Homeಅಂತರಾಷ್ಟ್ರೀಯಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ...

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

- Advertisement -
- Advertisement -

ಗಾಝಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆ ನಾಗರಿಕರ ರಕ್ಷಣೆ ಮತ್ತು ಕಾನೂನು ಮತ್ತು ಮಾನವೀಯ ಜವಾಬ್ದಾರಿಗಳನ್ನು ಎತ್ತಿಹಿಡಿಯುವ ಕುರಿತು ಯುಎನ್ ಜನರಲ್ ಅಸೆಂಬ್ಲಿ ನಿರ್ಣಯವನ್ನು ಅಂಗೀಕರಿಸಿದೆ. ಆದರೆ ಮಾನವೀಯ ಒಪ್ಪಂದಕ್ಕೆ ಕುರಿತ ಜೋರ್ಡಾನ್ ಮಂಡಿಸಿದ ನಿರ್ಣಯಕ್ಕೆ ಮತಚಲಾಯಿಸದೆ ಭಾರತ ದೂರ ಉಳಿದಿದೆ.

ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕು ಹಾಗೂ ಅಂತರಾಷ್ಟ್ರೀಯ ಮಾನವೀಯ ಕಾನೂನುಗಳಿಗೆ ಬದ್ಧವಾಗಿರಬೇಕು ಎಂಬ ಗೊತ್ತುವಳಿಯನ್ನು ಜೋರ್ಡಾನ್ ರಾಷ್ಟ್ರವು ಮಂಡಿಸಿದೆ. ಅದು ತನ್ನ ಪ್ರಸ್ತಾವನೆಯಲ್ಲಿ ಎಲ್ಲ ಒತ್ತೆಯಾಳು ನಾಗರಿಕರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಹಾಗೂ ಗಾಝಾಗೆ ಯಾವುದೇ ಅಡೆತಡೆಯಿಲ್ಲದಂತೆ ಮಾನವೀಯ ನೆರವನ್ನು ಒದಗಿಸಬೇಕು ಎಂದು ಮನವಿ ಮಾಡಿತ್ತು.

ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಗಳನ್ನು ಎತ್ತಿಹಿಡಿಯುವುದು ಎಂಬ ಶೀರ್ಷಿಕೆಯ ನಿರ್ಣಯವನ್ನು ಬಹುಮತದಿಂದ ಅಂಗೀಕರಿಸಲಾಯಿತು. ನಿರ್ಣಯದ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದೆ. ಅದರ ವಿರುದ್ಧ 14 ರಾಷ್ಟ್ರಗಳು ಮತಚಲಾಯಿಸಿದರೆ 45 ದೇಶಗಳು ಗೈರುಹಾಜರಾಗಿದ್ದವು. ಅದರಲ್ಲಿ ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ದೇಶಗಳು ಸೇರಿದೆ.

193 ಸದಸ್ಯ ರಾಷ್ಟ್ರಗಳ UN ಜನರಲ್ ಅಸೆಂಬ್ಲಿಯ(UNGA) 10ನೇ ತುರ್ತು ವಿಶೇಷ ಅಧಿವೇಶನದಲ್ಲಿ ಜೋರ್ಡಾನ್ ಸಲ್ಲಿಸಿದ ಕರಡು ನಿರ್ಣಯನ್ನು ಬಾಂಗ್ಲಾದೇಶ, ಮಾಲ್ಡೀವ್ಸ್, ಪಾಕಿಸ್ತಾನ, ರಷ್ಯಾ ದಕ್ಷಿಣ ಆಫ್ರಿಕಾ ಸೇರಿದಂತೆ 40 ಕ್ಕೂ ಹೆಚ್ಚು ರಾಷ್ಟ್ರಗಳು ಬೆಂಬಲಿಸಿದೆ.

ಜೋರ್ಡಾನ್‌ ಮಂಡಿಸಿದ ಕರಡು ನಿರ್ಣಯವು ನೀರು, ಆಹಾರ, ವೈದ್ಯಕೀಯ ಸಹಾಯ, ಇಂಧನ ಮತ್ತು ವಿದ್ಯುತ್ ಸೇರಿದಂತೆ ಗಾಜಾ ಪಟ್ಟಿಯಾದ್ಯಂತ ನಾಗರಿಕರಿಗೆ ಅಗತ್ಯ ಸರಕುಗಳು ಮತ್ತು ಸೇವೆಗಳನ್ನು ತಕ್ಷಣಕ್ಕೆ ಒದಗಿಸುವಂತೆ ಆಗ್ರಹಿಸಿದೆ.

ನಿರ್ಣಯದಲ್ಲಿ ಹಮಾಸ್ ಮತ್ತು ಒತ್ತೆಯಾಳು ಎಂಬ ಪದಗಳು ಕಾಣೆಯಾಗಿವೆ ಎಂದು ಹೇಳಿದ್ದ ಶ್ವಸಂಸ್ಥೆಯಲ್ಲಿನ ಅಮೆರಿಕದ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್, ನಿರ್ಣಯವನ್ನು ವಿರೋಧಿಸಿದ್ದಾರೆ.

ಅ.7 ರಂದು ಹಮಾಸ್ ನಡೆಸಿದ ದಾಳಿಯ ನಂತರ 1,400 ಕ್ಕೂ ಹೆಚ್ಚು ಜನರು ಇಸ್ರೇಲ್‌ ನಲ್ಲಿ ಮೃತಪಟ್ಟಿದ್ದಾರೆ. ಇಸ್ರೇಲ್ ಬಾಂಬ್ ದಾಳಿಯಲ್ಲಿ 6,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಜೋರ್ಡಾನ್ ಕರಡು ನಿರ್ಣಯವು ಹಮಾಸ್ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ. ಸಾಮಾನ್ಯ ಸಭೆಯು ನಿರ್ಣಯದ ಮೇಲೆ ಮತ ಚಲಾಯಿಸುವ ಮೊದಲು ಕೆನಡಾ ತಿದ್ದುಪಡಿ ನಿರ್ಣಯವನ್ನು ಪ್ರಸ್ತಾಪಿಸಿದೆ.

ಕೆನಡಾ ಪ್ರಸ್ತಾಪಿಸಿದ ತಿದ್ದುಪಡಿ ನಿರ್ಣಯದಲ್ಲಿ ಒಂದು ಪ್ಯಾರಾವನ್ನು ಸೇರಿಸಲು ಕೇಳಿದೆ. ಸಾಮಾನ್ಯ ಸಭೆಯು ಅ.7ರಂದು ಇಸ್ರೇಲ್‌ ಮೇಲೆ ನಡೆಸಿದ ಹಮಾಸ್‌ನ ದಾಳಿಯನ್ನು ಖಂಡಿಸಿದೆ. ಒತ್ತೆಯಳುಗಳ ರಕ್ಷಣೆ, ಯೋಗಕ್ಷೇಮ ಮತ್ತು ಮಾನವೀಯ ಚಿಕಿತ್ಸೆಗಾಗಿ ಒತ್ತಾಯಿಸಿದೆ ಮತ್ತು ತಕ್ಷಣದ ಬಿಡುಗಡೆಗೆ ಒತ್ತಾಯಿಸಿದೆ.

ಭಾರತ ಸೇರಿ 87 ಇತರ ರಾಷ್ಟ್ರಗಳು ತಿದ್ದುಪಡಿಯ ಪರವಾಗಿ ಮತ ಚಲಾಯಿಸಿದರೆ, 55 ಸದಸ್ಯ ರಾಷ್ಟ್ರಗಳು ಅದರ ವಿರುದ್ಧ ಮತ ಚಲಾಯಿಸಿದವು ಮತ್ತು 23 ದೇಶಗಳು ಮತ ಚಲಾವಣೆಯಿಂದ ದೂರ ಉಳಿದಿವೆ. ಹಾಜರಿರುವ ಮತ್ತು ಮತ ಚಲಾಯಿಸುವ ಸದಸ್ಯರ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ವಿಫಲವಾದ ಕಾರಣ ಕರಡು ತಿದ್ದುಪಡಿಯನ್ನು ಅಂಗೀಕರಿಸಲಾಗಲಿಲ್ಲ.

UNGAಯ 78 ನೇ ಅಧಿವೇಶನದ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಕರಡು ತಿದ್ದುಪಡಿಯನ್ನು ಅಂಗೀಕರಿಸಲಾಗುವುದಿಲ್ಲ ಎಂದು ಘೋಷಿಸಿದರು.

ಇದನ್ನು ಓದಿ: ಬೆಂಗಳೂರು: ಪೊಲೀಸ್‌ ಅಧಿಕಾರಿಗೆ ‘ಮುಸ್ಲಿಂ’ ಎಂದು ನಿಂದಿಸಿದ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...