Homeಮುಖಪುಟಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

- Advertisement -
- Advertisement -

ವಿಪಕ್ಷಗಳ ಇಂಡಿಯಾ ಮೈತ್ರಿಯಲ್ಲಿ ಸಾಮೂಹಿಕ ಚರ್ಚೆಗಳ ಕೊರತೆಯಿಂದಾಗಿ ಲೋಕಸಭಾ ಚುನಾವಣೆಯ ನಂತರ ಮುಂದುವರಿಯುವ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸಿಪಿಐ(ಎಂ)ನ ಹಿರಿಯ ನಾಯಕ, ಮಧ್ಯಂತರ ಸಂಯೋಜಕ ಪ್ರಕಾಶ್ ಕಾರಟ್ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ. ಪಕ್ಷದ 27ನೇ ರಾಷ್ಟ್ರೀಯ ಮಹಾಅಧಿವೇಶನ ತಮಿಳುನಾಡಿನಲ್ಲಿ ಏಪ್ರಿಲ್ 2ರಿಂದ 6ರ ವರೆಗೆ ನಡೆಯಲಿದ್ದು, ಅದಕ್ಕೂ ಮುಂಚೆ ಅವರು ಈ ಹೇಳಿಕೆ ನೀಡಿದ್ದಾರೆ.

ಇಂಡಿಯಾ ಮೈತ್ರಿಯ ಪಕ್ಷಗಳು ಮೈತ್ರಿಕೂಟದ ಭವಿಷ್ಯದ ಕಾರ್ಯತಂತ್ರದ ಬಗ್ಗೆ ಒಮ್ಮತಕ್ಕೆ ಬರಬೇಕು ಎಂದು ಸಿಪಿಐ(ಎಂ) ಬಯಸುತ್ತಿದೆ ಎಂದು ಪ್ರಕಾಶ್ ಕಾರಟ್‌ ಹೇಳಿದ್ದಾರೆ. ಮೈತ್ರಿಯು ಮುಂದುವರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, “ರಾಷ್ಟ್ರೀಯವಾಗಿ ಏನಾಗುತ್ತದೆ ಎಂಬುದರ ಮೇಲೆ ಅವಲಂಬಿತವಾಗದೆ, ರಾಜ್ಯವಾರು ಆಧಾರದ ಮೇಲೆ ಒಪ್ಪಂದಗಳ ಮೇಲೆ ಮೈತ್ರಿ ಮುಂದುವರೆಯಲಿದೆ” ಎಂದು ಹೇಳಿದ್ದಾರೆ.

“ಲೋಕಸಭಾ ಚುನಾವಣೆಯ ನಂತರ ಇಂಡಿಯಾ ಮೈತ್ರಿಯೊಂದಿಗೆ ಹೇಗೆ ಮುಂದುವರಿಯಬೇಕೆಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಸಂಸತ್ತಿನಲ್ಲಿ, ಇಂಡಿಯಾ ಮೈತ್ರಿಯ ಪಕ್ಷಗಳು ಎಲ್ಲಾ ಸಮಸ್ಯೆಗಳು ಮತ್ತು ನೀತಿ ವಿಷಯಗಳಲ್ಲಿ ಸಹಕರಿಸುತ್ತವೆ, ಆದರೆ ಅದರ ಹೊರಗೆ ಯಾವುದೇ ಚರ್ಚೆ ನಡೆದಿಲ್ಲ.” ಎಂದು ಅವರು ಹೇಳಿದ್ದಾರೆ.

“ಅಂತಹ ಚರ್ಚೆಯ ಅಗತ್ಯವಿದೆ. ಏನನ್ನೂ ನಿರ್ಧರಿಸುವುದು ನಮ್ಮ ಕೈಯ್ಯಲ್ಲಿಲ್ಲ; ನಾವು ಅಂತಹ ಪ್ರಮುಖ ಶಕ್ತಿಯಲ್ಲ. ಅದಾಗ್ಯೂ, ಎಲ್ಲಾ ಪಕ್ಷಗಳು ಒಟ್ಟಿಗೆ ಕುಳಿತು ಚರ್ಚಿಸಿ ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಒಮ್ಮತಕ್ಕೆ ಬರಬೇಕೆಂದು ನಾವು ಬಯಸುತ್ತೇವೆ. ಆದರೆ ಅದು ಇಲ್ಲಿಯವರೆಗೆ ಆಗಿಲ್ಲ” ಎಂದು ಪ್ರಕಾಶ್ ಕಾರಟ್ ತಿಳಿಸಿದ್ದಾರೆ.

ತಮ್ಮ ಪಕ್ಷವು ರಾಜ್ಯವಾರು ಆಧಾರದ ಮೇಲೆ ಚುನಾವಣಾ ಒಪ್ಪಂದದ ಕುರಿತು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಸಾಮೂಹಿಕ ಚರ್ಚೆ ನಡೆಯದ ಕಾರಣ, ಈಗ ಅದಕ್ಕೆ ಯಾವುದೆ ದಿಕ್ಕಿಲ್ಲ ಎಂಬ ಸಾಮಾನ್ಯ ಭಾವನೆ ಇದೆ ಎಂದು ಪ್ರಕಾಶ್ ಕಾರಟ್ ಹೇಳಿದ್ದಾರೆ.

ಒಮ್ಮತವನ್ನು ತಲುಪುವ ಸಾಧ್ಯತೆಯ ಬಗ್ಗೆ ಮಾತನಾಡಿದ ಅವರು, ಬಿಜೆಪಿ ವಿರೋಧಿ ಮತ್ತು ಬಿಜೆಪಿಯೇತರ ಪಕ್ಷಗಳು ಒಂದಾಗಬೇಕಿದೆ ಎಂದು ಹೇಳಿದ್ದಾರೆ. ಇಂಡಿಯಾ ಮೈತ್ರಿಯಲ್ಲಿ

ಬಿಹಾರ ಮತ್ತು ತಮಿಳುನಾಡಿನಲ್ಲಿ ಅಸ್ತಿತ್ವದಲ್ಲಿರುವ ಮೈತ್ರಿ ವ್ಯವಸ್ಥೆಗಳನ್ನು ಉಲ್ಲೇಖಿಸಿದ ಅವರು, “ಇಂಡಿಯಾ ಮೈತ್ರಿಗಿಂತ ಮೊದಲೇ ಮಹಾಘಟಬಂಧನ್ (ಮಹಾಮೈತ್ರಿ) ಇದೆ. ಆದ್ದರಿಂದ ಅದು ಬಹುಶಃ ಮುಂದುವರಿಯುತ್ತದೆ, ಹಾಗೂ ಬಲಗೊಳ್ಳಬಹುದು … ಪ್ರತಿ ರಾಜ್ಯದ ಆಧಾರದಲ್ಲಿ ನಾವು ಈ ಬಗ್ಗೆ ತೀರ್ಮಾನ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ: ಒಂದೇ ಮದುವೆ ಮಂಟಪದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ; ವೀಡಿಯೋ ವೈರಲ್

ತೆಲಂಗಾಣ: ಒಂದೇ ಮದುವೆ ಮಂಟಪದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...