Homeಮುಖಪುಟಭಾರತ: 2021 ರಲ್ಲಿ ಪ್ರತಿದಿನ ಸರಾಸರಿ 86 ‘ಅತ್ಯಾಚಾರ’ ಪ್ರಕರಣಗಳು ದಾಖಲು!

ಭಾರತ: 2021 ರಲ್ಲಿ ಪ್ರತಿದಿನ ಸರಾಸರಿ 86 ‘ಅತ್ಯಾಚಾರ’ ಪ್ರಕರಣಗಳು ದಾಖಲು!

ಕಳೆದ ವರ್ಷದ ದೇಶದ ಪ್ರತಿ ಲಕ್ಷ ಮಹಿಳೆಯರಲ್ಲಿ ಸರಾಸರಿ 5 ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ

- Advertisement -
- Advertisement -

2021 ರಲ್ಲಿ ಪ್ರತಿದಿನ ಸರಾಸರಿ 86 ಅತ್ಯಾಚಾರ ಪ್ರಕರಣಗಳು ಭಾರತದಲ್ಲಿ ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿ ಹೇಳಿದೆ. ಇಷ್ಟೆ ಅಲ್ಲದೆ, ಪ್ರತಿ ಗಂಟೆಗೆ ದೇಶದ 49 ಮಹಿಳೆಯರ ವಿರುದ್ಧ ಅಪರಾಧಗಳು ಕಳೆದ ವರ್ಷ ನಡೆದಿತ್ತು ಎಂದು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿರುವ ಇತ್ತೀಚೆಗಿನ ಅಂಕಿಅಂಶಗಳ ವರದಿ ಹೇಳಿವೆ.

2021 ರಲ್ಲಿ 31,677 ಅತ್ಯಾಚಾರ ಪ್ರಕರಣಗಳು ಭಾರತದಲ್ಲಿ ದಾಖಲಾಗಿದೆ ಎಂದು ಎನ್‌ಸಿಆರ್‌ಬಿ ವರದಿ ಹೇಳಿದೆ. 2019 ರಲ್ಲಿ 32,033 ಅತ್ಯಾಚಾರ ಪ್ರಕರಣಗಳು ದೇಶದಲ್ಲಿ ದಾಖಲಾಗಿದ್ದು, 2020 ರಲ್ಲಿ 28,046 ಪ್ರಕರಣಗಳು ದಾಖಲಾಗಿದೆ ಎಂದು ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ ‘ಕ್ರೈಮ್ ಇನ್ ಇಂಡಿಯಾ 2021’ ವರದಿ ತೋರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳು 2020 ಕ್ಕಿಂತ 2021 ರಲ್ಲಿ 15% ದಷ್ಟು ಹೆಚ್ಚಾಗಿದೆ ಎಂದು ಎನ್‌ಸಿಆರ್‌ಬಿ ಅಂಕಿಅಂಶಗಳು ಹೇಳಿದೆ. ಈ ಬ್ಯೂರೋ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ.

ಅತ್ಯಾಚಾರ ಪ್ರಕರಣಗಳು ದಾಖಲಾಗಿರುವ ರಾಜ್ಯಗಳ ಪೈಕಿ ರಾಜಸ್ಥಾನ (6,337) ಅಗ್ರಸ್ಥಾನದಲ್ಲಿದ್ದರೆ, ಮಧ್ಯಪ್ರದೇಶ (2,947), ಮಹಾರಾಷ್ಟ್ರ (2,496) ಮತ್ತು ಉತ್ತರ ಪ್ರದೇಶ (2,845) ಮತ್ತು ದೆಹಲಿಯಲ್ಲಿ 1,250 ಅತ್ಯಾಚಾರ ಪ್ರಕರಣಗಳು 2021 ರಲ್ಲಿ ದಾಖಲಾಗಿವೆ ಎಂದು ಎನ್‌ಸಿಆರ್‌ಬಿ ತೋರಿಸಿದೆ.

ಅತ್ಯಾಚಾರದ ಅಪರಾಧದ ಪ್ರಮಾಣ (ಪ್ರತಿ ಲಕ್ಷ ಜನಸಂಖ್ಯೆಗೆ) ರಾಜಸ್ಥಾನ (16.4) ನಂತರ ಚಂಡೀಗಢ (13.3), ದೆಹಲಿ (12.9), ಹರಿಯಾಣ (12.3) ಮತ್ತು ಅರುಣಾಚಲ ಪ್ರದೇಶ (11.1) ದಲ್ಲಿ ದಾಖಲಾಗಿದೆ. ಎನ್‌ಸಿಆರ್‌ಬಿ ಪ್ರಕಾರ ಅಖಿಲ ಭಾರತ ಸರಾಸರಿ ದರವು 4.8 ರಷ್ಟಿದೆ. ಅಂದರೆ ಕಳೆದ ವರ್ಷದ ದೇಶದ ಪ್ರತಿ ಲಕ್ಷ ಮಹಿಳೆಯರಲ್ಲಿ ಸರಾಸರಿ 5 ಮಹಿಳೆಯರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: 3ನೇ ಸ್ಥಾನ: ಮಹಿಳೆಯರಿಗೆ ಅಸುರಕ್ಷಿತ ಮೆಟ್ರೋಪಾಲಿಟನ್ ನಗರವಾಗಿ ಬೆಂಗಳೂರು

2021 ರಲ್ಲಿ ದೇಶದಾದ್ಯಂತ ‘ಮಹಿಳೆಯರ ವಿರುದ್ಧದ ಅಪರಾಧಗಳ’ ಒಟ್ಟಾರೆ 4.28 ಲಕ್ಷ ಪ್ರಕರಣಗಳನ್ನು ದಾಖಲಿಸಲಾಗಿದೆ. 2019 ರಲ್ಲಿ 4.05 ಅಪರಾಧಗಳು ದಾಖಲಾಗಿದ್ದರೆ, 2020 ರಲ್ಲಿ 3.71 ಲಕ್ಷ ಅಪರಾಧಗಳು ಮಹಿಳೆಯರ ವಿರುದ್ಧ ನಡೆದಿತ್ತು.

2021 ರಲ್ಲಿ ಪ್ರತಿ ಒಂದು ಲಕ್ಷ ಮಹಿಳಾ ಜನಸಂಖ್ಯೆಯಲ್ಲಿ 64.5 ಮಹಿಳೆಯರ ಮೇಲೆ ಅಪರಾಧಗಳು ದಾಖಲಾಗಿವೆ. ಈ ರೀತಿ ದಾಖಲಾದ ಅಪರಾಧಗಳಲ್ಲಿ 77.1% ಅಪರಾಧಗಳ ಮೇಲೆ ಚಾರ್ಜ್ ಶೀಟ್‌ ದಾಖಲಾಗಿದೆ ಎಂದು ಅಧಿಕೃತ ಸರ್ಕಾರಿ ಅಂಕಿಅಂಶಗಳು ಹೇಳಿವೆ.

ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ಅತ್ಯಾಚಾರ, ಕೊಲೆಯೊಂದಿಗೆ ಅತ್ಯಾಚಾರ, ವರದಕ್ಷಿಣೆ, ಆಸಿಡ್ ದಾಳಿಗಳು, ಆತ್ಮಹತ್ಯಾ ಪ್ರಚೋದನೆ, ಅಪಹರಣ, ಬಲವಂತದ ಮದುವೆ, ಮಾನವ ಕಳ್ಳಸಾಗಣೆ, ಆನ್‌ಲೈನ್ ಕಿರುಕುಳ ಮುಂತಾದ ಅಪರಾಧಗಳು ಸೇರಿವೆ.

ಇದನ್ನೂ ಓದಿ: 2021ಲ್ಲಿ ಬೆಂಗಳೂರಿನಲ್ಲಿ ಸರಾಸರಿ ಪ್ರತಿದಿನ ಒಂದು ಮಗುವಿನ ಮೇಲೆ ಲೈಂಗಿಕ ಕಿರುಕುಳ ನಡೆದಿದ್ದು, ಒಟ್ಟು 312 ಮಕ್ಕಳ ಮೇಲೆ ರೇಪ್ ನಡೆದಿದೆ

2021 ರಲ್ಲಿ, ಮಹಿಳೆಯರ ವಿರುದ್ಧದ ಅಪರಾಧಗಳ ಗರಿಷ್ಠ ಪ್ರಕರಣಗಳು ಉತ್ತರ ಪ್ರದೇಶದಲ್ಲಿ (56,083) ದಾಖಲಾಗಿವೆ, ನಂತರ ರಾಜಸ್ಥಾನ (40,738), ಮಹಾರಾಷ್ಟ್ರ (39,526), ​​ಪಶ್ಚಿಮ ಬಂಗಾಳ (35,884) ಮತ್ತು ಒಡಿಶಾ (31,352) ದಲ್ಲಿ ದಾಖಲಾಗಿವೆ ಎಂದು ಎನ್‌ಸಿಆರ್‌ಬಿ ವರದಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...