Homeಮುಖಪುಟಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

- Advertisement -
- Advertisement -

ವಿಪಕ್ಷಗಳ ಇಂಡಿಯಾ ಮೈತ್ರಿಯಲ್ಲಿ ಸಾಮೂಹಿಕ ಚರ್ಚೆಗಳ ಕೊರತೆಯಿಂದಾಗಿ ಲೋಕಸಭಾ ಚುನಾವಣೆಯ ನಂತರ ಮುಂದುವರಿಯುವ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸಿಪಿಐ(ಎಂ)ನ ಹಿರಿಯ ನಾಯಕ, ಮಧ್ಯಂತರ ಸಂಯೋಜಕ ಪ್ರಕಾಶ್ ಕಾರಟ್ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ. ಪಕ್ಷದ 27ನೇ ರಾಷ್ಟ್ರೀಯ ಮಹಾಅಧಿವೇಶನ ತಮಿಳುನಾಡಿನಲ್ಲಿ ಏಪ್ರಿಲ್ 2ರಿಂದ 6ರ ವರೆಗೆ ನಡೆಯಲಿದ್ದು, ಅದಕ್ಕೂ ಮುಂಚೆ ಅವರು ಈ ಹೇಳಿಕೆ ನೀಡಿದ್ದಾರೆ.

ಇಂಡಿಯಾ ಮೈತ್ರಿಯ ಪಕ್ಷಗಳು ಮೈತ್ರಿಕೂಟದ ಭವಿಷ್ಯದ ಕಾರ್ಯತಂತ್ರದ ಬಗ್ಗೆ ಒಮ್ಮತಕ್ಕೆ ಬರಬೇಕು ಎಂದು ಸಿಪಿಐ(ಎಂ) ಬಯಸುತ್ತಿದೆ ಎಂದು ಪ್ರಕಾಶ್ ಕಾರಟ್‌ ಹೇಳಿದ್ದಾರೆ. ಮೈತ್ರಿಯು ಮುಂದುವರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, “ರಾಷ್ಟ್ರೀಯವಾಗಿ ಏನಾಗುತ್ತದೆ ಎಂಬುದರ ಮೇಲೆ ಅವಲಂಬಿತವಾಗದೆ, ರಾಜ್ಯವಾರು ಆಧಾರದ ಮೇಲೆ ಒಪ್ಪಂದಗಳ ಮೇಲೆ ಮೈತ್ರಿ ಮುಂದುವರೆಯಲಿದೆ” ಎಂದು ಹೇಳಿದ್ದಾರೆ.

“ಲೋಕಸಭಾ ಚುನಾವಣೆಯ ನಂತರ ಇಂಡಿಯಾ ಮೈತ್ರಿಯೊಂದಿಗೆ ಹೇಗೆ ಮುಂದುವರಿಯಬೇಕೆಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಸಂಸತ್ತಿನಲ್ಲಿ, ಇಂಡಿಯಾ ಮೈತ್ರಿಯ ಪಕ್ಷಗಳು ಎಲ್ಲಾ ಸಮಸ್ಯೆಗಳು ಮತ್ತು ನೀತಿ ವಿಷಯಗಳಲ್ಲಿ ಸಹಕರಿಸುತ್ತವೆ, ಆದರೆ ಅದರ ಹೊರಗೆ ಯಾವುದೇ ಚರ್ಚೆ ನಡೆದಿಲ್ಲ.” ಎಂದು ಅವರು ಹೇಳಿದ್ದಾರೆ.

“ಅಂತಹ ಚರ್ಚೆಯ ಅಗತ್ಯವಿದೆ. ಏನನ್ನೂ ನಿರ್ಧರಿಸುವುದು ನಮ್ಮ ಕೈಯ್ಯಲ್ಲಿಲ್ಲ; ನಾವು ಅಂತಹ ಪ್ರಮುಖ ಶಕ್ತಿಯಲ್ಲ. ಅದಾಗ್ಯೂ, ಎಲ್ಲಾ ಪಕ್ಷಗಳು ಒಟ್ಟಿಗೆ ಕುಳಿತು ಚರ್ಚಿಸಿ ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಒಮ್ಮತಕ್ಕೆ ಬರಬೇಕೆಂದು ನಾವು ಬಯಸುತ್ತೇವೆ. ಆದರೆ ಅದು ಇಲ್ಲಿಯವರೆಗೆ ಆಗಿಲ್ಲ” ಎಂದು ಪ್ರಕಾಶ್ ಕಾರಟ್ ತಿಳಿಸಿದ್ದಾರೆ.

ತಮ್ಮ ಪಕ್ಷವು ರಾಜ್ಯವಾರು ಆಧಾರದ ಮೇಲೆ ಚುನಾವಣಾ ಒಪ್ಪಂದದ ಕುರಿತು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಸಾಮೂಹಿಕ ಚರ್ಚೆ ನಡೆಯದ ಕಾರಣ, ಈಗ ಅದಕ್ಕೆ ಯಾವುದೆ ದಿಕ್ಕಿಲ್ಲ ಎಂಬ ಸಾಮಾನ್ಯ ಭಾವನೆ ಇದೆ ಎಂದು ಪ್ರಕಾಶ್ ಕಾರಟ್ ಹೇಳಿದ್ದಾರೆ.

ಒಮ್ಮತವನ್ನು ತಲುಪುವ ಸಾಧ್ಯತೆಯ ಬಗ್ಗೆ ಮಾತನಾಡಿದ ಅವರು, ಬಿಜೆಪಿ ವಿರೋಧಿ ಮತ್ತು ಬಿಜೆಪಿಯೇತರ ಪಕ್ಷಗಳು ಒಂದಾಗಬೇಕಿದೆ ಎಂದು ಹೇಳಿದ್ದಾರೆ. ಇಂಡಿಯಾ ಮೈತ್ರಿಯಲ್ಲಿ

ಬಿಹಾರ ಮತ್ತು ತಮಿಳುನಾಡಿನಲ್ಲಿ ಅಸ್ತಿತ್ವದಲ್ಲಿರುವ ಮೈತ್ರಿ ವ್ಯವಸ್ಥೆಗಳನ್ನು ಉಲ್ಲೇಖಿಸಿದ ಅವರು, “ಇಂಡಿಯಾ ಮೈತ್ರಿಗಿಂತ ಮೊದಲೇ ಮಹಾಘಟಬಂಧನ್ (ಮಹಾಮೈತ್ರಿ) ಇದೆ. ಆದ್ದರಿಂದ ಅದು ಬಹುಶಃ ಮುಂದುವರಿಯುತ್ತದೆ, ಹಾಗೂ ಬಲಗೊಳ್ಳಬಹುದು … ಪ್ರತಿ ರಾಜ್ಯದ ಆಧಾರದಲ್ಲಿ ನಾವು ಈ ಬಗ್ಗೆ ತೀರ್ಮಾನ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ: ಒಂದೇ ಮದುವೆ ಮಂಟಪದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ; ವೀಡಿಯೋ ವೈರಲ್

ತೆಲಂಗಾಣ: ಒಂದೇ ಮದುವೆ ಮಂಟಪದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...