Homeಮುಖಪುಟಪ್ರಜಾಪ್ರಭುತ್ವದಿಂದ ಚುನಾವಣಾ ನಿರಂಕುಶಾಧಿಕಾರದತ್ತ ಭಾರತ: ವಿ-ಡೆಮ್ ವರದಿ

ಪ್ರಜಾಪ್ರಭುತ್ವದಿಂದ ಚುನಾವಣಾ ನಿರಂಕುಶಾಧಿಕಾರದತ್ತ ಭಾರತ: ವಿ-ಡೆಮ್ ವರದಿ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಭಾರತವು ವಿಶ್ವದ ಅತ್ಯಂತ ‘ಕೆಟ್ಟ ನಿರಂಕುಶವಾದಿ’ಗಳಲ್ಲಿ ಒಂದಾಗಿದೆ ಎಂದು ಸ್ವೀಡನ್ ಮೂಲದ ವೆರೈಟೀಸ್ ಆಫ್ ಡೆಮಾಕ್ರಸಿ (ವಿ-ಡೆಮ್) ಇನ್‌ಸ್ಟಿಟ್ಯೂಟ್ ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ವಿ-ಡೆಮ್ ವಿವಿಧ ದೇಶಗಳ ‘ಪ್ರಜಾಪ್ರಭುತ್ವ ಮತ್ತು ನಿರಂಕುಶಾಧಿಕಾರ’ವನ್ನು ‘ಉದಾರ ಪ್ರಜಾಪ್ರಭುತ್ವ, ಚುನಾವಣಾ ಪ್ರಜಾಪ್ರಭುತ್ವ, ಚುನಾವಣಾ ನಿರಂಕುಶಪ್ರಭುತ್ವ ಮತ್ತು ಮುಚ್ಚಿದ ನಿರಂಕುಶಪ್ರಭುತ್ವ’ ಎಂಬ ನಾಲ್ಕು ವಿಭಾಗಗಳಾಗಿ ವರ್ಗೀಕರಿಸಿ ಅಧ್ಯಯನ ನಡೆಸಿದೆ. ಈ ಮೂಲಕ ದೇಶಗಳು ಯಾವ ಕಡೆ ವಾಲುತ್ತಿದೆ ಎಂದು ಅಂದಾಜಿಸಿದೆ.

“ಅಭಿವ್ಯಕ್ತಿ ಮತ್ತು ಸಂಘಟನಾ ಸ್ವಾತಂತ್ರ್ಯವಿಲ್ಲದ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ನಡೆಯದ ಕೇವಲ ಕಾರ್ಯಾಂಗಕ್ಕಾಗಿ ಬಹುಪಕ್ಷೀಯ ಚುನಾವಣೆಗಳು ಅಸ್ತಿತ್ವದಲ್ಲಿರುವುದನ್ನು ‘ಚುನಾವಣಾ ನಿರಂಕುಶಾಧಿಕಾರ’ ಎಂದು ವಿ-ಡೆಮ್ ವ್ಯಾಖ್ಯಾನಿಸಿದೆ.

ನಿರಂಕುಶಾಧಿಕಾರವು ಜಾಗತಿಕ ಮಟ್ಟದಲ್ಲಿ ಏರಿಕೆಯಾಗಿದ್ದು, ವಿಶ್ವದ ಶೇ. 35ರಷ್ಟು ಜನಸಂಖ್ಯೆಯನ್ನು ಹೊಂದಿರುವ 42 ದೇಶಗಳು ಹೊಸದಾಗಿ ಈ ಪ್ರವೃತ್ತಿಯನ್ನು ಅನುಭವಿಸುತ್ತಿವೆ. ಏರಿಕೆಯಾಗುತ್ತಿರುವ ನಿರಂಕುಶಾಧಿಕಾರ ವಿದ್ಯಮಾನಕ್ಕೆ ಜಗತ್ತಿನ ಜನಸಂಖ್ಯೆಯ ಪೈಕಿ ಶೇ. 18ರಷ್ಟು ಜನಸಂಖ್ಯೆ ಹೊಂದಿರುವ ಭಾರತವು ಗಮನಾರ್ಹ ಕೊಡುಗೆ ನೀಡಿರುವುದು ವಿ-ಡೆಮ್ ವರದಿಯಲ್ಲಿ ಬೆಳಕಿಗೆ ಬಂದಿದೆ. ಈ ಹಿಂದೆ ಪ್ರಜಾಪ್ರಭುತ್ವ ದೇಶ ಎಂದು ಗುರುತಿಸಿಕೊಂಡಿದ್ದ ಭಾರತವು 2018ರಲ್ಲಿ ಚುನಾವಣಾ ನಿರಂಕುಶಾಧಿಕಾರವಾಗಿ ರೂಪಾಂತರಗೊಂಡಿದೆ ಹಾಗೂ 2023ರ ಕೊನೆಗೂ ಈ ಪ್ರವೃತ್ತಿ ಮುಂದುವರಿದಿದೆ ಎಂಬುದರತ್ತ ವರದಿಯು ಬೊಟ್ಟು ಮಾಡಿದೆ.

ಭಾರತದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಟೀಕಾಕಾರರ ಬಾಯಿ ಮುಚ್ಚಿಸಲು ದೇಶದ್ರೋಹ, ಮಾನನಷ್ಟ ಮತ್ತು ಭಯೋತ್ಪಾದನೆ ನಿಗ್ರಹದಂತಹ ಕಾನೂನುಗಳನ್ನು ಬಳಸಿದೆ ವರದಿ ತಿಳಿಸಿದೆ.

ಬಿಜೆಪಿ ಸರ್ಕಾರವು 2019ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಗೆ ತಿದ್ದುಪಡಿ ತರುವ ಮೂಲಕ ‘ಜಾತ್ಯತೀತತೆಯ ಸಂವಿಧಾನಿಕ ಬದ್ಧತೆ’ಯನ್ನು ದುರ್ಬಲಗೊಳಿಸಿದೆ. 2019ರ ತಿದ್ದುಪಡಿಯು ಕೇಂದ್ರ ಸರ್ಕಾರಕ್ಕೆ ವ್ಯಕ್ತಿಗಳನ್ನು ‘ಭಯೋತ್ಪಾದಕರು’ ಎಂದು ಗುರುತಿಸಲು ಅವಕಾಶ ಮಾಡಿಕೊಟ್ಟಿದೆ. ಇದು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳಿಗೆ ಪ್ರಕರಣಗಳನ್ನು ತನಿಖೆ ಮಾಡಲು ಅಧಿಕಾರ ನೀಡಿದೆ ಎಂದು ವರದಿ ಹೇಳಿದೆ.

ಮಾಧ್ಯಮಗಳನ್ನು ಸೆನ್ಸಾರ್ ಮಾಡುವಂತಹ ಪ್ರಯತ್ನಗಳ ಮೂಲಕ ಅತ್ಯಂತ ಕೆಟ್ಟ ಸರ್ಕಾರಿ ಅಪರಾಧಿಗಳನ್ನು ಎಸಗುತ್ತಿರುವ ರಾಷ್ಟ್ರಗಳಾದ ಎಲ್ ಸಾಲ್ವಡಾರ್ ಮತ್ತು ಮಾರಿಷಸ್‌ಗಳ ಪಟ್ಟಿಯಲ್ಲಿ ಭಾರತ ಸೇರುತ್ತಿದೆ. ಭಾರತ ಸರ್ಕಾರ ಧಾರ್ಮಿಕ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು, ರಾಜಕೀಯ ವಿರೋಧಿಗಳು ಮತ್ತು ಸರ್ಕಾರದ ನೀತಿಗಳ ವಿರುದ್ದ ಪ್ರತಿಭಟಿಸುವ ಜನರನ್ನು ಬೆದರಿಸುವುದು, ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಭಿನ್ನಾಭಿಪ್ರಾಯಗಳನ್ನು ಮೌನಗೊಳಿಸುತ್ತಿದೆ ಎಂದು ವರದಿ ತಿಳಿಸಿದೆ.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮೂರನೇ ಬಾರಿಗೆ ಗೆಲ್ಲುವ ನಿರೀಕ್ಷೆಯಿದೆ. ಮೋದಿಯವರ ನಾಯಕತ್ವದಲ್ಲಿ ಈಗಾಗಲೇ ಗಣನೀಯ ಪ್ರಮಾಣದ ಪ್ರಜಾಪ್ರಭುತ್ವದ ಅವನತಿಯಾಗುತ್ತಿದೆ. ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ನಾಗರಿಕ ಸಮಾಜದ ಮೇಲೆ ನಡೆಯುತ್ತಿರುವ ನಿರಂತರ ದಬ್ಬಾಳಿಕೆಯನ್ನು ಗಮನಿಸಿದರೆ, ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬಹುದು ಎಂದು ವರದಿ ಅಭಿಪ್ರಾಯಪಟ್ಟಿದೆ.

2023ರ ವಿ-ಡೆಮ್ ಇನ್‌ಸ್ಟಿಟ್ಯೂಟ್‌ನ ಲಿಬರಲ್ ಡೆಮಾಕ್ರಸಿ ಇಂಡೆಕ್ಸ್‌ನಲ್ಲಿ ಸಮೀಕ್ಷೆ ಮಾಡಲಾದ 179 ದೇಶಗಳಲ್ಲಿ ಭಾರತವು 104 ನೇ ಸ್ಥಾನದಲ್ಲಿದೆ. ಈ ಸೂಚ್ಯಂಕವನ್ನು “ಉದಾರ ಪ್ರಜಾಪ್ರಭುತ್ವ ಮತ್ತು ಚುನಾವಣಾ ಪ್ರಜಾಪ್ರಭುತ್ವ’ ಈ ಎರಡೂ ಅಂಶಗಳ ಮೂಲಕ ಅಳೆಯಲಾಗಿದೆ. ಉದಾರ ಪ್ರಜಾಪ್ರಭುತ್ವ ಮತ್ತು ಚುನಾವಣಾ ಪ್ರಜಾಪ್ರಭುತ್ವದ ಒಳಗೆ 71 ಉಪ ವರ್ಗೀಕರಣಗಳನ್ನು ಮಾಡಿ ಸಮೀಕ್ಷೆ ನಡೆಸಲಾಗಿದೆ.

ವಿ-ಡೆಮ್ ಇನ್ಸ್‌ಟ್ಯೂಟ್‌ನ ಈ ವರ್ಷದ ವರದಿಯ ಬಗ್ಗೆ ಭಾರತ ಸರ್ಕಾರ ಅಥವಾ ವಿದೇಶಾಂಗ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, 2021ರಲ್ಲಿ ವಿ-ಡೆಮ್ ಮತ್ತು ಯುಎಸ್ ಮೂಲದ ಸರ್ಕಾರೇತರ ಸಂಸ್ಥೆ ಫ್ರೀಡಂ ಹೌಸ್ “ಭಾರತದಲ್ಲಿ ಪ್ರಜಾಪ್ರಭುತ್ವ ಕುಸಿಯುತ್ತಿದೆ” ಎಂದು ವರದಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿದೇಶಾಂಗ ಸಚಿವ ಎಸ್‌. ಜೈಶಂಕರ್, “ಸ್ವಯಂ ಘೋಷಿತ ಜಾಗತಿಕ ಪಾಲಕರಿಂದ ದೇಶಕ್ಕೆ ಅನುಮೋದನೆ ಅಥವಾ ನೈತಿಕ ಉಪದೇಶದ ಅಗತ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ : ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...