Homeಅಂತರಾಷ್ಟ್ರೀಯಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ...

ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷ: UN ಜನರಲ್ ಅಸೆಂಬ್ಲಿಯಲ್ಲಿ ನಾಗರಿಕರ ರಕ್ಷಣೆಯ ಕುರಿತ ನಿರ್ಣಯ ಅಂಗೀಕಾರ: ದೂರ ಉಳಿದ ಭಾರತ

- Advertisement -
- Advertisement -

ಗಾಝಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆ ನಾಗರಿಕರ ರಕ್ಷಣೆ ಮತ್ತು ಕಾನೂನು ಮತ್ತು ಮಾನವೀಯ ಜವಾಬ್ದಾರಿಗಳನ್ನು ಎತ್ತಿಹಿಡಿಯುವ ಕುರಿತು ಯುಎನ್ ಜನರಲ್ ಅಸೆಂಬ್ಲಿ ನಿರ್ಣಯವನ್ನು ಅಂಗೀಕರಿಸಿದೆ. ಆದರೆ ಮಾನವೀಯ ಒಪ್ಪಂದಕ್ಕೆ ಕುರಿತ ಜೋರ್ಡಾನ್ ಮಂಡಿಸಿದ ನಿರ್ಣಯಕ್ಕೆ ಮತಚಲಾಯಿಸದೆ ಭಾರತ ದೂರ ಉಳಿದಿದೆ.

ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಬೇಕು ಹಾಗೂ ಅಂತರಾಷ್ಟ್ರೀಯ ಮಾನವೀಯ ಕಾನೂನುಗಳಿಗೆ ಬದ್ಧವಾಗಿರಬೇಕು ಎಂಬ ಗೊತ್ತುವಳಿಯನ್ನು ಜೋರ್ಡಾನ್ ರಾಷ್ಟ್ರವು ಮಂಡಿಸಿದೆ. ಅದು ತನ್ನ ಪ್ರಸ್ತಾವನೆಯಲ್ಲಿ ಎಲ್ಲ ಒತ್ತೆಯಾಳು ನಾಗರಿಕರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಹಾಗೂ ಗಾಝಾಗೆ ಯಾವುದೇ ಅಡೆತಡೆಯಿಲ್ಲದಂತೆ ಮಾನವೀಯ ನೆರವನ್ನು ಒದಗಿಸಬೇಕು ಎಂದು ಮನವಿ ಮಾಡಿತ್ತು.

ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಗಳನ್ನು ಎತ್ತಿಹಿಡಿಯುವುದು ಎಂಬ ಶೀರ್ಷಿಕೆಯ ನಿರ್ಣಯವನ್ನು ಬಹುಮತದಿಂದ ಅಂಗೀಕರಿಸಲಾಯಿತು. ನಿರ್ಣಯದ ಪರವಾಗಿ 120 ರಾಷ್ಟ್ರಗಳು ಮತ ಚಲಾಯಿಸಿದೆ. ಅದರ ವಿರುದ್ಧ 14 ರಾಷ್ಟ್ರಗಳು ಮತಚಲಾಯಿಸಿದರೆ 45 ದೇಶಗಳು ಗೈರುಹಾಜರಾಗಿದ್ದವು. ಅದರಲ್ಲಿ ಭಾರತ, ಆಸ್ಟ್ರೇಲಿಯಾ, ಕೆನಡಾ, ಜರ್ಮನಿ, ಜಪಾನ್, ಉಕ್ರೇನ್ ಮತ್ತು ಯುಕೆ ದೇಶಗಳು ಸೇರಿದೆ.

193 ಸದಸ್ಯ ರಾಷ್ಟ್ರಗಳ UN ಜನರಲ್ ಅಸೆಂಬ್ಲಿಯ(UNGA) 10ನೇ ತುರ್ತು ವಿಶೇಷ ಅಧಿವೇಶನದಲ್ಲಿ ಜೋರ್ಡಾನ್ ಸಲ್ಲಿಸಿದ ಕರಡು ನಿರ್ಣಯನ್ನು ಬಾಂಗ್ಲಾದೇಶ, ಮಾಲ್ಡೀವ್ಸ್, ಪಾಕಿಸ್ತಾನ, ರಷ್ಯಾ ದಕ್ಷಿಣ ಆಫ್ರಿಕಾ ಸೇರಿದಂತೆ 40 ಕ್ಕೂ ಹೆಚ್ಚು ರಾಷ್ಟ್ರಗಳು ಬೆಂಬಲಿಸಿದೆ.

ಜೋರ್ಡಾನ್‌ ಮಂಡಿಸಿದ ಕರಡು ನಿರ್ಣಯವು ನೀರು, ಆಹಾರ, ವೈದ್ಯಕೀಯ ಸಹಾಯ, ಇಂಧನ ಮತ್ತು ವಿದ್ಯುತ್ ಸೇರಿದಂತೆ ಗಾಜಾ ಪಟ್ಟಿಯಾದ್ಯಂತ ನಾಗರಿಕರಿಗೆ ಅಗತ್ಯ ಸರಕುಗಳು ಮತ್ತು ಸೇವೆಗಳನ್ನು ತಕ್ಷಣಕ್ಕೆ ಒದಗಿಸುವಂತೆ ಆಗ್ರಹಿಸಿದೆ.

ನಿರ್ಣಯದಲ್ಲಿ ಹಮಾಸ್ ಮತ್ತು ಒತ್ತೆಯಾಳು ಎಂಬ ಪದಗಳು ಕಾಣೆಯಾಗಿವೆ ಎಂದು ಹೇಳಿದ್ದ ಶ್ವಸಂಸ್ಥೆಯಲ್ಲಿನ ಅಮೆರಿಕದ ರಾಯಭಾರಿ ಲಿಂಡಾ ಥಾಮಸ್-ಗ್ರೀನ್‌ಫೀಲ್ಡ್, ನಿರ್ಣಯವನ್ನು ವಿರೋಧಿಸಿದ್ದಾರೆ.

ಅ.7 ರಂದು ಹಮಾಸ್ ನಡೆಸಿದ ದಾಳಿಯ ನಂತರ 1,400 ಕ್ಕೂ ಹೆಚ್ಚು ಜನರು ಇಸ್ರೇಲ್‌ ನಲ್ಲಿ ಮೃತಪಟ್ಟಿದ್ದಾರೆ. ಇಸ್ರೇಲ್ ಬಾಂಬ್ ದಾಳಿಯಲ್ಲಿ 6,700ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ಜೋರ್ಡಾನ್ ಕರಡು ನಿರ್ಣಯವು ಹಮಾಸ್ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ. ಸಾಮಾನ್ಯ ಸಭೆಯು ನಿರ್ಣಯದ ಮೇಲೆ ಮತ ಚಲಾಯಿಸುವ ಮೊದಲು ಕೆನಡಾ ತಿದ್ದುಪಡಿ ನಿರ್ಣಯವನ್ನು ಪ್ರಸ್ತಾಪಿಸಿದೆ.

ಕೆನಡಾ ಪ್ರಸ್ತಾಪಿಸಿದ ತಿದ್ದುಪಡಿ ನಿರ್ಣಯದಲ್ಲಿ ಒಂದು ಪ್ಯಾರಾವನ್ನು ಸೇರಿಸಲು ಕೇಳಿದೆ. ಸಾಮಾನ್ಯ ಸಭೆಯು ಅ.7ರಂದು ಇಸ್ರೇಲ್‌ ಮೇಲೆ ನಡೆಸಿದ ಹಮಾಸ್‌ನ ದಾಳಿಯನ್ನು ಖಂಡಿಸಿದೆ. ಒತ್ತೆಯಳುಗಳ ರಕ್ಷಣೆ, ಯೋಗಕ್ಷೇಮ ಮತ್ತು ಮಾನವೀಯ ಚಿಕಿತ್ಸೆಗಾಗಿ ಒತ್ತಾಯಿಸಿದೆ ಮತ್ತು ತಕ್ಷಣದ ಬಿಡುಗಡೆಗೆ ಒತ್ತಾಯಿಸಿದೆ.

ಭಾರತ ಸೇರಿ 87 ಇತರ ರಾಷ್ಟ್ರಗಳು ತಿದ್ದುಪಡಿಯ ಪರವಾಗಿ ಮತ ಚಲಾಯಿಸಿದರೆ, 55 ಸದಸ್ಯ ರಾಷ್ಟ್ರಗಳು ಅದರ ವಿರುದ್ಧ ಮತ ಚಲಾಯಿಸಿದವು ಮತ್ತು 23 ದೇಶಗಳು ಮತ ಚಲಾವಣೆಯಿಂದ ದೂರ ಉಳಿದಿವೆ. ಹಾಜರಿರುವ ಮತ್ತು ಮತ ಚಲಾಯಿಸುವ ಸದಸ್ಯರ ಮೂರನೇ ಎರಡರಷ್ಟು ಬಹುಮತವನ್ನು ಪಡೆಯಲು ವಿಫಲವಾದ ಕಾರಣ ಕರಡು ತಿದ್ದುಪಡಿಯನ್ನು ಅಂಗೀಕರಿಸಲಾಗಲಿಲ್ಲ.

UNGAಯ 78 ನೇ ಅಧಿವೇಶನದ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಕರಡು ತಿದ್ದುಪಡಿಯನ್ನು ಅಂಗೀಕರಿಸಲಾಗುವುದಿಲ್ಲ ಎಂದು ಘೋಷಿಸಿದರು.

ಇದನ್ನು ಓದಿ: ಬೆಂಗಳೂರು: ಪೊಲೀಸ್‌ ಅಧಿಕಾರಿಗೆ ‘ಮುಸ್ಲಿಂ’ ಎಂದು ನಿಂದಿಸಿದ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...