Homeಮುಖಪುಟಪ್ರಜಾಪ್ರಭುತ್ವದಿಂದ ಚುನಾವಣಾ ನಿರಂಕುಶಾಧಿಕಾರದತ್ತ ಭಾರತ: ವಿ-ಡೆಮ್ ವರದಿ

ಪ್ರಜಾಪ್ರಭುತ್ವದಿಂದ ಚುನಾವಣಾ ನಿರಂಕುಶಾಧಿಕಾರದತ್ತ ಭಾರತ: ವಿ-ಡೆಮ್ ವರದಿ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಭಾರತವು ವಿಶ್ವದ ಅತ್ಯಂತ ‘ಕೆಟ್ಟ ನಿರಂಕುಶವಾದಿ’ಗಳಲ್ಲಿ ಒಂದಾಗಿದೆ ಎಂದು ಸ್ವೀಡನ್ ಮೂಲದ ವೆರೈಟೀಸ್ ಆಫ್ ಡೆಮಾಕ್ರಸಿ (ವಿ-ಡೆಮ್) ಇನ್‌ಸ್ಟಿಟ್ಯೂಟ್ ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.

ವಿ-ಡೆಮ್ ವಿವಿಧ ದೇಶಗಳ ‘ಪ್ರಜಾಪ್ರಭುತ್ವ ಮತ್ತು ನಿರಂಕುಶಾಧಿಕಾರ’ವನ್ನು ‘ಉದಾರ ಪ್ರಜಾಪ್ರಭುತ್ವ, ಚುನಾವಣಾ ಪ್ರಜಾಪ್ರಭುತ್ವ, ಚುನಾವಣಾ ನಿರಂಕುಶಪ್ರಭುತ್ವ ಮತ್ತು ಮುಚ್ಚಿದ ನಿರಂಕುಶಪ್ರಭುತ್ವ’ ಎಂಬ ನಾಲ್ಕು ವಿಭಾಗಗಳಾಗಿ ವರ್ಗೀಕರಿಸಿ ಅಧ್ಯಯನ ನಡೆಸಿದೆ. ಈ ಮೂಲಕ ದೇಶಗಳು ಯಾವ ಕಡೆ ವಾಲುತ್ತಿದೆ ಎಂದು ಅಂದಾಜಿಸಿದೆ.

“ಅಭಿವ್ಯಕ್ತಿ ಮತ್ತು ಸಂಘಟನಾ ಸ್ವಾತಂತ್ರ್ಯವಿಲ್ಲದ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳು ನಡೆಯದ ಕೇವಲ ಕಾರ್ಯಾಂಗಕ್ಕಾಗಿ ಬಹುಪಕ್ಷೀಯ ಚುನಾವಣೆಗಳು ಅಸ್ತಿತ್ವದಲ್ಲಿರುವುದನ್ನು ‘ಚುನಾವಣಾ ನಿರಂಕುಶಾಧಿಕಾರ’ ಎಂದು ವಿ-ಡೆಮ್ ವ್ಯಾಖ್ಯಾನಿಸಿದೆ.

ನಿರಂಕುಶಾಧಿಕಾರವು ಜಾಗತಿಕ ಮಟ್ಟದಲ್ಲಿ ಏರಿಕೆಯಾಗಿದ್ದು, ವಿಶ್ವದ ಶೇ. 35ರಷ್ಟು ಜನಸಂಖ್ಯೆಯನ್ನು ಹೊಂದಿರುವ 42 ದೇಶಗಳು ಹೊಸದಾಗಿ ಈ ಪ್ರವೃತ್ತಿಯನ್ನು ಅನುಭವಿಸುತ್ತಿವೆ. ಏರಿಕೆಯಾಗುತ್ತಿರುವ ನಿರಂಕುಶಾಧಿಕಾರ ವಿದ್ಯಮಾನಕ್ಕೆ ಜಗತ್ತಿನ ಜನಸಂಖ್ಯೆಯ ಪೈಕಿ ಶೇ. 18ರಷ್ಟು ಜನಸಂಖ್ಯೆ ಹೊಂದಿರುವ ಭಾರತವು ಗಮನಾರ್ಹ ಕೊಡುಗೆ ನೀಡಿರುವುದು ವಿ-ಡೆಮ್ ವರದಿಯಲ್ಲಿ ಬೆಳಕಿಗೆ ಬಂದಿದೆ. ಈ ಹಿಂದೆ ಪ್ರಜಾಪ್ರಭುತ್ವ ದೇಶ ಎಂದು ಗುರುತಿಸಿಕೊಂಡಿದ್ದ ಭಾರತವು 2018ರಲ್ಲಿ ಚುನಾವಣಾ ನಿರಂಕುಶಾಧಿಕಾರವಾಗಿ ರೂಪಾಂತರಗೊಂಡಿದೆ ಹಾಗೂ 2023ರ ಕೊನೆಗೂ ಈ ಪ್ರವೃತ್ತಿ ಮುಂದುವರಿದಿದೆ ಎಂಬುದರತ್ತ ವರದಿಯು ಬೊಟ್ಟು ಮಾಡಿದೆ.

ಭಾರತದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಟೀಕಾಕಾರರ ಬಾಯಿ ಮುಚ್ಚಿಸಲು ದೇಶದ್ರೋಹ, ಮಾನನಷ್ಟ ಮತ್ತು ಭಯೋತ್ಪಾದನೆ ನಿಗ್ರಹದಂತಹ ಕಾನೂನುಗಳನ್ನು ಬಳಸಿದೆ ವರದಿ ತಿಳಿಸಿದೆ.

ಬಿಜೆಪಿ ಸರ್ಕಾರವು 2019ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಗೆ ತಿದ್ದುಪಡಿ ತರುವ ಮೂಲಕ ‘ಜಾತ್ಯತೀತತೆಯ ಸಂವಿಧಾನಿಕ ಬದ್ಧತೆ’ಯನ್ನು ದುರ್ಬಲಗೊಳಿಸಿದೆ. 2019ರ ತಿದ್ದುಪಡಿಯು ಕೇಂದ್ರ ಸರ್ಕಾರಕ್ಕೆ ವ್ಯಕ್ತಿಗಳನ್ನು ‘ಭಯೋತ್ಪಾದಕರು’ ಎಂದು ಗುರುತಿಸಲು ಅವಕಾಶ ಮಾಡಿಕೊಟ್ಟಿದೆ. ಇದು ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳಿಗೆ ಪ್ರಕರಣಗಳನ್ನು ತನಿಖೆ ಮಾಡಲು ಅಧಿಕಾರ ನೀಡಿದೆ ಎಂದು ವರದಿ ಹೇಳಿದೆ.

ಮಾಧ್ಯಮಗಳನ್ನು ಸೆನ್ಸಾರ್ ಮಾಡುವಂತಹ ಪ್ರಯತ್ನಗಳ ಮೂಲಕ ಅತ್ಯಂತ ಕೆಟ್ಟ ಸರ್ಕಾರಿ ಅಪರಾಧಿಗಳನ್ನು ಎಸಗುತ್ತಿರುವ ರಾಷ್ಟ್ರಗಳಾದ ಎಲ್ ಸಾಲ್ವಡಾರ್ ಮತ್ತು ಮಾರಿಷಸ್‌ಗಳ ಪಟ್ಟಿಯಲ್ಲಿ ಭಾರತ ಸೇರುತ್ತಿದೆ. ಭಾರತ ಸರ್ಕಾರ ಧಾರ್ಮಿಕ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು, ರಾಜಕೀಯ ವಿರೋಧಿಗಳು ಮತ್ತು ಸರ್ಕಾರದ ನೀತಿಗಳ ವಿರುದ್ದ ಪ್ರತಿಭಟಿಸುವ ಜನರನ್ನು ಬೆದರಿಸುವುದು, ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಭಿನ್ನಾಭಿಪ್ರಾಯಗಳನ್ನು ಮೌನಗೊಳಿಸುತ್ತಿದೆ ಎಂದು ವರದಿ ತಿಳಿಸಿದೆ.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮೂರನೇ ಬಾರಿಗೆ ಗೆಲ್ಲುವ ನಿರೀಕ್ಷೆಯಿದೆ. ಮೋದಿಯವರ ನಾಯಕತ್ವದಲ್ಲಿ ಈಗಾಗಲೇ ಗಣನೀಯ ಪ್ರಮಾಣದ ಪ್ರಜಾಪ್ರಭುತ್ವದ ಅವನತಿಯಾಗುತ್ತಿದೆ. ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ನಾಗರಿಕ ಸಮಾಜದ ಮೇಲೆ ನಡೆಯುತ್ತಿರುವ ನಿರಂತರ ದಬ್ಬಾಳಿಕೆಯನ್ನು ಗಮನಿಸಿದರೆ, ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬಹುದು ಎಂದು ವರದಿ ಅಭಿಪ್ರಾಯಪಟ್ಟಿದೆ.

2023ರ ವಿ-ಡೆಮ್ ಇನ್‌ಸ್ಟಿಟ್ಯೂಟ್‌ನ ಲಿಬರಲ್ ಡೆಮಾಕ್ರಸಿ ಇಂಡೆಕ್ಸ್‌ನಲ್ಲಿ ಸಮೀಕ್ಷೆ ಮಾಡಲಾದ 179 ದೇಶಗಳಲ್ಲಿ ಭಾರತವು 104 ನೇ ಸ್ಥಾನದಲ್ಲಿದೆ. ಈ ಸೂಚ್ಯಂಕವನ್ನು “ಉದಾರ ಪ್ರಜಾಪ್ರಭುತ್ವ ಮತ್ತು ಚುನಾವಣಾ ಪ್ರಜಾಪ್ರಭುತ್ವ’ ಈ ಎರಡೂ ಅಂಶಗಳ ಮೂಲಕ ಅಳೆಯಲಾಗಿದೆ. ಉದಾರ ಪ್ರಜಾಪ್ರಭುತ್ವ ಮತ್ತು ಚುನಾವಣಾ ಪ್ರಜಾಪ್ರಭುತ್ವದ ಒಳಗೆ 71 ಉಪ ವರ್ಗೀಕರಣಗಳನ್ನು ಮಾಡಿ ಸಮೀಕ್ಷೆ ನಡೆಸಲಾಗಿದೆ.

ವಿ-ಡೆಮ್ ಇನ್ಸ್‌ಟ್ಯೂಟ್‌ನ ಈ ವರ್ಷದ ವರದಿಯ ಬಗ್ಗೆ ಭಾರತ ಸರ್ಕಾರ ಅಥವಾ ವಿದೇಶಾಂಗ ಇಲಾಖೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, 2021ರಲ್ಲಿ ವಿ-ಡೆಮ್ ಮತ್ತು ಯುಎಸ್ ಮೂಲದ ಸರ್ಕಾರೇತರ ಸಂಸ್ಥೆ ಫ್ರೀಡಂ ಹೌಸ್ “ಭಾರತದಲ್ಲಿ ಪ್ರಜಾಪ್ರಭುತ್ವ ಕುಸಿಯುತ್ತಿದೆ” ಎಂದು ವರದಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ವಿದೇಶಾಂಗ ಸಚಿವ ಎಸ್‌. ಜೈಶಂಕರ್, “ಸ್ವಯಂ ಘೋಷಿತ ಜಾಗತಿಕ ಪಾಲಕರಿಂದ ದೇಶಕ್ಕೆ ಅನುಮೋದನೆ ಅಥವಾ ನೈತಿಕ ಉಪದೇಶದ ಅಗತ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ : ಜಮ್ಮು ಕಾಶ್ಮೀರಕ್ಕೆ ಮೋದಿ ಭೇಟಿ ವೇಳೆ ವಿದೇಶಿ ಮಾಧ್ಯಮಗಳ ಪತ್ರಕರ್ತರನ್ನು ಹೊರಗಿಟ್ಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...