Homeಕರ್ನಾಟಕಭಾರತ್‌ ಬಂದ್: ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಹೇಳಿದ್ದೇನು?

ಭಾರತ್‌ ಬಂದ್: ಬೆಂಗಳೂರಿನಲ್ಲಿ ರೈತ ಸಂಘಟನೆಗಳು ಹೇಳಿದ್ದೇನು?

- Advertisement -
- Advertisement -

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಾಪಾಸು ಪಡೆಯುವಂತೆ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸಿತ್ತಿದ್ದಾರೆ. ಈ ಹೋರಾಟ ಪ್ರಾರಂಭವಾಗಿ ಹತ್ತು ತಿಂಗಳಾದ ಹಿನ್ನಲೆಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾವು ಸೋಮವಾರದಂದು ಭಾರತ್‌ ಬಂದ್‌ಗೆ ಕರೆ ನೀಡಿದೆ. ಈ ಕರೆಗೆ ಓಗೊಟ್ಟಿರುವ ರಾಜ್ಯದ ರೈತ, ಕಾರ್ಮಿಕ, ದಲಿತ, ಮಹಿಳಾ, ಕನ್ನಡ ಪರ, ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿದಂತೆ ಹಲವಾರು ರಾಜಕೀಯ ಪಕ್ಷಗಳೂ ಬಂದ್‌ಗೆ ಬೆಂಬಲಿಸಿದ್ದವು.

ಈ ಹಿನ್ನಲೆಯಲ್ಲಿ ಬೆಂಗಳೂರಿಗೂ ಬಂದ್‌ ಬಿಸಿ ತಟ್ಟಿದೆ. ಬೆಳಿಗ್ಗೆಯಿಂದಲೂ ನಗರದ ಟೌನ್‌ಹಾಲ್‌ನಲ್ಲಿ ಜಮಾಯಿಸಿದ್ದ ರೈತ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಟೌನ್‌ಹಾಲ್‌ನಲ್ಲಿ ಸಮಾವೇಶಗೊಂಡ ರೈತರು ಅಲ್ಲಿಂದ ಮೆರವಣಿಗೆಯ ಮೂಲಕ ಮೈಸೂರು ಬ್ಯಾಂಗ್ ವೃತ್ತಕ್ಕೆ ಆಗಮಿಸಿ ಪ್ರತಿಭಟನೆಯನ್ನು ಮುಂದುವರೆಸಿದರು.

ಇದನ್ನೂ ಓದಿ: ರೈತರ ಆಕ್ರೋಶ ಸ್ಫೋಟ – ಎಲ್ಲೆಡೆ ಆರಂಭಗೊಂಡ ಭಾರತ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

ಪ್ರತಿಭಟನೆಯ ಸಮಾರೋಪ ಸಭೆಯಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದ ಬಯ್ಯಾ ರೆಡ್ಡಿ, “ರೈತರು ಕರೆ ನೀಡಿದ್ದ ಭಾರತ ಬಂದ್‌ಗೆ ಕರ್ನಾಟಕ ರಾಜ್ಯದ ಜನರು ಓಗೊಟ್ಟು ಬಂದ್‌‌ ಅನ್ನು ಯಶಸ್ವಿಗೊಳಿಸಿದ್ದಾರೆ. ರೈತ ಮತ್ತು ಕಾರ್ಮಿಕ ಮುಖಂಡರ ಬಂಧನವನ್ನು ಮಾಡಿದ ನಂತರ ಕೂಡಾ ಬಂದ್‌ ಯಶಸ್ವಿಯಾಗಿದೆ. ಬಂದ್‌ ಯಶಸ್ವಿಯಾಗಬಾರದು ಎಂದು ಸರ್ಕಾರವು ಸಾರಿಗೆಗಳನ್ನು ಖಾಲಿಖಾಲಿಯಾಗಿ ಓಡಿಸುತ್ತಿದೆ” ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಮಾತನಾಡಿ, “ರಾಜ್ಯದಲ್ಲಿ ‘ಭಾರತ್‌ ಬಂದ್’ ಯಶಸ್ವಿಯಾಗಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ರೈತ ಆಂದೋಲನದಲ್ಲಿ 11 ಲಕ್ಷ ಜನರು ಭಾಷೆ, ಧರ್ಮ, ಗಡಿಗಳನ್ನು ಮೀರಿ ಸೇರಿದ್ದರು. ದೇಶದಲ್ಲಿ ಚಳವಳಿಗಳ ಯುಗ ಪ್ರಾರಂಭವಾಗಿದೆ, ಆದರೆ ಇದಕ್ಕೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರ ಸಿಗುತ್ತಿಲ್ಲ. ಅದಕ್ಕಾಗಿ ರೈತರು ಸಮಾಜಿಕ ಜಾಲತಾಣವನ್ನು ಬಳಸಿಕೊಂಡು ದೇಶದ 130 ಕೋಟಿ ಜನರನ್ನು ತಲುಪುತ್ತಿದ್ದೇವೆ” ಎಂದರು.

“ಸರ್ಕಾರ ಜಾರಿಗೆ ತಂದಿರುವ ಕಾನೂನುಗಳನ್ನು 18 ತಿಂಗಳು ಅಮಾನತ್ತಿನಲ್ಲಿ ಇಟ್ಟಿದೆ. ಅಂದರೆ ಒಂದು ರೀತಿಯಲ್ಲಿ ನಮ್ಮ ಹೋರಾಟಕ್ಕೆ ಜಯ ಸಿಕ್ಕಿದೆ. ಇದೀಗ ಕಾನೂನುಗಳು ನಮ್ಮ ಪಾಲಿಗೆ ಸತ್ತು ಹೋಗಿದೆ. ನಾವೀಗ ಅದರ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ. ನವೆಂಬರ್‌ನಲ್ಲಿ ಇದಕ್ಕಿಂತಲೂ ದೊಡ್ಡ ಹೋರಾಟ ದೆಹಲಿಯಲ್ಲಿ ನಡೆಲಿದೆ. ಮುಂದಿನ ದಿನಗಳಲ್ಲಿ ದೆಹಲಿಯಿಂದ ಬಿಜೆಪಿಯನ್ನು ಓಡಿಸುವಂತಹ ಮತ್ತು ಅಲ್ಲಿನ ಗದ್ದುಗೆಯ ಹತ್ತಿರ ಸುಳಿಯುವಂತಹ ನಿರ್ಣಯವನ್ನು ಕೈಗೊಳ್ಳುತ್ತೇವೆ” ಎಂದು ನಾಗೇಂದ್ರ ಅವರು ಹೇಳಿದರು.

ಇದನ್ನೂ ಓದಿ: ಭಾರತ್ ಬಂದ್: ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಚಿತ್ರಗಳು, ವಿಡಿಯೊ ನೋಡಿ…

ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಕಳೆದ ಹತ್ತು ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಒಕ್ಕೂಟ ಸರ್ಕಾವು ರೈತರಿಂದ ದಿಗ್ಬಂಧನಕ್ಕೆ ಒಳಗಾಗಿದೆ. ಅನ್ನವನ್ನು ಐಟಿ ಬಿಟಿ ಕಂಪೆನಿಗಳಲ್ಲಿ ಬೆಳೆಯಲು ಸಾಧ್ಯವಿಲ್ಲ. ಅದನ್ನು ಭೂಮಿಯಲ್ಲಷ್ಟೇ ಬೆಳೆಯಲು ಸಾಧ್ಯ. ರೈತರ ಬೆವರು ಹರಿದರೆ ಮಾತ್ರ ಅಂಬಾನಿ ಅದಾನಿಯ ಮಾಲ್‌ಗಳು ತುಂಬುತ್ತದೆ. ಪ್ರಧಾನಿ ಮೋದಿಗೆ ರೈತರನ್ನು ಉದ್ದೇಶಿಸಿ ಮಾತನಾಡುವ ಯೋಗ್ಯತೆ, ಧೈರ್ಯ ಇಲ್ಲ. ಒಕ್ಕೂಟ ಸರ್ಕಾರ ಕ್ಯಾಕರಿಸಿ ಉಗುಳಿದರೆ ಅದನ್ನೇ ಪ್ರಸಾದ ಎಂದು ರಾಜ್ಯದ ಬಿಜೆಪಿ ಸರ್ಕಾರ ತಿಳಿದುಕೊಂಡಿದೆ” ಎಂದು ಹೇಳಿದರು.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್‌ಆರ್‌ ಬೊಮ್ಮಾಯಿ ಅವರು ದೇಶದ ಖ್ಯಾತ ಕಮ್ಯುನಿಷ್ಟ್‌ ಚಿಂತಕ ಎಂಎನ್‌ ರಾಯ್ ಅವರ ವಿಚಾರಧಾರೆಗಳಲ್ಲಿ ನಂಬಿಕೆ ಇಟ್ಟವರು. ಆದರೆ ಅವರ ಮಗ ಮುಖ್ಯಮಂತ್ರಿ ಬಸವರಾಜ್ ಅವರು ಕೇಶವಕೃಪಾದ ಗುಲಾಮರಾಗಿದ್ದಾರೆ. ರೈತರ ಹೋರಾಟವು ‘ಪ್ರಾಯೋಜಿತ’ ಎಂದು ಅವರು ಹೇಳುತ್ತಾರೆ. ಹಾಗಾದರೆ ನಿಮ್ಮನ್ನು ಅಧಿಕಾರಕ್ಕೆ ತಂದವರು ಯಾರು? ನಿಮ್ಮನ್ನು ಪ್ರಾಯೋಜಿಸಿದವರು ಯಾರು? ಕರ್ನಾಟಕದಲ್ಲಿ ಬಿಜೆಪಿ ಸರ್ಕಾರಕ್ಕೆ ದುಡ್ಡು ಕೊಟ್ಟವರು ಯಾರು? ಒಕ್ಕೂಟ ಸರ್ಕಾರದಲ್ಲಿ ಬಿಜೆಪಿ ಅಧಿಕಾರ ಹಿಡಿಯಲು ಹಣ ನೀಡಿದವರು ಯಾರು? ಎಂದು ನಾವು ಪ್ರಶ್ನಿಸುತ್ತೇವೆ. ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವುದು ಮತ್ತೊಂದು ಸ್ವಾತಂತ್ಯ್ರ ಹೋರಾಟ” ಎಂದು ಮಾವಳ್ಳಿ ಶಂಕರ್‌ ಅವರು ತಿಳಿಸಿದರು.

ಇದನ್ನೂ ಓದಿ: ಭಾರತ್‌ ಬಂದ್‌: ಅನ್ನದಾತನ ಹೋರಾಟಕ್ಕೆ ದನಿಗೂಡಿಸಿದ ಮಹಾನಗರ ಬೆಂಗಳೂರು

ನಂತರ ಮಾತನಾಡಿದ ಸಿಐಟಿಯು ಅಧ್ಯಕ್ಷರಾದ ಎಸ್‌. ವರಲಕ್ಷ್ಮಿ ಅವರು,“ದೇಶಕ್ಕೆ ಅನ್ನ ನೀಡುವ ರೈತರು, ಸುಮಾರು ಒಂದು ವರ್ಷದಿಂದ ದೆಹಲಿಯ ಹೆದ್ದಾರಿಗಳಲ್ಲೇ ತಮ್ಮ ಮನೆಯನ್ನಾಗಿ ಮಾಡಿಕೊಂಡು ತಮ್ಮ ಜೀವನವನ್ನೇ ಪಣಕ್ಕಿಟ್ಟು ಹೋರಾಟ ಮಾಡುತ್ತಿದ್ದಾರೆ. ಅದಕ್ಕಾಗಿ ದೇಶದ ಭಾಗಶಃ ಎಲ್ಲಾ ಸಂಘಟನೆಗಳು ಈ ಹೋರಾಟವನ್ನು ಬೆಂಬಲಿಸಿದೆ. ದೇಶದಲ್ಲಿ ನಡೆಯುತ್ತಿರುವ ಹೋರಾಟವು ದೇಶದ ಚರಿತ್ರೆಯಲ್ಲಿ ದಾಖಲು ಮಾಡಬೇಕಾದ ಹೋರಾಟವಾಗಿದೆ. ಇದು ರೈತನ ಸ್ವಾಭಿಮಾನ ಮತ್ತು ಸ್ವಾತಂತ್ಯ್ರವನ್ನು ಉಳಿಸಿಕೊಳ್ಳಲು ಮಾಡುತ್ತಿರುವ ಹೋರಾಟ. ಹಾಗಾಗಿಯೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವಂತಹ ಎಲ್ಲರೂ ಇದರಲ್ಲಿ ಪಾಲ್ಗೊಂಡಿದ್ದಾರೆ” ಎಂದು ಹೇಳಿದರು.

“ಸರ್ಕಾರ ಜಾರಿಗೆ ತಂದಿರುವ ನೀತಿಗಳನ್ನು ವಾಪಾಸು ಪಡೆಯುವ ತನಕವು, ನಮ್ಮ ಹೋರಾಟ ಮುಂದುವರೆಯಲಿದೆ. ಇದು ಯಾವುದೆ ಕಾರಣಕ್ಕೂ ನಿಲ್ಲಲ್ಲ ಎಂಬುವುದನ್ನು ಸಾರಿ ಸಾರಿ ಹೇಳುತ್ತೇವೆ. ಪ್ರಧಾನಿ ಮೋದಿ ಅವರೇ ನೀವೊಬ್ಬರು ಫ್ಯಾಸಿಸ್ಟ್‌. ಕಾಂಗ್ರೆಸ್‌ಗೆ ಪರ್ಯಾಯವಾಗಿ ದೇಶದ ಅಭಿವೃದ್ದಿ ಮಾಡುತ್ತೇವೆಂದು ಅಧಿಕಾರಕ್ಕೇರಿದ ಬಿಜೆಪಿ, ಈಗ ಜನರ ಪರವಾಗಿ ನಿಲ್ಲುತ್ತಿಲ್ಲ. ಬದಲಾಗಿ ಖಾಸಗಿ ಬಂಡವಾಳಶಾಹಿಗಳ, ಕಾರ್ಪೋರೇಟ್‌ಗಳ ಮತ್ತ ವಿದೇಶಿ ಬಂಡವಾಳಗಾರರ ಪರವಾಗಿ ನಿಲ್ಲುತ್ತಿದೆ” ಎಂದು ವರಲಕ್ಷ್ಮಿ ಆಕ್ರೋಶ ವ್ಯಕ್ತಪಡಿಸಿದರು.

ಜೊತೆಗೆ ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್‌, ಭೂಮಿ ಮತ್ತು ವಸತಿ ವಂಚಿತ ಹಕ್ಕುಗಳ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ದಲಿತ ಹಕ್ಕುಗಳ ಹೋರಾಟಗಾರ ಗುರುಪ್ರಸಾದ್‌ ಕೆರೆಗೊಡು, ಜನವಾದಿ ಮಹಿಳಾ ಸಂಘನೆಯ ಗೌರಮ್ಮ, ಇಂಟಕ್‌ ಮುಖಂಡರು, ಚಾಲಕರ ಸಂಘಟನೆಗಳ ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಮಾತನಾಡಿ ರಾಜ್ಯ ಮತ್ತು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮುಖ್ಯಮಂತ್ರಿಯವರೇ, ರೈತ ಹೋರಾಟ ಪ್ರಾಯೋಜಿತವಾದರೆ ತಪ್ಪೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...