Homeಮುಖಪುಟಇಂಡಿಯಾ ಮೈತ್ರಿ ಬಗ್ಗೆ 'ಯೆಚೂರಿ ಮಾರ್ಗ' ಅನುಸರಿಸುತ್ತೇವೆ: ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ

ಇಂಡಿಯಾ ಮೈತ್ರಿ ಬಗ್ಗೆ ‘ಯೆಚೂರಿ ಮಾರ್ಗ’ ಅನುಸರಿಸುತ್ತೇವೆ: ಸಿಪಿಎಂ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ

- Advertisement -
- Advertisement -

ವಿಪಕ್ಷಗಳ ಮೈತ್ರಿ ಕೂಟವಾದ ಇಂಡಿಯಾ ಮೈತ್ರಿಯಲ್ಲಿ ಸಿಪಿಐ (ಎಂ) ಪ್ರಮುಖ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂದು ಪಕ್ಷದ ನೂತರ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಹೇಳಿದ್ದು, ಮುಂಬರುವ ಚುನಾವಣೆಯಲ್ಲಿ ಕೇಂದ್ರದ ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಜೊತೆ ಪಕ್ಷವೂ ನಿಕಟವಾಗಿ ಕೆಲಸ ಮಾಡುತ್ತದೆ ಎಂದು ತಿಳಿಸಿದ್ದಾರೆ. ಇಂಡಿಯಾ ಮೈತ್ರಿ ಬಗ್ಗೆ

ಕಳೆದ ವಾರ ರಾಷ್ಟ್ರ ರಾಜಧಾನಿಯಲ್ಲಿ ಎಂ.ಎ. ಬೇಬಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವಿನ ಸಭೆಯಲ್ಲಿ ಈ ಸಂದೇಶವನ್ನು ರವಾನಿಸಲಾಗಿದೆ ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ. ಕಾಂಗ್ರೆಸ್ ಅಧ್ಯಕ್ಷರ ಜೊತೆಗಿನ ಭೇಟಿಯಂತೆ ಶೀಘ್ರದಲ್ಲೇ ಆಮ್ ಆದ್ಮಿ ಪಕ್ಷದ ನಾಯಕರು ಸೇರಿದಂತೆ ಇಂಡಿಯಾ ಮೈತ್ರಿಯ ಇತರ ಪಕ್ಷದ ಮುಖ್ಯಸ್ಥರನ್ನೂ ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಸಿಪಿಐ(ಎಂ)ನ ನೂತನ ಪ್ರಧಾನ ಕಾರ್ಯದರ್ಶಿ ಕಾಂಗ್ರೆಸ್ ಬಗ್ಗೆ ಹೇಗೆ ವರ್ತಿಸುತ್ತಾರೆ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲವಿದೆ. ಅದಾಗ್ಯೂ, ಬಿಜೆಪಿಯನ್ನು ಎದುರಿಸಲು ಮೈತ್ರಿಕೂಟವನ್ನು ಮತ್ತಷ್ಟು ಬಲಪಡಿಸಲು ಪಕ್ಷವು ತನ್ನ ದಿವಂಗತ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಮಾರ್ಗವನ್ನು ಮುಂದುವರಿಸುತ್ತದೆ ಎಂದು ಬೇಬಿ ಅವರು ಖರ್ಗೆಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏಪ್ರಿಲ್ ಮೊದಲ ವಾರದಲ್ಲಿ ಮಧುರೈನಲ್ಲಿ ನಡೆದ 24 ನೇ ಪಕ್ಷದ ಮಹಾ ಅಧಿವೇಶನದಲ್ಲಿ ಸಿಪಿಎಂನ ಉನ್ನತ ಹುದ್ದೆಗೆ ಕೇರಳದ ಮಾಜಿ ಸಚಿವರೂ ಆಗಿರುವ ಎಂ.ಎ. ಬೇಬಿ ಆಯ್ಕೆಯಾದ ನಂತರ ಕಾಂಗ್ರೆಸ್ ಅಧ್ಯಕ್ಷರೊಂದಿಗೆ ನಡೆದ ಮೊದಲ ಸಭೆ ಇದಾಗಿತ್ತು.

ತಡವಾಗಿ ಎಚ್ಚರಗೊಳ್ಳುವ ಬದಲು ಇಂಡಿಯಾ ಮೈತ್ರಿಯು ಚುನಾವಣೆಗೆ ಮುನ್ನ ಚುನಾವಣಾ ಕ್ರಮಕ್ಕೆ ಇಳಿಯಬೇಕು ಎಂದು ಸಿಪಿಎಂ ಅಭಿಪ್ರಾಯಪಟ್ಟಿದೆ ಎಂದು ವರದಿಯಾಗಿದೆ. “ಚುನಾವಣೆಗೆ ಸ್ವಲ್ಪ ಮೊದಲು ಕಾರ್ಯತಂತ್ರ ಮತ್ತು ಸಿದ್ಧತೆಗಳನ್ನು ಯೋಜಿಸಬಾರದು. ಅದನ್ನು ಬಹಳ ಮುಂಚಿತವಾಗಿಯೇ ಮಾಡಬೇಕು” ಎಂದು ಬೇಬಿ ಹೇಳಿದ್ದಾರೆ.

ಇಂಡಿಯಾ ಮೈತ್ರಿ ನಡುವಿನ ಸಮನ್ವಯದ ಕೊರತೆ, ಸುಸಂಬದ್ಧ ಕಾರ್ಯತಂತ್ರಗಳ ಅಗತ್ಯತೆ ಮತ್ತು ಭವಿಷ್ಯದ ಕ್ರಮಗಳ ರೂಪರೇಷೆಯ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ. “ಸಮನ್ವಯ ಸಮಿತಿ ಸಭೆಗಳು ನಡೆಯುತ್ತಿಲ್ಲ. ಇಂಡಿಯಾ ಮೈತ್ರಿ ಸಭೆ ಬಹಳ ಸಮಯದಿಂದ ನಡೆದಿಲ್ಲ. ಸಂಸತ್ತಿನಲ್ಲಿಯೂ ಹೆಚ್ಚಿನ ಸಮನ್ವಯವಿಲ್ಲ” ಎಂದು ಅವರು ಹೇಳಿದ್ದಾರೆ.

ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿನ ಮೈತ್ರಿ ಚರ್ಚೆಯಲ್ಲಿ ಪ್ರಮುಖ ಪಾತ್ರ ವಹಿಸಲಿಲ್ಲ ಎಂದು ನಾಯಕರೊಬ್ಬರು ಹೇಳಿದ್ದಾರೆ. ಸಿಪಿಎಂ ಮತ್ತು ಕಾಂಗ್ರೆಸ್ ಕೇರಳದಲ್ಲಿ ಮತ್ತು ಟಿಎಂಸಿ ಬಂಗಾಳದಲ್ಲಿ ಪರಸ್ಪರ ಸ್ಪರ್ಧಿಸುವಂತೆ ಪರಿಸ್ಥಿತಿ ಇರುತ್ತದೆ.

ಈ ಮಧ್ಯೆ ಬೇಬಿ ಅವರು ಭಾನುವಾರ ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ಭೇಟಿ ಮಾಡಿ ಮೈತ್ರಿ ಮತ್ತು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗಳ ಕುರಿತು ಚರ್ಚಿಸಿದ್ದಾರೆ. ಸಿಪಿಎಂ ಜೊತೆ ಡಿಎಂಕೆಯ ಬಾಂಧವ್ಯ ದೃಢವಾಗಿದೆ ಎಂದು ಸ್ಟಾಲಿನ್ ಪ್ರತಿಪಾದಿಸಿದ್ದಾರೆ. ಇಂಡಿಯಾ ಮೈತ್ರಿ ಬಗ್ಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸಾಮಾಜಿಕ ಮಾಧ್ಯಮದಲ್ಲಿ ಲೈಕ್ ಒತ್ತುವುದು ಹಂಚಿಕೆಗೆ ಸಮನಲ್ಲ..’; ವ್ಯಕ್ತಿ ವಿರುದ್ಧದ ಪ್ರಕರಣ ಕೈಬಿಟ್ಟ ನ್ಯಾಯಾಲಯ

‘ಸಾಮಾಜಿಕ ಮಾಧ್ಯಮದಲ್ಲಿ ಲೈಕ್ ಒತ್ತುವುದು ಹಂಚಿಕೆಗೆ ಸಮನಲ್ಲ..’; ವ್ಯಕ್ತಿ ವಿರುದ್ಧದ ಪ್ರಕರಣ ಕೈಬಿಟ್ಟ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...