Homeಮುಖಪುಟಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

ಇಂಡಿಯಾ ಮೈತ್ರಿಯಲ್ಲಿ ಸ್ಪಷ್ಟತೆ, ಸಮನ್ವಯದ ಕೊರತೆ ಇದೆ: ಸಿಪಿಐ(ಎಂ)

- Advertisement -
- Advertisement -

ವಿಪಕ್ಷಗಳ ಇಂಡಿಯಾ ಮೈತ್ರಿಯಲ್ಲಿ ಸಾಮೂಹಿಕ ಚರ್ಚೆಗಳ ಕೊರತೆಯಿಂದಾಗಿ ಲೋಕಸಭಾ ಚುನಾವಣೆಯ ನಂತರ ಮುಂದುವರಿಯುವ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಸಿಪಿಐ(ಎಂ)ನ ಹಿರಿಯ ನಾಯಕ, ಮಧ್ಯಂತರ ಸಂಯೋಜಕ ಪ್ರಕಾಶ್ ಕಾರಟ್ ಹೇಳಿದ್ದಾರೆ ಎಂದು TNIE ವರದಿ ಮಾಡಿದೆ. ಪಕ್ಷದ 27ನೇ ರಾಷ್ಟ್ರೀಯ ಮಹಾಅಧಿವೇಶನ ತಮಿಳುನಾಡಿನಲ್ಲಿ ಏಪ್ರಿಲ್ 2ರಿಂದ 6ರ ವರೆಗೆ ನಡೆಯಲಿದ್ದು, ಅದಕ್ಕೂ ಮುಂಚೆ ಅವರು ಈ ಹೇಳಿಕೆ ನೀಡಿದ್ದಾರೆ.

ಇಂಡಿಯಾ ಮೈತ್ರಿಯ ಪಕ್ಷಗಳು ಮೈತ್ರಿಕೂಟದ ಭವಿಷ್ಯದ ಕಾರ್ಯತಂತ್ರದ ಬಗ್ಗೆ ಒಮ್ಮತಕ್ಕೆ ಬರಬೇಕು ಎಂದು ಸಿಪಿಐ(ಎಂ) ಬಯಸುತ್ತಿದೆ ಎಂದು ಪ್ರಕಾಶ್ ಕಾರಟ್‌ ಹೇಳಿದ್ದಾರೆ. ಮೈತ್ರಿಯು ಮುಂದುವರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, “ರಾಷ್ಟ್ರೀಯವಾಗಿ ಏನಾಗುತ್ತದೆ ಎಂಬುದರ ಮೇಲೆ ಅವಲಂಬಿತವಾಗದೆ, ರಾಜ್ಯವಾರು ಆಧಾರದ ಮೇಲೆ ಒಪ್ಪಂದಗಳ ಮೇಲೆ ಮೈತ್ರಿ ಮುಂದುವರೆಯಲಿದೆ” ಎಂದು ಹೇಳಿದ್ದಾರೆ.

“ಲೋಕಸಭಾ ಚುನಾವಣೆಯ ನಂತರ ಇಂಡಿಯಾ ಮೈತ್ರಿಯೊಂದಿಗೆ ಹೇಗೆ ಮುಂದುವರಿಯಬೇಕೆಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಸಂಸತ್ತಿನಲ್ಲಿ, ಇಂಡಿಯಾ ಮೈತ್ರಿಯ ಪಕ್ಷಗಳು ಎಲ್ಲಾ ಸಮಸ್ಯೆಗಳು ಮತ್ತು ನೀತಿ ವಿಷಯಗಳಲ್ಲಿ ಸಹಕರಿಸುತ್ತವೆ, ಆದರೆ ಅದರ ಹೊರಗೆ ಯಾವುದೇ ಚರ್ಚೆ ನಡೆದಿಲ್ಲ.” ಎಂದು ಅವರು ಹೇಳಿದ್ದಾರೆ.

“ಅಂತಹ ಚರ್ಚೆಯ ಅಗತ್ಯವಿದೆ. ಏನನ್ನೂ ನಿರ್ಧರಿಸುವುದು ನಮ್ಮ ಕೈಯ್ಯಲ್ಲಿಲ್ಲ; ನಾವು ಅಂತಹ ಪ್ರಮುಖ ಶಕ್ತಿಯಲ್ಲ. ಅದಾಗ್ಯೂ, ಎಲ್ಲಾ ಪಕ್ಷಗಳು ಒಟ್ಟಿಗೆ ಕುಳಿತು ಚರ್ಚಿಸಿ ಹೇಗೆ ಮುಂದುವರಿಯಬೇಕು ಎಂಬುದರ ಕುರಿತು ಒಮ್ಮತಕ್ಕೆ ಬರಬೇಕೆಂದು ನಾವು ಬಯಸುತ್ತೇವೆ. ಆದರೆ ಅದು ಇಲ್ಲಿಯವರೆಗೆ ಆಗಿಲ್ಲ” ಎಂದು ಪ್ರಕಾಶ್ ಕಾರಟ್ ತಿಳಿಸಿದ್ದಾರೆ.

ತಮ್ಮ ಪಕ್ಷವು ರಾಜ್ಯವಾರು ಆಧಾರದ ಮೇಲೆ ಚುನಾವಣಾ ಒಪ್ಪಂದದ ಕುರಿತು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ. ಸಾಮೂಹಿಕ ಚರ್ಚೆ ನಡೆಯದ ಕಾರಣ, ಈಗ ಅದಕ್ಕೆ ಯಾವುದೆ ದಿಕ್ಕಿಲ್ಲ ಎಂಬ ಸಾಮಾನ್ಯ ಭಾವನೆ ಇದೆ ಎಂದು ಪ್ರಕಾಶ್ ಕಾರಟ್ ಹೇಳಿದ್ದಾರೆ.

ಒಮ್ಮತವನ್ನು ತಲುಪುವ ಸಾಧ್ಯತೆಯ ಬಗ್ಗೆ ಮಾತನಾಡಿದ ಅವರು, ಬಿಜೆಪಿ ವಿರೋಧಿ ಮತ್ತು ಬಿಜೆಪಿಯೇತರ ಪಕ್ಷಗಳು ಒಂದಾಗಬೇಕಿದೆ ಎಂದು ಹೇಳಿದ್ದಾರೆ. ಇಂಡಿಯಾ ಮೈತ್ರಿಯಲ್ಲಿ

ಬಿಹಾರ ಮತ್ತು ತಮಿಳುನಾಡಿನಲ್ಲಿ ಅಸ್ತಿತ್ವದಲ್ಲಿರುವ ಮೈತ್ರಿ ವ್ಯವಸ್ಥೆಗಳನ್ನು ಉಲ್ಲೇಖಿಸಿದ ಅವರು, “ಇಂಡಿಯಾ ಮೈತ್ರಿಗಿಂತ ಮೊದಲೇ ಮಹಾಘಟಬಂಧನ್ (ಮಹಾಮೈತ್ರಿ) ಇದೆ. ಆದ್ದರಿಂದ ಅದು ಬಹುಶಃ ಮುಂದುವರಿಯುತ್ತದೆ, ಹಾಗೂ ಬಲಗೊಳ್ಳಬಹುದು … ಪ್ರತಿ ರಾಜ್ಯದ ಆಧಾರದಲ್ಲಿ ನಾವು ಈ ಬಗ್ಗೆ ತೀರ್ಮಾನ ಮಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ: ಒಂದೇ ಮದುವೆ ಮಂಟಪದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ; ವೀಡಿಯೋ ವೈರಲ್

ತೆಲಂಗಾಣ: ಒಂದೇ ಮದುವೆ ಮಂಟಪದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...