Homeಅಂತರಾಷ್ಟ್ರೀಯಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ...

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

- Advertisement -
- Advertisement -

ಗಾಝಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆ ನಾಗರಿಕರ ರಕ್ಷಣೆ ಮತ್ತು ಕಾನೂನು ಮತ್ತು ಮಾನವೀಯ ಜವಾಬ್ದಾರಿಗಳನ್ನು ಎತ್ತಿಹಿಡಿಯುವ ಕುರಿತು ಯುಎನ್ ಜನರಲ್ ಅಸೆಂಬ್ಲಿ ನಿರ್ಣಯವನ್ನು ಅಂಗೀಕರಿಸಿದೆ. ಆದರೆ ಮಾನವೀಯ ಒಪ್ಪಂದಕ್ಕೆ ಕುರಿತ ಜೋರ್ಡಾನ್ ಮಂಡಿಸಿದ ನಿರ್ಣಯಕ್ಕೆ ಮತಚಲಾಯಿಸದೆ ಭಾರತ ದೂರ ಉಳಿದಿದೆ.

ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕು ಹಾಗೂ ಅಂತರಾಷ್ಟ್ರೀಯ ಮಾನವೀಯ ಕಾನೂನುಗಳಿಗೆ ಬದ್ಧವಾಗಿರಬೇಕು ಎಂಬ ಗೊತ್ತುವಳಿಯನ್ನು ಜೋರ್ಡಾನ್ ರಾಷ್ಟ್ರವು ಮಂಡಿಸಿದೆ. ಅದು ತನ್ನ ಪ್ರಸ್ತಾವನೆಯಲ್ಲಿ ಎಲ್ಲ ಒತ್ತೆಯಾಳು ನಾಗರಿಕರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಹಾಗೂ ಗಾಝಾಗೆ ಯಾವುದೇ ಅಡೆತಡೆಯಿಲ್ಲದಂತೆ ಮಾನವೀಯ ನೆರವನ್ನು ಒದಗಿಸಬೇಕು ಎಂದು ಮನವಿ ಮಾಡಿತ್ತು.

ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಗಳನ್ನು ಎತ್ತಿಹಿಡಿಯುವುದು ಎಂಬ ಶೀರ್ಷಿಕೆಯ ನಿರ್ಣಯವನ್ನು ಬಹುಮತದಿಂದ ಅಂಗೀಕರಿಸಲಾಯಿತು. ನಿರ್ಣಯದ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದೆ. ಅದರ ವಿರುದ್ಧ 14 ರಾಷ್ಟ್ರಗಳು ಮತಚಲಾಯಿಸಿದರೆ 45 ದೇಶಗಳು ಗೈರುಹಾಜರಾಗಿದ್ದವು. ಅದರಲ್ಲಿ ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ದೇಶಗಳು ಸೇರಿದೆ.

193 ಸದಸ್ಯ ರಾಷ್ಟ್ರಗಳ UN ಜನರಲ್ ಅಸೆಂಬ್ಲಿಯ(UNGA) 10ನೇ ತುರ್ತು ವಿಶೇಷ ಅಧಿವೇಶನದಲ್ಲಿ ಜೋರ್ಡಾನ್ ಸಲ್ಲಿಸಿದ ಕರಡು ನಿರ್ಣಯನ್ನು ಬಾಂಗ್ಲಾದೇಶ, ಮಾಲ್ಡೀವ್ಸ್, ಪಾಕಿಸ್ತಾನ, ರಷ್ಯಾ ದಕ್ಷಿಣ ಆಫ್ರಿಕಾ ಸೇರಿದಂತೆ 40 ಕ್ಕೂ ಹೆಚ್ಚು ರಾಷ್ಟ್ರಗಳು ಬೆಂಬಲಿಸಿದೆ.

ಜೋರ್ಡಾನ್‌ ಮಂಡಿಸಿದ ಕರಡು ನಿರ್ಣಯವು ನೀರು, ಆಹಾರ, ವೈದ್ಯಕೀಯ ಸಹಾಯ, ಇಂಧನ ಮತ್ತು ವಿದ್ಯುತ್ ಸೇರಿದಂತೆ ಗಾಜಾ ಪಟ್ಟಿಯಾದ್ಯಂತ ನಾಗರಿಕರಿಗೆ ಅಗತ್ಯ ಸರಕುಗಳು ಮತ್ತು ಸೇವೆಗಳನ್ನು ತಕ್ಷಣಕ್ಕೆ ಒದಗಿಸುವಂತೆ ಆಗ್ರಹಿಸಿದೆ.

ನಿರ್ಣಯದಲ್ಲಿ ಹಮಾಸ್ ಮತ್ತು ಒತ್ತೆಯಾಳು ಎಂಬ ಪದಗಳು ಕಾಣೆಯಾಗಿವೆ ಎಂದು ಹೇಳಿದ್ದ ಶ್ವಸಂಸ್ಥೆಯಲ್ಲಿನ ಅಮೆರಿಕದ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್, ನಿರ್ಣಯವನ್ನು ವಿರೋಧಿಸಿದ್ದಾರೆ.

ಅ.7 ರಂದು ಹಮಾಸ್ ನಡೆಸಿದ ದಾಳಿಯ ನಂತರ 1,400 ಕ್ಕೂ ಹೆಚ್ಚು ಜನರು ಇಸ್ರೇಲ್‌ ನಲ್ಲಿ ಮೃತಪಟ್ಟಿದ್ದಾರೆ. ಇಸ್ರೇಲ್ ಬಾಂಬ್ ದಾಳಿಯಲ್ಲಿ 6,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಜೋರ್ಡಾನ್ ಕರಡು ನಿರ್ಣಯವು ಹಮಾಸ್ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ. ಸಾಮಾನ್ಯ ಸಭೆಯು ನಿರ್ಣಯದ ಮೇಲೆ ಮತ ಚಲಾಯಿಸುವ ಮೊದಲು ಕೆನಡಾ ತಿದ್ದುಪಡಿ ನಿರ್ಣಯವನ್ನು ಪ್ರಸ್ತಾಪಿಸಿದೆ.

ಕೆನಡಾ ಪ್ರಸ್ತಾಪಿಸಿದ ತಿದ್ದುಪಡಿ ನಿರ್ಣಯದಲ್ಲಿ ಒಂದು ಪ್ಯಾರಾವನ್ನು ಸೇರಿಸಲು ಕೇಳಿದೆ. ಸಾಮಾನ್ಯ ಸಭೆಯು ಅ.7ರಂದು ಇಸ್ರೇಲ್‌ ಮೇಲೆ ನಡೆಸಿದ ಹಮಾಸ್‌ನ ದಾಳಿಯನ್ನು ಖಂಡಿಸಿದೆ. ಒತ್ತೆಯಳುಗಳ ರಕ್ಷಣೆ, ಯೋಗಕ್ಷೇಮ ಮತ್ತು ಮಾನವೀಯ ಚಿಕಿತ್ಸೆಗಾಗಿ ಒತ್ತಾಯಿಸಿದೆ ಮತ್ತು ತಕ್ಷಣದ ಬಿಡುಗಡೆಗೆ ಒತ್ತಾಯಿಸಿದೆ.

ಭಾರತ ಸೇರಿ 87 ಇತರ ರಾಷ್ಟ್ರಗಳು ತಿದ್ದುಪಡಿಯ ಪರವಾಗಿ ಮತ ಚಲಾಯಿಸಿದರೆ, 55 ಸದಸ್ಯ ರಾಷ್ಟ್ರಗಳು ಅದರ ವಿರುದ್ಧ ಮತ ಚಲಾಯಿಸಿದವು ಮತ್ತು 23 ದೇಶಗಳು ಮತ ಚಲಾವಣೆಯಿಂದ ದೂರ ಉಳಿದಿವೆ. ಹಾಜರಿರುವ ಮತ್ತು ಮತ ಚಲಾಯಿಸುವ ಸದಸ್ಯರ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ವಿಫಲವಾದ ಕಾರಣ ಕರಡು ತಿದ್ದುಪಡಿಯನ್ನು ಅಂಗೀಕರಿಸಲಾಗಲಿಲ್ಲ.

UNGAಯ 78 ನೇ ಅಧಿವೇಶನದ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಕರಡು ತಿದ್ದುಪಡಿಯನ್ನು ಅಂಗೀಕರಿಸಲಾಗುವುದಿಲ್ಲ ಎಂದು ಘೋಷಿಸಿದರು.

ಇದನ್ನು ಓದಿ: ಬೆಂಗಳೂರು: ಪೊಲೀಸ್‌ ಅಧಿಕಾರಿಗೆ ‘ಮುಸ್ಲಿಂ’ ಎಂದು ನಿಂದಿಸಿದ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...