Homeಮುಖಪುಟಪ್ರಜಾಪ್ರಭುತ್ವದಿಂದ ಚುನಾವಣಾ ನಿರಂಕುಶಾಧಿಕಾರದತ್ತ ಭಾರತ: ವಿ-ಡೆಮ್ ವರದಿ

ಪ್ರಜಾಪ್ರಭುತ್ವದಿಂದ ಚುನಾವಣಾ ನಿರಂಕುಶಾಧಿಕಾರದತ್ತ ಭಾರತ: ವಿ-ಡೆಮ್ ವರದಿ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಭಾರತವು ವಿಶ್ವದ ಅತ್ಯಂತ ‘ಕೆಟ್ಟ ನಿರಂಕುಶವಾದಿ’ಗಳಲ್ಲಿ ಒಂದಾಗಿದೆ ಎಂದು ಸ್ವೀಡನ್ ಮೂಲದ ವೆರೈಟೀಸ್ ಆಫ್ ಡೆಮಾಕ್ರಸಿ (ವಿ-ಡೆಮ್) ಇನ್‌ಸ್ಟಿಟ್ಯೂಟ್ ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ವಿ-ಡೆಮ್ ವಿವಿಧ ದೇಶಗಳ ‘ಪ್ರಜಾಪ್ರಭುತ್ವ ಮತ್ತು ನಿರಂಕುಶಾಧಿಕಾರ’ವನ್ನು ‘ಉದಾರ ಪ್ರಜಾಪ್ರಭುತ್ವ, ಚುನಾವಣಾ ಪ್ರಜಾಪ್ರಭುತ್ವ, ಚುನಾವಣಾ ನಿರಂಕುಶಪ್ರಭುತ್ವ ಮತ್ತು ಮುಚ್ಚಿದ ನಿರಂಕುಶಪ್ರಭುತ್ವ’ ಎಂಬ ನಾಲ್ಕು ವಿಭಾಗಗಳಾಗಿ ವರ್ಗೀಕರಿಸಿ ಅಧ್ಯಯನ ನಡೆಸಿದೆ. ಈ ಮೂಲಕ ದೇಶಗಳು ಯಾವ ಕಡೆ ವಾಲುತ್ತಿದೆ ಎಂದು ಅಂದಾಜಿಸಿದೆ.

“ಅಭಿವ್ಯಕ್ತಿ ಮತ್ತು ಸಂಘಟನಾ ಸ್ವಾತಂತ್ರ್ಯವಿಲ್ಲದ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ನಡೆಯದ ಕೇವಲ ಕಾರ್ಯಾಂಗಕ್ಕಾಗಿ ಬಹುಪಕ್ಷೀಯ ಚುನಾವಣೆಗಳು ಅಸ್ತಿತ್ವದಲ್ಲಿರುವುದನ್ನು ‘ಚುನಾವಣಾ ನಿರಂಕುಶಾಧಿಕಾರ’ ಎಂದು ವಿ-ಡೆಮ್ ವ್ಯಾಖ್ಯಾನಿಸಿದೆ.

ನಿರಂಕುಶಾಧಿಕಾರವು ಜಾಗತಿಕ ಮಟ್ಟದಲ್ಲಿ ಏರಿಕೆಯಾಗಿದ್ದು, ವಿಶ್ವದ ಶೇ. 35ರಷ್ಟು ಜನಸಂಖ್ಯೆಯನ್ನು ಹೊಂದಿರುವ 42 ದೇಶಗಳು ಹೊಸದಾಗಿ ಈ ಪ್ರವೃತ್ತಿಯನ್ನು ಅನುಭವಿಸುತ್ತಿವೆ. ಏರಿಕೆಯಾಗುತ್ತಿರುವ ನಿರಂಕುಶಾಧಿಕಾರ ವಿದ್ಯಮಾನಕ್ಕೆ ಜಗತ್ತಿನ ಜನಸಂಖ್ಯೆಯ ಪೈಕಿ ಶೇ. 18ರಷ್ಟು ಜನಸಂಖ್ಯೆ ಹೊಂದಿರುವ ಭಾರತವು ಗಮನಾರ್ಹ ಕೊಡುಗೆ ನೀಡಿರುವುದು ವಿ-ಡೆಮ್ ವರದಿಯಲ್ಲಿ ಬೆಳಕಿಗೆ ಬಂದಿದೆ. ಈ ಹಿಂದೆ ಪ್ರಜಾಪ್ರಭುತ್ವ ದೇಶ ಎಂದು ಗುರುತಿಸಿಕೊಂಡಿದ್ದ ಭಾರತವು 2018ರಲ್ಲಿ ಚುನಾವಣಾ ನಿರಂಕುಶಾಧಿಕಾರವಾಗಿ ರೂಪಾಂತರಗೊಂಡಿದೆ ಹಾಗೂ 2023ರ ಕೊನೆಗೂ ಈ ಪ್ರವೃತ್ತಿ ಮುಂದುವರಿದಿದೆ ಎಂಬುದರತ್ತ ವರದಿಯು ಬೊಟ್ಟು ಮಾಡಿದೆ.

ಭಾರತದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಟೀಕಾಕಾರರ ಬಾಯಿ ಮುಚ್ಚಿಸಲು ದೇಶದ್ರೋಹ, ಮಾನನಷ್ಟ ಮತ್ತು ಭಯೋತ್ಪಾದನೆ ನಿಗ್ರಹದಂತಹ ಕಾನೂನುಗಳನ್ನು ಬಳಸಿದೆ ವರದಿ ತಿಳಿಸಿದೆ.

ಬಿಜೆಪಿ ಸರ್ಕಾರವು 2019ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಗೆ ತಿದ್ದುಪಡಿ ತರುವ ಮೂಲಕ ‘ಜಾತ್ಯತೀತತೆಯ ಸಂವಿಧಾನಿಕ ಬದ್ಧತೆ’ಯನ್ನು ದುರ್ಬಲಗೊಳಿಸಿದೆ. 2019ರ ತಿದ್ದುಪಡಿಯು ಕೇಂದ್ರ ಸರ್ಕಾರಕ್ಕೆ ವ್ಯಕ್ತಿಗಳನ್ನು ‘ಭಯೋತ್ಪಾದಕರು’ ಎಂದು ಗುರುತಿಸಲು ಅವಕಾಶ ಮಾಡಿಕೊಟ್ಟಿದೆ. ಇದು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳಿಗೆ ಪ್ರಕರಣಗಳನ್ನು ತನಿಖೆ ಮಾಡಲು ಅಧಿಕಾರ ನೀಡಿದೆ ಎಂದು ವರದಿ ಹೇಳಿದೆ.

ಮಾಧ್ಯಮಗಳನ್ನು ಸೆನ್ಸಾರ್ ಮಾಡುವಂತಹ ಪ್ರಯತ್ನಗಳ ಮೂಲಕ ಅತ್ಯಂತ ಕೆಟ್ಟ ಸರ್ಕಾರಿ ಅಪರಾಧಿಗಳನ್ನು ಎಸಗುತ್ತಿರುವ ರಾಷ್ಟ್ರಗಳಾದ ಎಲ್ ಸಾಲ್ವಡಾರ್ ಮತ್ತು ಮಾರಿಷಸ್‌ಗಳ ಪಟ್ಟಿಯಲ್ಲಿ ಭಾರತ ಸೇರುತ್ತಿದೆ. ಭಾರತ ಸರ್ಕಾರ ಧಾರ್ಮಿಕ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು, ರಾಜಕೀಯ ವಿರೋಧಿಗಳು ಮತ್ತು ಸರ್ಕಾರದ ನೀತಿಗಳ ವಿರುದ್ದ ಪ್ರತಿಭಟಿಸುವ ಜನರನ್ನು ಬೆದರಿಸುವುದು, ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಭಿನ್ನಾಭಿಪ್ರಾಯಗಳನ್ನು ಮೌನಗೊಳಿಸುತ್ತಿದೆ ಎಂದು ವರದಿ ತಿಳಿಸಿದೆ.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮೂರನೇ ಬಾರಿಗೆ ಗೆಲ್ಲುವ ನಿರೀಕ್ಷೆಯಿದೆ. ಮೋದಿಯವರ ನಾಯಕತ್ವದಲ್ಲಿ ಈಗಾಗಲೇ ಗಣನೀಯ ಪ್ರಮಾಣದ ಪ್ರಜಾಪ್ರಭುತ್ವದ ಅವನತಿಯಾಗುತ್ತಿದೆ. ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ನಾಗರಿಕ ಸಮಾಜದ ಮೇಲೆ ನಡೆಯುತ್ತಿರುವ ನಿರಂತರ ದಬ್ಬಾಳಿಕೆಯನ್ನು ಗಮನಿಸಿದರೆ, ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬಹುದು ಎಂದು ವರದಿ ಅಭಿಪ್ರಾಯಪಟ್ಟಿದೆ.

2023ರ ವಿ-ಡೆಮ್ ಇನ್‌ಸ್ಟಿಟ್ಯೂಟ್‌ನ ಲಿಬರಲ್ ಡೆಮಾಕ್ರಸಿ ಇಂಡೆಕ್ಸ್‌ನಲ್ಲಿ ಸಮೀಕ್ಷೆ ಮಾಡಲಾದ 179 ದೇಶಗಳಲ್ಲಿ ಭಾರತವು 104 ನೇ ಸ್ಥಾನದಲ್ಲಿದೆ. ಈ ಸೂಚ್ಯಂಕವನ್ನು “ಉದಾರ ಪ್ರಜಾಪ್ರಭುತ್ವ ಮತ್ತು ಚುನಾವಣಾ ಪ್ರಜಾಪ್ರಭುತ್ವ’ ಈ ಎರಡೂ ಅಂಶಗಳ ಮೂಲಕ ಅಳೆಯಲಾಗಿದೆ. ಉದಾರ ಪ್ರಜಾಪ್ರಭುತ್ವ ಮತ್ತು ಚುನಾವಣಾ ಪ್ರಜಾಪ್ರಭುತ್ವದ ಒಳಗೆ 71 ಉಪ ವರ್ಗೀಕರಣಗಳನ್ನು ಮಾಡಿ ಸಮೀಕ್ಷೆ ನಡೆಸಲಾಗಿದೆ.

ವಿ-ಡೆಮ್ ಇನ್ಸ್‌ಟ್ಯೂಟ್‌ನ ಈ ವರ್ಷದ ವರದಿಯ ಬಗ್ಗೆ ಭಾರತ ಸರ್ಕಾರ ಅಥವಾ ವಿದೇಶಾಂಗ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, 2021ರಲ್ಲಿ ವಿ-ಡೆಮ್ ಮತ್ತು ಯುಎಸ್ ಮೂಲದ ಸರ್ಕಾರೇತರ ಸಂಸ್ಥೆ ಫ್ರೀಡಂ ಹೌಸ್ “ಭಾರತದಲ್ಲಿ ಪ್ರಜಾಪ್ರಭುತ್ವ ಕುಸಿಯುತ್ತಿದೆ” ಎಂದು ವರದಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿದೇಶಾಂಗ ಸಚಿವ ಎಸ್‌. ಜೈಶಂಕರ್, “ಸ್ವಯಂ ಘೋಷಿತ ಜಾಗತಿಕ ಪಾಲಕರಿಂದ ದೇಶಕ್ಕೆ ಅನುಮೋದನೆ ಅಥವಾ ನೈತಿಕ ಉಪದೇಶದ ಅಗತ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ : ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...