Homeಮುಖಪುಟಭಾರತ: 2021 ರಲ್ಲಿ ಪ್ರತಿದಿನ ಸರಾಸರಿ 86 ‘ಅತ್ಯಾಚಾರ’ ಪ್ರಕರಣಗಳು ದಾಖಲು!

ಭಾರತ: 2021 ರಲ್ಲಿ ಪ್ರತಿದಿನ ಸರಾಸರಿ 86 ‘ಅತ್ಯಾಚಾರ’ ಪ್ರಕರಣಗಳು ದಾಖಲು!

ಕಳೆದ ವರ್ಷದ ದೇಶದ ಪ್ರತಿ ಲಕ್ಷ ಮಹಿಳೆಯರಲ್ಲಿ ಸರಾಸರಿ 5 ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ

- Advertisement -
- Advertisement -

2021 ರಲ್ಲಿ ಪ್ರತಿದಿನ ಸರಾಸರಿ 86 ಅತ್ಯಾಚಾರ ಪ್ರಕರಣಗಳು ಭಾರತದಲ್ಲಿ ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿ ಹೇಳಿದೆ. ಇಷ್ಟೆ ಅಲ್ಲದೆ, ಪ್ರತಿ ಗಂಟೆಗೆ ದೇಶದ 49 ಮಹಿಳೆಯರ ವಿರುದ್ಧ ಅಪರಾಧಗಳು ಕಳೆದ ವರ್ಷ ನಡೆದಿತ್ತು ಎಂದು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿರುವ ಇತ್ತೀಚೆಗಿನ ಅಂಕಿಅಂಶಗಳ ವರದಿ ಹೇಳಿವೆ.

2021 ರಲ್ಲಿ 31,677 ಅತ್ಯಾಚಾರ ಪ್ರಕರಣಗಳು ಭಾರತದಲ್ಲಿ ದಾಖಲಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಹೇಳಿದೆ. 2019 ರಲ್ಲಿ 32,033 ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ದಾಖಲಾಗಿದ್ದು, 2020 ರಲ್ಲಿ 28,046 ಪ್ರಕರಣಗಳು ದಾಖಲಾಗಿದೆ ಎಂದು ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ‘ಕ್ರೈಮ್ ಇನ್ ಇಂಡಿಯಾ 2021’ ವರದಿ ತೋರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳು 2020 ಕ್ಕಿಂತ 2021 ರಲ್ಲಿ 15% ದಷ್ಟು ಹೆಚ್ಚಾಗಿದೆ ಎಂದು ಎನ್‌ಸಿಆರ್‌ಬಿ ಅಂಕಿಅಂಶಗಳು ಹೇಳಿದೆ. ಈ ಬ್ಯೂರೋ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ಅತ್ಯಾಚಾರ ಪ್ರಕರಣಗಳು ದಾಖಲಾಗಿರುವ ರಾಜ್ಯಗಳ ಪೈಕಿ ರಾಜಸ್ಥಾನ (6,337) ಅಗ್ರಸ್ಥಾನದಲ್ಲಿದ್ದರೆ, ಮಧ್ಯಪ್ರದೇಶ (2,947), ಮಹಾರಾಷ್ಟ್ರ (2,496) ಮತ್ತು ಉತ್ತರ ಪ್ರದೇಶ (2,845) ಮತ್ತು ದೆಹಲಿಯಲ್ಲಿ 1,250 ಅತ್ಯಾಚಾರ ಪ್ರಕರಣಗಳು 2021 ರಲ್ಲಿ ದಾಖಲಾಗಿವೆ ಎಂದು ಎನ್‌ಸಿಆರ್‌ಬಿ ತೋರಿಸಿದೆ.

ಅತ್ಯಾಚಾರದ ಅಪರಾಧದ ಪ್ರಮಾಣ (ಪ್ರತಿ ಲಕ್ಷ ಜನಸಂಖ್ಯೆಗೆ) ರಾಜಸ್ಥಾನ (16.4) ನಂತರ ಚಂಡೀಗಢ (13.3), ದೆಹಲಿ (12.9), ಹರಿಯಾಣ (12.3) ಮತ್ತು ಅರುಣಾಚಲ ಪ್ರದೇಶ (11.1) ದಲ್ಲಿ ದಾಖಲಾಗಿದೆ. ಎನ್‌ಸಿಆರ್‌ಬಿ ಪ್ರಕಾರ ಅಖಿಲ ಭಾರತ ಸರಾಸರಿ ದರವು 4.8 ರಷ್ಟಿದೆ. ಅಂದರೆ ಕಳೆದ ವರ್ಷದ ದೇಶದ ಪ್ರತಿ ಲಕ್ಷ ಮಹಿಳೆಯರಲ್ಲಿ ಸರಾಸರಿ 5 ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: 3ನೇ ಸ್ಥಾನ: ಮಹಿಳೆಯರಿಗೆ ಅಸುರಕ್ಷಿತ ಮೆಟ್ರೋಪಾಲಿಟನ್ ನಗರವಾಗಿ ಬೆಂಗಳೂರು

2021 ರಲ್ಲಿ ದೇಶದಾದ್ಯಂತ ‘ಮಹಿಳೆಯರ ವಿರುದ್ಧದ ಅಪರಾಧಗಳ’ ಒಟ್ಟಾರೆ 4.28 ಲಕ್ಷ ಪ್ರಕರಣಗಳನ್ನು ದಾಖಲಿಸಲಾಗಿದೆ. 2019 ರಲ್ಲಿ 4.05 ಅಪರಾಧಗಳು ದಾಖಲಾಗಿದ್ದರೆ, 2020 ರಲ್ಲಿ 3.71 ಲಕ್ಷ ಅಪರಾಧಗಳು ಮಹಿಳೆಯರ ವಿರುದ್ಧ ನಡೆದಿತ್ತು.

2021 ರಲ್ಲಿ ಪ್ರತಿ ಒಂದು ಲಕ್ಷ ಮಹಿಳಾ ಜನಸಂಖ್ಯೆಯಲ್ಲಿ 64.5 ಮಹಿಳೆಯರ ಮೇಲೆ ಅಪರಾಧಗಳು ದಾಖಲಾಗಿವೆ. ಈ ರೀತಿ ದಾಖಲಾದ ಅಪರಾಧಗಳಲ್ಲಿ 77.1% ಅಪರಾಧಗಳ ಮೇಲೆ ಚಾರ್ಜ್ ಶೀಟ್‌ ದಾಖಲಾಗಿದೆ ಎಂದು ಅಧಿಕೃತ ಸರ್ಕಾರಿ ಅಂಕಿಅಂಶಗಳು ಹೇಳಿವೆ.

ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ಅತ್ಯಾಚಾರ, ಕೊಲೆಯೊಂದಿಗೆ ಅತ್ಯಾಚಾರ, ವರದಕ್ಷಿಣೆ, ಆಸಿಡ್ ದಾಳಿಗಳು, ಆತ್ಮಹತ್ಯಾ ಪ್ರಚೋದನೆ, ಅಪಹರಣ, ಬಲವಂತದ ಮದುವೆ, ಮಾನವ ಕಳ್ಳಸಾಗಣೆ, ಆನ್‌ಲೈನ್ ಕಿರುಕುಳ ಮುಂತಾದ ಅಪರಾಧಗಳು ಸೇರಿವೆ.

ಇದನ್ನೂ ಓದಿ: 2021ಲ್ಲಿ ಬೆಂಗಳೂರಿನಲ್ಲಿ ಸರಾಸರಿ ಪ್ರತಿದಿನ ಒಂದು ಮಗುವಿನ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದು, ಒಟ್ಟು 312 ಮಕ್ಕಳ ಮೇಲೆ ರೇಪ್ ನಡೆದಿದೆ

2021 ರಲ್ಲಿ, ಮಹಿಳೆಯರ ವಿರುದ್ಧದ ಅಪರಾಧಗಳ ಗರಿಷ್ಠ ಪ್ರಕರಣಗಳು ಉತ್ತರ ಪ್ರದೇಶದಲ್ಲಿ (56,083) ದಾಖಲಾಗಿವೆ, ನಂತರ ರಾಜಸ್ಥಾನ (40,738), ಮಹಾರಾಷ್ಟ್ರ (39,526), ​​ಪಶ್ಚಿಮ ಬಂಗಾಳ (35,884) ಮತ್ತು ಒಡಿಶಾ (31,352) ದಲ್ಲಿ ದಾಖಲಾಗಿವೆ ಎಂದು ಎನ್‌ಸಿಆರ್‌ಬಿ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...