Homeಮುಖಪುಟಭಾರತ: 2021 ರಲ್ಲಿ ಪ್ರತಿದಿನ ಸರಾಸರಿ 86 ‘ಅತ್ಯಾಚಾರ’ ಪ್ರಕರಣಗಳು ದಾಖಲು!

ಭಾರತ: 2021 ರಲ್ಲಿ ಪ್ರತಿದಿನ ಸರಾಸರಿ 86 ‘ಅತ್ಯಾಚಾರ’ ಪ್ರಕರಣಗಳು ದಾಖಲು!

ಕಳೆದ ವರ್ಷದ ದೇಶದ ಪ್ರತಿ ಲಕ್ಷ ಮಹಿಳೆಯರಲ್ಲಿ ಸರಾಸರಿ 5 ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ

- Advertisement -
- Advertisement -

2021 ರಲ್ಲಿ ಪ್ರತಿದಿನ ಸರಾಸರಿ 86 ಅತ್ಯಾಚಾರ ಪ್ರಕರಣಗಳು ಭಾರತದಲ್ಲಿ ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿ ಹೇಳಿದೆ. ಇಷ್ಟೆ ಅಲ್ಲದೆ, ಪ್ರತಿ ಗಂಟೆಗೆ ದೇಶದ 49 ಮಹಿಳೆಯರ ವಿರುದ್ಧ ಅಪರಾಧಗಳು ಕಳೆದ ವರ್ಷ ನಡೆದಿತ್ತು ಎಂದು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿರುವ ಇತ್ತೀಚೆಗಿನ ಅಂಕಿಅಂಶಗಳ ವರದಿ ಹೇಳಿವೆ.

2021 ರಲ್ಲಿ 31,677 ಅತ್ಯಾಚಾರ ಪ್ರಕರಣಗಳು ಭಾರತದಲ್ಲಿ ದಾಖಲಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಹೇಳಿದೆ. 2019 ರಲ್ಲಿ 32,033 ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ದಾಖಲಾಗಿದ್ದು, 2020 ರಲ್ಲಿ 28,046 ಪ್ರಕರಣಗಳು ದಾಖಲಾಗಿದೆ ಎಂದು ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ‘ಕ್ರೈಮ್ ಇನ್ ಇಂಡಿಯಾ 2021’ ವರದಿ ತೋರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳು 2020 ಕ್ಕಿಂತ 2021 ರಲ್ಲಿ 15% ದಷ್ಟು ಹೆಚ್ಚಾಗಿದೆ ಎಂದು ಎನ್‌ಸಿಆರ್‌ಬಿ ಅಂಕಿಅಂಶಗಳು ಹೇಳಿದೆ. ಈ ಬ್ಯೂರೋ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ಅತ್ಯಾಚಾರ ಪ್ರಕರಣಗಳು ದಾಖಲಾಗಿರುವ ರಾಜ್ಯಗಳ ಪೈಕಿ ರಾಜಸ್ಥಾನ (6,337) ಅಗ್ರಸ್ಥಾನದಲ್ಲಿದ್ದರೆ, ಮಧ್ಯಪ್ರದೇಶ (2,947), ಮಹಾರಾಷ್ಟ್ರ (2,496) ಮತ್ತು ಉತ್ತರ ಪ್ರದೇಶ (2,845) ಮತ್ತು ದೆಹಲಿಯಲ್ಲಿ 1,250 ಅತ್ಯಾಚಾರ ಪ್ರಕರಣಗಳು 2021 ರಲ್ಲಿ ದಾಖಲಾಗಿವೆ ಎಂದು ಎನ್‌ಸಿಆರ್‌ಬಿ ತೋರಿಸಿದೆ.

ಅತ್ಯಾಚಾರದ ಅಪರಾಧದ ಪ್ರಮಾಣ (ಪ್ರತಿ ಲಕ್ಷ ಜನಸಂಖ್ಯೆಗೆ) ರಾಜಸ್ಥಾನ (16.4) ನಂತರ ಚಂಡೀಗಢ (13.3), ದೆಹಲಿ (12.9), ಹರಿಯಾಣ (12.3) ಮತ್ತು ಅರುಣಾಚಲ ಪ್ರದೇಶ (11.1) ದಲ್ಲಿ ದಾಖಲಾಗಿದೆ. ಎನ್‌ಸಿಆರ್‌ಬಿ ಪ್ರಕಾರ ಅಖಿಲ ಭಾರತ ಸರಾಸರಿ ದರವು 4.8 ರಷ್ಟಿದೆ. ಅಂದರೆ ಕಳೆದ ವರ್ಷದ ದೇಶದ ಪ್ರತಿ ಲಕ್ಷ ಮಹಿಳೆಯರಲ್ಲಿ ಸರಾಸರಿ 5 ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: 3ನೇ ಸ್ಥಾನ: ಮಹಿಳೆಯರಿಗೆ ಅಸುರಕ್ಷಿತ ಮೆಟ್ರೋಪಾಲಿಟನ್ ನಗರವಾಗಿ ಬೆಂಗಳೂರು

2021 ರಲ್ಲಿ ದೇಶದಾದ್ಯಂತ ‘ಮಹಿಳೆಯರ ವಿರುದ್ಧದ ಅಪರಾಧಗಳ’ ಒಟ್ಟಾರೆ 4.28 ಲಕ್ಷ ಪ್ರಕರಣಗಳನ್ನು ದಾಖಲಿಸಲಾಗಿದೆ. 2019 ರಲ್ಲಿ 4.05 ಅಪರಾಧಗಳು ದಾಖಲಾಗಿದ್ದರೆ, 2020 ರಲ್ಲಿ 3.71 ಲಕ್ಷ ಅಪರಾಧಗಳು ಮಹಿಳೆಯರ ವಿರುದ್ಧ ನಡೆದಿತ್ತು.

2021 ರಲ್ಲಿ ಪ್ರತಿ ಒಂದು ಲಕ್ಷ ಮಹಿಳಾ ಜನಸಂಖ್ಯೆಯಲ್ಲಿ 64.5 ಮಹಿಳೆಯರ ಮೇಲೆ ಅಪರಾಧಗಳು ದಾಖಲಾಗಿವೆ. ಈ ರೀತಿ ದಾಖಲಾದ ಅಪರಾಧಗಳಲ್ಲಿ 77.1% ಅಪರಾಧಗಳ ಮೇಲೆ ಚಾರ್ಜ್ ಶೀಟ್‌ ದಾಖಲಾಗಿದೆ ಎಂದು ಅಧಿಕೃತ ಸರ್ಕಾರಿ ಅಂಕಿಅಂಶಗಳು ಹೇಳಿವೆ.

ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ಅತ್ಯಾಚಾರ, ಕೊಲೆಯೊಂದಿಗೆ ಅತ್ಯಾಚಾರ, ವರದಕ್ಷಿಣೆ, ಆಸಿಡ್ ದಾಳಿಗಳು, ಆತ್ಮಹತ್ಯಾ ಪ್ರಚೋದನೆ, ಅಪಹರಣ, ಬಲವಂತದ ಮದುವೆ, ಮಾನವ ಕಳ್ಳಸಾಗಣೆ, ಆನ್‌ಲೈನ್ ಕಿರುಕುಳ ಮುಂತಾದ ಅಪರಾಧಗಳು ಸೇರಿವೆ.

ಇದನ್ನೂ ಓದಿ: 2021ಲ್ಲಿ ಬೆಂಗಳೂರಿನಲ್ಲಿ ಸರಾಸರಿ ಪ್ರತಿದಿನ ಒಂದು ಮಗುವಿನ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದು, ಒಟ್ಟು 312 ಮಕ್ಕಳ ಮೇಲೆ ರೇಪ್ ನಡೆದಿದೆ

2021 ರಲ್ಲಿ, ಮಹಿಳೆಯರ ವಿರುದ್ಧದ ಅಪರಾಧಗಳ ಗರಿಷ್ಠ ಪ್ರಕರಣಗಳು ಉತ್ತರ ಪ್ರದೇಶದಲ್ಲಿ (56,083) ದಾಖಲಾಗಿವೆ, ನಂತರ ರಾಜಸ್ಥಾನ (40,738), ಮಹಾರಾಷ್ಟ್ರ (39,526), ​​ಪಶ್ಚಿಮ ಬಂಗಾಳ (35,884) ಮತ್ತು ಒಡಿಶಾ (31,352) ದಲ್ಲಿ ದಾಖಲಾಗಿವೆ ಎಂದು ಎನ್‌ಸಿಆರ್‌ಬಿ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...