Homeಮುಖಪುಟಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 50% ಮೀಸಲಾತಿ ಮಿತಿ ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 50% ಮೀಸಲಾತಿ ಮಿತಿ ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ

- Advertisement -
- Advertisement -

ಲೋಕಸಭೆ ಚುನಾವಣೆಯ ನಂತರ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಿದರೆ, ರಾಷ್ಟ್ರವ್ಯಾಪಿ ಜಾತಿ ಗಣತಿ ಮಾಡಿಸುತ್ತೇವೆ ಮತ್ತು ಮೀಸಲಾತಿ ಮೇಲಿನ ಶೇ.50 ಮಿತಿಯನ್ನು ತೆಗೆದು ಹಾಕುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಭರವಸೆ ನೀಡಿದ್ದಾರೆ.

ಜಾರ್ಖಂಡ್‌ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಜಾತಿ ಗಣತಿಗೆ ಬೇಡಿಕೆ ಬಂದಾಗ. ಒಬಿಸಿಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರಿಗೆ ಹಕ್ಕುಗಳನ್ನು ನೀಡುವ ಸಮಯ ಬಂದಾಗ ಪ್ರಧಾನಿ ಮೊಡಿ ಜಾತಿ ವ್ಯವಸ್ಥೆಯೇ ಇಲ್ಲ ಎಂದು ಹೇಳುತ್ತಾರೆ. ಆದರೆ, ಓಟ್ ಬಂದಾಗ ನಾನು ಒಬಿಸಿ ಎನ್ನುತ್ತಾರೆ ಎಂದು ಕಿಡಿಕಾರಿದರು.

ದಲಿತರು, ಆದಿವಾಸಿಗಳಿಗೆ ಮೀಸಲಾತಿಯಲ್ಲಿ ಯಾವುದೇ ಕೊರತೆ ಆಗುವುದಿಲ್ಲ. ನಾನು ಈ ಮಾತಿಗೆ ಗ್ಯಾರಂಟಿ ನೀಡುತ್ತೇನೆ. ಹಿಂದುಳಿದ ಜನರಿಗೆ ನಿಮ್ಮ ಹಕ್ಕು ಖಂಡಿತಾ ಸಿಗಲಿದೆ ಎಂದು ರಾಹುಲ್ ಜನರಿಗೆ ಭರವಸೆ ನೀಡಿದರು.

ಹಿಂದುಳಿದವರು, ದಲಿತರು ಮತ್ತು ಆದಿವಾಸಿಗಳನ್ನು ಜೀತದಾಳುಗಳನ್ನಾಗಿ ಮಾಡಲು ಹೊರಟಿದ್ದಾರೆ. ದೊಡ್ಡ ದೊಡ್ಡ ಕಂಪನಿಗಳಲ್ಲಿ, ಆಸ್ಪತ್ರೆಗಳಲ್ಲಿ, ಕೋರ್ಟ್‌ಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಇವರ್ಯಾರಿಗೂ ಸಮಾನತೆ ಎಂಬುವುದಿಲ್ಲ. ಆದಿವಾಸಿಗಳು ಸೈಕಲ್ ಮೇಲೆ 200 ಕೆ.ಜಿ ಕಲ್ಲಿದ್ದಲ್ಲನ್ನು ಹೇರಿಕೊಂಡು ಒಬ್ಬರೇ ದೂಡುತ್ತಾ 50 ಕಿ.ಮೀ ಸಾಗುತ್ತಾರೆ. ನಾನು ನನ್ನ ಕಣ್ಣಾರೆ ಕಂಡಿದ್ದೇನೆ. ಅಂತಹ ಕೆಲಸಗಳಲ್ಲಿ ಆದಿವಾಸಿಗಳು ಸಿಗುತ್ತಾರೆ. ದಲಿತರು ಸಿಗುತ್ತಾರೆ. ಇದು ಹಿಂದುಸ್ತಾನ ಎದುರಿಸುತ್ತಿರುವ ಅತ್ಯಂತ ದೊಡ್ಡ ಸವಾಲು ಎಂದರು.

ನಮ್ಮ ಹೋರಾಟದ ಮೊದಲ ಹೆಜ್ಜೆ ಜಾತಿ ಗಣತಿ ಮಾಡುದಾಗಿದೆ. ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ. ಆದಿವಾಸಿಗಳಿಗೆ ಸರ್ನಾ ಪ್ರತ್ಯೇಕ ಧರ್ಮ ಸ್ಥಾನಮಾನ ಕೊಡಬೇಕು. ಈ ಕೆಲಸವನ್ನು ನಾವು ನಿಮಗಾಗಿ ಮಾಡೇ ಮಾಡುತ್ತೇವೆ. ಗಾಬರಿಯಾಗಬೇಡಿ, ಭಯಪಡಬೇಡಿ ಎಂದು ರಾಹುಲ್ ಹೇಳಿದರು.

ಇದನ್ನೂ ಓದಿ : ಭಾರತ್ ಜೋಡೋ ನ್ಯಾಯ ಯಾತ್ರೆ: ಜಾತಿವಾರು ಜನಸಂಖ್ಯೆ, ತೆರಿಗೆ ಪಾವತಿ ಬಗ್ಗೆ ಬಹಿರಂಗಪಡಿಸಬೇಕು; ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...