Homeಅಂತರಾಷ್ಟ್ರೀಯಸಂಚಾರ ನಿರ್ಬಂಧ ತೆರವಿಗೆ ಚೀನಾ ಜೊತೆ ಭಾರತ ಮಾತುಕತೆ

ಸಂಚಾರ ನಿರ್ಬಂಧ ತೆರವಿಗೆ ಚೀನಾ ಜೊತೆ ಭಾರತ ಮಾತುಕತೆ

- Advertisement -
- Advertisement -

ಭಾರತ ಮತ್ತು ಚೀನಾ ದೇಶಗಳ ನಡುವೆ ಸಂಪರ್ಕ ಕಡಿದು ಸರಿ ಸುಮಾರು ಒಂದೂವರೆ ವರ್ಷಗಳಾಗುತ್ತ ಬಂತು. 2019 ರಲ್ಲಿ ಚೈನಾದ ವುಹಾನ್‌ ನಗರದಲ್ಲಿ ಕೊರೋನಾ ಸಾಂಕ್ರಾಮಿಕ ತೀವ್ರಗೊಂಡಾಗಿನಿಂದ ಭಾರತ ಮತ್ತು ಚೀನಾ ನಡುವೆ ವಿಮಾನಯಾನ ಸಂಪರ್ಕ ನಿಂತು ಹೋಗಿದೆ. ಮೊದಲು ಭಾರತ ಚೀನಾದಿಂದ ಭಾರತ ಪ್ರವೇಶಕ್ಕೆ ನಿಷೇಧ ಹೇರಿತ್ತು. ಚೈನಾದಲ್ಲಿ ಕೊರೋನಾ ಸೋಂಕು ಇಳಿಮುಖವಾದ ಮೇಲೆ ಭಾರತದಲ್ಲಿ ಕೊರೋನಾ ಸಾಂಕ್ರಾಮಿಕದ ಅಟ್ಟಹಾಸ ಆರಂಭವಾಗಿತ್ತು. ಹಾಗಾಗಿ ಚೀನಾ ಭಾರತದ ನಾಗರಿಕರಿಗೆ ಚೀನಾ ಪ್ರವೇಶವನ್ನು ನಿಷೇಧಿಸಿತ್ತು. ಆ ನಿಷೇಧ ಸುಮಾರು 1 ವರ್ಷದಿಂದ ಹಾಗೆಯೇ ಮುಂದುವರೆದಿದೆ. ಏಪ್ರೀಲ್‌ ಮೇ ಹೊತ್ತಿಗೆ ಚೀನಾ ಭಾರತದ ಮೇಲಿನ ಸಂಚಾರ ನಿರ್ಬಂಧವನ್ನು ಸಡಿಲಿಸುವುದಾಗಿ ಹೇಳಿತ್ತು. ಕೊರೋನಾ ಎರಡನೇ ಅಲೆಯ ಕಾರಣದಿಂದ ಅದು ಸಾಧ್ಯವಾಗಿಲ್ಲ.

ಸಂಚಾರ ನಿರ್ಬಂಧದಿಂದಾಗಿ ಚೀನಾ ಕಂಪನಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೂರಾರು ಉದ್ಯೋಗಿಗಳು, ಚೀನಾದ ಪ್ರತಿಷ್ಠಿತ ವಿಶ್ವ ವಿದ್ಯಾಲಯಗಳಲ್ಲಿ ಓದುತ್ತಿರುವ ಭಾರತದ ವಿದ್ಯಾರ್ಥಿಗಳು ಮತ್ತು ಸಂಶೋಧಕರು ಚೀನಾಗೆ ತೆರಳಲಾಗದೇ 1 ವರ್ಷದಿಂದ ಭಾರತದಲ್ಲೇ ಕುಳಿತಿದ್ದಾರೆ. ಇವರೆಲ್ಲರೂ ಚೀನಾ ಸಂಚಾರ ನಿರ್ಬಂಧವನ್ನು ಹಿಂಪಡೆಯುವ ದಿನಗಳಿಗಾಗಿ ಕಾಯುತ್ತಿದ್ದಾರೆ. ಮತ್ತೊಂದೆಡೆ ಚೀನಾ ಭಾರತ ಮೂಲದ ವಿದ್ಯಾರ್ಥಿಗಳ ಮತ್ತು ಉದ್ಯೋಗಿಗಳ ವೀಸಾವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಇದು ಕೂಡ ವಿದ್ಯಾರ್ಥಿಗಳಿಗೆ ಚೀನಾಕ್ಕೆ ತೆರಳಲು ತೊಡಕಾಗಿ ಪರಿಣಮಿಸಿದೆ.

ಇದನ್ನೂ ಓದಿ : ಆದಾನಿಗೆ ಲಾಭ ಮಾಡಲು ವಿದ್ಯುತ್‍ ದರ ಏರಿಕೆ: ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

ಕೇಂದ್ರ ಸರ್ಕಾರವು ವಿದ್ಯಾರ್ಥಿಗಳ ಮತ್ತು ನೌಕರ ಸಮಸ್ಯೆಗೆ ಸ್ಪಂದಿಸಿದ್ದು ಚೀನಾ ವಿದೇಶಾಂಗ ಇಲಾಖೆ ಜೊತೆ ಮಾತುಕತೆ ಆರಂಭಿಸಿದೆ. ‌ ಭಾರತದೊಂದಿಗಿನ ಸಂಚಾರ ನಿರ್ಬಂಧವನ್ನು ಸಡಿಲಿಸುವಂತೆ ಚೀನಾ ಸರ್ಕಾರಕ್ಕೆ ಮನವಿಯನ್ನು ಮಾಡಿದೆ. ಚೀನಾದ ಎಲ್ಲಾ ಸಂಚಾರ ನಿಯಮಗಳನ್ನು ಪಾಲಿಸುವ ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಿಗಳಿಗೆ ವೀಸಾ ನೀಡುವಂತೆ ಭಾರತೀಯ ವಿದೇಶಾಂಗ ಇಲಾಖೆ ಚೀನಾ ವಿದೇಶಾಂಗ ಇಲಾಖೆ ಜೊತೆ ಗುರುವಾರ ಜೂನ್‌ 10 ರಂದು ಮಾತುಕತೆ ನಡೆಸಿದೆ. ಚೀನಾದ ಸಂಚಾರ ನಿಯಮಗಳಲ್ಲಿ ಚೀನಾ ದೇಶದ ವ್ಯಾಕ್ಸೀನ್‌ ಡೋಸ್ ಪಡೆದುಕೊಳ್ಳುವುದೂ ಸಹ ಸೇರಿದೆ.

ಭಾರತ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಾಮ್‌ ಬಗ್ಚಿ ಭಾರತ-ಚೀನಾ ಸಂಚಾರ ನಿರ್ಬಂಧಗಳನ್ನು ತೆರವುಗೊಳಿಸುವ ವಿಷಯದ ಕುರಿತಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. “ಚೀನಾ ಸರ್ಕಾರದ ಜೊತೆ ನಾವು ಸತತ ಸಂಪರ್ಕದಲ್ಲಿದ್ದೇವೆ. ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಲು ವಿದೇಶಾಂಗ ಇಲಾಖೆ ಸತತ ಪ್ರಯತ್ನ ನಡೆಸುತ್ತಿದೆ. ಅನೇಕರು ಈಗಾಗಲೇ ಚೀನಾ ತಯಾರಿತ ವ್ಯಾಕ್ಸೀನ್‌ ಪಡೆದು ಚೀನಾ ದೇಶದ ವೀಸಾಗೆ ಅರ್ಜಿ ಸಲ್ಲಿಸಿದ್ದಾರೆ. ಜೂನ್‌ ಅತ್ಯಂತ ವೇಳೆಗೆ ಎಲ್ಲಾ ಗೊಂದಲಗಳು ಬಗೆಹರಿಯುವ ನಿರೀಕ್ಷೆ ಇದೆ ಎಂದು” ಅವರು ಮಾಹಿತಿಯನ್ನು ನೀಡಿದ್ದಾರೆ.


ಇದನ್ನೂ ಓದಿ: ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳು ದಕ್ಷಿಣ ಆಫ್ರಿಕಾದ ಜೈಲಿನಲ್ಲಿ ಬಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...