Homeಮುಖಪುಟಮಹಾರಾಷ್ಟ್ರದಲ್ಲಿ ಇಂಡಿಯಾ ಮೈತಿಗೆ ಆರಂಭಿಕ ಶುಭ, ಉತ್ತರಪ್ರದೇಶದಲ್ಲಿ ಇಂಡಿಯಾ-ಎನ್‌ಡಿಎ ಪ್ರಬಲ ಫೈಟ್‌

ಮಹಾರಾಷ್ಟ್ರದಲ್ಲಿ ಇಂಡಿಯಾ ಮೈತಿಗೆ ಆರಂಭಿಕ ಶುಭ, ಉತ್ತರಪ್ರದೇಶದಲ್ಲಿ ಇಂಡಿಯಾ-ಎನ್‌ಡಿಎ ಪ್ರಬಲ ಫೈಟ್‌

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು,  ಎನ್‌ಡಿಎ 260 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 183 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.  ಇತರರು 17 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

ಉತ್ತರಪ್ರದೇಶದಲ್ಲಿ 39 ಕ್ಷೇತ್ರಗಳಲ್ಲಿ ಎನ್‌ಡಿಎ, 23 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆಯನ್ನು  ಸಾಧಿಸಿದೆ. ಇತರರು 5 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆಯನ್ನು ಸಾಧಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಇಂಡಿಯಾ ಮೈತ್ರಿಕೂಟ ಪ್ರಬಲ ಪ್ರತಿಸ್ಪರ್ಧೆಯನ್ನು ನೀಡುತ್ತಿದೆ. ಎನ್‌ಡಿಎ 11 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ 12 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಕರ್ನಾಟಕದಲ್ಲಿ ಎನ್‌ಡಿಎ 8 ಮತ್ತು ಇಂಡಿಯಾ ಮೈತ್ರಿಕೂಟ 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಪ.ಬಂಗಾಳದಲ್ಲಿ ಬಿಜೆಪಿ 16 ಕ್ಷೇತ್ರಗಳಲ್ಲಿ, ಟಿಎಂಸಿ 17 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಇಂಡಿಯಾ ಮೈತ್ರಿಕೂಟ 2 ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಅಸ್ಸಾಂನಲ್ಲಿ ಎನ್‌ಡಿಎ 7 ಕ್ಷೇತ್ರಗಳಲ್ಲಿ, ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.  ಕೇರಳದಲ್ಲಿ ಯುಡಿಎಫ್‌-17 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಝಾರ್ಕಾಂಡ್‌ನಲ್ಲಿ ಎನ್‌ಡಿಎ 1ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ 2 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.  ಆಂಧ್ರಪ್ರದೇಶದಲ್ಲಿ ಟಿಡಿಪಿ 8 ಕ್ಷೇತ್ರಗಳಲ್ಲಿ,  ವೈಎಸ್‌ಆರ್‌ಪಿ 4 ಬಿಜೆಪಿ 2 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಉತ್ತರಖಂಡದಲ್ಲಿ   ಬಿಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಅಂಡಮಾನ್‌ ನಿಕೋಬರ್‌ನಲ್ಲಿ ಬಿಜೆಪಿ 1 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ವಾರಣಾಸಿಯಲ್ಲಿ ಪ್ರಧಾನಿ ಮೋದಿ ಮುನ್ನಡೆಯನ್ನು ಸಾಧಿಸಿದ್ದು, ರಾಹುಲ್‌ ಗಾಂಧಿ ರಾಯ್ ಬರೇಲಿ ಸೇರಿ ಸ್ಪರ್ಧಿಸಿರುವ ಎರಡೂ ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಶಶಿತರೂರ್‌ ತಿರುವನಂತಪುರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಕಣೋಜ್‌ನಲ್ಲಿ ಅಖಿಲೇಶ್‌ ಯಾದವ್‌ ಮುನ್ನಡೆಯನ್ನು ಸಾಧಿಸಿದ್ದಾರೆ. ಲಕ್ನೋನಲ್ಲಿ ರಾಜನಾಥ್‌ ಸಿಂಗ್‌ ಮುನ್ನಡೆಯನ್ನು ಸಾಧಿಸಿದ್ದಾರೆ. ಪುರಿಯಲ್ಲಿ ಸಂಬಿತ್‌ ಪಾತ್ರ ಮುನ್ನಡೆಯನ್ನು ಸಾಧಿಸಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ಮುನ್ನಡೆಯನ್ನು ಸಾಧಿಸಿದ್ದಾರೆ. ಬೆಗಳೂರು ಗ್ರಾಮಾಂತರದಲ್ಲಿ ಡಿಕೆ, ಸುರೇಶ್‌ ಮುನ್ನಡೆಯನ್ನು ಸಾಧಿಸಿದ್ದಾರೆ. ಮಂಡ್ಯದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಮುನ್ನಡೆಯನ್ನು ಸಾಧಿಸಿದೆ. ಪ.ಬಂಗಾಳದಲ್ಲಿ ಮಹುವಾ ಮಹೋಯಿತ್ರಾ ಮುನ್ನಡೆಯನ್ನು ಸಾಧಿಸಿದ್ದಾರೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...