Homeಮುಖಪುಟಮಣಿಪುರದಲ್ಲಿ ಹಿಂಸಾಚಾರಕ್ಕೆ ಉತ್ತೇಜನ ನೀಡಿದ ಬಿಜೆಪಿ ಸಿಎಂ ಬಿರೇನ್ ಸಿಂಗ್: ಅಸ್ಸಾಂ ರೈಫಲ್ಸ್ ವರದಿ

ಮಣಿಪುರದಲ್ಲಿ ಹಿಂಸಾಚಾರಕ್ಕೆ ಉತ್ತೇಜನ ನೀಡಿದ ಬಿಜೆಪಿ ಸಿಎಂ ಬಿರೇನ್ ಸಿಂಗ್: ಅಸ್ಸಾಂ ರೈಫಲ್ಸ್ ವರದಿ

- Advertisement -
- Advertisement -

ಮಣಿಪುರದಲ್ಲಿನ ಸಂಘರ್ಷಕ್ಕೆ ಸಂಬಂಧಿಸಿ ರಾಜ್ಯದಲ್ಲಿ ಅಸ್ಸಾಂ ರೈಫಲ್ಸ್‌ನ ಅಧಿಕಾರಿಗಳು ನಡೆಸಿದ ಮೌಲ್ಯಮಾಪನದಲ್ಲಿ ಸ್ಪೋಟಕ ಅಂಶಗಳನ್ನು ಉಲ್ಲೇಖಿಸಲಾಗಿದ್ದು, ಮಣಿಪುರದಲ್ಲಿನ ಸಂಘರ್ಷಕ್ಕೆ ಸಿಎಂ ಬಿರೇನ್ ಸಿಂಗ್ ಉತ್ತೇಜನ ಕಾರಣ ಎಂದು ಹೇಳಿದೆ.

ಅಸ್ಸಾಂ ಸಿಎಂ ಬಿರೇನ್ ಸಿಂಗ್  “ರಾಜಕೀಯ ನಿರಂಕುಶಾಧಿಕಾರ ಮತ್ತು ಮಹತ್ವಾಕಾಂಕ್ಷೆ” ಹಿಂಸಾಚಾರಕ್ಕೆ ಕಾರಣ ಎಂದು ವರದಿ ಹೇಳಿದ್ದು, ಬಿರೇನ್ ಸಿಂಗ್ ನೇತೃತ್ವದ ರಾಜ್ಯ ಸರ್ಕಾರ ಸಂಘರ್ಷಕ್ಕೆ ಕಾರಣ ಎಂದು ಕೂಡ ವರದಿ ಉಲ್ಲೇಖಿಸಿದೆ.

ಅಸ್ಸಾಂ ರೈಫಲ್ಸ್ ವಿವಾದಾತ್ಮಕ ಇತಿಹಾಸವನ್ನು ಹೊಂದಿದೆ. ಇದು ಅತ್ಯಂತ ಹಳೆಯ ಅರೆಸೈನಿಕ ಗುಂಪು ಮತ್ತು ಈಶಾನ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯುವ ಕಾರ್ಯವನ್ನು ಈ ಗುಂಪು ಮಾಡುತ್ತದೆ.

ಈ ತಿಂಗಳ ಆರಂಭದಲ್ಲಿ, ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ, ಸರ್ಕಾರದ ತ್ವರಿತ ಪ್ರತಿಕ್ರಿಯೆಯು ಮಣಿಪುರದಲ್ಲಿ ಪರಿಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆಗೆ ಕಾರಣವಾಯಿತು ಎಂದು ಮೋದಿ ಹೇಳಿರುವುದು ಗಮನಾರ್ಹವಾಗಿದೆ. ರಾಜ್ಯದಲ್ಲಿ ಏಪ್ರಿಲ್ 19 ಮತ್ತು ಏಪ್ರಿಲ್ 26ರಂದು ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಆದರೆ ಈಗಾಗಲೇ ಕುಕಿ ಸಂಘಟನೆ ಮಣಿಪುರದಲ್ಲಿ ಮತದಾನವನ್ನು ಬಹಿಷ್ಕರಿಸಿದೆ.

ವಿವಿಧ ವಿಷಯಗಳ ಕುರಿತು ಬಿಜೆಪಿ ನೇತೃತ್ವದ ಸರಕಾರದ ನಿಲುವು ಸಂಘರ್ಷವನ್ನು ಉಲ್ಬಣಗೊಳಿಸಿದೆ ಮತ್ತು ರಾಜ್ಯದಲ್ಲಿ ಸಮುದಾಯಗಳ ನಡುವೆ ವಿಭಜನೆಯನ್ನುಂಟು ಮಾಡಿದೆ ಎಂದು ಸುದ್ದಿ ಜಾಲತಾಣ ದಿ ರಿಪೋರ್ಟರ್ಸ್‌ ಕಲೆಕ್ಟಿವ್ (TRC) ಮತ್ತು ಅಲ್‌ ಜಝೀರಾ ತನ್ನ ವರದಿಯಲ್ಲಿ ಹೇಳಿದೆ. ಮಣಿಪುರದಲ್ಲಿನ ಅಸ್ಸಾಂ ರೈಫಲ್ಸ್ ನ ಅಧಿಕಾರಿಗಳು ಸಿದ್ಧಪಡಿಸಿರುವ ವರದಿಯು ರಾಜ್ಯ ಸರಕಾರದ ಮೇಲೆ ಆರೋಪವನ್ನು ಹೊರಿಸಿದೆ. ಹಲವಾರು ನೀತಿಗಳು ಬೀರೇನ್ ಸಿಂಗ್ ಕುಕಿಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬ ಭಾವನೆಯನ್ನು ಮೂಡಿಸಿವೆ ಎಂದು ‘ರಿಪೋಟರ್ಸ್ ಕಲೆಕ್ಟಿವ್’  ವರದಿಯನ್ನು ಉಲ್ಲೇಖಿಸಿ ಅಲ್ ಜಝೀರಾ ಒತ್ತಿ ಹೇಳಿದೆ. ಘರ್ಷಣೆಗಳಿಗೆ ‘ರಾಜ್ಯ ಪಡೆಗಳ ಮೌನ ಬೆಂಬಲ’  ಹಾಗೂ ‘ಕಾನೂನು ಮತ್ತು ಸುವ್ಯವಸ್ಥೆಯ’ ನಿಷ್ಕ್ರಿಯತೆಯೂ ಕಾರಣ ಎಂದು ವರದಿಯು ಗಮನಿಸಿದೆ.

ಕುಕಿ ನಾಯಕರು ಕುಕಿಲ್ಯಾಂಡ್‌ನ್ನು ಮಣಿಪುರದಿಂದ ಒಂದು ವಿಶಿಷ್ಟವಾದ ಆಡಳಿತ ಪ್ರದೇಶವಾಗಿ ವಿಭಜಿಸಲು ಪ್ರಯತ್ನಿಸುತ್ತದೆ. ಜನಾಂಗೀಯ ಸಂಘರ್ಷದ ಸಮಯದಲ್ಲಿ, ಕುಕಿಲ್ಯಾಂಡ್‌ಗೆ ಹೊಸ ಬೇಡಿಕೆ ಇಡಲಾಗಿದೆ. ಇದಲ್ಲದೆ, ಪ್ರಸ್ತುತಿಯು ಕುಕಿ ಬುಡಕಟ್ಟಿನ ಶಸ್ತ್ರಸಜ್ಜಿತ ಗುಂಪುಗಳು ಸ್ವಯಂಸೇವಕರಾಗುವಂತೆ ಸಮುದಾಯದ ಜನರನ್ನು ಬೆಂಬಲಿಸುತ್ತಿವೆ ಮತ್ತು ಮೈತೈ ಸಮುದಾಯದ ಶಸ್ತ್ರಸಜ್ಜಿತ ಗುಂಪುಗಳು ವ್ಯಕ್ತಿಗಳನ್ನು ಸಜ್ಜುಗೊಳಿಸುತ್ತಿವೆ ಎಂದು ಹೇಳಿಕೊಂಡಿದೆ. ಇದೆಲ್ಲವೂ ಹಗೆತನವನ್ನು ಹೆಚ್ಚಿಸಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಪ್ರಬಲವಾದ ಮೈತೈ ಸಮುದಾಯದ ಪ್ರತಿಭಟನೆ ಹಿಂಸಾಚಾರಕ್ಕೆ ನೇರ ಕಾರಣ ಎಂದು ಕೂಡ ಹೇಳಲಾಗುತ್ತದೆ. ಇತರ ಬುಡಕಟ್ಟು ಗುಂಪುಗಳು, ವಿಶೇಷವಾಗಿ ಕುಕಿ-ಜೋ ಸಮುದಾಯದವರು ಇದಕ್ಕೆ ವಿರೋಧಿಸಿದ್ದರು. ಅದೇನೇ ಇದ್ದರೂ, ಅಸ್ಸಾಂ ರೈಫಲ್ಸ್ ಪ್ರತಿನಿಧಿಗಳು ತಮ್ಮ ಪ್ರಸ್ತುತಿಯಲ್ಲಿ ಮುಖ್ಯಮಂತ್ರಿಯ ನೀತಿಗಳನ್ನು ಉಲ್ಲೇಖಿಸಿದ್ದಾರೆ, ಅವರು ಗುಂಪುಗಳ ನಡುವಿನ ಹಗೆತನವನ್ನು ಉತ್ತೇಜಿಸಿದರು. ಸಿಂಗ್‌ ಅವರ ನಿಲುವು ಇತರ ವಿಷಯಗಳ ಜೊತೆಗೆ ಸಂಘರ್ಷಕ್ಕೆ ಕಾರಣವಾಗುವ ಅಂಶಗಳೆಂದು ಉಲ್ಲೇಖಿಸಲಾಗಿದೆ. ಹಿಂಸಾಚಾರಕ್ಕೆ ಮತ್ತೊಂದು ಪ್ರೇರಕ ಶಕ್ತಿಯಾಗಿ ಮೈತೈ ಸಮುದಾಯದ ದಂಗೆ ಕಾರಣ ಎಂದು ಹೇಳಲಾಗಿದೆ. ಹಿಂಸಾಚಾರದಲ್ಲಿ ಮೈತೈ ಸಂಘಟನೆಗಳಾದ ಮೈತೆ ಲೀಪುನ್ ಮತ್ತು ಅರಾಂಬೈ ತೆಂಗೋಲ್ ಸೇರಿದೆ ಎಂದು ಹೇಳಲಾಗಿದೆ. ಕುಕಿ ನಾಯಕರು ಮೈತೇಯ್ ಲೀಪುನ್ ಮತ್ತು ಅರಾಂಬೈ ತೆಂಗೋಲ್ ಸಂಘಟನೆ ತಮ್ಮ ಜನರ ಮೇಲೆ ಮೈತೈ ಸಮುದಾಯದ ದಾಳಿಯ ಹಿಂದಿನ ಮಾಸ್ಟರ್‌ಮೈಂಡ್‌ಗಳು ಎಂದು ಆರೋಪಿಸಿದ್ದಾರೆ. ಅರಾಂಬೈ ತೆಂಗೋಲ್ ಅವರು ಹಿಂದೂ ಧರ್ಮಕ್ಕಿಂತ ಭಿನ್ನವಾದ ಹೆಚ್ಚು ದೃಢವಾದ ಮೈತೈ ರಾಷ್ಟ್ರೀಯತಾವಾದಿ ಸ್ಥಾನವನ್ನು ಬೆಂಬಲಿಸುತ್ತಾರೆ, ಆದರೆ ಮೈತೆ ಲೀಪುನ್ ಆರೆಸ್ಸೆಸ್‌ ಮತ್ತು ಬಿಜೆಪಿ ನೇತೃತ್ವದ ಹಿಂದುತ್ವ ಚಳವಳಿಯನ್ನು ಬೆಂಬಲಿಸುತ್ತಾರೆ. ಕಳೆದ ಏಪ್ರೀಲ್‌ನಿಂದ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ  219 ಮಂದಿ ಮೃತಪಟ್ಟಿದ್ದರು, 60,000 ಮಂದಿ ಸ್ಥಳಾಂತರಗೊಂಡಿದ್ದರು, 1,100 ಮಂದಿ ಗಾಯಗೊಂಡಿದ್ದರು.

ಇದನ್ನು ಓದಿ: ಐರ್ಲೆಂಡ್‌ನಲ್ಲಿರುವ ಭಾರತೀಯ ರಾಯಭಾರಿಯಿಂದ ವಿಪಕ್ಷಗಳ ಟೀಕೆ: ರಾಜತಾಂತ್ರಿಕ ಅಧಿಕಾರಿಯ ನಿಲುವಿಗೆ ವ್ಯಾಪಕ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...