Homeಕರ್ನಾಟಕಭಾರತ್‌ ಬಂದ್: ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಹೇಳಿದ್ದೇನು?

ಭಾರತ್‌ ಬಂದ್: ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಹೇಳಿದ್ದೇನು?

- Advertisement -
- Advertisement -

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಾಸು ಪಡೆಯುವಂತೆ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸಿತ್ತಿದ್ದಾರೆ. ಈ ಹೋರಾಟ ಪ್ರಾರಂಭವಾಗಿ ಹತ್ತು ತಿಂಗಳಾದ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು ಸೋಮವಾರದಂದು ಭಾರತ್‌ ಬಂದ್‌ಗೆ ಕರೆ ನೀಡಿದೆ. ಈ ಕರೆಗೆ ಓಗೊಟ್ಟಿರುವ ರಾಜ್ಯದ ರೈತ, ಕಾರ್ಮಿಕ, ದಲಿತ, ಮಹಿಳಾ, ಕನ್ನಡ ಪರ, ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳೂ ಬಂದ್‌ಗೆ ಬೆಂಬಲಿಸಿದ್ದವು.

ಈ ಹಿನ್ನಲೆಯಲ್ಲಿ ಬೆಂಗಳೂರಿಗೂ ಬಂದ್‌ ಬಿಸಿ ತಟ್ಟಿದೆ. ಬೆಳಿಗ್ಗೆಯಿಂದಲೂ ನಗರದ ಟೌನ್‌ಹಾಲ್‌ನಲ್ಲಿ ಜಮಾಯಿಸಿದ್ದ ರೈತ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಟೌನ್‌ಹಾಲ್‌ನಲ್ಲಿ ಸಮಾವೇಶಗೊಂಡ ರೈತರು ಅಲ್ಲಿಂದ ಮೆರವಣಿಗೆಯ ಮೂಲಕ ಮೈಸೂರು ಬ್ಯಾಂಗ್ ವೃತ್ತಕ್ಕೆ ಆಗಮಿಸಿ ಪ್ರತಿಭಟನೆಯನ್ನು ಮುಂದುವರೆಸಿದರು.

ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಪ್ರತಿಭಟನೆಯ ಸಮಾರೋಪ ಸಭೆಯಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದ ಬಯ್ಯಾ ರೆಡ್ಡಿ, “ರೈತರು ಕರೆ ನೀಡಿದ್ದ ಭಾರತ ಬಂದ್‌ಗೆ ಕರ್ನಾಟಕ ರಾಜ್ಯದ ಜನರು ಓಗೊಟ್ಟು ಬಂದ್‌‌ ಅನ್ನು ಯಶಸ್ವಿಗೊಳಿಸಿದ್ದಾರೆ. ರೈತ ಮತ್ತು ಕಾರ್ಮಿಕ ಮುಖಂಡರ ಬಂಧನವನ್ನು ಮಾಡಿದ ನಂತರ ಕೂಡಾ ಬಂದ್‌ ಯಶಸ್ವಿಯಾಗಿದೆ. ಬಂದ್‌ ಯಶಸ್ವಿಯಾಗಬಾರದು ಎಂದು ಸರ್ಕಾರವು ಸಾರಿಗೆಗಳನ್ನು ಖಾಲಿಖಾಲಿಯಾಗಿ ಓಡಿಸುತ್ತಿದೆ” ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, “ರಾಜ್ಯದಲ್ಲಿ ‘ಭಾರತ್‌ ಬಂದ್’ ಯಶಸ್ವಿಯಾಗಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರೈತ ಆಂದೋಲನದಲ್ಲಿ 11 ಲಕ್ಷ ಜನರು ಭಾಷೆ, ಧರ್ಮ, ಗಡಿಗಳನ್ನು ಮೀರಿ ಸೇರಿದ್ದರು. ದೇಶದಲ್ಲಿ ಚಳವಳಿಗಳ ಯುಗ ಪ್ರಾರಂಭವಾಗಿದೆ, ಆದರೆ ಇದಕ್ಕೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ಸಿಗುತ್ತಿಲ್ಲ. ಅದಕ್ಕಾಗಿ ರೈತರು ಸಮಾಜಿಕ ಜಾಲತಾಣವನ್ನು ಬಳಸಿಕೊಂಡು ದೇಶದ 130 ಕೋಟಿ ಜನರನ್ನು ತಲುಪುತ್ತಿದ್ದೇವೆ” ಎಂದರು.

“ಸರ್ಕಾರ ಜಾರಿಗೆ ತಂದಿರುವ ಕಾನೂನುಗಳನ್ನು 18 ತಿಂಗಳು ಅಮಾನತ್ತಿನಲ್ಲಿ ಇಟ್ಟಿದೆ. ಅಂದರೆ ಒಂದು ರೀತಿಯಲ್ಲಿ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಇದೀಗ ಕಾನೂನುಗಳು ನಮ್ಮ ಪಾಲಿಗೆ ಸತ್ತು ಹೋಗಿದೆ. ನಾವೀಗ ಅದರ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ. ನವೆಂಬರ್‌ನಲ್ಲಿ ಇದಕ್ಕಿಂತಲೂ ದೊಡ್ಡ ಹೋರಾಟ ದೆಹಲಿಯಲ್ಲಿ ನಡೆಲಿದೆ. ಮುಂದಿನ ದಿನಗಳಲ್ಲಿ ದೆಹಲಿಯಿಂದ ಬಿಜೆಪಿಯನ್ನು ಓಡಿಸುವಂತಹ ಮತ್ತು ಅಲ್ಲಿನ ಗದ್ದುಗೆಯ ಹತ್ತಿರ ಸುಳಿಯುವಂತಹ ನಿರ್ಣಯವನ್ನು ಕೈಗೊಳ್ಳುತ್ತೇವೆ” ಎಂದು ನಾಗೇಂದ್ರ ಅವರು ಹೇಳಿದರು.

ಇದನ್ನೂ ಓದಿ: ಭಾರತ್ ಬಂದ್: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಚಿತ್ರಗಳು, ವಿಡಿಯೊ ನೋಡಿ…

ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಕಳೆದ ಹತ್ತು ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಒಕ್ಕೂಟ ಸರ್ಕಾವು ರೈತರಿಂದ ದಿಗ್ಬಂಧನಕ್ಕೆ ಒಳಗಾಗಿದೆ. ಅನ್ನವನ್ನು ಐಟಿ ಬಿಟಿ ಕಂಪೆನಿಗಳಲ್ಲಿ ಬೆಳೆಯಲು ಸಾಧ್ಯವಿಲ್ಲ. ಅದನ್ನು ಭೂಮಿಯಲ್ಲಷ್ಟೇ ಬೆಳೆಯಲು ಸಾಧ್ಯ. ರೈತರ ಬೆವರು ಹರಿದರೆ ಮಾತ್ರ ಅಂಬಾನಿ ಅದಾನಿಯ ಮಾಲ್‌ಗಳು ತುಂಬುತ್ತದೆ. ಪ್ರಧಾನಿ ಮೋದಿಗೆ ರೈತರನ್ನು ಉದ್ದೇಶಿಸಿ ಮಾತನಾಡುವ ಯೋಗ್ಯತೆ, ಧೈರ್ಯ ಇಲ್ಲ. ಒಕ್ಕೂಟ ಸರ್ಕಾರ ಕ್ಯಾಕರಿಸಿ ಉಗುಳಿದರೆ ಅದನ್ನೇ ಪ್ರಸಾದ ಎಂದು ರಾಜ್ಯದ ಬಿಜೆಪಿ ಸರ್ಕಾರ ತಿಳಿದುಕೊಂಡಿದೆ” ಎಂದು ಹೇಳಿದರು.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್‌ಆರ್‌ ಬೊಮ್ಮಾಯಿ ಅವರು ದೇಶದ ಖ್ಯಾತ ಕಮ್ಯುನಿಷ್ಟ್‌ ಚಿಂತಕ ಎಂಎನ್‌ ರಾಯ್ ಅವರ ವಿಚಾರಧಾರೆಗಳಲ್ಲಿ ನಂಬಿಕೆ ಇಟ್ಟವರು. ಆದರೆ ಅವರ ಮಗ ಮುಖ್ಯಮಂತ್ರಿ ಬಸವರಾಜ್ ಅವರು ಕೇಶವಕೃಪಾದ ಗುಲಾಮರಾಗಿದ್ದಾರೆ. ರೈತರ ಹೋರಾಟವು ‘ಪ್ರಾಯೋಜಿತ’ ಎಂದು ಅವರು ಹೇಳುತ್ತಾರೆ. ಹಾಗಾದರೆ ನಿಮ್ಮನ್ನು ಅಧಿಕಾರಕ್ಕೆ ತಂದವರು ಯಾರು? ನಿಮ್ಮನ್ನು ಪ್ರಾಯೋಜಿಸಿದವರು ಯಾರು? ಕರ್ನಾಟಕದಲ್ಲಿ ಬಿಜೆಪಿ ಸರ್ಕಾರಕ್ಕೆ ದುಡ್ಡು ಕೊಟ್ಟವರು ಯಾರು? ಒಕ್ಕೂಟ ಸರ್ಕಾರದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಹಣ ನೀಡಿದವರು ಯಾರು? ಎಂದು ನಾವು ಪ್ರಶ್ನಿಸುತ್ತೇವೆ. ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವುದು ಮತ್ತೊಂದು ಸ್ವಾತಂತ್ಯ್ರ ಹೋರಾಟ” ಎಂದು ಮಾವಳ್ಳಿ ಶಂಕರ್‌ ಅವರು ತಿಳಿಸಿದರು.

ಇದನ್ನೂ ಓದಿ: ಭಾರತ್‌ ಬಂದ್‌: ಅನ್ನದಾತನ ಹೋರಾಟಕ್ಕೆ ದನಿಗೂಡಿಸಿದ ಮಹಾನಗರ ಬೆಂಗಳೂರು

ನಂತರ ಮಾತನಾಡಿದ ಸಿಐಟಿಯು ಅಧ್ಯಕ್ಷರಾದ ಎಸ್‌. ವರಲಕ್ಷ್ಮಿ ಅವರು,“ದೇಶಕ್ಕೆ ಅನ್ನ ನೀಡುವ ರೈತರು, ಸುಮಾರು ಒಂದು ವರ್ಷದಿಂದ ದೆಹಲಿಯ ಹೆದ್ದಾರಿಗಳಲ್ಲೇ ತಮ್ಮ ಮನೆಯನ್ನಾಗಿ ಮಾಡಿಕೊಂಡು ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಟ ಮಾಡುತ್ತಿದ್ದಾರೆ. ಅದಕ್ಕಾಗಿ ದೇಶದ ಭಾಗಶಃ ಎಲ್ಲಾ ಸಂಘಟನೆಗಳು ಈ ಹೋರಾಟವನ್ನು ಬೆಂಬಲಿಸಿದೆ. ದೇಶದಲ್ಲಿ ನಡೆಯುತ್ತಿರುವ ಹೋರಾಟವು ದೇಶದ ಚರಿತ್ರೆಯಲ್ಲಿ ದಾಖಲು ಮಾಡಬೇಕಾದ ಹೋರಾಟವಾಗಿದೆ. ಇದು ರೈತನ ಸ್ವಾಭಿಮಾನ ಮತ್ತು ಸ್ವಾತಂತ್ಯ್ರವನ್ನು ಉಳಿಸಿಕೊಳ್ಳಲು ಮಾಡುತ್ತಿರುವ ಹೋರಾಟ. ಹಾಗಾಗಿಯೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವಂತಹ ಎಲ್ಲರೂ ಇದರಲ್ಲಿ ಪಾಲ್ಗೊಂಡಿದ್ದಾರೆ” ಎಂದು ಹೇಳಿದರು.

“ಸರ್ಕಾರ ಜಾರಿಗೆ ತಂದಿರುವ ನೀತಿಗಳನ್ನು ವಾಪಾಸು ಪಡೆಯುವ ತನಕವು, ನಮ್ಮ ಹೋರಾಟ ಮುಂದುವರೆಯಲಿದೆ. ಇದು ಯಾವುದೆ ಕಾರಣಕ್ಕೂ ನಿಲ್ಲಲ್ಲ ಎಂಬುವುದನ್ನು ಸಾರಿ ಸಾರಿ ಹೇಳುತ್ತೇವೆ. ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್‌. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ. ಬದಲಾಗಿ ಖಾಸಗಿ ಬಂಡವಾಳಶಾಹಿಗಳ, ಕಾರ್ಪೋರೇಟ್‌ಗಳ ಮತ್ತ ವಿದೇಶಿ ಬಂಡವಾಳಗಾರರ ಪರವಾಗಿ ನಿಲ್ಲುತ್ತಿದೆ” ಎಂದು ವರಲಕ್ಷ್ಮಿ ಆಕ್ರೋಶ ವ್ಯಕ್ತಪಡಿಸಿದರು.

ಜೊತೆಗೆ ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್‌, ಭೂಮಿ ಮತ್ತು ವಸತಿ ವಂಚಿತ ಹಕ್ಕುಗಳ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್‌ ಕೆರೆಗೊಡು, ಜನವಾದಿ ಮಹಿಳಾ ಸಂಘನೆಯ ಗೌರಮ್ಮ, ಇಂಟಕ್‌ ಮುಖಂಡರು, ಚಾಲಕರ ಸಂಘಟನೆಗಳ ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಮಾತನಾಡಿ ರಾಜ್ಯ ಮತ್ತು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುಖ್ಯಮಂತ್ರಿಯವರೇ, ರೈತ ಹೋರಾಟ ಪ್ರಾಯೋಜಿತವಾದರೆ ತಪ್ಪೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...