HomeಮುಖಪುಟPUBG ಸೇರಿದಂತೆ 118 ಜನಪ್ರಿಯ ಚೀನಿ ಅಪ್ಲಿಕೇಷನ್ ನಿಷೇಧಿಸಿದ ಭಾರತ

PUBG ಸೇರಿದಂತೆ 118 ಜನಪ್ರಿಯ ಚೀನಿ ಅಪ್ಲಿಕೇಷನ್ ನಿಷೇಧಿಸಿದ ಭಾರತ

ಭಾರತದಲ್ಲಿ ಸುಮಾರು 33 ಮಿಲಿಯನ್ ಸಕ್ರಿಯ PUBG ಆಟಗಾರರಿದ್ದಾರೆ.

- Advertisement -
- Advertisement -

ಲಡಾಖ್‌ನಲ್ಲಿ ಚೀನಾ ಮತ್ತೆ ಪ್ರಚೋದನೆಯಲ್ಲಿ ತೊಡಗಿದೆ ಎಂಬ ಆರೋಪದ ನಡುವೆ ಭಾರತವು ’PUBG’ ಸೇರಿದಂತೆ ಜನಪ್ರಿಯ 118 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಸಿದೆ. ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ರಕ್ಷಣಾ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಂಡಿದೆ ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಸುಮಾರು 33 ಮಿಲಿಯನ್ ಸಕ್ರಿಯ PUBG ಆಟಗಾರರಿದ್ದಾರೆ ಎಂದು ವರದಿಗಳಿವೆ. ದೈನಂದಿನ ಈ ಆಟವನ್ನು ಸುಮಾರು 13 ಮಿಲಿಯನ್ ಬಳಕೆದಾರರು ಬಳಸುತ್ತಾರೆ ಎನ್ನಲಾಗಿದೆ.

ಇದನ್ನೂ ಓದಿ: 2.44 ಲಕ್ಷ ಅನುಯಾಯಿಗಳಿರುವ ‘ವಿಬೋ ಆ್ಯಪ್’ ಅನ್ನು ಡಿಲೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಪ್ರಕಾರ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಇತರ ಅಪ್ಲಿಕೇಶನ್‌ಗಳೊಂದಿಗೆ ಮೊಬೈಲ್ ಗೇಮ್ ಅನ್ನು ಕೂಡಾ ನಿಷೇಧಿಸಲಾಗಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಪ್ರಕಾರ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಇತರ ಅಪ್ಲಿಕೇಶನ್‌ಗಳೊಂದಿಗೆ ಪಬ್‌ಜಿ ಮೊಬೈಲ್ ಗೇಮ್ ಅನ್ನು ಕೂಡಾ ನಿಷೇಧಿಸಲಾಗಿದೆ.

“ಈ ನಿರ್ಧಾರವು ಭಾರತೀಯ ಸೈಬರ್‌ ಸ್ಪೇಸ್‌ನ ಸುರಕ್ಷತೆ, ರಕ್ಷಣೆ ಮತ್ತು ಸಾರ್ವಭೌಮತ್ವವನ್ನು ಖಚಿತಪಡಿಸಿಕೊಳ್ಳಲು ಮಾಡಿರುವ ಕ್ರಮವಾಗಿದೆ. ಇದು ಕೋಟ್ಯಾಂತರ ಭಾರತೀಯ ಮೊಬೈಲ್ ಮತ್ತು ಇಂಟರ್ನೆಟ್ ಬಳಕೆದಾರರ ಹಿತಾಸಕ್ತಿಗಳನ್ನು ಕಾಪಾಡುತ್ತದೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಕೇವಲ ಆ್ಯಪ್‌ಗಳನ್ನು ನಿಷೇಧಿಸಿದರೆ ಸಾಲದು; ಚೀನಾಕ್ಕೆ ತಕ್ಕ ಉತ್ತರ ನೀಡಬೇಕು: ಮಮತಾ ಬ್ಯಾನರ್ಜಿ

ಈ ದುರುದ್ದೇಶಪೂರಿತ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಲು ಗೃಹ ಸಚಿವಾಲಯದ ಸೈಬರ್ ಅಪರಾಧ ಕೇಂದ್ರವು ಶಿಫಾರಸು ಮಾಡಿದೆ ಎಂದು ಸರ್ಕಾರ ತಿಳಿಸಿದೆ.

ಸರ್ಕಾರ ನಿಷೇಧಿಸಿದ ಅಪ್ಲಿಕೇಷನ್‌ ಹೆಸರನ್ನು ಕೆಳಗಿನ ಟ್ವೀಟ್‌ನಲ್ಲಿ ಕಾಣಬಹುದಾಗಿದೆ.


ಇದನ್ನೂ ಓದಿ: ಸ್ವದೇಶಿ ಆಪ್‌ಗಳನ್ನು ತಯಾರಿಸಲು ಐಟಿ ಮಂದಿ ಸವಾಲು ಸ್ವೀಕರಿಸಿ: ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....