Homeಮುಖಪುಟಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

- Advertisement -
- Advertisement -

ವಿಪಕ್ಷಗಳ ಇಂಡಿಯಾ ಮೈತ್ರಿಯಲ್ಲಿ ಸಾಮೂಹಿಕ ಚರ್ಚೆಗಳ ಕೊರತೆಯಿಂದಾಗಿ ಲೋಕಸಭಾ ಚುನಾವಣೆಯ ನಂತರ ಮುಂದುವರಿಯುವ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸಿಪಿಐ(ಎಂ)ನ ಹಿರಿಯ ನಾಯಕ, ಮಧ್ಯಂತರ ಸಂಯೋಜಕ ಪ್ರಕಾಶ್ ಕಾರಟ್ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ. ಪಕ್ಷದ 27ನೇ ರಾಷ್ಟ್ರೀಯ ಮಹಾಅಧಿವೇಶನ ತಮಿಳುನಾಡಿನಲ್ಲಿ ಏಪ್ರಿಲ್ 2ರಿಂದ 6ರ ವರೆಗೆ ನಡೆಯಲಿದ್ದು, ಅದಕ್ಕೂ ಮುಂಚೆ ಅವರು ಈ ಹೇಳಿಕೆ ನೀಡಿದ್ದಾರೆ.

ಇಂಡಿಯಾ ಮೈತ್ರಿಯ ಪಕ್ಷಗಳು ಮೈತ್ರಿಕೂಟದ ಭವಿಷ್ಯದ ಕಾರ್ಯತಂತ್ರದ ಬಗ್ಗೆ ಒಮ್ಮತಕ್ಕೆ ಬರಬೇಕು ಎಂದು ಸಿಪಿಐ(ಎಂ) ಬಯಸುತ್ತಿದೆ ಎಂದು ಪ್ರಕಾಶ್ ಕಾರಟ್‌ ಹೇಳಿದ್ದಾರೆ. ಮೈತ್ರಿಯು ಮುಂದುವರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, “ರಾಷ್ಟ್ರೀಯವಾಗಿ ಏನಾಗುತ್ತದೆ ಎಂಬುದರ ಮೇಲೆ ಅವಲಂಬಿತವಾಗದೆ, ರಾಜ್ಯವಾರು ಆಧಾರದ ಮೇಲೆ ಒಪ್ಪಂದಗಳ ಮೇಲೆ ಮೈತ್ರಿ ಮುಂದುವರೆಯಲಿದೆ” ಎಂದು ಹೇಳಿದ್ದಾರೆ.

“ಲೋಕಸಭಾ ಚುನಾವಣೆಯ ನಂತರ ಇಂಡಿಯಾ ಮೈತ್ರಿಯೊಂದಿಗೆ ಹೇಗೆ ಮುಂದುವರಿಯಬೇಕೆಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಸಂಸತ್ತಿನಲ್ಲಿ, ಇಂಡಿಯಾ ಮೈತ್ರಿಯ ಪಕ್ಷಗಳು ಎಲ್ಲಾ ಸಮಸ್ಯೆಗಳು ಮತ್ತು ನೀತಿ ವಿಷಯಗಳಲ್ಲಿ ಸಹಕರಿಸುತ್ತವೆ, ಆದರೆ ಅದರ ಹೊರಗೆ ಯಾವುದೇ ಚರ್ಚೆ ನಡೆದಿಲ್ಲ.” ಎಂದು ಅವರು ಹೇಳಿದ್ದಾರೆ.

“ಅಂತಹ ಚರ್ಚೆಯ ಅಗತ್ಯವಿದೆ. ಏನನ್ನೂ ನಿರ್ಧರಿಸುವುದು ನಮ್ಮ ಕೈಯ್ಯಲ್ಲಿಲ್ಲ; ನಾವು ಅಂತಹ ಪ್ರಮುಖ ಶಕ್ತಿಯಲ್ಲ. ಅದಾಗ್ಯೂ, ಎಲ್ಲಾ ಪಕ್ಷಗಳು ಒಟ್ಟಿಗೆ ಕುಳಿತು ಚರ್ಚಿಸಿ ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಒಮ್ಮತಕ್ಕೆ ಬರಬೇಕೆಂದು ನಾವು ಬಯಸುತ್ತೇವೆ. ಆದರೆ ಅದು ಇಲ್ಲಿಯವರೆಗೆ ಆಗಿಲ್ಲ” ಎಂದು ಪ್ರಕಾಶ್ ಕಾರಟ್ ತಿಳಿಸಿದ್ದಾರೆ.

ತಮ್ಮ ಪಕ್ಷವು ರಾಜ್ಯವಾರು ಆಧಾರದ ಮೇಲೆ ಚುನಾವಣಾ ಒಪ್ಪಂದದ ಕುರಿತು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಸಾಮೂಹಿಕ ಚರ್ಚೆ ನಡೆಯದ ಕಾರಣ, ಈಗ ಅದಕ್ಕೆ ಯಾವುದೆ ದಿಕ್ಕಿಲ್ಲ ಎಂಬ ಸಾಮಾನ್ಯ ಭಾವನೆ ಇದೆ ಎಂದು ಪ್ರಕಾಶ್ ಕಾರಟ್ ಹೇಳಿದ್ದಾರೆ.

ಒಮ್ಮತವನ್ನು ತಲುಪುವ ಸಾಧ್ಯತೆಯ ಬಗ್ಗೆ ಮಾತನಾಡಿದ ಅವರು, ಬಿಜೆಪಿ ವಿರೋಧಿ ಮತ್ತು ಬಿಜೆಪಿಯೇತರ ಪಕ್ಷಗಳು ಒಂದಾಗಬೇಕಿದೆ ಎಂದು ಹೇಳಿದ್ದಾರೆ. ಇಂಡಿಯಾ ಮೈತ್ರಿಯಲ್ಲಿ

ಬಿಹಾರ ಮತ್ತು ತಮಿಳುನಾಡಿನಲ್ಲಿ ಅಸ್ತಿತ್ವದಲ್ಲಿರುವ ಮೈತ್ರಿ ವ್ಯವಸ್ಥೆಗಳನ್ನು ಉಲ್ಲೇಖಿಸಿದ ಅವರು, “ಇಂಡಿಯಾ ಮೈತ್ರಿಗಿಂತ ಮೊದಲೇ ಮಹಾಘಟಬಂಧನ್ (ಮಹಾಮೈತ್ರಿ) ಇದೆ. ಆದ್ದರಿಂದ ಅದು ಬಹುಶಃ ಮುಂದುವರಿಯುತ್ತದೆ, ಹಾಗೂ ಬಲಗೊಳ್ಳಬಹುದು … ಪ್ರತಿ ರಾಜ್ಯದ ಆಧಾರದಲ್ಲಿ ನಾವು ಈ ಬಗ್ಗೆ ತೀರ್ಮಾನ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ: ಒಂದೇ ಮದುವೆ ಮಂಟಪದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ; ವೀಡಿಯೋ ವೈರಲ್

ತೆಲಂಗಾಣ: ಒಂದೇ ಮದುವೆ ಮಂಟಪದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...