Homeಮುಖಪುಟಕೆಲ ನಿರೂಪಕರು, ಟಿವಿ ಕಾರ್ಯಕ್ರಮಗಳಿಗೆ ಬಹಿಷ್ಕಾರ ಹಾಕಲು ನಿರ್ಧರಿಸಿದ INDIA ಒಕ್ಕೂಟ

ಕೆಲ ನಿರೂಪಕರು, ಟಿವಿ ಕಾರ್ಯಕ್ರಮಗಳಿಗೆ ಬಹಿಷ್ಕಾರ ಹಾಕಲು ನಿರ್ಧರಿಸಿದ INDIA ಒಕ್ಕೂಟ

- Advertisement -
- Advertisement -

INDIA ಒಕ್ಕೂಟದ ನಾಯಕರು ಕೆಲ ಟಿವಿ ಕಾರ್ಯಕ್ರಮಗಳು ಮತ್ತು ನಿರೂಪಕರ ಕಾರ್ಯಕ್ರಮದಲ್ಲಿ ಭಾಗವಹಿಸದೆ ಬಹಿಷ್ಕಾರ ಹಾಕಲು ಮುಂದಾಗಿದ್ದಾರೆ.

ಈ ಕುರಿತು INDIA ಒಕ್ಕೂಟದ ಸಮನ್ವಯ ಸಮಿತಿಯ ಮಾಧ್ಯಮ ಉಪ ಸಮಿತಿ ರಚಿಸಿದ್ದು, ಸಮಿತಿ ಬಹಿಷ್ಕಾರ ಹಾಕಬೇಕಾಗಿರುವ ನಿರೂಪಕರು ಮತ್ತು ಕಾರ್ಯಕ್ರಮಗಳ ಹೆಸರನ್ನು ಸಿದ್ಧಪಡಿಸುತ್ತಿದೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಮನೆಯಲ್ಲಿ ನಡೆದ  INDIA ಒಕ್ಕೂಟದ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ ಕೆಲ ಮಾಧ್ಯಮಗಳಿಗೆ ಬಹಿಷ್ಕಾರ ಹಾಕುವ ಸಲುವಾಗಿ ಆಂಕರ್‌ಗಳು ಮತ್ತು ಕಾರ್ಯಕ್ರಮಗಳನ್ನು ಪಟ್ಟಿ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಮಾಧ್ಯಮದ ಒಂದು ವಿಭಾಗವು ಕಡಿಮೆ ಕವರೇಜ್ ನೀಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಯಾತ್ರೆಗೆ ಜನ ಬೆಂಬಲ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಯಾತ್ರೆಗೆ ಹೆಚ್ಚು ಬೆಂಬಲ ನೀಡಲಾಗಿದೆ. ಆದರೆ ಮುಖ್ಯವಾಹಿನಿಯ ಮಾಧ್ಯಮಗಳು ರಾಹುಲ್‌ ಯಾತ್ರೆಯನ್ನು ಬಹಿಷ್ಕರಿಸುವುದನ್ನು ಮುಂದುವರೆಸಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಸಂಪಾದಕರು ಯಾತ್ರೆಯನ್ನು ಬಹಿಷ್ಕರಿಸಿದ್ದಾರೆ ಎಂಬುದು ನನ್ನ ಆರೋಪ. ಲಕ್ಷಗಟ್ಟಲೆ  ಜನ ಯಾತ್ರೆಗೆ ಸೇರಿದ್ದಾರೆ. ಇಷ್ಟು ದೊಡ್ಡ ಯಾತ್ರೆಯನ್ನು ನೀವು ತೋರಿಸುವುದಿಲ್ಲವೇ? ಎಂದು ರಾಜಸ್ಥಾನ ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

ಮೇ 2019ರಲ್ಲಿ ಕಾಂಗ್ರೆಸ್ ಒಂದು ತಿಂಗಳ ಕಾಲ ದೂರದರ್ಶನ ಕಾರ್ಯಕ್ರಮಗಳನ್ನು ಬಹಿಷ್ಕರಿಸಿತ್ತು.

ಒಂದು ತಿಂಗಳ ಕಾಲ ಟೆಲಿವಿಷನ್ ಚರ್ಚೆಗಳಿಗೆ ವಕ್ತಾರರನ್ನು ಕಳುಹಿಸದಿರಲು ಕಾಂಗ್ರೆಸ್ ನಿರ್ಧರಿಸಿತ್ತು. ಮಾಧ್ಯಮ ಚಾನೆಲ್‌ಗಳು ಮತ್ತು ಸಂಪಾದಕರು ತಮ್ಮ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಪ್ರತಿನಿಧಿಗಳನ್ನು ಇರಿಸದಂತೆ ವಿನಂತಿಸಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ 12 ಪಕ್ಷಗಳ ಪರವಾಗಿ ಮಾತನಾಡಿದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಇಂಡಿಯಾ ಒಕ್ಕೂಟದ ನಾಯಕರು ಟಿವಿಯ ಕೆಲ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಲಿದ್ದು, ಮಾಧ್ಯಮದ ಉಪ ಸಮಿತಿಯು ಈ ಕುರಿತ ಟಿವಿ ಶೋಗಳು ಮತ್ತು ನಿರೂಪಕರನ್ನು ಪಟ್ಟಿ ಮಾಡಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ದಲಿತ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಮೂತ್ರವಿಸರ್ಜನೆ:  ಬಿಜೆಪಿ ಶಾಸಕನ ಬೆಂಬಲಿಗ ಸೇರಿ 7 ಮಂದಿ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

0
ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿ ಅತ್ಯಂತ ಕಟ್ಟದಾಗಿದ್ದು, ನೆರೆಯ ಪಾಕಿಸ್ತಾನ, ಶ್ರೀಲಂಕಾ, ನೇಪಾಳಕ್ಕಿಂತಲೂ ಕಳಪೆಯಾಗಿದೆ. ಇದು ಪ್ರಜಾಪ್ರಭುತ್ವ ದೇಶಕ್ಕೆ ಯೋಗ್ಯವಾದ ಬೆಳವಣಿಗೆಯಲ್ಲ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಎಸ್‌ಎಫ್) ಬಿಡುಗಡೆ ಮಾಡಿದ 2024ರ...