Homeಮುಖಪುಟಸಂಸತ್ತಿನಲ್ಲಿ ವಿನೇಶ್ ಫೋಗಟ್ ಅನರ್ಹತೆ ಗದ್ದಲ : ಉಭಯ ಸದನಗಳಿಂದ ಹೊರ ನಡೆದ ಪ್ರತಿಪಕ್ಷಗಳು

ಸಂಸತ್ತಿನಲ್ಲಿ ವಿನೇಶ್ ಫೋಗಟ್ ಅನರ್ಹತೆ ಗದ್ದಲ : ಉಭಯ ಸದನಗಳಿಂದ ಹೊರ ನಡೆದ ಪ್ರತಿಪಕ್ಷಗಳು

- Advertisement -
- Advertisement -

ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಒಲಿಂಪಿಕ್ಸ್‌ ಫೈನಲ್‌ನಿಂದ ಅನರ್ಹಗೊಳಿಸಿರುವುದರ ಹಿಂದೆ ಪಿತೂರಿ ನಡೆದಿದೆ ಎಂದು ಆರೋಪಿಸಿ ಇಂಡಿಯಾ ಒಕ್ಕೂಟದ ಸಂಸದರು ಇಂದು (ಆ.8) ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು ಮತ್ತು ವಿನೇಶ್ ಅವರಿಗೆ ನ್ಯಾಯಕ್ಕಾಗಿ ಒತ್ತಾಯಿಸಿದರು.

ಕಲಾಪದ ವೇಳೆ ವಿರೋಧ ಪಕ್ಷಗಳಾದ ಕಾಂಗ್ರೆಸ್, ಟಿಎಂಸಿ, ಎನ್‌ಸಿಪಿ (ಎಸ್‌ಪಿ), ಜೆಎಂಎಂ, ಆರ್‌ಜೆಡಿ ಮತ್ತು ಎಸ್‌ಪಿ ಸದಸ್ಯರು ಲೋಕಸಭೆ ಮತ್ತು ರಾಜ್ಯಸಭೆಯಿಂದ ಹೊರನಡೆದರು.

“ವಿನೇಶ್ ಫೋಗಟ್‌ ಅವರಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಎಲ್ಲಾ ಪ್ರತಿಪಕ್ಷಗಳು ಲೋಕಸಭೆ ಮತ್ತು ರಾಜ್ಯಸಭೆಯಿಂದ ಹೊರನಡೆದಿವೆ. ಮೋದಿ ಸಾಂತ್ವನದ ಟ್ವೀಟ್ ಮಾಡಿದ್ದಾರೆ. ಸಾಂತ್ವನದ ಟ್ವೀಟ್ ಕೆಲಸ ಮಾಡುವುದಿಲ್ಲ ಮೋದಿ ಜೀ, ಅವರಿಗೆ ನ್ಯಾಯ ಸಿಗಬೇಕು” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

“ಪಿತೂರಿಯ ಭಾಗವಾಗಿ ಮೊದಲು ಆ ಮಗಳನ್ನು ದೆಹಲಿಯ ಬೀದಿಯಲ್ಲಿ ಎಳೆದಾಡಲಾಯಿತು. ಈಗ ಅನರ್ಹಗೊಳಿಸಲಾಗಿದೆ. ಆದರೆ, ಸರ್ಕಾರ ಮೂಕಪ್ರೇಕ್ಷಕವಾಗಿದೆ. ಇದು ಭಾರತದ ಕ್ರೀಡಾ ಇತಿಹಾಸದಲ್ಲಿ ಕರಾಳ ದಿನ. ದೇಶದ ಕ್ರೀಡಾಪಟುಗಳನ್ನು ವಿಫಲಗೊಳಿಸಿದ ಸರ್ಕಾರವನ್ನು 140 ಕೋಟಿ ಭಾರತೀಯರು ಕ್ಷಮಿಸುವುದಿಲ್ಲ” ಎಂದು ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭೆಯಲ್ಲಿ ಕೇಂದ್ರ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು ವಿನೇಶ್ ಫೋಗಟ್ ಅನರ್ಹತೆಯ ಬಗ್ಗೆ ಹೇಳಿಕೆ ನೀಡಿದ್ದು, ಕುಸ್ತಿಪಟುಗಳಿಗೆ ನೀಡಲಾದ ಎಲ್ಲಾ ನೆರವಿನ ಬಗ್ಗೆ ವಿವರಿಸಿದ್ದಾರೆ. ಆದರೆ, ಇದಕ್ಕೆ ವಿರೋಧ ಪಕ್ಷದ ಸಂಸದರು ಅತೃಪ್ತಿ ವ್ಯಕ್ತಪಡಿಸಿ ಸದನದಿಂದ ಹೊರನಡೆದ್ದಾರೆ.

ರಾಜ್ಯಸಭೆಯಲ್ಲಿ ವಿನಿಯೋಗ ವಿಧೇಯಕ-2024 ರ ಮೇಲಿನ ಚರ್ಚೆಯ ಸಂದರ್ಭದಲ್ಲಿ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು “ವಿನೇಶ್ ವಿಷಯವನ್ನು ಪ್ರಸ್ತಾಪಿಸಲು ಪ್ರಯತ್ನಿಸಿದರು. ಆದರೆ, ಸಭಾಪತಿ ಜಗದೀಪ್ ಧನಕರ್ ವಿರೋಧಿಸಿದರು. ಈ ವೇಳೆ ಇಂಡಿಯಾ ಒಕ್ಕೂಟದ ಸಂಸದರು ಸದನದಿಂದ ನಿರ್ಗಮಿಸಿದ್ದಾರೆ.

“ವಿನೇಶ್‌ ಫೋಗಟ್‌ ವಿಚಾರ ತುಂಬಾ ಪ್ರಮುಖವಾಗಿದ್ದು, ಅದರ ಹಿಂದೆ ಯಾರಿದ್ದಾರೆಂದು ನಮಗೆ ತಿಳಿಯಬೇಕಿದೆ” ಎಂದು ಖರ್ಗೆ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಭಾಪತಿ,”ತಮಗೆ ಮಾತ್ರ ನೋವಾಗುತ್ತಿದೆ ಎಂದು ಅವರು (ವಿಪಕ್ಷಗಳು) ಅಂದುಕೊಂಡಿದ್ದಾರೆ. ರಾಷ್ಟ್ರಪತಿ, ಪ್ರಧಾನಿ ಮತ್ತು ನಾನು ಸೇರಿದಂತೆ ಇಡೀ ದೇಶಕ್ಕೆ ನೋವಾಗಿದೆ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಆಕೆಗೆ (ಫೋಗಟ್) ಅಗೌರವ ತೋರಿದಂತೆ” ಎಂದಿದ್ದಾರೆ.

ಇದನ್ನೂ ಓದಿ : ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ನೋಟಿಸ್ ನೀಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...