Homeಮುಖಪುಟಗಾಝಾದ ಕದನ ವಿರಾಮ ಮತದಾನದಿಂದ ಭಾರತ ದೂರ: ಆಘಾತ, ನಾಚಿಕೆಯಾಗುತ್ತಿದೆ ಎಂದ ಪ್ರಿಯಾಂಕಾ ಗಾಂಧಿ

ಗಾಝಾದ ಕದನ ವಿರಾಮ ಮತದಾನದಿಂದ ಭಾರತ ದೂರ: ಆಘಾತ, ನಾಚಿಕೆಯಾಗುತ್ತಿದೆ ಎಂದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಗೈರಾಗಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

”ಇಸ್ರೇಲ್ ದಾಳಿಯಿಂದ ಫೆಲೆಸ್ತೀನ್‌ನಲ್ಲಿ ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ಸಾವಿಗೀಡಾಗುತ್ತಿರುವಾಗ ಭಾರತ ಮೌನವಾಗಿ ನೋಡುತ್ತಿದೆ. ಭಾರತವು ಪ್ರತಿಯೊಂದಕ್ಕೂ ವಿರುದ್ಧವಾಗಿ ನಿಲ್ಲುತ್ತಿದೆ” ಎಂದು ಪ್ರಿಯಾಂಕಾ ಹೇಳಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ತಕ್ಷಣದ ಮಾನವೀಯ ಒಪ್ಪಂದ ಮತ್ತು ಗಾಝಾ ಪಟ್ಟಿಯಲ್ಲಿ ಅಡೆತಡೆಯಿಲ್ಲದ ಮಾನವೀಯ ಪ್ರವೇಶಕ್ಕಾಗಿ ಕರೆ ನೀಡಿ ‘ನಾಗರಿಕರ ರಕ್ಷಣೆ ಮತ್ತು ಕಾನೂನು ಮತ್ತು ಮಾನವೀಯ ಜವಾಬ್ದಾರಿಗಳನ್ನು ಎತ್ತಿಹಿಡಿಯುವುದು’ ಎಂಬ ಶೀರ್ಷಿಕೆಯ ಜೋರ್ಡಾನ್ ಕರಡು ನಿರ್ಣಯದ ಮೇಲೆ ನಡೆದ ಮತದಾನದಿಂದ ಭಾರತ ದೂರ ಉಳಿದಿದೆ.

ಈ ವಿಚಾರವಾಗಿ ಎಕ್ಸಾನಲ್ಲಿ ಪೋಸ್ಟ್ ಮಾಡಿದ ಪ್ರಿಯಾಂಕಾ ಗಾಂಧಿ, ”ಮಹಾತ್ಮಗಾಂಧಿಯವರ “ಕಣ್ಣಿಗೆ ಒಂದು ಕಣ್ಣು ಇಡೀ ಜಗತ್ತನ್ನು ಕುರುಡನನ್ನಾಗಿ ಮಾಡುತ್ತದೆ’ ಎಂಬ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

”ಗಾಝಾದಲ್ಲಿ ಕದನ ವಿರಾಮಕ್ಕಾಗಿ ನಡೆದ ಮತದಾನದಿಂದ ನಮ್ಮ ದೇಶವು ದೂರ ಉಳಿದಿರುವುದಕ್ಕೆ ನನಗೆ ಆಘಾತ ಮತ್ತು ನಾಚಿಕೆಯಾಗುತ್ತಿದೆ” ಎಂದು ಹೇಳಿದ್ದಾರೆ.

”ನಮ್ಮ ದೇಶವು ಅಹಿಂಸೆ ಮತ್ತು ಸತ್ಯದ ತತ್ವಗಳ ಮೇಲೆ ಸ್ಥಾಪಿತವಾಗಿದೆ, ನಮ್ಮ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ಅರ್ಪಿಸಿದ ತತ್ವಗಳು, ಈ ತತ್ವಗಳು ನಮ್ಮ ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸುವ ಸಂವಿಧಾನದ ಆಧಾರವಾಗಿದೆ” ಎಂದು ಅವರು ಹೇಳಿದ್ದಾರೆ.

ಶುಕ್ರವಾರವೂ ಈ ವಿಚಾರವಾಗಿ ಎಕ್ಸಾನಲ್ಲಿ ಪೋಸ್ಟ್ ಮಾಡಿದ್ದ ಅವರು, ”ಗಾಝಾದಲ್ಲಿ 7,000 ಜನರನ್ನು ಕೊಂದ ನಂತರವೂ ರಕ್ತಪಾತ ಮತ್ತು ಹಿಂಸಾಚಾರದ ಚಕ್ರ ನಿಂತಿಲ್ಲ. ಈ 7,000 ಜನರಲ್ಲಿ 3,000 ಮುಗ್ಧ ಮಕ್ಕಳು” ಎಂದು ಪ್ರಿಯಾಂಕಾ ಗಾಂಧಿ ಬೇಸರ ವ್ಯಕ್ತಪಡಿಸಿದ್ದರು.

”ಇನ್ನೂ ಎಷ್ಟು ಜೀವಗಳನ್ನು ಕಳೆದುಕೊಂಡ ನಂತರ, ಮಾನವೀಯತೆಯ ಸಾಮೂಹಿಕ ಪ್ರಜ್ಞೆಯು ಅಂತಿಮವಾಗಿ ಜಾಗೃತವಾಗುತ್ತದೆ? ಅಥವಾ ಅಂತಹ ಪ್ರಜ್ಞೆಯು ಈಗ ಉಳಿದಿಲ್ಲವೇ?” ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದರು.

ವಿಶ್ವ ಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಮಂಡಿಸಲಾದ ಈ ಗೊತ್ತುವಳಿಗೆ 120 ದೇಶಗಳು ಬೆಂಬಲ ಸೂಚಿಸಿದರೆ, ಇಸ್ರೇಲ್, ಅಮೆರಿಕಾ, ಹಂಗೇರಿ ಹಾಗೂ ಐದು ಪೆಸಿಫಿಕ್ ದ್ವೀಪ ರಾಷ್ಟ್ರಗಳನ್ನು ಒಳಗೊಂಡಂತೆ ಕೇವಲ 14 ದೇಶಗಳು ಮಾತ್ರ ಅದರ ವಿರುದ್ಧ ಮತ ಚಲಾಯಿಸಿದವು.

ಮತದಾನದಿಂದ ದೂರ ಉಳಿದ 45 ರಾಷ್ಟ್ರಗಳ ಪೈಕಿ ಭಾರತವೂ ಒಂದಾಗಿದ್ದು, ಅವೆಲ್ಲವೂ ಪಾಶ್ಚಿಮಾತ್ಯ ಸೇನಾ ಮೈತ್ರಿಕೂಟದ ಭಾಗವಾಗಿವೆ. ಅವೆಲ್ಲವೂ ಶುಕ್ರವಾರ ಮಧ್ಯಾಹ್ನ ನ್ಯೂಯಾರ್ಕ್ ನಲ್ಲಿ ನಡೆದ ತುರ್ತು ವಿಶ್ವ ಸಂಸ್ಥೆ ಸಾಮಾನ್ಯ ಅಧಿವೇಶನದ ಮತದಾನದಿಂದ ದೂರ ಉಳಿಯುವ ನಿರ್ಧಾರಕ್ಕೆ ಬಂದವು.

ಇದನ್ನೂ ಓದಿ: ಮಾನವೀಯತೆ ಎಚ್ಚರಗೊಳ್ಳುವುದು ಯಾವಾಗ?: ಇಸ್ರೇಲ್‌ನ ಹಿಂಸಾಚಾರಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...