Homeಅಂತರಾಷ್ಟ್ರೀಯವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನನ್ನು ಮತ್ತೆ ಬೆಂಬಲಿಸಿದ ಭಾರತ

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನನ್ನು ಮತ್ತೆ ಬೆಂಬಲಿಸಿದ ಭಾರತ

- Advertisement -
- Advertisement -

ಭಾರತವು ಪ್ಯಾಲೆಸ್ತೀನ್‌ಗೆ ಮತ್ತೆ ತನ್ನ ಬೆಂಬಲವನ್ನು ವಿಶ್ವಸಂಸ್ಥೆಯಲ್ಲಿ ವ್ಯಕ್ತಪಡಿಸಿದೆ. ಜೂನ್‌‌ 24 ರಂದು ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಅಧಿವೇಶನದಲ್ಲಿ, ‘ಸ್ವತಂತ್ರ, ಕಾರ್ಯಸಾಧು ಮತ್ತು ಪ್ರಜಾಪ್ರಭುತ್ವವಾದಿ ಪ್ಯಾಲೆಸ್ತೀನ್‌‌’ಗೆ ಭಾರತವು ಬೆಂಬಲ ವ್ಯಕ್ತಪಡಿಸಿದೆ. ಜೊತೆಗೆ ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವನ್ನು ಕೊನೆಗೊಳಿಸಬೇಕೆಂದು ಕರೆ ನೀಡಿದೆ.

ಅಧಿವೇಶನದಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌‌ ನಡುವಿನ ಶಾಂತಿ ಮಾತುಕತೆಗಳನ್ನು ಪುನರಾರಂಭಿಸಲು ಭಾರತ ಕರೆ ನೀಡಿದ್ದು, “ಅರ್ಥಪೂರ್ಣ ಮತ್ತು ನಿರಂತರ ಶಾಂತಿಯನ್ನು ಖಾತ್ರಿಪಡಿಸಿಕೊಳ್ಳಲು ಎರಡು ರಾಜ್ಯಗಳ ಪರಿಹಾರವಲ್ಲದೆ ಪರ್ಯಾಯ ಮಾರ್ಗವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

“ಬಿಕ್ಕಟ್ಟಿನ ಮುಂದುವರಿಕೆಯು ಎರಡು ದೇಶಗಳ ನಡುವೆ ಅವಿಶ್ವಾಸವನ್ನು ಹೆಚ್ಚಿಸುತ್ತದೆ. ಇದು ಹಿಂಸಾಚಾರವು ಮರುಕಳಿಸುವ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಪ್ರಕ್ರಿಯೆಯನ್ನು ತಕ್ಷಣ ಪುನರಾರಂಭಿಸುವ ಅಗತ್ಯವಿದ್ದು, ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌‌ ನಡುವಿನ ನೇರ ಮಾತುಕತೆಗಳ ಅಗತ್ಯವನ್ನು ನಾನು ಮತ್ತೊಮ್ಮೆ ಒತ್ತಿಹೇಳುತ್ತೇನೆ” ಎಂದು ಯುಎನ್‌ಎಸ್‌ಸಿ ಅಧಿವೇಶನದಲ್ಲಿ ಭಾರತದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ (ಪಶ್ಚಿಮ) ವಿಕಾಸ್ ಸ್ವರೂಪ್ ಹೇಳಿದ್ದಾರೆ.

ಮೇ ತಿಂಗಳಲ್ಲಿ ಇಸ್ರೇಲ್ ಮತ್ತು ಹಮಾಸ್ 11 ದಿನಗಳ ಕಾಲ ಮುಖಾಮುಖಿಯಾಗಿದ್ದವು. ಈ ಸಮಯದಲ್ಲಿ ಎರಡೂ ಕಡೆಯಿಂದ ಸಾವಿರಾರು ರಾಕೆಟ್‌ಗಳನ್ನು ಉಡಾಯಿಸಲಾಗಿದ್ದು, 250 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರ ನಂತರ ಸಂಘರ್ಷ ಪ್ರಾರಂಭಿಸಿದ್ದ ಇಸ್ರೇಲ್‌‌ ಕದನ ವಿರಾಮಕ್ಕೆ ಒಪ್ಪಿಕೊಂಡು, ಮೇ 21 ರಿಂದ ಅದು ಜಾರಿಯಲ್ಲಿದೆ.

ಮೇ 16 ರಂದು ನಡೆದ ಯುಎನ್‌ಎಸ್‌ಸಿಯ ಮುಕ್ತ ಸಭೆಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ಟಿಎಸ್ ತಿರುಮೂರ್ತಿ ಅವರು, “ಭಾರತ ಎಲ್ಲಾ ಹಿಂಸಾಚಾರ ಮತ್ತು ವಿನಾಶವನ್ನು ಖಂಡಿಸುತ್ತದೆ. ಪ್ಯಾಲೆಸ್ತೀನ್‌ನ ನ್ಯಾಯಬದ್ಧ ಉದ್ದೇಶವನ್ನು ಮತ್ತು ದ್ವಿರಾಷ್ಟ್ರ ಪರಿಹಾರವನ್ನು ಬೆಂಬಲಿಸುತ್ತದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...