Homeಅಂತರಾಷ್ಟ್ರೀಯಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ...

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

- Advertisement -
- Advertisement -

ಗಾಝಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆ ನಾಗರಿಕರ ರಕ್ಷಣೆ ಮತ್ತು ಕಾನೂನು ಮತ್ತು ಮಾನವೀಯ ಜವಾಬ್ದಾರಿಗಳನ್ನು ಎತ್ತಿಹಿಡಿಯುವ ಕುರಿತು ಯುಎನ್ ಜನರಲ್ ಅಸೆಂಬ್ಲಿ ನಿರ್ಣಯವನ್ನು ಅಂಗೀಕರಿಸಿದೆ. ಆದರೆ ಮಾನವೀಯ ಒಪ್ಪಂದಕ್ಕೆ ಕುರಿತ ಜೋರ್ಡಾನ್ ಮಂಡಿಸಿದ ನಿರ್ಣಯಕ್ಕೆ ಮತಚಲಾಯಿಸದೆ ಭಾರತ ದೂರ ಉಳಿದಿದೆ.

ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕು ಹಾಗೂ ಅಂತರಾಷ್ಟ್ರೀಯ ಮಾನವೀಯ ಕಾನೂನುಗಳಿಗೆ ಬದ್ಧವಾಗಿರಬೇಕು ಎಂಬ ಗೊತ್ತುವಳಿಯನ್ನು ಜೋರ್ಡಾನ್ ರಾಷ್ಟ್ರವು ಮಂಡಿಸಿದೆ. ಅದು ತನ್ನ ಪ್ರಸ್ತಾವನೆಯಲ್ಲಿ ಎಲ್ಲ ಒತ್ತೆಯಾಳು ನಾಗರಿಕರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಹಾಗೂ ಗಾಝಾಗೆ ಯಾವುದೇ ಅಡೆತಡೆಯಿಲ್ಲದಂತೆ ಮಾನವೀಯ ನೆರವನ್ನು ಒದಗಿಸಬೇಕು ಎಂದು ಮನವಿ ಮಾಡಿತ್ತು.

ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಗಳನ್ನು ಎತ್ತಿಹಿಡಿಯುವುದು ಎಂಬ ಶೀರ್ಷಿಕೆಯ ನಿರ್ಣಯವನ್ನು ಬಹುಮತದಿಂದ ಅಂಗೀಕರಿಸಲಾಯಿತು. ನಿರ್ಣಯದ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದೆ. ಅದರ ವಿರುದ್ಧ 14 ರಾಷ್ಟ್ರಗಳು ಮತಚಲಾಯಿಸಿದರೆ 45 ದೇಶಗಳು ಗೈರುಹಾಜರಾಗಿದ್ದವು. ಅದರಲ್ಲಿ ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ದೇಶಗಳು ಸೇರಿದೆ.

193 ಸದಸ್ಯ ರಾಷ್ಟ್ರಗಳ UN ಜನರಲ್ ಅಸೆಂಬ್ಲಿಯ(UNGA) 10ನೇ ತುರ್ತು ವಿಶೇಷ ಅಧಿವೇಶನದಲ್ಲಿ ಜೋರ್ಡಾನ್ ಸಲ್ಲಿಸಿದ ಕರಡು ನಿರ್ಣಯನ್ನು ಬಾಂಗ್ಲಾದೇಶ, ಮಾಲ್ಡೀವ್ಸ್, ಪಾಕಿಸ್ತಾನ, ರಷ್ಯಾ ದಕ್ಷಿಣ ಆಫ್ರಿಕಾ ಸೇರಿದಂತೆ 40 ಕ್ಕೂ ಹೆಚ್ಚು ರಾಷ್ಟ್ರಗಳು ಬೆಂಬಲಿಸಿದೆ.

ಜೋರ್ಡಾನ್‌ ಮಂಡಿಸಿದ ಕರಡು ನಿರ್ಣಯವು ನೀರು, ಆಹಾರ, ವೈದ್ಯಕೀಯ ಸಹಾಯ, ಇಂಧನ ಮತ್ತು ವಿದ್ಯುತ್ ಸೇರಿದಂತೆ ಗಾಜಾ ಪಟ್ಟಿಯಾದ್ಯಂತ ನಾಗರಿಕರಿಗೆ ಅಗತ್ಯ ಸರಕುಗಳು ಮತ್ತು ಸೇವೆಗಳನ್ನು ತಕ್ಷಣಕ್ಕೆ ಒದಗಿಸುವಂತೆ ಆಗ್ರಹಿಸಿದೆ.

ನಿರ್ಣಯದಲ್ಲಿ ಹಮಾಸ್ ಮತ್ತು ಒತ್ತೆಯಾಳು ಎಂಬ ಪದಗಳು ಕಾಣೆಯಾಗಿವೆ ಎಂದು ಹೇಳಿದ್ದ ಶ್ವಸಂಸ್ಥೆಯಲ್ಲಿನ ಅಮೆರಿಕದ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್, ನಿರ್ಣಯವನ್ನು ವಿರೋಧಿಸಿದ್ದಾರೆ.

ಅ.7 ರಂದು ಹಮಾಸ್ ನಡೆಸಿದ ದಾಳಿಯ ನಂತರ 1,400 ಕ್ಕೂ ಹೆಚ್ಚು ಜನರು ಇಸ್ರೇಲ್‌ ನಲ್ಲಿ ಮೃತಪಟ್ಟಿದ್ದಾರೆ. ಇಸ್ರೇಲ್ ಬಾಂಬ್ ದಾಳಿಯಲ್ಲಿ 6,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಜೋರ್ಡಾನ್ ಕರಡು ನಿರ್ಣಯವು ಹಮಾಸ್ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ. ಸಾಮಾನ್ಯ ಸಭೆಯು ನಿರ್ಣಯದ ಮೇಲೆ ಮತ ಚಲಾಯಿಸುವ ಮೊದಲು ಕೆನಡಾ ತಿದ್ದುಪಡಿ ನಿರ್ಣಯವನ್ನು ಪ್ರಸ್ತಾಪಿಸಿದೆ.

ಕೆನಡಾ ಪ್ರಸ್ತಾಪಿಸಿದ ತಿದ್ದುಪಡಿ ನಿರ್ಣಯದಲ್ಲಿ ಒಂದು ಪ್ಯಾರಾವನ್ನು ಸೇರಿಸಲು ಕೇಳಿದೆ. ಸಾಮಾನ್ಯ ಸಭೆಯು ಅ.7ರಂದು ಇಸ್ರೇಲ್‌ ಮೇಲೆ ನಡೆಸಿದ ಹಮಾಸ್‌ನ ದಾಳಿಯನ್ನು ಖಂಡಿಸಿದೆ. ಒತ್ತೆಯಳುಗಳ ರಕ್ಷಣೆ, ಯೋಗಕ್ಷೇಮ ಮತ್ತು ಮಾನವೀಯ ಚಿಕಿತ್ಸೆಗಾಗಿ ಒತ್ತಾಯಿಸಿದೆ ಮತ್ತು ತಕ್ಷಣದ ಬಿಡುಗಡೆಗೆ ಒತ್ತಾಯಿಸಿದೆ.

ಭಾರತ ಸೇರಿ 87 ಇತರ ರಾಷ್ಟ್ರಗಳು ತಿದ್ದುಪಡಿಯ ಪರವಾಗಿ ಮತ ಚಲಾಯಿಸಿದರೆ, 55 ಸದಸ್ಯ ರಾಷ್ಟ್ರಗಳು ಅದರ ವಿರುದ್ಧ ಮತ ಚಲಾಯಿಸಿದವು ಮತ್ತು 23 ದೇಶಗಳು ಮತ ಚಲಾವಣೆಯಿಂದ ದೂರ ಉಳಿದಿವೆ. ಹಾಜರಿರುವ ಮತ್ತು ಮತ ಚಲಾಯಿಸುವ ಸದಸ್ಯರ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ವಿಫಲವಾದ ಕಾರಣ ಕರಡು ತಿದ್ದುಪಡಿಯನ್ನು ಅಂಗೀಕರಿಸಲಾಗಲಿಲ್ಲ.

UNGAಯ 78 ನೇ ಅಧಿವೇಶನದ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಕರಡು ತಿದ್ದುಪಡಿಯನ್ನು ಅಂಗೀಕರಿಸಲಾಗುವುದಿಲ್ಲ ಎಂದು ಘೋಷಿಸಿದರು.

ಇದನ್ನು ಓದಿ: ಬೆಂಗಳೂರು: ಪೊಲೀಸ್‌ ಅಧಿಕಾರಿಗೆ ‘ಮುಸ್ಲಿಂ’ ಎಂದು ನಿಂದಿಸಿದ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...