Homeಮುಖಪುಟಮಣಿಪುರದಲ್ಲಿ ಹಿಂಸಾಚಾರಕ್ಕೆ ಉತ್ತೇಜನ ನೀಡಿದ ಬಿಜೆಪಿ ಸಿಎಂ ಬಿರೇನ್ ಸಿಂಗ್: ಅಸ್ಸಾಂ ರೈಫಲ್ಸ್ ವರದಿ

ಮಣಿಪುರದಲ್ಲಿ ಹಿಂಸಾಚಾರಕ್ಕೆ ಉತ್ತೇಜನ ನೀಡಿದ ಬಿಜೆಪಿ ಸಿಎಂ ಬಿರೇನ್ ಸಿಂಗ್: ಅಸ್ಸಾಂ ರೈಫಲ್ಸ್ ವರದಿ

- Advertisement -
- Advertisement -

ಮಣಿಪುರದಲ್ಲಿನ ಸಂಘರ್ಷಕ್ಕೆ ಸಂಬಂಧಿಸಿ ರಾಜ್ಯದಲ್ಲಿ ಅಸ್ಸಾಂ ರೈಫಲ್ಸ್‌ನ ಅಧಿಕಾರಿಗಳು ನಡೆಸಿದ ಮೌಲ್ಯಮಾಪನದಲ್ಲಿ ಸ್ಪೋಟಕ ಅಂಶಗಳನ್ನು ಉಲ್ಲೇಖಿಸಲಾಗಿದ್ದು, ಮಣಿಪುರದಲ್ಲಿನ ಸಂಘರ್ಷಕ್ಕೆ ಸಿಎಂ ಬಿರೇನ್ ಸಿಂಗ್ ಉತ್ತೇಜನ ಕಾರಣ ಎಂದು ಹೇಳಿದೆ.

ಅಸ್ಸಾಂ ಸಿಎಂ ಬಿರೇನ್ ಸಿಂಗ್  “ರಾಜಕೀಯ ನಿರಂಕುಶಾಧಿಕಾರ ಮತ್ತು ಮಹತ್ವಾಕಾಂಕ್ಷೆ” ಹಿಂಸಾಚಾರಕ್ಕೆ ಕಾರಣ ಎಂದು ವರದಿ ಹೇಳಿದ್ದು, ಬಿರೇನ್ ಸಿಂಗ್ ನೇತೃತ್ವದ ರಾಜ್ಯ ಸರ್ಕಾರ ಸಂಘರ್ಷಕ್ಕೆ ಕಾರಣ ಎಂದು ಕೂಡ ವರದಿ ಉಲ್ಲೇಖಿಸಿದೆ.

ಅಸ್ಸಾಂ ರೈಫಲ್ಸ್ ವಿವಾದಾತ್ಮಕ ಇತಿಹಾಸವನ್ನು ಹೊಂದಿದೆ. ಇದು ಅತ್ಯಂತ ಹಳೆಯ ಅರೆಸೈನಿಕ ಗುಂಪು ಮತ್ತು ಈಶಾನ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯುವ ಕಾರ್ಯವನ್ನು ಈ ಗುಂಪು ಮಾಡುತ್ತದೆ.

ಈ ತಿಂಗಳ ಆರಂಭದಲ್ಲಿ, ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ, ಸರ್ಕಾರದ ತ್ವರಿತ ಪ್ರತಿಕ್ರಿಯೆಯು ಮಣಿಪುರದಲ್ಲಿ ಪರಿಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆಗೆ ಕಾರಣವಾಯಿತು ಎಂದು ಮೋದಿ ಹೇಳಿರುವುದು ಗಮನಾರ್ಹವಾಗಿದೆ. ರಾಜ್ಯದಲ್ಲಿ ಏಪ್ರಿಲ್ 19 ಮತ್ತು ಏಪ್ರಿಲ್ 26ರಂದು ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದೆ. ಆದರೆ ಈಗಾಗಲೇ ಕುಕಿ ಸಂಘಟನೆ ಮಣಿಪುರದಲ್ಲಿ ಮತದಾನವನ್ನು ಬಹಿಷ್ಕರಿಸಿದೆ.

ವಿವಿಧ ವಿಷಯಗಳ ಕುರಿತು ಬಿಜೆಪಿ ನೇತೃತ್ವದ ಸರಕಾರದ ನಿಲುವು ಸಂಘರ್ಷವನ್ನು ಉಲ್ಬಣಗೊಳಿಸಿದೆ ಮತ್ತು ರಾಜ್ಯದಲ್ಲಿ ಸಮುದಾಯಗಳ ನಡುವೆ ವಿಭಜನೆಯನ್ನುಂಟು ಮಾಡಿದೆ ಎಂದು ಸುದ್ದಿ ಜಾಲತಾಣ ದಿ ರಿಪೋರ್ಟರ್ಸ್‌ ಕಲೆಕ್ಟಿವ್ (TRC) ಮತ್ತು ಅಲ್‌ ಜಝೀರಾ ತನ್ನ ವರದಿಯಲ್ಲಿ ಹೇಳಿದೆ. ಮಣಿಪುರದಲ್ಲಿನ ಅಸ್ಸಾಂ ರೈಫಲ್ಸ್ ನ ಅಧಿಕಾರಿಗಳು ಸಿದ್ಧಪಡಿಸಿರುವ ವರದಿಯು ರಾಜ್ಯ ಸರಕಾರದ ಮೇಲೆ ಆರೋಪವನ್ನು ಹೊರಿಸಿದೆ. ಹಲವಾರು ನೀತಿಗಳು ಬೀರೇನ್ ಸಿಂಗ್ ಕುಕಿಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬ ಭಾವನೆಯನ್ನು ಮೂಡಿಸಿವೆ ಎಂದು ‘ರಿಪೋಟರ್ಸ್ ಕಲೆಕ್ಟಿವ್’  ವರದಿಯನ್ನು ಉಲ್ಲೇಖಿಸಿ ಅಲ್ ಜಝೀರಾ ಒತ್ತಿ ಹೇಳಿದೆ. ಘರ್ಷಣೆಗಳಿಗೆ ‘ರಾಜ್ಯ ಪಡೆಗಳ ಮೌನ ಬೆಂಬಲ’  ಹಾಗೂ ‘ಕಾನೂನು ಮತ್ತು ಸುವ್ಯವಸ್ಥೆಯ’ ನಿಷ್ಕ್ರಿಯತೆಯೂ ಕಾರಣ ಎಂದು ವರದಿಯು ಗಮನಿಸಿದೆ.

ಕುಕಿ ನಾಯಕರು ಕುಕಿಲ್ಯಾಂಡ್‌ನ್ನು ಮಣಿಪುರದಿಂದ ಒಂದು ವಿಶಿಷ್ಟವಾದ ಆಡಳಿತ ಪ್ರದೇಶವಾಗಿ ವಿಭಜಿಸಲು ಪ್ರಯತ್ನಿಸುತ್ತದೆ. ಜನಾಂಗೀಯ ಸಂಘರ್ಷದ ಸಮಯದಲ್ಲಿ, ಕುಕಿಲ್ಯಾಂಡ್‌ಗೆ ಹೊಸ ಬೇಡಿಕೆ ಇಡಲಾಗಿದೆ. ಇದಲ್ಲದೆ, ಪ್ರಸ್ತುತಿಯು ಕುಕಿ ಬುಡಕಟ್ಟಿನ ಶಸ್ತ್ರಸಜ್ಜಿತ ಗುಂಪುಗಳು ಸ್ವಯಂಸೇವಕರಾಗುವಂತೆ ಸಮುದಾಯದ ಜನರನ್ನು ಬೆಂಬಲಿಸುತ್ತಿವೆ ಮತ್ತು ಮೈತೈ ಸಮುದಾಯದ ಶಸ್ತ್ರಸಜ್ಜಿತ ಗುಂಪುಗಳು ವ್ಯಕ್ತಿಗಳನ್ನು ಸಜ್ಜುಗೊಳಿಸುತ್ತಿವೆ ಎಂದು ಹೇಳಿಕೊಂಡಿದೆ. ಇದೆಲ್ಲವೂ ಹಗೆತನವನ್ನು ಹೆಚ್ಚಿಸಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಪ್ರಬಲವಾದ ಮೈತೈ ಸಮುದಾಯದ ಪ್ರತಿಭಟನೆ ಹಿಂಸಾಚಾರಕ್ಕೆ ನೇರ ಕಾರಣ ಎಂದು ಕೂಡ ಹೇಳಲಾಗುತ್ತದೆ. ಇತರ ಬುಡಕಟ್ಟು ಗುಂಪುಗಳು, ವಿಶೇಷವಾಗಿ ಕುಕಿ-ಜೋ ಸಮುದಾಯದವರು ಇದಕ್ಕೆ ವಿರೋಧಿಸಿದ್ದರು. ಅದೇನೇ ಇದ್ದರೂ, ಅಸ್ಸಾಂ ರೈಫಲ್ಸ್ ಪ್ರತಿನಿಧಿಗಳು ತಮ್ಮ ಪ್ರಸ್ತುತಿಯಲ್ಲಿ ಮುಖ್ಯಮಂತ್ರಿಯ ನೀತಿಗಳನ್ನು ಉಲ್ಲೇಖಿಸಿದ್ದಾರೆ, ಅವರು ಗುಂಪುಗಳ ನಡುವಿನ ಹಗೆತನವನ್ನು ಉತ್ತೇಜಿಸಿದರು. ಸಿಂಗ್‌ ಅವರ ನಿಲುವು ಇತರ ವಿಷಯಗಳ ಜೊತೆಗೆ ಸಂಘರ್ಷಕ್ಕೆ ಕಾರಣವಾಗುವ ಅಂಶಗಳೆಂದು ಉಲ್ಲೇಖಿಸಲಾಗಿದೆ. ಹಿಂಸಾಚಾರಕ್ಕೆ ಮತ್ತೊಂದು ಪ್ರೇರಕ ಶಕ್ತಿಯಾಗಿ ಮೈತೈ ಸಮುದಾಯದ ದಂಗೆ ಕಾರಣ ಎಂದು ಹೇಳಲಾಗಿದೆ. ಹಿಂಸಾಚಾರದಲ್ಲಿ ಮೈತೈ ಸಂಘಟನೆಗಳಾದ ಮೈತೆ ಲೀಪುನ್ ಮತ್ತು ಅರಾಂಬೈ ತೆಂಗೋಲ್ ಸೇರಿದೆ ಎಂದು ಹೇಳಲಾಗಿದೆ. ಕುಕಿ ನಾಯಕರು ಮೈತೇಯ್ ಲೀಪುನ್ ಮತ್ತು ಅರಾಂಬೈ ತೆಂಗೋಲ್ ಸಂಘಟನೆ ತಮ್ಮ ಜನರ ಮೇಲೆ ಮೈತೈ ಸಮುದಾಯದ ದಾಳಿಯ ಹಿಂದಿನ ಮಾಸ್ಟರ್‌ಮೈಂಡ್‌ಗಳು ಎಂದು ಆರೋಪಿಸಿದ್ದಾರೆ. ಅರಾಂಬೈ ತೆಂಗೋಲ್ ಅವರು ಹಿಂದೂ ಧರ್ಮಕ್ಕಿಂತ ಭಿನ್ನವಾದ ಹೆಚ್ಚು ದೃಢವಾದ ಮೈತೈ ರಾಷ್ಟ್ರೀಯತಾವಾದಿ ಸ್ಥಾನವನ್ನು ಬೆಂಬಲಿಸುತ್ತಾರೆ, ಆದರೆ ಮೈತೆ ಲೀಪುನ್ ಆರೆಸ್ಸೆಸ್‌ ಮತ್ತು ಬಿಜೆಪಿ ನೇತೃತ್ವದ ಹಿಂದುತ್ವ ಚಳವಳಿಯನ್ನು ಬೆಂಬಲಿಸುತ್ತಾರೆ. ಕಳೆದ ಏಪ್ರೀಲ್‌ನಿಂದ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ  219 ಮಂದಿ ಮೃತಪಟ್ಟಿದ್ದರು, 60,000 ಮಂದಿ ಸ್ಥಳಾಂತರಗೊಂಡಿದ್ದರು, 1,100 ಮಂದಿ ಗಾಯಗೊಂಡಿದ್ದರು.

ಇದನ್ನು ಓದಿ: ಐರ್ಲೆಂಡ್‌ನಲ್ಲಿರುವ ಭಾರತೀಯ ರಾಯಭಾರಿಯಿಂದ ವಿಪಕ್ಷಗಳ ಟೀಕೆ: ರಾಜತಾಂತ್ರಿಕ ಅಧಿಕಾರಿಯ ನಿಲುವಿಗೆ ವ್ಯಾಪಕ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...