Homeಮುಖಪುಟ100ಕ್ಕೆ ತಲುಪಿದ ಕಾಂಗ್ರೆಸ್ ಸಂಸದರ ಸಂಖ್ಯೆ; ಪಕ್ಷಕ್ಕೆ ಮರಳಿದ ಮಹಾರಾಷ್ಟ್ರದ ಸ್ವತಂತ್ರ ಸಂಸದ

100ಕ್ಕೆ ತಲುಪಿದ ಕಾಂಗ್ರೆಸ್ ಸಂಸದರ ಸಂಖ್ಯೆ; ಪಕ್ಷಕ್ಕೆ ಮರಳಿದ ಮಹಾರಾಷ್ಟ್ರದ ಸ್ವತಂತ್ರ ಸಂಸದ

- Advertisement -
- Advertisement -

ಮಂಗಳವಾರ ಪ್ರಕಟವಾದ ಲೋಕಸಭೆಯ ಫಲಿತಾಂಶದಲ್ಲಿ ಕಾಂಗ್ರೆಸ್  ತನ್ನ ಸಾಧನೆಯನ್ನು ಅಗಾಧವಾಗಿ ಸುಧಾರಿಸಿದೆ. 99 ಇದ್ದ ಸಂಸದರ ಸಂಖ್ಯೆಯು ಇದೀಗ ನೂರು ತಲುಪಿದ್ದು, ತನ್ನ ಖಾತೆಗೆ ಮತ್ತೊಬ್ಬ ಸಂಸದರನ್ನು ಸೇರಿಸಿಕೊಂಡಿದೆ.

ಮಹಾರಾಷ್ಟ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿರುವ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ವಿಶಾಲ್ ಪಾಟೀಲ್ ಗುರುವಾರ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದರು. ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿತ್ತು. ವಿಶಾಲ್ ಪಾಟೀಲ್ ಅವರ ಬೆಂಬಲದೊಂದಿಗೆ ಲೋಕಸಭೆಯಲ್ಲಿ ಕಾಂಗ್ರೆಸ್ ಬಲ 100ಕ್ಕೆ ಏರಲಿದೆ ಎಂದು ಪಕ್ಷದೊಳಗೆ ಹೋರಾಟ ನಡೆಸಿದ್ದ ಕಾಂಗ್ರೆಸ್ ಶಾಸಕ ವಿಶ್ವಜಿತ್ ಕದಂ ಹೇಳಿದ್ದಾರೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ವಸಂತದಾದಾ ಪಾಟೀಲ್ ಅವರ ಮೊಮ್ಮಗ ವಿಶಾಲ್ ಪಾಟೀಲ್ ಅವರು ಸಾಂಗ್ಲಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಜಯ್ಕಾಕ ಪಾಟೀಲ್ ಅವರನ್ನು ಸೋಲಿಸಿದರು.

ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಪಾಲುದಾರರ ನಡುವೆ ಸೀಟು ಹಂಚಿಕೆ ವ್ಯವಸ್ಥೆಯಲ್ಲಿ ಸಾಂಗ್ಲಿ ಸಂಸದೀಯ ಸ್ಥಾನವನ್ನು ಶಿವಸೇನೆ-ಯುಬಿಟಿಗೆ ಬಿಟ್ಟುಕೊಂಟ್ಟ ನಂತರ ಅವರು ಬಂಡಾಯವೆದ್ದು ಸ್ವತಂತ್ರವಾಗಿ ಸ್ಪರ್ಧಿಸಿದ್ದರು.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, “ಸಾಂಗ್ಲಿಯಿಂದ ಚುನಾಯಿತ ಸಂಸದ ವಿಶಾಲ್ ಪಾಟೀಲ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲವನ್ನು ಸ್ವಾಗತಿಸುತ್ತೇನೆ” ಎಂದು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಸೇನಾ ಬಣದ ಸೀಟು ಒಪ್ಪಂದಕ್ಕೆ ಮುಂಚೆಯೇ ತನ್ನದೇ ಅಭ್ಯರ್ಥಿಯನ್ನು ಘೋಷಿಸಿದ ಕ್ರಮವು ಮಹಾರಾಷ್ಟ್ರ ವಿರೋಧ ಪಕ್ಷದ ಮೈತ್ರಿಯಲ್ಲಿ ಸ್ವಲ್ಪ ಘರ್ಷಣೆಯನ್ನು ಉಂಟುಮಾಡಿದೆ. ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕಾಂಗ್ರೆಸ್ ಪದೇಪದೆ ಶಿವಸೇನೆಗೆ ಮನವಿ ಮಾಡಿತ್ತು.

ವಿಶಾಲ್ ಪಾಟೀಲ್ ಮತ್ತು ವಿಶ್ವಜಿತ್ ಕದಂ ನಿನ್ನೆ ಖರ್ಗೆ ಮತ್ತು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಸ್ವತಂತ್ರ ಸಂಸದರು ಪಕ್ಷಕ್ಕೆ ತಮ್ಮ ಬೆಂಬಲ ಪತ್ರವನ್ನು ನೀಡಿದರು.

ಲೋಕಸಭೆಯ ಸೆಕ್ರೆಟರಿಯೇಟ್ ಒಪ್ಪಿಗೆ ನೀಡಿದರೆ, ವಿಶಾಲ್ ಪಾಟೀಲ್ ಅವರನ್ನು ಕಾಂಗ್ರೆಸ್‌ನ ಸಹ ಸಂಸದ ಎಂದು ಕರೆಯಬಹುದು ಮತ್ತು ಲೋಕಸಭೆಯಲ್ಲಿ ಪಕ್ಷದ ಬಲ 100 ಆಗಲಿದೆ ಎಂದು ಮುಖಂಡರು ಹೇಳಿದರು.

ಬಿಹಾರದ ಪೂರ್ಣೆಯಾದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದಿರುವ ಮತ್ತೊಬ್ಬ ನಾಯಕ ಪಪ್ಪು ಯಾದವ್ ಕೂಡ ಕಾಂಗ್ರೆಸ್‌ಗೆ ಬೆಂಬಲ ನೀಡುವ ನಿರೀಕ್ಷೆಯಿದೆ. ಚುನಾವಣೆಗೂ ಮುನ್ನ ತಮ್ಮದೇ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನಗೊಳಿಸಿದ್ದರು. ಬಿಹಾರದ ಪ್ರತಿಪಕ್ಷ ಸ್ಥಾನದ ಒಪ್ಪಂದದಲ್ಲಿ ಪೂರ್ಣೆಯಾ ಸ್ಥಾನವು ಆರ್‌ಜೆಡಿ ಪಾಲು ಹೋದಾಗ, ಪಪ್ಪು ಯಾದವ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದರು.

ಇದನ್ನೂ ಓದಿ; ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಹೈಕೋರ್ಟಿನಿಂದ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...