Homeಮುಖಪುಟಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ನಿರ್ಣಯ ಅಂಗೀಕಾರ: ಮತದಾನಕ್ಕೆ ಭಾರತ ಗೈರು

ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ನಿರ್ಣಯ ಅಂಗೀಕಾರ: ಮತದಾನಕ್ಕೆ ಭಾರತ ಗೈರು

- Advertisement -
- Advertisement -

ಯುನೈಟೆಡ್ ನೇಷನ್ಸ್ ಹ್ಯೂಮನ್ ರೈಟ್ಸ್ ಕೌನ್ಸಿಲ್ (ಯುಎನ್‌ಹೆಚ್‌ಆರ್‌ಸಿ) ಗಾಝಾದಲ್ಲಿ ತಕ್ಷಣದ ಕದನ ವಿರಾಮಕ್ಕೆ ಕರೆ ನೀಡುವುದು ಸೇರಿದಂತೆ ಅನೇಕ ನಿರ್ಣಯಗಳನ್ನು ಅಂಗೀಕರಿಸಿದೆ.

ಇಸ್ಲಾಮಿಕ್ ಸಹಕಾರ ಸಂಘಟನೆ (ಒಐಸಿ) ಪರವಾಗಿ ಪಾಕಿಸ್ತಾನವು ಜಿನೀವಾ ಕೌನ್ಸಿಲ್‌ನಲ್ಲಿ ನಿರ್ಣಯವನ್ನು ಮಂಡಿಸಿದೆ.

ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಪ್ಯಾಲೇಸ್ತೀನಿಯನ್ ಪ್ರದೇಶಗಳಲ್ಲಿ ಮಾನವ ಹಕ್ಕುಗಳನ್ನು ಕಾಪಾಡುವ ನಿರ್ಣಯದ ಮೇಲಿನ ಮತದಾನದಿಂದ ಶುಕ್ರವಾರ ಭಾರತ ದೂರ ಉಳಿದಿದೆ.

ಶುಕ್ರವಾರ ಅಂಗೀಕರಿಸಿದ ನಿರ್ಣಯವು, ಪೂರ್ವ ಜೆರುಸಲೇಂ ಸೇರಿದಂತೆ ಪ್ಯಾಲೆಸ್ತೀನ್ ಪ್ರದೇಶಗಳಲ್ಲಿ ಇಸ್ರೇಲ್ ತನ್ನ ಆಕ್ರಮಣವನ್ನು ಕೊನೆಗೊಳಿಸಬೇಕೆಂದು ಒತ್ತಾಯಿಸಿದೆ.

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸುತ್ತಿರುವ ಅಕ್ರಮ ದಿಗ್ಬಂಧನ ಸೇರಿದಂತೆ ಇತರ ಎಲ್ಲಾ ರೀತಿಯ ಸಾಮೂಹಿಕ ಶಿಕ್ಷೆ ಮತ್ತು ಮುತ್ತಿಗೆಯನ್ನು ತಕ್ಷಣವೇ ತೆಗೆದು ಹಾಕಬೇಕು ಮತ್ತು ಮಾನವೀಯ ನೆರವು ಒದಗಿಸುವ ಸಲುವಾಗಿ ಗಾಝಾದಲ್ಲಿ ತಕ್ಷಣದ ಕದನ ವಿರಾಮ ಘೋಷಿಸಬೇಕು ಎಂದು ಆಗ್ರಹಿಸಿದೆ.

ಜನಾಂಗೀಯ ನಿರ್ಣಾಮಕ್ಕೆ ಕಾರಣವಾಗುವ ಇಸ್ರೇಲಿ ಕ್ರಮಗಳನ್ನು ನಿರ್ಣಯ ಖಂಡಿಸಿದ್ದು, ಗಾಝಾದ ಒಳಗೆ ಅಥವಾ ಅಲ್ಲಿಂದ ಹೊರಗೆ ಪ್ಯಾಲೆಸ್ತೀನಿಯರನ್ನು ಬಲವಂತವಾಗಿ ಸ್ಥಳಾಂತರಿಸುವುದನ್ನು ತಡೆಯಲು ಎಲ್ಲಾ ದೇಶಗಳು ತಕ್ಷಣದ ಕ್ರಮವನ್ನು ತೆಗೆದುಕೊಳ್ಳುವಂತೆ ಕರೆ ನೀಡಿದೆ.

ನಿರ್ಣಯವು ಗಾಝಾದಲ್ಲಿ ಯುದ್ಧದ ಭಾಗವಾಗಿ ಜನರು ಹಸಿವಿನಿಂದ ಬಳಲುವಂತೆ ಮಾಡಿರುವುದು. ಮಾನವೀಯ ನೆರವಿಗೆ ಇಸ್ರೇಲ್ ತಡೆಯೊಡ್ಡಿರುವುದು. ಆಹಾರ, ನೀರು, ವಿದ್ಯುತ್, ಇಂಧನ ಮತ್ತು ದೂರಸಂಪರ್ಕ ಸೇರಿದಂತೆ ನಾಗರಿಕರ ಅಗತ್ಯ ಸೌಲಭ್ಯಗಳನ್ನು ತಡೆದಿರುವುದನ್ನು ಖಂಡಿಸಿದೆ.

ಭಾರತವನ್ನು ಜೊತೆಗೆ ಫ್ರಾನ್ಸ್, ಜಪಾನ್, ನೆದರ್ಲ್ಯಾಂಡ್ಸ್ ಮತ್ತು ರೊಮೇನಿಯಾ ಸೇರಿದಂತೆ ಇತರ 13 ದೇಶಗಳು ಮತದಾನಕ್ಕೆ ಗೈರು ಹಾಜರಾಗಿದ್ದವು. ನಿರ್ಣಯದ ವಿರುದ್ಧ ಮತ ಚಲಾಯಿಸಿದ ಆರು ದೇಶಗಳಲ್ಲಿ ಯುಎಸ್, ಜರ್ಮನಿ ಮತ್ತು ಅರ್ಜೆಂಟೀನಾ ಸೇರಿವೆ.

ಇಪ್ಪತ್ತೆಂಟು ದೇಶಗಳು ನಿರ್ಣಯದ ಪರವಾಗಿ ಮತ ಚಲಾಯಿಸಿದವು. ಈ ರಾಷ್ಟ್ರಗಳಲ್ಲಿ ಬಾಂಗ್ಲಾದೇಶ, ಚೀನಾ, ಇಂಡೋನೇಷ್ಯಾ, ಕುವೈತ್, ಮಲೇಷ್ಯಾ, ಕತಾರ್, ದಕ್ಷಿಣ ಆಫ್ರಿಕಾ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ವಿಯೆಟ್ನಾಂ ಸೇರಿವೆ.

ಇದನ್ನೂ ಓದಿ : ಮಗುವಿನ ಜನನ ನೋಂದಣಿ ವೇಳೆ ಪೋಷಕರ ಧರ್ಮ ದಾಖಲಿಸಲಿದೆ ಸರ್ಕಾರ: ಎನ್‌ಆರ್‌ಸಿ ಹುನ್ನಾರ ಎಂದ ಟಿಎಂಸಿ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...