Homeಅಂತರಾಷ್ಟ್ರೀಯಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ...

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

- Advertisement -
- Advertisement -

ಗಾಝಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆ ನಾಗರಿಕರ ರಕ್ಷಣೆ ಮತ್ತು ಕಾನೂನು ಮತ್ತು ಮಾನವೀಯ ಜವಾಬ್ದಾರಿಗಳನ್ನು ಎತ್ತಿಹಿಡಿಯುವ ಕುರಿತು ಯುಎನ್ ಜನರಲ್ ಅಸೆಂಬ್ಲಿ ನಿರ್ಣಯವನ್ನು ಅಂಗೀಕರಿಸಿದೆ. ಆದರೆ ಮಾನವೀಯ ಒಪ್ಪಂದಕ್ಕೆ ಕುರಿತ ಜೋರ್ಡಾನ್ ಮಂಡಿಸಿದ ನಿರ್ಣಯಕ್ಕೆ ಮತಚಲಾಯಿಸದೆ ಭಾರತ ದೂರ ಉಳಿದಿದೆ.

ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕು ಹಾಗೂ ಅಂತರಾಷ್ಟ್ರೀಯ ಮಾನವೀಯ ಕಾನೂನುಗಳಿಗೆ ಬದ್ಧವಾಗಿರಬೇಕು ಎಂಬ ಗೊತ್ತುವಳಿಯನ್ನು ಜೋರ್ಡಾನ್ ರಾಷ್ಟ್ರವು ಮಂಡಿಸಿದೆ. ಅದು ತನ್ನ ಪ್ರಸ್ತಾವನೆಯಲ್ಲಿ ಎಲ್ಲ ಒತ್ತೆಯಾಳು ನಾಗರಿಕರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಹಾಗೂ ಗಾಝಾಗೆ ಯಾವುದೇ ಅಡೆತಡೆಯಿಲ್ಲದಂತೆ ಮಾನವೀಯ ನೆರವನ್ನು ಒದಗಿಸಬೇಕು ಎಂದು ಮನವಿ ಮಾಡಿತ್ತು.

ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಗಳನ್ನು ಎತ್ತಿಹಿಡಿಯುವುದು ಎಂಬ ಶೀರ್ಷಿಕೆಯ ನಿರ್ಣಯವನ್ನು ಬಹುಮತದಿಂದ ಅಂಗೀಕರಿಸಲಾಯಿತು. ನಿರ್ಣಯದ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದೆ. ಅದರ ವಿರುದ್ಧ 14 ರಾಷ್ಟ್ರಗಳು ಮತಚಲಾಯಿಸಿದರೆ 45 ದೇಶಗಳು ಗೈರುಹಾಜರಾಗಿದ್ದವು. ಅದರಲ್ಲಿ ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ದೇಶಗಳು ಸೇರಿದೆ.

193 ಸದಸ್ಯ ರಾಷ್ಟ್ರಗಳ UN ಜನರಲ್ ಅಸೆಂಬ್ಲಿಯ(UNGA) 10ನೇ ತುರ್ತು ವಿಶೇಷ ಅಧಿವೇಶನದಲ್ಲಿ ಜೋರ್ಡಾನ್ ಸಲ್ಲಿಸಿದ ಕರಡು ನಿರ್ಣಯನ್ನು ಬಾಂಗ್ಲಾದೇಶ, ಮಾಲ್ಡೀವ್ಸ್, ಪಾಕಿಸ್ತಾನ, ರಷ್ಯಾ ದಕ್ಷಿಣ ಆಫ್ರಿಕಾ ಸೇರಿದಂತೆ 40 ಕ್ಕೂ ಹೆಚ್ಚು ರಾಷ್ಟ್ರಗಳು ಬೆಂಬಲಿಸಿದೆ.

ಜೋರ್ಡಾನ್‌ ಮಂಡಿಸಿದ ಕರಡು ನಿರ್ಣಯವು ನೀರು, ಆಹಾರ, ವೈದ್ಯಕೀಯ ಸಹಾಯ, ಇಂಧನ ಮತ್ತು ವಿದ್ಯುತ್ ಸೇರಿದಂತೆ ಗಾಜಾ ಪಟ್ಟಿಯಾದ್ಯಂತ ನಾಗರಿಕರಿಗೆ ಅಗತ್ಯ ಸರಕುಗಳು ಮತ್ತು ಸೇವೆಗಳನ್ನು ತಕ್ಷಣಕ್ಕೆ ಒದಗಿಸುವಂತೆ ಆಗ್ರಹಿಸಿದೆ.

ನಿರ್ಣಯದಲ್ಲಿ ಹಮಾಸ್ ಮತ್ತು ಒತ್ತೆಯಾಳು ಎಂಬ ಪದಗಳು ಕಾಣೆಯಾಗಿವೆ ಎಂದು ಹೇಳಿದ್ದ ಶ್ವಸಂಸ್ಥೆಯಲ್ಲಿನ ಅಮೆರಿಕದ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್, ನಿರ್ಣಯವನ್ನು ವಿರೋಧಿಸಿದ್ದಾರೆ.

ಅ.7 ರಂದು ಹಮಾಸ್ ನಡೆಸಿದ ದಾಳಿಯ ನಂತರ 1,400 ಕ್ಕೂ ಹೆಚ್ಚು ಜನರು ಇಸ್ರೇಲ್‌ ನಲ್ಲಿ ಮೃತಪಟ್ಟಿದ್ದಾರೆ. ಇಸ್ರೇಲ್ ಬಾಂಬ್ ದಾಳಿಯಲ್ಲಿ 6,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಜೋರ್ಡಾನ್ ಕರಡು ನಿರ್ಣಯವು ಹಮಾಸ್ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ. ಸಾಮಾನ್ಯ ಸಭೆಯು ನಿರ್ಣಯದ ಮೇಲೆ ಮತ ಚಲಾಯಿಸುವ ಮೊದಲು ಕೆನಡಾ ತಿದ್ದುಪಡಿ ನಿರ್ಣಯವನ್ನು ಪ್ರಸ್ತಾಪಿಸಿದೆ.

ಕೆನಡಾ ಪ್ರಸ್ತಾಪಿಸಿದ ತಿದ್ದುಪಡಿ ನಿರ್ಣಯದಲ್ಲಿ ಒಂದು ಪ್ಯಾರಾವನ್ನು ಸೇರಿಸಲು ಕೇಳಿದೆ. ಸಾಮಾನ್ಯ ಸಭೆಯು ಅ.7ರಂದು ಇಸ್ರೇಲ್‌ ಮೇಲೆ ನಡೆಸಿದ ಹಮಾಸ್‌ನ ದಾಳಿಯನ್ನು ಖಂಡಿಸಿದೆ. ಒತ್ತೆಯಳುಗಳ ರಕ್ಷಣೆ, ಯೋಗಕ್ಷೇಮ ಮತ್ತು ಮಾನವೀಯ ಚಿಕಿತ್ಸೆಗಾಗಿ ಒತ್ತಾಯಿಸಿದೆ ಮತ್ತು ತಕ್ಷಣದ ಬಿಡುಗಡೆಗೆ ಒತ್ತಾಯಿಸಿದೆ.

ಭಾರತ ಸೇರಿ 87 ಇತರ ರಾಷ್ಟ್ರಗಳು ತಿದ್ದುಪಡಿಯ ಪರವಾಗಿ ಮತ ಚಲಾಯಿಸಿದರೆ, 55 ಸದಸ್ಯ ರಾಷ್ಟ್ರಗಳು ಅದರ ವಿರುದ್ಧ ಮತ ಚಲಾಯಿಸಿದವು ಮತ್ತು 23 ದೇಶಗಳು ಮತ ಚಲಾವಣೆಯಿಂದ ದೂರ ಉಳಿದಿವೆ. ಹಾಜರಿರುವ ಮತ್ತು ಮತ ಚಲಾಯಿಸುವ ಸದಸ್ಯರ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ವಿಫಲವಾದ ಕಾರಣ ಕರಡು ತಿದ್ದುಪಡಿಯನ್ನು ಅಂಗೀಕರಿಸಲಾಗಲಿಲ್ಲ.

UNGAಯ 78 ನೇ ಅಧಿವೇಶನದ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಕರಡು ತಿದ್ದುಪಡಿಯನ್ನು ಅಂಗೀಕರಿಸಲಾಗುವುದಿಲ್ಲ ಎಂದು ಘೋಷಿಸಿದರು.

ಇದನ್ನು ಓದಿ: ಬೆಂಗಳೂರು: ಪೊಲೀಸ್‌ ಅಧಿಕಾರಿಗೆ ‘ಮುಸ್ಲಿಂ’ ಎಂದು ನಿಂದಿಸಿದ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...