Homeಕರ್ನಾಟಕಭಾರತ್‌ ಬಂದ್: ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಹೇಳಿದ್ದೇನು?

ಭಾರತ್‌ ಬಂದ್: ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಹೇಳಿದ್ದೇನು?

- Advertisement -
- Advertisement -

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಾಸು ಪಡೆಯುವಂತೆ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸಿತ್ತಿದ್ದಾರೆ. ಈ ಹೋರಾಟ ಪ್ರಾರಂಭವಾಗಿ ಹತ್ತು ತಿಂಗಳಾದ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು ಸೋಮವಾರದಂದು ಭಾರತ್‌ ಬಂದ್‌ಗೆ ಕರೆ ನೀಡಿದೆ. ಈ ಕರೆಗೆ ಓಗೊಟ್ಟಿರುವ ರಾಜ್ಯದ ರೈತ, ಕಾರ್ಮಿಕ, ದಲಿತ, ಮಹಿಳಾ, ಕನ್ನಡ ಪರ, ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳೂ ಬಂದ್‌ಗೆ ಬೆಂಬಲಿಸಿದ್ದವು.

ಈ ಹಿನ್ನಲೆಯಲ್ಲಿ ಬೆಂಗಳೂರಿಗೂ ಬಂದ್‌ ಬಿಸಿ ತಟ್ಟಿದೆ. ಬೆಳಿಗ್ಗೆಯಿಂದಲೂ ನಗರದ ಟೌನ್‌ಹಾಲ್‌ನಲ್ಲಿ ಜಮಾಯಿಸಿದ್ದ ರೈತ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಟೌನ್‌ಹಾಲ್‌ನಲ್ಲಿ ಸಮಾವೇಶಗೊಂಡ ರೈತರು ಅಲ್ಲಿಂದ ಮೆರವಣಿಗೆಯ ಮೂಲಕ ಮೈಸೂರು ಬ್ಯಾಂಗ್ ವೃತ್ತಕ್ಕೆ ಆಗಮಿಸಿ ಪ್ರತಿಭಟನೆಯನ್ನು ಮುಂದುವರೆಸಿದರು.

ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಪ್ರತಿಭಟನೆಯ ಸಮಾರೋಪ ಸಭೆಯಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದ ಬಯ್ಯಾ ರೆಡ್ಡಿ, “ರೈತರು ಕರೆ ನೀಡಿದ್ದ ಭಾರತ ಬಂದ್‌ಗೆ ಕರ್ನಾಟಕ ರಾಜ್ಯದ ಜನರು ಓಗೊಟ್ಟು ಬಂದ್‌‌ ಅನ್ನು ಯಶಸ್ವಿಗೊಳಿಸಿದ್ದಾರೆ. ರೈತ ಮತ್ತು ಕಾರ್ಮಿಕ ಮುಖಂಡರ ಬಂಧನವನ್ನು ಮಾಡಿದ ನಂತರ ಕೂಡಾ ಬಂದ್‌ ಯಶಸ್ವಿಯಾಗಿದೆ. ಬಂದ್‌ ಯಶಸ್ವಿಯಾಗಬಾರದು ಎಂದು ಸರ್ಕಾರವು ಸಾರಿಗೆಗಳನ್ನು ಖಾಲಿಖಾಲಿಯಾಗಿ ಓಡಿಸುತ್ತಿದೆ” ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, “ರಾಜ್ಯದಲ್ಲಿ ‘ಭಾರತ್‌ ಬಂದ್’ ಯಶಸ್ವಿಯಾಗಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರೈತ ಆಂದೋಲನದಲ್ಲಿ 11 ಲಕ್ಷ ಜನರು ಭಾಷೆ, ಧರ್ಮ, ಗಡಿಗಳನ್ನು ಮೀರಿ ಸೇರಿದ್ದರು. ದೇಶದಲ್ಲಿ ಚಳವಳಿಗಳ ಯುಗ ಪ್ರಾರಂಭವಾಗಿದೆ, ಆದರೆ ಇದಕ್ಕೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ಸಿಗುತ್ತಿಲ್ಲ. ಅದಕ್ಕಾಗಿ ರೈತರು ಸಮಾಜಿಕ ಜಾಲತಾಣವನ್ನು ಬಳಸಿಕೊಂಡು ದೇಶದ 130 ಕೋಟಿ ಜನರನ್ನು ತಲುಪುತ್ತಿದ್ದೇವೆ” ಎಂದರು.

“ಸರ್ಕಾರ ಜಾರಿಗೆ ತಂದಿರುವ ಕಾನೂನುಗಳನ್ನು 18 ತಿಂಗಳು ಅಮಾನತ್ತಿನಲ್ಲಿ ಇಟ್ಟಿದೆ. ಅಂದರೆ ಒಂದು ರೀತಿಯಲ್ಲಿ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಇದೀಗ ಕಾನೂನುಗಳು ನಮ್ಮ ಪಾಲಿಗೆ ಸತ್ತು ಹೋಗಿದೆ. ನಾವೀಗ ಅದರ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ. ನವೆಂಬರ್‌ನಲ್ಲಿ ಇದಕ್ಕಿಂತಲೂ ದೊಡ್ಡ ಹೋರಾಟ ದೆಹಲಿಯಲ್ಲಿ ನಡೆಲಿದೆ. ಮುಂದಿನ ದಿನಗಳಲ್ಲಿ ದೆಹಲಿಯಿಂದ ಬಿಜೆಪಿಯನ್ನು ಓಡಿಸುವಂತಹ ಮತ್ತು ಅಲ್ಲಿನ ಗದ್ದುಗೆಯ ಹತ್ತಿರ ಸುಳಿಯುವಂತಹ ನಿರ್ಣಯವನ್ನು ಕೈಗೊಳ್ಳುತ್ತೇವೆ” ಎಂದು ನಾಗೇಂದ್ರ ಅವರು ಹೇಳಿದರು.

ಇದನ್ನೂ ಓದಿ: ಭಾರತ್ ಬಂದ್: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಚಿತ್ರಗಳು, ವಿಡಿಯೊ ನೋಡಿ…

ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಕಳೆದ ಹತ್ತು ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಒಕ್ಕೂಟ ಸರ್ಕಾವು ರೈತರಿಂದ ದಿಗ್ಬಂಧನಕ್ಕೆ ಒಳಗಾಗಿದೆ. ಅನ್ನವನ್ನು ಐಟಿ ಬಿಟಿ ಕಂಪೆನಿಗಳಲ್ಲಿ ಬೆಳೆಯಲು ಸಾಧ್ಯವಿಲ್ಲ. ಅದನ್ನು ಭೂಮಿಯಲ್ಲಷ್ಟೇ ಬೆಳೆಯಲು ಸಾಧ್ಯ. ರೈತರ ಬೆವರು ಹರಿದರೆ ಮಾತ್ರ ಅಂಬಾನಿ ಅದಾನಿಯ ಮಾಲ್‌ಗಳು ತುಂಬುತ್ತದೆ. ಪ್ರಧಾನಿ ಮೋದಿಗೆ ರೈತರನ್ನು ಉದ್ದೇಶಿಸಿ ಮಾತನಾಡುವ ಯೋಗ್ಯತೆ, ಧೈರ್ಯ ಇಲ್ಲ. ಒಕ್ಕೂಟ ಸರ್ಕಾರ ಕ್ಯಾಕರಿಸಿ ಉಗುಳಿದರೆ ಅದನ್ನೇ ಪ್ರಸಾದ ಎಂದು ರಾಜ್ಯದ ಬಿಜೆಪಿ ಸರ್ಕಾರ ತಿಳಿದುಕೊಂಡಿದೆ” ಎಂದು ಹೇಳಿದರು.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್‌ಆರ್‌ ಬೊಮ್ಮಾಯಿ ಅವರು ದೇಶದ ಖ್ಯಾತ ಕಮ್ಯುನಿಷ್ಟ್‌ ಚಿಂತಕ ಎಂಎನ್‌ ರಾಯ್ ಅವರ ವಿಚಾರಧಾರೆಗಳಲ್ಲಿ ನಂಬಿಕೆ ಇಟ್ಟವರು. ಆದರೆ ಅವರ ಮಗ ಮುಖ್ಯಮಂತ್ರಿ ಬಸವರಾಜ್ ಅವರು ಕೇಶವಕೃಪಾದ ಗುಲಾಮರಾಗಿದ್ದಾರೆ. ರೈತರ ಹೋರಾಟವು ‘ಪ್ರಾಯೋಜಿತ’ ಎಂದು ಅವರು ಹೇಳುತ್ತಾರೆ. ಹಾಗಾದರೆ ನಿಮ್ಮನ್ನು ಅಧಿಕಾರಕ್ಕೆ ತಂದವರು ಯಾರು? ನಿಮ್ಮನ್ನು ಪ್ರಾಯೋಜಿಸಿದವರು ಯಾರು? ಕರ್ನಾಟಕದಲ್ಲಿ ಬಿಜೆಪಿ ಸರ್ಕಾರಕ್ಕೆ ದುಡ್ಡು ಕೊಟ್ಟವರು ಯಾರು? ಒಕ್ಕೂಟ ಸರ್ಕಾರದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಹಣ ನೀಡಿದವರು ಯಾರು? ಎಂದು ನಾವು ಪ್ರಶ್ನಿಸುತ್ತೇವೆ. ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವುದು ಮತ್ತೊಂದು ಸ್ವಾತಂತ್ಯ್ರ ಹೋರಾಟ” ಎಂದು ಮಾವಳ್ಳಿ ಶಂಕರ್‌ ಅವರು ತಿಳಿಸಿದರು.

ಇದನ್ನೂ ಓದಿ: ಭಾರತ್‌ ಬಂದ್‌: ಅನ್ನದಾತನ ಹೋರಾಟಕ್ಕೆ ದನಿಗೂಡಿಸಿದ ಮಹಾನಗರ ಬೆಂಗಳೂರು

ನಂತರ ಮಾತನಾಡಿದ ಸಿಐಟಿಯು ಅಧ್ಯಕ್ಷರಾದ ಎಸ್‌. ವರಲಕ್ಷ್ಮಿ ಅವರು,“ದೇಶಕ್ಕೆ ಅನ್ನ ನೀಡುವ ರೈತರು, ಸುಮಾರು ಒಂದು ವರ್ಷದಿಂದ ದೆಹಲಿಯ ಹೆದ್ದಾರಿಗಳಲ್ಲೇ ತಮ್ಮ ಮನೆಯನ್ನಾಗಿ ಮಾಡಿಕೊಂಡು ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಟ ಮಾಡುತ್ತಿದ್ದಾರೆ. ಅದಕ್ಕಾಗಿ ದೇಶದ ಭಾಗಶಃ ಎಲ್ಲಾ ಸಂಘಟನೆಗಳು ಈ ಹೋರಾಟವನ್ನು ಬೆಂಬಲಿಸಿದೆ. ದೇಶದಲ್ಲಿ ನಡೆಯುತ್ತಿರುವ ಹೋರಾಟವು ದೇಶದ ಚರಿತ್ರೆಯಲ್ಲಿ ದಾಖಲು ಮಾಡಬೇಕಾದ ಹೋರಾಟವಾಗಿದೆ. ಇದು ರೈತನ ಸ್ವಾಭಿಮಾನ ಮತ್ತು ಸ್ವಾತಂತ್ಯ್ರವನ್ನು ಉಳಿಸಿಕೊಳ್ಳಲು ಮಾಡುತ್ತಿರುವ ಹೋರಾಟ. ಹಾಗಾಗಿಯೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವಂತಹ ಎಲ್ಲರೂ ಇದರಲ್ಲಿ ಪಾಲ್ಗೊಂಡಿದ್ದಾರೆ” ಎಂದು ಹೇಳಿದರು.

“ಸರ್ಕಾರ ಜಾರಿಗೆ ತಂದಿರುವ ನೀತಿಗಳನ್ನು ವಾಪಾಸು ಪಡೆಯುವ ತನಕವು, ನಮ್ಮ ಹೋರಾಟ ಮುಂದುವರೆಯಲಿದೆ. ಇದು ಯಾವುದೆ ಕಾರಣಕ್ಕೂ ನಿಲ್ಲಲ್ಲ ಎಂಬುವುದನ್ನು ಸಾರಿ ಸಾರಿ ಹೇಳುತ್ತೇವೆ. ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್‌. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ. ಬದಲಾಗಿ ಖಾಸಗಿ ಬಂಡವಾಳಶಾಹಿಗಳ, ಕಾರ್ಪೋರೇಟ್‌ಗಳ ಮತ್ತ ವಿದೇಶಿ ಬಂಡವಾಳಗಾರರ ಪರವಾಗಿ ನಿಲ್ಲುತ್ತಿದೆ” ಎಂದು ವರಲಕ್ಷ್ಮಿ ಆಕ್ರೋಶ ವ್ಯಕ್ತಪಡಿಸಿದರು.

ಜೊತೆಗೆ ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್‌, ಭೂಮಿ ಮತ್ತು ವಸತಿ ವಂಚಿತ ಹಕ್ಕುಗಳ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್‌ ಕೆರೆಗೊಡು, ಜನವಾದಿ ಮಹಿಳಾ ಸಂಘನೆಯ ಗೌರಮ್ಮ, ಇಂಟಕ್‌ ಮುಖಂಡರು, ಚಾಲಕರ ಸಂಘಟನೆಗಳ ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಮಾತನಾಡಿ ರಾಜ್ಯ ಮತ್ತು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುಖ್ಯಮಂತ್ರಿಯವರೇ, ರೈತ ಹೋರಾಟ ಪ್ರಾಯೋಜಿತವಾದರೆ ತಪ್ಪೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...