Homeಅಂತರಾಷ್ಟ್ರೀಯಸಂಚಾರ ನಿರ್ಬಂಧ ತೆರವಿಗೆ ಚೀನಾ ಜೊತೆ ಭಾರತ ಮಾತುಕತೆ

ಸಂಚಾರ ನಿರ್ಬಂಧ ತೆರವಿಗೆ ಚೀನಾ ಜೊತೆ ಭಾರತ ಮಾತುಕತೆ

- Advertisement -
- Advertisement -

ಭಾರತ ಮತ್ತು ಚೀನಾ ದೇಶಗಳ ನಡುವೆ ಸಂಪರ್ಕ ಕಡಿದು ಸರಿ ಸುಮಾರು ಒಂದೂವರೆ ವರ್ಷಗಳಾಗುತ್ತ ಬಂತು. 2019 ರಲ್ಲಿ ಚೈನಾದ ವುಹಾನ್‌ ನಗರದಲ್ಲಿ ಕೊರೋನಾ ಸಾಂಕ್ರಾಮಿಕ ತೀವ್ರಗೊಂಡಾಗಿನಿಂದ ಭಾರತ ಮತ್ತು ಚೀನಾ ನಡುವೆ ವಿಮಾನಯಾನ ಸಂಪರ್ಕ ನಿಂತು ಹೋಗಿದೆ. ಮೊದಲು ಭಾರತ ಚೀನಾದಿಂದ ಭಾರತ ಪ್ರವೇಶಕ್ಕೆ ನಿಷೇಧ ಹೇರಿತ್ತು. ಚೈನಾದಲ್ಲಿ ಕೊರೋನಾ ಸೋಂಕು ಇಳಿಮುಖವಾದ ಮೇಲೆ ಭಾರತದಲ್ಲಿ ಕೊರೋನಾ ಸಾಂಕ್ರಾಮಿಕದ ಅಟ್ಟಹಾಸ ಆರಂಭವಾಗಿತ್ತು. ಹಾಗಾಗಿ ಚೀನಾ ಭಾರತದ ನಾಗರಿಕರಿಗೆ ಚೀನಾ ಪ್ರವೇಶವನ್ನು ನಿಷೇಧಿಸಿತ್ತು. ಆ ನಿಷೇಧ ಸುಮಾರು 1 ವರ್ಷದಿಂದ ಹಾಗೆಯೇ ಮುಂದುವರೆದಿದೆ. ಏಪ್ರೀಲ್‌ ಮೇ ಹೊತ್ತಿಗೆ ಚೀನಾ ಭಾರತದ ಮೇಲಿನ ಸಂಚಾರ ನಿರ್ಬಂಧವನ್ನು ಸಡಿಲಿಸುವುದಾಗಿ ಹೇಳಿತ್ತು. ಕೊರೋನಾ ಎರಡನೇ ಅಲೆಯ ಕಾರಣದಿಂದ ಅದು ಸಾಧ್ಯವಾಗಿಲ್ಲ.

ಸಂಚಾರ ನಿರ್ಬಂಧದಿಂದಾಗಿ ಚೀನಾ ಕಂಪನಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೂರಾರು ಉದ್ಯೋಗಿಗಳು, ಚೀನಾದ ಪ್ರತಿಷ್ಠಿತ ವಿಶ್ವ ವಿದ್ಯಾಲಯಗಳಲ್ಲಿ ಓದುತ್ತಿರುವ ಭಾರತದ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಚೀನಾಗೆ ತೆರಳಲಾಗದೇ 1 ವರ್ಷದಿಂದ ಭಾರತದಲ್ಲೇ ಕುಳಿತಿದ್ದಾರೆ. ಇವರೆಲ್ಲರೂ ಚೀನಾ ಸಂಚಾರ ನಿರ್ಬಂಧವನ್ನು ಹಿಂಪಡೆಯುವ ದಿನಗಳಿಗಾಗಿ ಕಾಯುತ್ತಿದ್ದಾರೆ. ಮತ್ತೊಂದೆಡೆ ಚೀನಾ ಭಾರತ ಮೂಲದ ವಿದ್ಯಾರ್ಥಿಗಳ ಮತ್ತು ಉದ್ಯೋಗಿಗಳ ವೀಸಾವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದು ಕೂಡ ವಿದ್ಯಾರ್ಥಿಗಳಿಗೆ ಚೀನಾಕ್ಕೆ ತೆರಳಲು ತೊಡಕಾಗಿ ಪರಿಣಮಿಸಿದೆ.

ಇದನ್ನೂ ಓದಿ : ಆದಾನಿಗೆ ಲಾಭ ಮಾಡಲು ವಿದ್ಯುತ್‍ ದರ ಏರಿಕೆ: ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಮತ್ತು ನೌಕರ ಸಮಸ್ಯೆಗೆ ಸ್ಪಂದಿಸಿದ್ದು ಚೀನಾ ವಿದೇಶಾಂಗ ಇಲಾಖೆ ಜೊತೆ ಮಾತುಕತೆ ಆರಂಭಿಸಿದೆ. ‌ ಭಾರತದೊಂದಿಗಿನ ಸಂಚಾರ ನಿರ್ಬಂಧವನ್ನು ಸಡಿಲಿಸುವಂತೆ ಚೀನಾ ಸರ್ಕಾರಕ್ಕೆ ಮನವಿಯನ್ನು ಮಾಡಿದೆ. ಚೀನಾದ ಎಲ್ಲಾ ಸಂಚಾರ ನಿಯಮಗಳನ್ನು ಪಾಲಿಸುವ ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಿಗಳಿಗೆ ವೀಸಾ ನೀಡುವಂತೆ ಭಾರತೀಯ ವಿದೇಶಾಂಗ ಇಲಾಖೆ ಚೀನಾ ವಿದೇಶಾಂಗ ಇಲಾಖೆ ಜೊತೆ ಗುರುವಾರ ಜೂನ್‌ 10 ರಂದು ಮಾತುಕತೆ ನಡೆಸಿದೆ. ಚೀನಾದ ಸಂಚಾರ ನಿಯಮಗಳಲ್ಲಿ ಚೀನಾ ದೇಶದ ವ್ಯಾಕ್ಸೀನ್‌ ಡೋಸ್ ಪಡೆದುಕೊಳ್ಳುವುದೂ ಸಹ ಸೇರಿದೆ.

ಭಾರತ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಾಮ್‌ ಬಗ್ಚಿ ಭಾರತ-ಚೀನಾ ಸಂಚಾರ ನಿರ್ಬಂಧಗಳನ್ನು ತೆರವುಗೊಳಿಸುವ ವಿಷಯದ ಕುರಿತಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. “ಚೀನಾ ಸರ್ಕಾರದ ಜೊತೆ ನಾವು ಸತತ ಸಂಪರ್ಕದಲ್ಲಿದ್ದೇವೆ. ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಲು ವಿದೇಶಾಂಗ ಇಲಾಖೆ ಸತತ ಪ್ರಯತ್ನ ನಡೆಸುತ್ತಿದೆ. ಅನೇಕರು ಈಗಾಗಲೇ ಚೀನಾ ತಯಾರಿತ ವ್ಯಾಕ್ಸೀನ್‌ ಪಡೆದು ಚೀನಾ ದೇಶದ ವೀಸಾಗೆ ಅರ್ಜಿ ಸಲ್ಲಿಸಿದ್ದಾರೆ. ಜೂನ್‌ ಅತ್ಯಂತ ವೇಳೆಗೆ ಎಲ್ಲಾ ಗೊಂದಲಗಳು ಬಗೆಹರಿಯುವ ನಿರೀಕ್ಷೆ ಇದೆ ಎಂದು” ಅವರು ಮಾಹಿತಿಯನ್ನು ನೀಡಿದ್ದಾರೆ.


ಇದನ್ನೂ ಓದಿ: ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ದಕ್ಷಿಣ ಆಫ್ರಿಕಾದ ಜೈಲಿನಲ್ಲಿ ಬಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...