Homeಮುಖಪುಟಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

- Advertisement -
- Advertisement -

ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರಗಳಾಗಿ ಗುರುತಿಸುವ ಮೂಲಕ ಸಂಘರ್ಷ ಕೊನೆಗೊಳಿಸಬೇಕೆಂಬ ತನ್ನ ದೀರ್ಘ ಕಾಲದ ನಿಲುವನ್ನು ಭಾರತ ಪುನರುಚ್ಚರಿಸಿದೆ.

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ನೀಡಲು ಅನುಮತಿಸಲು ಮತದಾನ ನಡೆಸುವಂತೆ ಶಿಫಾರಸು ಮಾಡುವ ಕರಡು ನಿರ್ಣಯವನ್ನು ಯುನೈಟೆಡ್ ಸ್ಟೇಟ್ಸ್ (ಯುಎಸ್‌) ಏಪ್ರಿಲ್‌ 18ರಂದು ತಡೆದಿತ್ತು.

ನಿರ್ಣಯದ ಪರವಾಗಿ 12 ಮತಗಳು ಬಿದ್ದಿತ್ತು. ಸ್ವಿಟ್ಜರ್ಲೆಂಡ್ ಮತ್ತು ಯುನೈಟೆಡ್ ಕಿಂಗ್‌ಡಮ್ (ಯುಕೆ) ಮತದಾನದಿಂದ ದೂರ ಉಳಿದಿತ್ತು. ನಿರ್ಣಯದ ಪರವಾಗಿ ಒಂಬತ್ತು ಮತಗಳ ಅಗತ್ಯವಿತ್ತು. ವಿಶ್ವ ಸಂಸ್ಥೆಯ ಖಾಯಂ ಸದಸ್ಯರಾದ ಚೀನಾ, ಫ್ರಾನ್ಸ್, ರಷ್ಯಾ, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ ವೀಟೋ ಪ್ರಯೋಗಿಸಿರಲಿಲ್ಲ.

ಪ್ಯಾಲೆಸ್ತೀನ್ ಪ್ರಸ್ತುತ ವಿಶ್ವಸಂಸ್ಥೆಯಲ್ಲಿ “ಶಾಶ್ವತ ವೀಕ್ಷಕ” ಸ್ಥಾನಮಾನವನ್ನು ಹೊಂದಿದೆ. ಇದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಭೆಗಳಲ್ಲಿ ಮಾತನಾಡಲು ಅವಕಾಶ ನೀಡುತ್ತದೆ. ಆದರೆ, ನಿರ್ಣಯಗಳ ಮೇಲೆ ಮತ ಚಲಾಯಿಸಲು ಅವಕಾಶವಿಲ್ಲ.

ಬುಧವಾರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ “ವಿಶ್ವಸಂಸ್ಥೆಯಲ್ಲಿ ಸದಸ್ಯತ್ವಕ್ಕಾಗಿ ಪ್ಯಾಲೆಸ್ತೀನ್‌ನ ಅರ್ಜಿಯನ್ನು ಭದ್ರತಾ ಮಂಡಳಿಯು ಮೇಲಿನ ವೀಟೋ ಕಾರಣದಿಂದ ಅನುಮೋದಿಸಲಿಲ್ಲ ಎಂದು ನಾವು ಗಮನಿಸಿದ್ದೇವೆ. ಪೂರ್ಣ ಸದಸ್ಯತ್ವಕ್ಕಾಗಿ ಪ್ಯಾಲೆಸ್ತೀನ್ ಮಾಡಿರುವ ಮನವಿಯನ್ನು ಪರಿಶೀಲಿಸಿ ಅನುಮೋದಿಸುವ ಭರವಸೆ ನಮಗಿದೆ” ಎಂದಿದ್ದಾರೆ.

“ಕಳೆದ ಆರು ತಿಂಗಳಿನಿಂದ ಗಾಝಾ ಮೇಲೆ ದಾಳಿ ನಡೆಯುತ್ತಿದೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ನಾಗರಿಕರು ಜೀವ ಕಳೆದುಕೊಂಡಿದ್ದಾರೆ. ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಬಲಿಯಾಗಿದ್ದಾರೆ. ಇದು ಸ್ವೀಕಾರ್ಹವಲ್ಲ” ಎಂದು ರುಚಿರಾ ಕಾಂಬೋಜ್ ಹೇಳಿದ್ದಾರೆ.

“ಅಂತಾರಾಷ್ಟ್ರೀಯ ಮಾನವೀಯ ಕಾನೂನುಗಳನ್ನು ಎಲ್ಲಾ ಸಂದರ್ಭಗಳಲ್ಲಿಯೂ, ಎಲ್ಲರೂ ಗೌರವಿಸಬೇಕು” ಎಂದು ರುಚಿರಾ ಹೇಳಿದ್ದು, ಆಕ್ಟೋಬರ್ 7, 2023ರಂದು ಇಸ್ರೇಲ್ ಮೇಲೆ ಹಮಾಸ್ ಗುಂಪು ನಡೆಸಿದ ದಾಳಿಯನ್ನು ಖಂಡಿಸಿದ್ದಾರೆ. ಆದರೆ, ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಾರಣಹೋಮದ ಬಗ್ಗೆ ಅವರು ಚಕಾರವೆತ್ತಿಲ್ಲ.

ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ಎರಡು ದೇಶಗಳ ಜನರು ಸುರಕ್ಷಿತವಾಗಿ ಮತ್ತು ಸ್ವತಂತ್ರವಾಗಿ ಬದುಕಲು ಸಾಧ್ಯವಾಗುವಂತಹ ದ್ವಿರಾಷ್ಟ್ರ ಸೂತ್ರವನ್ನು ಬೆಂಬಲಿಸುವುದಾಗಿ ರುಚಿರಾ ಕಾಂಬೋಜ್ ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ : ಘೋರ ಅಪರಾಧದ ಆರೋಪದ ಹೊರತು ಜಾಮೀನು ರಹಿತ ವಾರಂಟ್‌ ಹೊರಡಿಸಬಾರದು: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...