Homeಮುಖಪುಟಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

- Advertisement -
- Advertisement -

ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ.

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಪ್ರತ್ಯೇಕ ರಾಷ್ಟ್ರಗಳಾಗಿ ಗುರುತಿಸುವ ಮೂಲಕ ಸಂಘರ್ಷ ಕೊನೆಗೊಳಿಸಬೇಕೆಂಬ ತನ್ನ ದೀರ್ಘ ಕಾಲದ ನಿಲುವನ್ನು ಭಾರತ ಪುನರುಚ್ಚರಿಸಿದೆ.

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ನೀಡಲು ಅನುಮತಿಸಲು ಮತದಾನ ನಡೆಸುವಂತೆ ಶಿಫಾರಸು ಮಾಡುವ ಕರಡು ನಿರ್ಣಯವನ್ನು ಯುನೈಟೆಡ್ ಸ್ಟೇಟ್ಸ್ (ಯುಎಸ್‌) ಏಪ್ರಿಲ್‌ 18ರಂದು ತಡೆದಿತ್ತು.

ನಿರ್ಣಯದ ಪರವಾಗಿ 12 ಮತಗಳು ಬಿದ್ದಿತ್ತು. ಸ್ವಿಟ್ಜರ್ಲೆಂಡ್ ಮತ್ತು ಯುನೈಟೆಡ್ ಕಿಂಗ್‌ಡಮ್ (ಯುಕೆ) ಮತದಾನದಿಂದ ದೂರ ಉಳಿದಿತ್ತು. ನಿರ್ಣಯದ ಪರವಾಗಿ ಒಂಬತ್ತು ಮತಗಳ ಅಗತ್ಯವಿತ್ತು. ವಿಶ್ವ ಸಂಸ್ಥೆಯ ಖಾಯಂ ಸದಸ್ಯರಾದ ಚೀನಾ, ಫ್ರಾನ್ಸ್, ರಷ್ಯಾ, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ ವೀಟೋ ಪ್ರಯೋಗಿಸಿರಲಿಲ್ಲ.

ಪ್ಯಾಲೆಸ್ತೀನ್ ಪ್ರಸ್ತುತ ವಿಶ್ವಸಂಸ್ಥೆಯಲ್ಲಿ “ಶಾಶ್ವತ ವೀಕ್ಷಕ” ಸ್ಥಾನಮಾನವನ್ನು ಹೊಂದಿದೆ. ಇದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಭೆಗಳಲ್ಲಿ ಮಾತನಾಡಲು ಅವಕಾಶ ನೀಡುತ್ತದೆ. ಆದರೆ, ನಿರ್ಣಯಗಳ ಮೇಲೆ ಮತ ಚಲಾಯಿಸಲು ಅವಕಾಶವಿಲ್ಲ.

ಬುಧವಾರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್ “ವಿಶ್ವಸಂಸ್ಥೆಯಲ್ಲಿ ಸದಸ್ಯತ್ವಕ್ಕಾಗಿ ಪ್ಯಾಲೆಸ್ತೀನ್‌ನ ಅರ್ಜಿಯನ್ನು ಭದ್ರತಾ ಮಂಡಳಿಯು ಮೇಲಿನ ವೀಟೋ ಕಾರಣದಿಂದ ಅನುಮೋದಿಸಲಿಲ್ಲ ಎಂದು ನಾವು ಗಮನಿಸಿದ್ದೇವೆ. ಪೂರ್ಣ ಸದಸ್ಯತ್ವಕ್ಕಾಗಿ ಪ್ಯಾಲೆಸ್ತೀನ್ ಮಾಡಿರುವ ಮನವಿಯನ್ನು ಪರಿಶೀಲಿಸಿ ಅನುಮೋದಿಸುವ ಭರವಸೆ ನಮಗಿದೆ” ಎಂದಿದ್ದಾರೆ.

“ಕಳೆದ ಆರು ತಿಂಗಳಿನಿಂದ ಗಾಝಾ ಮೇಲೆ ದಾಳಿ ನಡೆಯುತ್ತಿದೆ. ಇದರಿಂದ ದೊಡ್ಡ ಪ್ರಮಾಣದಲ್ಲಿ ನಾಗರಿಕರು ಜೀವ ಕಳೆದುಕೊಂಡಿದ್ದಾರೆ. ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಬಲಿಯಾಗಿದ್ದಾರೆ. ಇದು ಸ್ವೀಕಾರ್ಹವಲ್ಲ” ಎಂದು ರುಚಿರಾ ಕಾಂಬೋಜ್ ಹೇಳಿದ್ದಾರೆ.

“ಅಂತಾರಾಷ್ಟ್ರೀಯ ಮಾನವೀಯ ಕಾನೂನುಗಳನ್ನು ಎಲ್ಲಾ ಸಂದರ್ಭಗಳಲ್ಲಿಯೂ, ಎಲ್ಲರೂ ಗೌರವಿಸಬೇಕು” ಎಂದು ರುಚಿರಾ ಹೇಳಿದ್ದು, ಆಕ್ಟೋಬರ್ 7, 2023ರಂದು ಇಸ್ರೇಲ್ ಮೇಲೆ ಹಮಾಸ್ ಗುಂಪು ನಡೆಸಿದ ದಾಳಿಯನ್ನು ಖಂಡಿಸಿದ್ದಾರೆ. ಆದರೆ, ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಮಾರಣಹೋಮದ ಬಗ್ಗೆ ಅವರು ಚಕಾರವೆತ್ತಿಲ್ಲ.

ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ಎರಡು ದೇಶಗಳ ಜನರು ಸುರಕ್ಷಿತವಾಗಿ ಮತ್ತು ಸ್ವತಂತ್ರವಾಗಿ ಬದುಕಲು ಸಾಧ್ಯವಾಗುವಂತಹ ದ್ವಿರಾಷ್ಟ್ರ ಸೂತ್ರವನ್ನು ಬೆಂಬಲಿಸುವುದಾಗಿ ರುಚಿರಾ ಕಾಂಬೋಜ್ ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ : ಘೋರ ಅಪರಾಧದ ಆರೋಪದ ಹೊರತು ಜಾಮೀನು ರಹಿತ ವಾರಂಟ್‌ ಹೊರಡಿಸಬಾರದು: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...