Homeಮುಖಪುಟಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

- Advertisement -
- Advertisement -

ವಿಪಕ್ಷಗಳ ಇಂಡಿಯಾ ಮೈತ್ರಿಯಲ್ಲಿ ಸಾಮೂಹಿಕ ಚರ್ಚೆಗಳ ಕೊರತೆಯಿಂದಾಗಿ ಲೋಕಸಭಾ ಚುನಾವಣೆಯ ನಂತರ ಮುಂದುವರಿಯುವ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸಿಪಿಐ(ಎಂ)ನ ಹಿರಿಯ ನಾಯಕ, ಮಧ್ಯಂತರ ಸಂಯೋಜಕ ಪ್ರಕಾಶ್ ಕಾರಟ್ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ. ಪಕ್ಷದ 27ನೇ ರಾಷ್ಟ್ರೀಯ ಮಹಾಅಧಿವೇಶನ ತಮಿಳುನಾಡಿನಲ್ಲಿ ಏಪ್ರಿಲ್ 2ರಿಂದ 6ರ ವರೆಗೆ ನಡೆಯಲಿದ್ದು, ಅದಕ್ಕೂ ಮುಂಚೆ ಅವರು ಈ ಹೇಳಿಕೆ ನೀಡಿದ್ದಾರೆ.

ಇಂಡಿಯಾ ಮೈತ್ರಿಯ ಪಕ್ಷಗಳು ಮೈತ್ರಿಕೂಟದ ಭವಿಷ್ಯದ ಕಾರ್ಯತಂತ್ರದ ಬಗ್ಗೆ ಒಮ್ಮತಕ್ಕೆ ಬರಬೇಕು ಎಂದು ಸಿಪಿಐ(ಎಂ) ಬಯಸುತ್ತಿದೆ ಎಂದು ಪ್ರಕಾಶ್ ಕಾರಟ್‌ ಹೇಳಿದ್ದಾರೆ. ಮೈತ್ರಿಯು ಮುಂದುವರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, “ರಾಷ್ಟ್ರೀಯವಾಗಿ ಏನಾಗುತ್ತದೆ ಎಂಬುದರ ಮೇಲೆ ಅವಲಂಬಿತವಾಗದೆ, ರಾಜ್ಯವಾರು ಆಧಾರದ ಮೇಲೆ ಒಪ್ಪಂದಗಳ ಮೇಲೆ ಮೈತ್ರಿ ಮುಂದುವರೆಯಲಿದೆ” ಎಂದು ಹೇಳಿದ್ದಾರೆ.

“ಲೋಕಸಭಾ ಚುನಾವಣೆಯ ನಂತರ ಇಂಡಿಯಾ ಮೈತ್ರಿಯೊಂದಿಗೆ ಹೇಗೆ ಮುಂದುವರಿಯಬೇಕೆಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಸಂಸತ್ತಿನಲ್ಲಿ, ಇಂಡಿಯಾ ಮೈತ್ರಿಯ ಪಕ್ಷಗಳು ಎಲ್ಲಾ ಸಮಸ್ಯೆಗಳು ಮತ್ತು ನೀತಿ ವಿಷಯಗಳಲ್ಲಿ ಸಹಕರಿಸುತ್ತವೆ, ಆದರೆ ಅದರ ಹೊರಗೆ ಯಾವುದೇ ಚರ್ಚೆ ನಡೆದಿಲ್ಲ.” ಎಂದು ಅವರು ಹೇಳಿದ್ದಾರೆ.

“ಅಂತಹ ಚರ್ಚೆಯ ಅಗತ್ಯವಿದೆ. ಏನನ್ನೂ ನಿರ್ಧರಿಸುವುದು ನಮ್ಮ ಕೈಯ್ಯಲ್ಲಿಲ್ಲ; ನಾವು ಅಂತಹ ಪ್ರಮುಖ ಶಕ್ತಿಯಲ್ಲ. ಅದಾಗ್ಯೂ, ಎಲ್ಲಾ ಪಕ್ಷಗಳು ಒಟ್ಟಿಗೆ ಕುಳಿತು ಚರ್ಚಿಸಿ ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಒಮ್ಮತಕ್ಕೆ ಬರಬೇಕೆಂದು ನಾವು ಬಯಸುತ್ತೇವೆ. ಆದರೆ ಅದು ಇಲ್ಲಿಯವರೆಗೆ ಆಗಿಲ್ಲ” ಎಂದು ಪ್ರಕಾಶ್ ಕಾರಟ್ ತಿಳಿಸಿದ್ದಾರೆ.

ತಮ್ಮ ಪಕ್ಷವು ರಾಜ್ಯವಾರು ಆಧಾರದ ಮೇಲೆ ಚುನಾವಣಾ ಒಪ್ಪಂದದ ಕುರಿತು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಸಾಮೂಹಿಕ ಚರ್ಚೆ ನಡೆಯದ ಕಾರಣ, ಈಗ ಅದಕ್ಕೆ ಯಾವುದೆ ದಿಕ್ಕಿಲ್ಲ ಎಂಬ ಸಾಮಾನ್ಯ ಭಾವನೆ ಇದೆ ಎಂದು ಪ್ರಕಾಶ್ ಕಾರಟ್ ಹೇಳಿದ್ದಾರೆ.

ಒಮ್ಮತವನ್ನು ತಲುಪುವ ಸಾಧ್ಯತೆಯ ಬಗ್ಗೆ ಮಾತನಾಡಿದ ಅವರು, ಬಿಜೆಪಿ ವಿರೋಧಿ ಮತ್ತು ಬಿಜೆಪಿಯೇತರ ಪಕ್ಷಗಳು ಒಂದಾಗಬೇಕಿದೆ ಎಂದು ಹೇಳಿದ್ದಾರೆ. ಇಂಡಿಯಾ ಮೈತ್ರಿಯಲ್ಲಿ

ಬಿಹಾರ ಮತ್ತು ತಮಿಳುನಾಡಿನಲ್ಲಿ ಅಸ್ತಿತ್ವದಲ್ಲಿರುವ ಮೈತ್ರಿ ವ್ಯವಸ್ಥೆಗಳನ್ನು ಉಲ್ಲೇಖಿಸಿದ ಅವರು, “ಇಂಡಿಯಾ ಮೈತ್ರಿಗಿಂತ ಮೊದಲೇ ಮಹಾಘಟಬಂಧನ್ (ಮಹಾಮೈತ್ರಿ) ಇದೆ. ಆದ್ದರಿಂದ ಅದು ಬಹುಶಃ ಮುಂದುವರಿಯುತ್ತದೆ, ಹಾಗೂ ಬಲಗೊಳ್ಳಬಹುದು … ಪ್ರತಿ ರಾಜ್ಯದ ಆಧಾರದಲ್ಲಿ ನಾವು ಈ ಬಗ್ಗೆ ತೀರ್ಮಾನ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ: ಒಂದೇ ಮದುವೆ ಮಂಟಪದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ; ವೀಡಿಯೋ ವೈರಲ್

ತೆಲಂಗಾಣ: ಒಂದೇ ಮದುವೆ ಮಂಟಪದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...