Homeಅಂತರಾಷ್ಟ್ರೀಯರಷ್ಯಾವನ್ನು ಖಂಡಿಸುವ ನಿರ್ಣಯದಿಂದ ಮತ್ತೆ ದೂರ ಉಳಿದ ಭಾರತ

ರಷ್ಯಾವನ್ನು ಖಂಡಿಸುವ ನಿರ್ಣಯದಿಂದ ಮತ್ತೆ ದೂರ ಉಳಿದ ಭಾರತ

- Advertisement -
- Advertisement -

ಉಕ್ರೇನ್‌ನಲ್ಲಿನ ಸಂಘರ್ಷದ ತೀವ್ರತೆಯ ಬಗ್ಗೆ ಆಳವಾದ ಕಳವಳವನ್ನು ಪುನರುಚ್ಚರಿಸಿದರೂ ಸಹ, ರಷ್ಯಾ ನಡೆಯನ್ನು ಖಂಡಿಸುವ ನಿರ್ಣಯದ ಮತದಾನದಿಂದ ಭಾರತವು ದೂರ ಉಳಿಯಿತು. ನಾಲ್ಕು ಉಕ್ರೇನಿಯನ್‌ ಪ್ರದೇಶಗಳಲ್ಲಿ ರಷ್ಯಾ ಆಯೋಜಿಸಿದ “ಅಕ್ರಮ ಜನಮತಗಣನೆ”ಯನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸುವ ಮತದಾನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಗುರುವಾರ ನಡೆಯಿತು.

ಉಕ್ರೇನ್‌ನ ಡೊನೆಟ್ಸ್ಕ್, ಖೆರ್ಸನ್, ಲುಹಾನ್ಸ್ಕ್ ಮತ್ತು ಝಪೊರಿಝಿಯಾ ಪ್ರದೇಶಗಳ ‘‘ಅಕ್ರಮ ಸ್ವಾಧೀನಕ್ಕೆ ಪ್ರಯತ್ನಿಸಲಾಗಿದ್ದು’’ ಇದಕ್ಕೆ ಅಂತರಾಷ್ಟ್ರೀಯ ಕಾನೂನಿನಡಿಯಲ್ಲಿ ಯಾವುದೇ ಮಾನ್ಯತೆ ಇಲ್ಲ ಎಂದು ಘೋಷಿಸಿದ ನಿರ್ಣಯವನ್ನು 193 ಸದಸ್ಯರ ಸಾಮಾನ್ಯ ಸಭೆಯಲ್ಲಿ 143-5 ಮತಗಳಿಂದ ಅಂಗೀಕರಿಸಲಾಯಿತು. ಆದರೆ ಭಾರತ ಸೇರಿದಂತೆ ಮೂವತ್ತೈದು ರಾಷ್ಟ್ರಗಳು ಮತದಾನದಿಂದ ದೂರ ಉಳಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮತದಾನದಿಂದ ದೂರ ಉಳಿಯುವ ಬಗ್ಗೆ ವಿವರಣೆ ನೀಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್,“ನಮ್ಮ ಉತ್ತಮ ಚಿಂತನೆ ರಾಷ್ಟ್ರೀಯ ಸ್ಥಾನಕ್ಕೆ ಅನುಗುಣವಾಗಿದೆ. ನಿರ್ಣಯದಲ್ಲಿ ಇತರ ಸಮಸ್ಯೆಗಳಿವೆ, ಅವುಗಳಲ್ಲಿ ಕೆಲವನ್ನು ನಿರ್ಣಯದಲ್ಲಿ ಸಮರ್ಪಕವಾಗಿ ತಿಳಿಸಲಾಗಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

“ಇದು ಯುದ್ಧದ ಯುಗವಾಗಲು ಸಾಧ್ಯವಿಲ್ಲ ಎಂದು ನನ್ನ ಪ್ರಧಾನಿ ನಿಸ್ಸಂದಿಗ್ಧವಾಗಿ ಹೇಳಿದ್ದಾರೆ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಶಾಂತಿಯುತ ಪರಿಹಾರಕ್ಕಾಗಿ ಶ್ರಮಿಸುವ ಈ ದೃಢ ಸಂಕಲ್ಪದೊಂದಿಗೆ, ಭಾರತವು ದೂರವಿರಲು ನಿರ್ಧರಿಸಿದೆ” ಎಂದು ಸೆಪ್ಟೆಂಬರ್ 16 ರಂದು ಸಮರ್‌ಖಂಡ್‌ನಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ನೀಡಿದ ಸಂದೇಶವನ್ನು ಉಲ್ಲೇಖಿಸಿ ರುಚಿರಾ ಕಾಂಬೋಜ್ ಹೇಳಿದ್ದಾರೆ.

“ನಾಗರಿಕ ಮೂಲಸೌಕರ್ಯ ಮತ್ತು ನಾಗರಿಕರ ಸಾವುಗಳನ್ನು ಗುರಿಯಾಗಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ಸಂಘರ್ಷದ ಉಲ್ಬಣಕ್ಕೆ ಭಾರತವು ತೀವ್ರ ಕಳವಳ ವ್ಯಕ್ತಪಡಿಸಿದೆ. ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ಇತ್ಯರ್ಥಪಡಿಸಲು ಮಾತುಕತೆಯು ಏಕೈಕ ಉತ್ತರವಾಗಿದೆ. ಜೊತೆಗೆ ಶಾಂತಿಯ ಮಾರ್ಗಕ್ಕಾಗಿ ರಾಜತಾಂತ್ರಿಕತೆಯ ಎಲ್ಲಾ ದಾರಿಗಳನ್ನು ಮುಕ್ತವಾಗಿಡಲು ನಮಗೆ ಅಗತ್ಯವಿದೆ” ಎಂದು ಕಾಂಬೋಜ್ ಹೇಳಿದ್ದಾರೆ.

ಉಕ್ರೇನ್ ಸಂಘರ್ಷವು ಆಹಾರ ಮತ್ತು ಇಂಧನ ಭದ್ರತೆಯ ಮೇಲೆ, ವಿಶೇಷವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೇಗೆ ವ್ಯಾಪಕವಾದ ಪರಿಣಾಮಗಳನ್ನು ಬೀರಿದೆ ಎಂಬುದನ್ನು ಸಹ ಕಾಂಬೋಜ್ ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: ‘ಮತ್ತೊಂದು ದೊಡ್ಡ ತಪ್ಪು’: ನ್ಯಾಟೊ ಸೇರುತ್ತಿರುವ ಫಿನ್‌ಲ್ಯಾಂಡ್‌ & ಸ್ವೀಡನ್‌ಗೆ ರಷ್ಯಾ ಎಚ್ಚರಿಕೆ

ಸೆಪ್ಟೆಂಬರ್‌ನಲ್ಲಿ ನಡೆದ ಸಾಮಾನ್ಯ ಸಭೆಯ ವಾರ್ಷಿಕ ಅಧಿವೇಶನದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಇತ್ತೀಚೆಗೆ ಮಾಡಿದ ಭಾಷಣವನ್ನು ಕಾಂಬೋಜ್ ಪುನರುಚ್ಚರಿಸಿ, ಭಾರತವು ಶಾಂತಿಯ ಕಡೆಯಲ್ಲಿದ್ದು, ಅಲ್ಲಿಯೆ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು, ರಷ್ಯಾದ ಜನಾಭಿಪ್ರಾಯ ಮತ್ತು ನಾಲ್ಕು ಉಕ್ರೇನಿಯನ್ ಪ್ರದೇಶಗಳನ್ನು ಅಮಾನ್ಯವೆಂದು ಖಂಡಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕರಡು ನಿರ್ಣಯದಿಂದ ಭಾರತ ದೂರವಿತ್ತು. ರಷ್ಯಾ, ಬೆಲಾರಸ್, ಉತ್ತರ ಕೊರಿಯಾ, ಸಿರಿಯಾ ಮತ್ತು ನಿಕರಾಗುವಾ ಮಾತ್ರ ನಿರ್ಣಯದ ವಿರುದ್ಧ ಮತ ಚಲಾಯಿಸಿದವು.

ಭಾರತವಲ್ಲದೆ, ಏಷ್ಯಾದ ಹೆಚ್ಚಿನ ಸಂಖ್ಯೆಯ ದೇಶಗಳು ದೂರವಿದ್ದವು. ಅವುಗಳಲ್ಲಿ ಚೀನಾ, ಪಾಕಿಸ್ತಾನ, ಶ್ರೀಲಂಕಾ, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಸೇರಿದ್ದವು. ಬ್ರಿಕ್ಸ್‌ನ ಯಾವುದೇ ಸದಸ್ಯರು ಪಾಶ್ಚಾತ್ಯ ದೇಶದ ಜೊತೆಗೆ ಮತ ಚಲಾಯಿಸಲಿಲ್ಲ.

ಇದನ್ನೂ ಓದಿ: ದೇಶದ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ ಆರೋಪ: ಇನ್‌ಸ್ಟಾಗ್ರಾಮ್‌‌ಗೆ ನಿರ್ಬಂಧ ಹೇರಿದ ರಷ್ಯಾ

ಜನಾಭಿಪ್ರಾಯ ಸಂಗ್ರಹಣೆ ಮತ್ತು ಸ್ವಾಧೀನವನ್ನು ಕಾನೂನುಬಾಹಿರವೆಂದು ಘೋಷಿಸುವುದರ ಜೊತೆಗೆ, ರಷ್ಯಾವು ತಕ್ಷಣವೇ ಉಕ್ರೇನ್‌ನ ಎಲ್ಲಾ ಭಾಗಗಳಿಂದ ತನ್ನ ಮಿಲಿಟರಿಯನ್ನು ಹಿಂತೆಗೆದುಕೊಳ್ಳಬೇಕೆಂದು ನಿರ್ಣಯವು ಒತ್ತಾಯಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...