Homeಮುಖಪುಟತರಾತುರಿಯಲ್ಲಿ 'INDIA' ಸಭೆ ಕರೆದಿಲ್ಲ; ದೀದಿ ಆರೋಪಕ್ಕೆ ಸಂಜಯ್ ರಾವುತ್ ಪ್ರತಿಕ್ರಿಯೆ

ತರಾತುರಿಯಲ್ಲಿ ‘INDIA’ ಸಭೆ ಕರೆದಿಲ್ಲ; ದೀದಿ ಆರೋಪಕ್ಕೆ ಸಂಜಯ್ ರಾವುತ್ ಪ್ರತಿಕ್ರಿಯೆ

- Advertisement -
- Advertisement -

ತರಾತುರಿಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ಸಭೆ ಕರೆದಿಲ್ಲ; ಪಂಚ ರಾಜ್ಯಗಳ ಚುನಾವಣಾ ಫಲಿತಾಂಶಗಳ ಘೋಷಣೆಗೆ ಮುಂಚೆಯೇ ಸಭೆ ನಿಗದಿಪಡಿಸಲಾಗಿತ್ತು ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನೆ ಸಂಸದ ಸಂಜಯ್ ರಾವುತ್ ಪ್ರತಿಕ್ರಿಯೆ ನೀಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನವದೆಹಲಿ ನಿವಾಸದಲ್ಲಿ ನಾಳೆ ನಡೆಯಲಿರುವ ‘ಇಂಡಿಯಾ’ ಮೈತ್ರಿಕೂಟದ ಸಭೆ ಬಗ್ಗೆ ನನಗೆ ಮೊದಲೇ ಮಾಹಿತಿ ಸಿಕ್ಕಿಲ್ಲ, ಸಭೆಯಿಂದ ಹೊರಗುಳಿಯುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಘೋಷಿಸಿದ್ದಾರೆ. ‘ಸಭೆ ಬಗ್ಗೆ ನನಗೆ ಮುಂಚಿತವಾಗಿ ತಿಳಿಸಿಲ್ಲ’ ಎಂದು ಅವರು ಆರೋಪಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾವುತ್, ನಾವು ತರಾತುರಿಯಲ್ಲಿ ಸಭೆ ಕರೆದಿಲ್ಲ. ಚುನಾವಣಾ ಫಲಿತಾಂಶ ಘೋಷಣೆಗೂ ಮುನ್ನವೇ ದೆಹಲಿಯಲ್ಲಿ ಸಭೆಗೆ ಯೋಜನೆ ರೂಪಿಸಲಾಗಿತ್ತು. ಅದಕ್ಕೂ 2 ದಿನಗಳ ಮೊದಲು ಉದ್ಧವ್ ಠಾಕ್ರೆ ಜತೆ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ. ಅವರೂ ನಾಳಿನ ದೆಹಲಿ ಸಭೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ವಿವರಿಸಿದರು.

ಈ ಬಗ್ಗೆ ಮಾತನಾಡಿರುವ ಮಮತಾ ಬ್ಯಾನರ್ಜಿ, ಸಭೆಯ ಬಗ್ಗೆ ಮೊದಲೇ ಮಾಹಿತಿ ಸಿಕ್ಕಿದ್ದಿದ್ದರೆ ನನ್ನ ಪ್ರವಾಸಗಳನ್ನು ಮರುಹೊಂದಿಸುತ್ತಿದ್ದೆ. ಮೈತ್ರಿ ಕೂಟದ ಸಭೆ ಬಗ್ಗೆ ನನಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಆದ್ದರಿಂದಲೇ ನಾನು ಉತ್ತರ ಬಂಗಾಳದಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇನೆ. ಮೊದಲೇ ಮಾಹಿತಿ ಸಿಕ್ಕಿದ್ದಿದ್ದರೆ ಆ ಕಾರ್ಯಕ್ರಮಗಳನ್ನು ನಿಗದಿಪಡಿಸುತ್ತಿರಲಿಲ್ಲ, ಖಂಡಿತವಾಗಿಯೂ (ಸಭೆಗೆ) ಹೋಗುತ್ತಿದ್ದೆ’ ಎಂದಿದ್ದಾರೆ.

ಮಮತಾ ಬ್ಯಾನರ್ಜಿ ಹೇಳಿಕೆಯನ್ನಿಟ್ಟುಕೊಂಡು ಇಂಡಿಯಾ ಮೈತ್ರಿ ಕೂಟವನ್ನು ಟೀಕಿಸಿರುವ ಬಂಗಾಳದ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್, ‘ಭಾರತ ಮೈತ್ರಿಕೂಟಕ್ಕೆ ಭವಿಷ್ಯವಿಲ್ಲ ಎಂದು ಮಮತಾ ಬ್ಯಾನರ್ಜಿ ಅರ್ಥಮಾಡಿಕೊಂಡಿದ್ದಾರೆ. ಅದಕ್ಕಾಗಿಯೇ ಅವರು ಸಭೆಯಿಂದ ಹೊರಗುಳಿಯುತ್ತಿದ್ದಾರೆ’ ಎಂದಿದ್ದಾರೆ.

ನಾಳೆ (ಡಿ. 6) ದೆಹಲಿಯ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ನಡೆಯಲಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮೈತ್ರಿ ಕೂಟದ ಎಲ್ಲ 28 ಸದಸ್ಯರು ಅಂತಿಮ ಕಾರ್ಯತಂತ್ರ ರೂಪಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಮುಖ್ಯವಾಗಿ, ಸೀಟು ಹಂಚಿಕೆಯ ಸುತ್ತಲೂ ಚರ್ಚೆ ನಡೆಸುವ ಸಾಧ್ಯತೆಯಿದೆ. ಇಂಡಿಯಾ ಮೈತ್ರಿ ಕೂಟವು ಇದುವರೆಗೆ ಮೂರು ಸಭೆಗಳನ್ನು ನಡೆಸಿದೆ. ಜೂನ್ 23 ರಂದು ಬಿಹಾರದ ಪಾಟ್ನಾ; ಜುಲೈ 17-18 ರಂದು ಬೆಂಗಳೂರು ಹಾಗೂ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ಸಭೆ ನಡೆಸಲಾಗಿತ್ತು.

ಇದನ್ನೂ ಓದಿ; ಚೌಹಾಣ್-ತೋಮರ್-ಸಿಂಧಿಯಾ: ಯಾರಾಗ್ತಾರೆ ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...