Homeಮುಖಪುಟಗಾಝಾದ ಕದನ ವಿರಾಮ ಮತದಾನದಿಂದ ಭಾರತ ದೂರ: ಆಘಾತ, ನಾಚಿಕೆಯಾಗುತ್ತಿದೆ ಎಂದ ಪ್ರಿಯಾಂಕಾ ಗಾಂಧಿ

ಗಾಝಾದ ಕದನ ವಿರಾಮ ಮತದಾನದಿಂದ ಭಾರತ ದೂರ: ಆಘಾತ, ನಾಚಿಕೆಯಾಗುತ್ತಿದೆ ಎಂದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಗೈರಾಗಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

”ಇಸ್ರೇಲ್ ದಾಳಿಯಿಂದ ಫೆಲೆಸ್ತೀನ್‌ನಲ್ಲಿ ಸಾವಿರಾರು ಪುರುಷರು, ಮಹಿಳೆಯರು ಮತ್ತು ಮಕ್ಕಳು ಸಾವಿಗೀಡಾಗುತ್ತಿರುವಾಗ ಭಾರತ ಮೌನವಾಗಿ ನೋಡುತ್ತಿದೆ. ಭಾರತವು ಪ್ರತಿಯೊಂದಕ್ಕೂ ವಿರುದ್ಧವಾಗಿ ನಿಲ್ಲುತ್ತಿದೆ” ಎಂದು ಪ್ರಿಯಾಂಕಾ ಹೇಳಿದ್ದಾರೆ.

ಇಸ್ರೇಲ್-ಹಮಾಸ್ ಸಂಘರ್ಷದಲ್ಲಿ ತಕ್ಷಣದ ಮಾನವೀಯ ಒಪ್ಪಂದ ಮತ್ತು ಗಾಝಾ ಪಟ್ಟಿಯಲ್ಲಿ ಅಡೆತಡೆಯಿಲ್ಲದ ಮಾನವೀಯ ಪ್ರವೇಶಕ್ಕಾಗಿ ಕರೆ ನೀಡಿ ‘ನಾಗರಿಕರ ರಕ್ಷಣೆ ಮತ್ತು ಕಾನೂನು ಮತ್ತು ಮಾನವೀಯ ಜವಾಬ್ದಾರಿಗಳನ್ನು ಎತ್ತಿಹಿಡಿಯುವುದು’ ಎಂಬ ಶೀರ್ಷಿಕೆಯ ಜೋರ್ಡಾನ್ ಕರಡು ನಿರ್ಣಯದ ಮೇಲೆ ನಡೆದ ಮತದಾನದಿಂದ ಭಾರತ ದೂರ ಉಳಿದಿದೆ.

ಈ ವಿಚಾರವಾಗಿ ಎಕ್ಸಾನಲ್ಲಿ ಪೋಸ್ಟ್ ಮಾಡಿದ ಪ್ರಿಯಾಂಕಾ ಗಾಂಧಿ, ”ಮಹಾತ್ಮಗಾಂಧಿಯವರ “ಕಣ್ಣಿಗೆ ಒಂದು ಕಣ್ಣು ಇಡೀ ಜಗತ್ತನ್ನು ಕುರುಡನನ್ನಾಗಿ ಮಾಡುತ್ತದೆ’ ಎಂಬ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.

”ಗಾಝಾದಲ್ಲಿ ಕದನ ವಿರಾಮಕ್ಕಾಗಿ ನಡೆದ ಮತದಾನದಿಂದ ನಮ್ಮ ದೇಶವು ದೂರ ಉಳಿದಿರುವುದಕ್ಕೆ ನನಗೆ ಆಘಾತ ಮತ್ತು ನಾಚಿಕೆಯಾಗುತ್ತಿದೆ” ಎಂದು ಹೇಳಿದ್ದಾರೆ.

”ನಮ್ಮ ದೇಶವು ಅಹಿಂಸೆ ಮತ್ತು ಸತ್ಯದ ತತ್ವಗಳ ಮೇಲೆ ಸ್ಥಾಪಿತವಾಗಿದೆ, ನಮ್ಮ ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣವನ್ನು ಅರ್ಪಿಸಿದ ತತ್ವಗಳು, ಈ ತತ್ವಗಳು ನಮ್ಮ ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸುವ ಸಂವಿಧಾನದ ಆಧಾರವಾಗಿದೆ” ಎಂದು ಅವರು ಹೇಳಿದ್ದಾರೆ.

ಶುಕ್ರವಾರವೂ ಈ ವಿಚಾರವಾಗಿ ಎಕ್ಸಾನಲ್ಲಿ ಪೋಸ್ಟ್ ಮಾಡಿದ್ದ ಅವರು, ”ಗಾಝಾದಲ್ಲಿ 7,000 ಜನರನ್ನು ಕೊಂದ ನಂತರವೂ ರಕ್ತಪಾತ ಮತ್ತು ಹಿಂಸಾಚಾರದ ಚಕ್ರ ನಿಂತಿಲ್ಲ. ಈ 7,000 ಜನರಲ್ಲಿ 3,000 ಮುಗ್ಧ ಮಕ್ಕಳು” ಎಂದು ಪ್ರಿಯಾಂಕಾ ಗಾಂಧಿ ಬೇಸರ ವ್ಯಕ್ತಪಡಿಸಿದ್ದರು.

”ಇನ್ನೂ ಎಷ್ಟು ಜೀವಗಳನ್ನು ಕಳೆದುಕೊಂಡ ನಂತರ, ಮಾನವೀಯತೆಯ ಸಾಮೂಹಿಕ ಪ್ರಜ್ಞೆಯು ಅಂತಿಮವಾಗಿ ಜಾಗೃತವಾಗುತ್ತದೆ? ಅಥವಾ ಅಂತಹ ಪ್ರಜ್ಞೆಯು ಈಗ ಉಳಿದಿಲ್ಲವೇ?” ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದರು.

ವಿಶ್ವ ಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಮಂಡಿಸಲಾದ ಈ ಗೊತ್ತುವಳಿಗೆ 120 ದೇಶಗಳು ಬೆಂಬಲ ಸೂಚಿಸಿದರೆ, ಇಸ್ರೇಲ್, ಅಮೆರಿಕಾ, ಹಂಗೇರಿ ಹಾಗೂ ಐದು ಪೆಸಿಫಿಕ್ ದ್ವೀಪ ರಾಷ್ಟ್ರಗಳನ್ನು ಒಳಗೊಂಡಂತೆ ಕೇವಲ 14 ದೇಶಗಳು ಮಾತ್ರ ಅದರ ವಿರುದ್ಧ ಮತ ಚಲಾಯಿಸಿದವು.

ಮತದಾನದಿಂದ ದೂರ ಉಳಿದ 45 ರಾಷ್ಟ್ರಗಳ ಪೈಕಿ ಭಾರತವೂ ಒಂದಾಗಿದ್ದು, ಅವೆಲ್ಲವೂ ಪಾಶ್ಚಿಮಾತ್ಯ ಸೇನಾ ಮೈತ್ರಿಕೂಟದ ಭಾಗವಾಗಿವೆ. ಅವೆಲ್ಲವೂ ಶುಕ್ರವಾರ ಮಧ್ಯಾಹ್ನ ನ್ಯೂಯಾರ್ಕ್ ನಲ್ಲಿ ನಡೆದ ತುರ್ತು ವಿಶ್ವ ಸಂಸ್ಥೆ ಸಾಮಾನ್ಯ ಅಧಿವೇಶನದ ಮತದಾನದಿಂದ ದೂರ ಉಳಿಯುವ ನಿರ್ಧಾರಕ್ಕೆ ಬಂದವು.

ಇದನ್ನೂ ಓದಿ: ಮಾನವೀಯತೆ ಎಚ್ಚರಗೊಳ್ಳುವುದು ಯಾವಾಗ?: ಇಸ್ರೇಲ್‌ನ ಹಿಂಸಾಚಾರಕ್ಕೆ ಪ್ರಿಯಾಂಕಾ ಗಾಂಧಿ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...