Homeಅಂತರಾಷ್ಟ್ರೀಯರಷ್ಯಾವನ್ನು ಖಂಡಿಸುವ ನಿರ್ಣಯದಿಂದ ಮತ್ತೆ ದೂರ ಉಳಿದ ಭಾರತ

ರಷ್ಯಾವನ್ನು ಖಂಡಿಸುವ ನಿರ್ಣಯದಿಂದ ಮತ್ತೆ ದೂರ ಉಳಿದ ಭಾರತ

- Advertisement -
- Advertisement -

ಉಕ್ರೇನ್‌ನಲ್ಲಿನ ಸಂಘರ್ಷದ ತೀವ್ರತೆಯ ಬಗ್ಗೆ ಆಳವಾದ ಕಳವಳವನ್ನು ಪುನರುಚ್ಚರಿಸಿದರೂ ಸಹ, ರಷ್ಯಾ ನಡೆಯನ್ನು ಖಂಡಿಸುವ ನಿರ್ಣಯದ ಮತದಾನದಿಂದ ಭಾರತವು ದೂರ ಉಳಿಯಿತು. ನಾಲ್ಕು ಉಕ್ರೇನಿಯನ್‌ ಪ್ರದೇಶಗಳಲ್ಲಿ ರಷ್ಯಾ ಆಯೋಜಿಸಿದ “ಅಕ್ರಮ ಜನಮತಗಣನೆ”ಯನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸುವ ಮತದಾನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಗುರುವಾರ ನಡೆಯಿತು.

ಉಕ್ರೇನ್‌ನ ಡೊನೆಟ್ಸ್ಕ್, ಖೆರ್ಸನ್, ಲುಹಾನ್ಸ್ಕ್ ಮತ್ತು ಝಪೊರಿಝಿಯಾ ಪ್ರದೇಶಗಳ ‘‘ಅಕ್ರಮ ಸ್ವಾಧೀನಕ್ಕೆ ಪ್ರಯತ್ನಿಸಲಾಗಿದ್ದು’’ ಇದಕ್ಕೆ ಅಂತರಾಷ್ಟ್ರೀಯ ಕಾನೂನಿನಡಿಯಲ್ಲಿ ಯಾವುದೇ ಮಾನ್ಯತೆ ಇಲ್ಲ ಎಂದು ಘೋಷಿಸಿದ ನಿರ್ಣಯವನ್ನು 193 ಸದಸ್ಯರ ಸಾಮಾನ್ಯ ಸಭೆಯಲ್ಲಿ 143-5 ಮತಗಳಿಂದ ಅಂಗೀಕರಿಸಲಾಯಿತು. ಆದರೆ ಭಾರತ ಸೇರಿದಂತೆ ಮೂವತ್ತೈದು ರಾಷ್ಟ್ರಗಳು ಮತದಾನದಿಂದ ದೂರ ಉಳಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮತದಾನದಿಂದ ದೂರ ಉಳಿಯುವ ಬಗ್ಗೆ ವಿವರಣೆ ನೀಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್,“ನಮ್ಮ ಉತ್ತಮ ಚಿಂತನೆ ರಾಷ್ಟ್ರೀಯ ಸ್ಥಾನಕ್ಕೆ ಅನುಗುಣವಾಗಿದೆ. ನಿರ್ಣಯದಲ್ಲಿ ಇತರ ಸಮಸ್ಯೆಗಳಿವೆ, ಅವುಗಳಲ್ಲಿ ಕೆಲವನ್ನು ನಿರ್ಣಯದಲ್ಲಿ ಸಮರ್ಪಕವಾಗಿ ತಿಳಿಸಲಾಗಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

“ಇದು ಯುದ್ಧದ ಯುಗವಾಗಲು ಸಾಧ್ಯವಿಲ್ಲ ಎಂದು ನನ್ನ ಪ್ರಧಾನಿ ನಿಸ್ಸಂದಿಗ್ಧವಾಗಿ ಹೇಳಿದ್ದಾರೆ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಶಾಂತಿಯುತ ಪರಿಹಾರಕ್ಕಾಗಿ ಶ್ರಮಿಸುವ ಈ ದೃಢ ಸಂಕಲ್ಪದೊಂದಿಗೆ, ಭಾರತವು ದೂರವಿರಲು ನಿರ್ಧರಿಸಿದೆ” ಎಂದು ಸೆಪ್ಟೆಂಬರ್ 16 ರಂದು ಸಮರ್‌ಖಂಡ್‌ನಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ನೀಡಿದ ಸಂದೇಶವನ್ನು ಉಲ್ಲೇಖಿಸಿ ರುಚಿರಾ ಕಾಂಬೋಜ್ ಹೇಳಿದ್ದಾರೆ.

“ನಾಗರಿಕ ಮೂಲಸೌಕರ್ಯ ಮತ್ತು ನಾಗರಿಕರ ಸಾವುಗಳನ್ನು ಗುರಿಯಾಗಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ಸಂಘರ್ಷದ ಉಲ್ಬಣಕ್ಕೆ ಭಾರತವು ತೀವ್ರ ಕಳವಳ ವ್ಯಕ್ತಪಡಿಸಿದೆ. ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ಇತ್ಯರ್ಥಪಡಿಸಲು ಮಾತುಕತೆಯು ಏಕೈಕ ಉತ್ತರವಾಗಿದೆ. ಜೊತೆಗೆ ಶಾಂತಿಯ ಮಾರ್ಗಕ್ಕಾಗಿ ರಾಜತಾಂತ್ರಿಕತೆಯ ಎಲ್ಲಾ ದಾರಿಗಳನ್ನು ಮುಕ್ತವಾಗಿಡಲು ನಮಗೆ ಅಗತ್ಯವಿದೆ” ಎಂದು ಕಾಂಬೋಜ್ ಹೇಳಿದ್ದಾರೆ.

ಉಕ್ರೇನ್ ಸಂಘರ್ಷವು ಆಹಾರ ಮತ್ತು ಇಂಧನ ಭದ್ರತೆಯ ಮೇಲೆ, ವಿಶೇಷವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೇಗೆ ವ್ಯಾಪಕವಾದ ಪರಿಣಾಮಗಳನ್ನು ಬೀರಿದೆ ಎಂಬುದನ್ನು ಸಹ ಕಾಂಬೋಜ್ ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: ‘ಮತ್ತೊಂದು ದೊಡ್ಡ ತಪ್ಪು’: ನ್ಯಾಟೊ ಸೇರುತ್ತಿರುವ ಫಿನ್‌ಲ್ಯಾಂಡ್‌ & ಸ್ವೀಡನ್‌ಗೆ ರಷ್ಯಾ ಎಚ್ಚರಿಕೆ

ಸೆಪ್ಟೆಂಬರ್‌ನಲ್ಲಿ ನಡೆದ ಸಾಮಾನ್ಯ ಸಭೆಯ ವಾರ್ಷಿಕ ಅಧಿವೇಶನದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಇತ್ತೀಚೆಗೆ ಮಾಡಿದ ಭಾಷಣವನ್ನು ಕಾಂಬೋಜ್ ಪುನರುಚ್ಚರಿಸಿ, ಭಾರತವು ಶಾಂತಿಯ ಕಡೆಯಲ್ಲಿದ್ದು, ಅಲ್ಲಿಯೆ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು, ರಷ್ಯಾದ ಜನಾಭಿಪ್ರಾಯ ಮತ್ತು ನಾಲ್ಕು ಉಕ್ರೇನಿಯನ್ ಪ್ರದೇಶಗಳನ್ನು ಅಮಾನ್ಯವೆಂದು ಖಂಡಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕರಡು ನಿರ್ಣಯದಿಂದ ಭಾರತ ದೂರವಿತ್ತು. ರಷ್ಯಾ, ಬೆಲಾರಸ್, ಉತ್ತರ ಕೊರಿಯಾ, ಸಿರಿಯಾ ಮತ್ತು ನಿಕರಾಗುವಾ ಮಾತ್ರ ನಿರ್ಣಯದ ವಿರುದ್ಧ ಮತ ಚಲಾಯಿಸಿದವು.

ಭಾರತವಲ್ಲದೆ, ಏಷ್ಯಾದ ಹೆಚ್ಚಿನ ಸಂಖ್ಯೆಯ ದೇಶಗಳು ದೂರವಿದ್ದವು. ಅವುಗಳಲ್ಲಿ ಚೀನಾ, ಪಾಕಿಸ್ತಾನ, ಶ್ರೀಲಂಕಾ, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಸೇರಿದ್ದವು. ಬ್ರಿಕ್ಸ್‌ನ ಯಾವುದೇ ಸದಸ್ಯರು ಪಾಶ್ಚಾತ್ಯ ದೇಶದ ಜೊತೆಗೆ ಮತ ಚಲಾಯಿಸಲಿಲ್ಲ.

ಇದನ್ನೂ ಓದಿ: ದೇಶದ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ ಆರೋಪ: ಇನ್‌ಸ್ಟಾಗ್ರಾಮ್‌‌ಗೆ ನಿರ್ಬಂಧ ಹೇರಿದ ರಷ್ಯಾ

ಜನಾಭಿಪ್ರಾಯ ಸಂಗ್ರಹಣೆ ಮತ್ತು ಸ್ವಾಧೀನವನ್ನು ಕಾನೂನುಬಾಹಿರವೆಂದು ಘೋಷಿಸುವುದರ ಜೊತೆಗೆ, ರಷ್ಯಾವು ತಕ್ಷಣವೇ ಉಕ್ರೇನ್‌ನ ಎಲ್ಲಾ ಭಾಗಗಳಿಂದ ತನ್ನ ಮಿಲಿಟರಿಯನ್ನು ಹಿಂತೆಗೆದುಕೊಳ್ಳಬೇಕೆಂದು ನಿರ್ಣಯವು ಒತ್ತಾಯಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...