Homeಮುಖಪುಟಮಣಿಪುರದಲ್ಲಿ ಹಿಂಸಾಚಾರಕ್ಕೆ ಉತ್ತೇಜನ ನೀಡಿದ ಬಿಜೆಪಿ ಸಿಎಂ ಬಿರೇನ್ ಸಿಂಗ್: ಅಸ್ಸಾಂ ರೈಫಲ್ಸ್ ವರದಿ

ಮಣಿಪುರದಲ್ಲಿ ಹಿಂಸಾಚಾರಕ್ಕೆ ಉತ್ತೇಜನ ನೀಡಿದ ಬಿಜೆಪಿ ಸಿಎಂ ಬಿರೇನ್ ಸಿಂಗ್: ಅಸ್ಸಾಂ ರೈಫಲ್ಸ್ ವರದಿ

- Advertisement -
- Advertisement -

ಮಣಿಪುರದಲ್ಲಿನ ಸಂಘರ್ಷಕ್ಕೆ ಸಂಬಂಧಿಸಿ ರಾಜ್ಯದಲ್ಲಿ ಅಸ್ಸಾಂ ರೈಫಲ್ಸ್‌ನ ಅಧಿಕಾರಿಗಳು ನಡೆಸಿದ ಮೌಲ್ಯಮಾಪನದಲ್ಲಿ ಸ್ಪೋಟಕ ಅಂಶಗಳನ್ನು ಉಲ್ಲೇಖಿಸಲಾಗಿದ್ದು, ಮಣಿಪುರದಲ್ಲಿನ ಸಂಘರ್ಷಕ್ಕೆ ಸಿಎಂ ಬಿರೇನ್ ಸಿಂಗ್ ಉತ್ತೇಜನ ಕಾರಣ ಎಂದು ಹೇಳಿದೆ.

ಅಸ್ಸಾಂ ಸಿಎಂ ಬಿರೇನ್ ಸಿಂಗ್  “ರಾಜಕೀಯ ನಿರಂಕುಶಾಧಿಕಾರ ಮತ್ತು ಮಹತ್ವಾಕಾಂಕ್ಷೆ” ಹಿಂಸಾಚಾರಕ್ಕೆ ಕಾರಣ ಎಂದು ವರದಿ ಹೇಳಿದ್ದು, ಬಿರೇನ್ ಸಿಂಗ್ ನೇತೃತ್ವದ ರಾಜ್ಯ ಸರ್ಕಾರ ಸಂಘರ್ಷಕ್ಕೆ ಕಾರಣ ಎಂದು ಕೂಡ ವರದಿ ಉಲ್ಲೇಖಿಸಿದೆ.

ಅಸ್ಸಾಂ ರೈಫಲ್ಸ್ ವಿವಾದಾತ್ಮಕ ಇತಿಹಾಸವನ್ನು ಹೊಂದಿದೆ. ಇದು ಅತ್ಯಂತ ಹಳೆಯ ಅರೆಸೈನಿಕ ಗುಂಪು ಮತ್ತು ಈಶಾನ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯುವ ಕಾರ್ಯವನ್ನು ಈ ಗುಂಪು ಮಾಡುತ್ತದೆ.

ಈ ತಿಂಗಳ ಆರಂಭದಲ್ಲಿ, ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ, ಸರ್ಕಾರದ ತ್ವರಿತ ಪ್ರತಿಕ್ರಿಯೆಯು ಮಣಿಪುರದಲ್ಲಿ ಪರಿಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆಗೆ ಕಾರಣವಾಯಿತು ಎಂದು ಮೋದಿ ಹೇಳಿರುವುದು ಗಮನಾರ್ಹವಾಗಿದೆ. ರಾಜ್ಯದಲ್ಲಿ ಏಪ್ರಿಲ್ 19 ಮತ್ತು ಏಪ್ರಿಲ್ 26ರಂದು ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಆದರೆ ಈಗಾಗಲೇ ಕುಕಿ ಸಂಘಟನೆ ಮಣಿಪುರದಲ್ಲಿ ಮತದಾನವನ್ನು ಬಹಿಷ್ಕರಿಸಿದೆ.

ವಿವಿಧ ವಿಷಯಗಳ ಕುರಿತು ಬಿಜೆಪಿ ನೇತೃತ್ವದ ಸರಕಾರದ ನಿಲುವು ಸಂಘರ್ಷವನ್ನು ಉಲ್ಬಣಗೊಳಿಸಿದೆ ಮತ್ತು ರಾಜ್ಯದಲ್ಲಿ ಸಮುದಾಯಗಳ ನಡುವೆ ವಿಭಜನೆಯನ್ನುಂಟು ಮಾಡಿದೆ ಎಂದು ಸುದ್ದಿ ಜಾಲತಾಣ ದಿ ರಿಪೋರ್ಟರ್ಸ್‌ ಕಲೆಕ್ಟಿವ್ (TRC) ಮತ್ತು ಅಲ್‌ ಜಝೀರಾ ತನ್ನ ವರದಿಯಲ್ಲಿ ಹೇಳಿದೆ. ಮಣಿಪುರದಲ್ಲಿನ ಅಸ್ಸಾಂ ರೈಫಲ್ಸ್ ನ ಅಧಿಕಾರಿಗಳು ಸಿದ್ಧಪಡಿಸಿರುವ ವರದಿಯು ರಾಜ್ಯ ಸರಕಾರದ ಮೇಲೆ ಆರೋಪವನ್ನು ಹೊರಿಸಿದೆ. ಹಲವಾರು ನೀತಿಗಳು ಬೀರೇನ್ ಸಿಂಗ್ ಕುಕಿಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬ ಭಾವನೆಯನ್ನು ಮೂಡಿಸಿವೆ ಎಂದು ‘ರಿಪೋಟರ್ಸ್ ಕಲೆಕ್ಟಿವ್’  ವರದಿಯನ್ನು ಉಲ್ಲೇಖಿಸಿ ಅಲ್ ಜಝೀರಾ ಒತ್ತಿ ಹೇಳಿದೆ. ಘರ್ಷಣೆಗಳಿಗೆ ‘ರಾಜ್ಯ ಪಡೆಗಳ ಮೌನ ಬೆಂಬಲ’  ಹಾಗೂ ‘ಕಾನೂನು ಮತ್ತು ಸುವ್ಯವಸ್ಥೆಯ’ ನಿಷ್ಕ್ರಿಯತೆಯೂ ಕಾರಣ ಎಂದು ವರದಿಯು ಗಮನಿಸಿದೆ.

ಕುಕಿ ನಾಯಕರು ಕುಕಿಲ್ಯಾಂಡ್‌ನ್ನು ಮಣಿಪುರದಿಂದ ಒಂದು ವಿಶಿಷ್ಟವಾದ ಆಡಳಿತ ಪ್ರದೇಶವಾಗಿ ವಿಭಜಿಸಲು ಪ್ರಯತ್ನಿಸುತ್ತದೆ. ಜನಾಂಗೀಯ ಸಂಘರ್ಷದ ಸಮಯದಲ್ಲಿ, ಕುಕಿಲ್ಯಾಂಡ್‌ಗೆ ಹೊಸ ಬೇಡಿಕೆ ಇಡಲಾಗಿದೆ. ಇದಲ್ಲದೆ, ಪ್ರಸ್ತುತಿಯು ಕುಕಿ ಬುಡಕಟ್ಟಿನ ಶಸ್ತ್ರಸಜ್ಜಿತ ಗುಂಪುಗಳು ಸ್ವಯಂಸೇವಕರಾಗುವಂತೆ ಸಮುದಾಯದ ಜನರನ್ನು ಬೆಂಬಲಿಸುತ್ತಿವೆ ಮತ್ತು ಮೈತೈ ಸಮುದಾಯದ ಶಸ್ತ್ರಸಜ್ಜಿತ ಗುಂಪುಗಳು ವ್ಯಕ್ತಿಗಳನ್ನು ಸಜ್ಜುಗೊಳಿಸುತ್ತಿವೆ ಎಂದು ಹೇಳಿಕೊಂಡಿದೆ. ಇದೆಲ್ಲವೂ ಹಗೆತನವನ್ನು ಹೆಚ್ಚಿಸಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಪ್ರಬಲವಾದ ಮೈತೈ ಸಮುದಾಯದ ಪ್ರತಿಭಟನೆ ಹಿಂಸಾಚಾರಕ್ಕೆ ನೇರ ಕಾರಣ ಎಂದು ಕೂಡ ಹೇಳಲಾಗುತ್ತದೆ. ಇತರ ಬುಡಕಟ್ಟು ಗುಂಪುಗಳು, ವಿಶೇಷವಾಗಿ ಕುಕಿ-ಜೋ ಸಮುದಾಯದವರು ಇದಕ್ಕೆ ವಿರೋಧಿಸಿದ್ದರು. ಅದೇನೇ ಇದ್ದರೂ, ಅಸ್ಸಾಂ ರೈಫಲ್ಸ್ ಪ್ರತಿನಿಧಿಗಳು ತಮ್ಮ ಪ್ರಸ್ತುತಿಯಲ್ಲಿ ಮುಖ್ಯಮಂತ್ರಿಯ ನೀತಿಗಳನ್ನು ಉಲ್ಲೇಖಿಸಿದ್ದಾರೆ, ಅವರು ಗುಂಪುಗಳ ನಡುವಿನ ಹಗೆತನವನ್ನು ಉತ್ತೇಜಿಸಿದರು. ಸಿಂಗ್‌ ಅವರ ನಿಲುವು ಇತರ ವಿಷಯಗಳ ಜೊತೆಗೆ ಸಂಘರ್ಷಕ್ಕೆ ಕಾರಣವಾಗುವ ಅಂಶಗಳೆಂದು ಉಲ್ಲೇಖಿಸಲಾಗಿದೆ. ಹಿಂಸಾಚಾರಕ್ಕೆ ಮತ್ತೊಂದು ಪ್ರೇರಕ ಶಕ್ತಿಯಾಗಿ ಮೈತೈ ಸಮುದಾಯದ ದಂಗೆ ಕಾರಣ ಎಂದು ಹೇಳಲಾಗಿದೆ. ಹಿಂಸಾಚಾರದಲ್ಲಿ ಮೈತೈ ಸಂಘಟನೆಗಳಾದ ಮೈತೆ ಲೀಪುನ್ ಮತ್ತು ಅರಾಂಬೈ ತೆಂಗೋಲ್ ಸೇರಿದೆ ಎಂದು ಹೇಳಲಾಗಿದೆ. ಕುಕಿ ನಾಯಕರು ಮೈತೇಯ್ ಲೀಪುನ್ ಮತ್ತು ಅರಾಂಬೈ ತೆಂಗೋಲ್ ಸಂಘಟನೆ ತಮ್ಮ ಜನರ ಮೇಲೆ ಮೈತೈ ಸಮುದಾಯದ ದಾಳಿಯ ಹಿಂದಿನ ಮಾಸ್ಟರ್‌ಮೈಂಡ್‌ಗಳು ಎಂದು ಆರೋಪಿಸಿದ್ದಾರೆ. ಅರಾಂಬೈ ತೆಂಗೋಲ್ ಅವರು ಹಿಂದೂ ಧರ್ಮಕ್ಕಿಂತ ಭಿನ್ನವಾದ ಹೆಚ್ಚು ದೃಢವಾದ ಮೈತೈ ರಾಷ್ಟ್ರೀಯತಾವಾದಿ ಸ್ಥಾನವನ್ನು ಬೆಂಬಲಿಸುತ್ತಾರೆ, ಆದರೆ ಮೈತೆ ಲೀಪುನ್ ಆರೆಸ್ಸೆಸ್‌ ಮತ್ತು ಬಿಜೆಪಿ ನೇತೃತ್ವದ ಹಿಂದುತ್ವ ಚಳವಳಿಯನ್ನು ಬೆಂಬಲಿಸುತ್ತಾರೆ. ಕಳೆದ ಏಪ್ರೀಲ್‌ನಿಂದ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ  219 ಮಂದಿ ಮೃತಪಟ್ಟಿದ್ದರು, 60,000 ಮಂದಿ ಸ್ಥಳಾಂತರಗೊಂಡಿದ್ದರು, 1,100 ಮಂದಿ ಗಾಯಗೊಂಡಿದ್ದರು.

ಇದನ್ನು ಓದಿ: ಐರ್ಲೆಂಡ್‌ನಲ್ಲಿರುವ ಭಾರತೀಯ ರಾಯಭಾರಿಯಿಂದ ವಿಪಕ್ಷಗಳ ಟೀಕೆ: ರಾಜತಾಂತ್ರಿಕ ಅಧಿಕಾರಿಯ ನಿಲುವಿಗೆ ವ್ಯಾಪಕ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...