತಿದೆ.

ಮೂರು ವರ್ಷ ಒಂದೇ ಭಾಷಣದ ಪ್ರತಿ ಓದಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತೆ ಲಾವಣ್ಯ ಬಲ್ಲಾಳ್ ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ರೈತರು ಕೂಡ, ಪ್ರಧಾನಿಯವರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

 


ಇದನ್ನೂ ಓದಿ: 75ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಧಾನಿ ಮೋದಿ ಭಾಷಣದ ಪ್ರಮುಖಾಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...