Homeಅಂತರಾಷ್ಟ್ರೀಯರಷ್ಯಾವನ್ನು ಖಂಡಿಸುವ ನಿರ್ಣಯದಿಂದ ಮತ್ತೆ ದೂರ ಉಳಿದ ಭಾರತ

ರಷ್ಯಾವನ್ನು ಖಂಡಿಸುವ ನಿರ್ಣಯದಿಂದ ಮತ್ತೆ ದೂರ ಉಳಿದ ಭಾರತ

- Advertisement -
- Advertisement -

ಉಕ್ರೇನ್‌ನಲ್ಲಿನ ಸಂಘರ್ಷದ ತೀವ್ರತೆಯ ಬಗ್ಗೆ ಆಳವಾದ ಕಳವಳವನ್ನು ಪುನರುಚ್ಚರಿಸಿದರೂ ಸಹ, ರಷ್ಯಾ ನಡೆಯನ್ನು ಖಂಡಿಸುವ ನಿರ್ಣಯದ ಮತದಾನದಿಂದ ಭಾರತವು ದೂರ ಉಳಿಯಿತು. ನಾಲ್ಕು ಉಕ್ರೇನಿಯನ್‌ ಪ್ರದೇಶಗಳಲ್ಲಿ ರಷ್ಯಾ ಆಯೋಜಿಸಿದ “ಅಕ್ರಮ ಜನಮತಗಣನೆ”ಯನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸುವ ಮತದಾನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಗುರುವಾರ ನಡೆಯಿತು.

ಉಕ್ರೇನ್‌ನ ಡೊನೆಟ್ಸ್ಕ್, ಖೆರ್ಸನ್, ಲುಹಾನ್ಸ್ಕ್ ಮತ್ತು ಝಪೊರಿಝಿಯಾ ಪ್ರದೇಶಗಳ ‘‘ಅಕ್ರಮ ಸ್ವಾಧೀನಕ್ಕೆ ಪ್ರಯತ್ನಿಸಲಾಗಿದ್ದು’’ ಇದಕ್ಕೆ ಅಂತರಾಷ್ಟ್ರೀಯ ಕಾನೂನಿನಡಿಯಲ್ಲಿ ಯಾವುದೇ ಮಾನ್ಯತೆ ಇಲ್ಲ ಎಂದು ಘೋಷಿಸಿದ ನಿರ್ಣಯವನ್ನು 193 ಸದಸ್ಯರ ಸಾಮಾನ್ಯ ಸಭೆಯಲ್ಲಿ 143-5 ಮತಗಳಿಂದ ಅಂಗೀಕರಿಸಲಾಯಿತು. ಆದರೆ ಭಾರತ ಸೇರಿದಂತೆ ಮೂವತ್ತೈದು ರಾಷ್ಟ್ರಗಳು ಮತದಾನದಿಂದ ದೂರ ಉಳಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮತದಾನದಿಂದ ದೂರ ಉಳಿಯುವ ಬಗ್ಗೆ ವಿವರಣೆ ನೀಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್,“ನಮ್ಮ ಉತ್ತಮ ಚಿಂತನೆ ರಾಷ್ಟ್ರೀಯ ಸ್ಥಾನಕ್ಕೆ ಅನುಗುಣವಾಗಿದೆ. ನಿರ್ಣಯದಲ್ಲಿ ಇತರ ಸಮಸ್ಯೆಗಳಿವೆ, ಅವುಗಳಲ್ಲಿ ಕೆಲವನ್ನು ನಿರ್ಣಯದಲ್ಲಿ ಸಮರ್ಪಕವಾಗಿ ತಿಳಿಸಲಾಗಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

“ಇದು ಯುದ್ಧದ ಯುಗವಾಗಲು ಸಾಧ್ಯವಿಲ್ಲ ಎಂದು ನನ್ನ ಪ್ರಧಾನಿ ನಿಸ್ಸಂದಿಗ್ಧವಾಗಿ ಹೇಳಿದ್ದಾರೆ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಶಾಂತಿಯುತ ಪರಿಹಾರಕ್ಕಾಗಿ ಶ್ರಮಿಸುವ ಈ ದೃಢ ಸಂಕಲ್ಪದೊಂದಿಗೆ, ಭಾರತವು ದೂರವಿರಲು ನಿರ್ಧರಿಸಿದೆ” ಎಂದು ಸೆಪ್ಟೆಂಬರ್ 16 ರಂದು ಸಮರ್‌ಖಂಡ್‌ನಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ನೀಡಿದ ಸಂದೇಶವನ್ನು ಉಲ್ಲೇಖಿಸಿ ರುಚಿರಾ ಕಾಂಬೋಜ್ ಹೇಳಿದ್ದಾರೆ.

“ನಾಗರಿಕ ಮೂಲಸೌಕರ್ಯ ಮತ್ತು ನಾಗರಿಕರ ಸಾವುಗಳನ್ನು ಗುರಿಯಾಗಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ಸಂಘರ್ಷದ ಉಲ್ಬಣಕ್ಕೆ ಭಾರತವು ತೀವ್ರ ಕಳವಳ ವ್ಯಕ್ತಪಡಿಸಿದೆ. ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ಇತ್ಯರ್ಥಪಡಿಸಲು ಮಾತುಕತೆಯು ಏಕೈಕ ಉತ್ತರವಾಗಿದೆ. ಜೊತೆಗೆ ಶಾಂತಿಯ ಮಾರ್ಗಕ್ಕಾಗಿ ರಾಜತಾಂತ್ರಿಕತೆಯ ಎಲ್ಲಾ ದಾರಿಗಳನ್ನು ಮುಕ್ತವಾಗಿಡಲು ನಮಗೆ ಅಗತ್ಯವಿದೆ” ಎಂದು ಕಾಂಬೋಜ್ ಹೇಳಿದ್ದಾರೆ.

ಉಕ್ರೇನ್ ಸಂಘರ್ಷವು ಆಹಾರ ಮತ್ತು ಇಂಧನ ಭದ್ರತೆಯ ಮೇಲೆ, ವಿಶೇಷವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೇಗೆ ವ್ಯಾಪಕವಾದ ಪರಿಣಾಮಗಳನ್ನು ಬೀರಿದೆ ಎಂಬುದನ್ನು ಸಹ ಕಾಂಬೋಜ್ ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: ‘ಮತ್ತೊಂದು ದೊಡ್ಡ ತಪ್ಪು’: ನ್ಯಾಟೊ ಸೇರುತ್ತಿರುವ ಫಿನ್‌ಲ್ಯಾಂಡ್‌ & ಸ್ವೀಡನ್‌ಗೆ ರಷ್ಯಾ ಎಚ್ಚರಿಕೆ

ಸೆಪ್ಟೆಂಬರ್‌ನಲ್ಲಿ ನಡೆದ ಸಾಮಾನ್ಯ ಸಭೆಯ ವಾರ್ಷಿಕ ಅಧಿವೇಶನದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಇತ್ತೀಚೆಗೆ ಮಾಡಿದ ಭಾಷಣವನ್ನು ಕಾಂಬೋಜ್ ಪುನರುಚ್ಚರಿಸಿ, ಭಾರತವು ಶಾಂತಿಯ ಕಡೆಯಲ್ಲಿದ್ದು, ಅಲ್ಲಿಯೆ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು, ರಷ್ಯಾದ ಜನಾಭಿಪ್ರಾಯ ಮತ್ತು ನಾಲ್ಕು ಉಕ್ರೇನಿಯನ್ ಪ್ರದೇಶಗಳನ್ನು ಅಮಾನ್ಯವೆಂದು ಖಂಡಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕರಡು ನಿರ್ಣಯದಿಂದ ಭಾರತ ದೂರವಿತ್ತು. ರಷ್ಯಾ, ಬೆಲಾರಸ್, ಉತ್ತರ ಕೊರಿಯಾ, ಸಿರಿಯಾ ಮತ್ತು ನಿಕರಾಗುವಾ ಮಾತ್ರ ನಿರ್ಣಯದ ವಿರುದ್ಧ ಮತ ಚಲಾಯಿಸಿದವು.

ಭಾರತವಲ್ಲದೆ, ಏಷ್ಯಾದ ಹೆಚ್ಚಿನ ಸಂಖ್ಯೆಯ ದೇಶಗಳು ದೂರವಿದ್ದವು. ಅವುಗಳಲ್ಲಿ ಚೀನಾ, ಪಾಕಿಸ್ತಾನ, ಶ್ರೀಲಂಕಾ, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಸೇರಿದ್ದವು. ಬ್ರಿಕ್ಸ್‌ನ ಯಾವುದೇ ಸದಸ್ಯರು ಪಾಶ್ಚಾತ್ಯ ದೇಶದ ಜೊತೆಗೆ ಮತ ಚಲಾಯಿಸಲಿಲ್ಲ.

ಇದನ್ನೂ ಓದಿ: ದೇಶದ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ ಆರೋಪ: ಇನ್‌ಸ್ಟಾಗ್ರಾಮ್‌‌ಗೆ ನಿರ್ಬಂಧ ಹೇರಿದ ರಷ್ಯಾ

ಜನಾಭಿಪ್ರಾಯ ಸಂಗ್ರಹಣೆ ಮತ್ತು ಸ್ವಾಧೀನವನ್ನು ಕಾನೂನುಬಾಹಿರವೆಂದು ಘೋಷಿಸುವುದರ ಜೊತೆಗೆ, ರಷ್ಯಾವು ತಕ್ಷಣವೇ ಉಕ್ರೇನ್‌ನ ಎಲ್ಲಾ ಭಾಗಗಳಿಂದ ತನ್ನ ಮಿಲಿಟರಿಯನ್ನು ಹಿಂತೆಗೆದುಕೊಳ್ಳಬೇಕೆಂದು ನಿರ್ಣಯವು ಒತ್ತಾಯಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...