Homeಮುಖಪುಟಕೆಲ ನಿರೂಪಕರು, ಟಿವಿ ಕಾರ್ಯಕ್ರಮಗಳಿಗೆ ಬಹಿಷ್ಕಾರ ಹಾಕಲು ನಿರ್ಧರಿಸಿದ INDIA ಒಕ್ಕೂಟ

ಕೆಲ ನಿರೂಪಕರು, ಟಿವಿ ಕಾರ್ಯಕ್ರಮಗಳಿಗೆ ಬಹಿಷ್ಕಾರ ಹಾಕಲು ನಿರ್ಧರಿಸಿದ INDIA ಒಕ್ಕೂಟ

- Advertisement -
- Advertisement -

INDIA ಒಕ್ಕೂಟದ ನಾಯಕರು ಕೆಲ ಟಿವಿ ಕಾರ್ಯಕ್ರಮಗಳು ಮತ್ತು ನಿರೂಪಕರ ಕಾರ್ಯಕ್ರಮದಲ್ಲಿ ಭಾಗವಹಿಸದೆ ಬಹಿಷ್ಕಾರ ಹಾಕಲು ಮುಂದಾಗಿದ್ದಾರೆ.

ಈ ಕುರಿತು INDIA ಒಕ್ಕೂಟದ ಸಮನ್ವಯ ಸಮಿತಿಯ ಮಾಧ್ಯಮ ಉಪ ಸಮಿತಿ ರಚಿಸಿದ್ದು, ಸಮಿತಿ ಬಹಿಷ್ಕಾರ ಹಾಕಬೇಕಾಗಿರುವ ನಿರೂಪಕರು ಮತ್ತು ಕಾರ್ಯಕ್ರಮಗಳ ಹೆಸರನ್ನು ಸಿದ್ಧಪಡಿಸುತ್ತಿದೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಮನೆಯಲ್ಲಿ ನಡೆದ  INDIA ಒಕ್ಕೂಟದ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ ಕೆಲ ಮಾಧ್ಯಮಗಳಿಗೆ ಬಹಿಷ್ಕಾರ ಹಾಕುವ ಸಲುವಾಗಿ ಆಂಕರ್‌ಗಳು ಮತ್ತು ಕಾರ್ಯಕ್ರಮಗಳನ್ನು ಪಟ್ಟಿ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಮಾಧ್ಯಮದ ಒಂದು ವಿಭಾಗವು ಕಡಿಮೆ ಕವರೇಜ್ ನೀಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಯಾತ್ರೆಗೆ ಜನ ಬೆಂಬಲ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಯಾತ್ರೆಗೆ ಹೆಚ್ಚು ಬೆಂಬಲ ನೀಡಲಾಗಿದೆ. ಆದರೆ ಮುಖ್ಯವಾಹಿನಿಯ ಮಾಧ್ಯಮಗಳು ರಾಹುಲ್‌ ಯಾತ್ರೆಯನ್ನು ಬಹಿಷ್ಕರಿಸುವುದನ್ನು ಮುಂದುವರೆಸಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಸಂಪಾದಕರು ಯಾತ್ರೆಯನ್ನು ಬಹಿಷ್ಕರಿಸಿದ್ದಾರೆ ಎಂಬುದು ನನ್ನ ಆರೋಪ. ಲಕ್ಷಗಟ್ಟಲೆ  ಜನ ಯಾತ್ರೆಗೆ ಸೇರಿದ್ದಾರೆ. ಇಷ್ಟು ದೊಡ್ಡ ಯಾತ್ರೆಯನ್ನು ನೀವು ತೋರಿಸುವುದಿಲ್ಲವೇ? ಎಂದು ರಾಜಸ್ಥಾನ ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

ಮೇ 2019ರಲ್ಲಿ ಕಾಂಗ್ರೆಸ್ ಒಂದು ತಿಂಗಳ ಕಾಲ ದೂರದರ್ಶನ ಕಾರ್ಯಕ್ರಮಗಳನ್ನು ಬಹಿಷ್ಕರಿಸಿತ್ತು.

ಒಂದು ತಿಂಗಳ ಕಾಲ ಟೆಲಿವಿಷನ್ ಚರ್ಚೆಗಳಿಗೆ ವಕ್ತಾರರನ್ನು ಕಳುಹಿಸದಿರಲು ಕಾಂಗ್ರೆಸ್ ನಿರ್ಧರಿಸಿತ್ತು. ಮಾಧ್ಯಮ ಚಾನೆಲ್‌ಗಳು ಮತ್ತು ಸಂಪಾದಕರು ತಮ್ಮ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಪ್ರತಿನಿಧಿಗಳನ್ನು ಇರಿಸದಂತೆ ವಿನಂತಿಸಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ 12 ಪಕ್ಷಗಳ ಪರವಾಗಿ ಮಾತನಾಡಿದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಇಂಡಿಯಾ ಒಕ್ಕೂಟದ ನಾಯಕರು ಟಿವಿಯ ಕೆಲ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಲಿದ್ದು, ಮಾಧ್ಯಮದ ಉಪ ಸಮಿತಿಯು ಈ ಕುರಿತ ಟಿವಿ ಶೋಗಳು ಮತ್ತು ನಿರೂಪಕರನ್ನು ಪಟ್ಟಿ ಮಾಡಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ದಲಿತ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಮೂತ್ರವಿಸರ್ಜನೆ:  ಬಿಜೆಪಿ ಶಾಸಕನ ಬೆಂಬಲಿಗ ಸೇರಿ 7 ಮಂದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...