Homeಮುಖಪುಟಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 50% ಮೀಸಲಾತಿ ಮಿತಿ ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ 50% ಮೀಸಲಾತಿ ಮಿತಿ ಕಿತ್ತೆಸೆಯುತ್ತೇವೆ: ರಾಹುಲ್ ಗಾಂಧಿ

- Advertisement -
- Advertisement -

ಲೋಕಸಭೆ ಚುನಾವಣೆಯ ನಂತರ ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರ್ಕಾರ ರಚಿಸಿದರೆ, ರಾಷ್ಟ್ರವ್ಯಾಪಿ ಜಾತಿ ಗಣತಿ ಮಾಡಿಸುತ್ತೇವೆ ಮತ್ತು ಮೀಸಲಾತಿ ಮೇಲಿನ ಶೇ.50 ಮಿತಿಯನ್ನು ತೆಗೆದು ಹಾಕುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಭರವಸೆ ನೀಡಿದ್ದಾರೆ.

ಜಾರ್ಖಂಡ್‌ನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಜಾತಿ ಗಣತಿಗೆ ಬೇಡಿಕೆ ಬಂದಾಗ. ಒಬಿಸಿಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರಿಗೆ ಹಕ್ಕುಗಳನ್ನು ನೀಡುವ ಸಮಯ ಬಂದಾಗ ಪ್ರಧಾನಿ ಮೊಡಿ ಜಾತಿ ವ್ಯವಸ್ಥೆಯೇ ಇಲ್ಲ ಎಂದು ಹೇಳುತ್ತಾರೆ. ಆದರೆ, ಓಟ್ ಬಂದಾಗ ನಾನು ಒಬಿಸಿ ಎನ್ನುತ್ತಾರೆ ಎಂದು ಕಿಡಿಕಾರಿದರು.

ದಲಿತರು, ಆದಿವಾಸಿಗಳಿಗೆ ಮೀಸಲಾತಿಯಲ್ಲಿ ಯಾವುದೇ ಕೊರತೆ ಆಗುವುದಿಲ್ಲ. ನಾನು ಈ ಮಾತಿಗೆ ಗ್ಯಾರಂಟಿ ನೀಡುತ್ತೇನೆ. ಹಿಂದುಳಿದ ಜನರಿಗೆ ನಿಮ್ಮ ಹಕ್ಕು ಖಂಡಿತಾ ಸಿಗಲಿದೆ ಎಂದು ರಾಹುಲ್ ಜನರಿಗೆ ಭರವಸೆ ನೀಡಿದರು.

ಹಿಂದುಳಿದವರು, ದಲಿತರು ಮತ್ತು ಆದಿವಾಸಿಗಳನ್ನು ಜೀತದಾಳುಗಳನ್ನಾಗಿ ಮಾಡಲು ಹೊರಟಿದ್ದಾರೆ. ದೊಡ್ಡ ದೊಡ್ಡ ಕಂಪನಿಗಳಲ್ಲಿ, ಆಸ್ಪತ್ರೆಗಳಲ್ಲಿ, ಕೋರ್ಟ್‌ಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ ಇವರ್ಯಾರಿಗೂ ಸಮಾನತೆ ಎಂಬುವುದಿಲ್ಲ. ಆದಿವಾಸಿಗಳು ಸೈಕಲ್ ಮೇಲೆ 200 ಕೆ.ಜಿ ಕಲ್ಲಿದ್ದಲ್ಲನ್ನು ಹೇರಿಕೊಂಡು ಒಬ್ಬರೇ ದೂಡುತ್ತಾ 50 ಕಿ.ಮೀ ಸಾಗುತ್ತಾರೆ. ನಾನು ನನ್ನ ಕಣ್ಣಾರೆ ಕಂಡಿದ್ದೇನೆ. ಅಂತಹ ಕೆಲಸಗಳಲ್ಲಿ ಆದಿವಾಸಿಗಳು ಸಿಗುತ್ತಾರೆ. ದಲಿತರು ಸಿಗುತ್ತಾರೆ. ಇದು ಹಿಂದುಸ್ತಾನ ಎದುರಿಸುತ್ತಿರುವ ಅತ್ಯಂತ ದೊಡ್ಡ ಸವಾಲು ಎಂದರು.

ನಮ್ಮ ಹೋರಾಟದ ಮೊದಲ ಹೆಜ್ಜೆ ಜಾತಿ ಗಣತಿ ಮಾಡುದಾಗಿದೆ. ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ. ಆದಿವಾಸಿಗಳಿಗೆ ಸರ್ನಾ ಪ್ರತ್ಯೇಕ ಧರ್ಮ ಸ್ಥಾನಮಾನ ಕೊಡಬೇಕು. ಈ ಕೆಲಸವನ್ನು ನಾವು ನಿಮಗಾಗಿ ಮಾಡೇ ಮಾಡುತ್ತೇವೆ. ಗಾಬರಿಯಾಗಬೇಡಿ, ಭಯಪಡಬೇಡಿ ಎಂದು ರಾಹುಲ್ ಹೇಳಿದರು.

ಇದನ್ನೂ ಓದಿ : ಭಾರತ್ ಜೋಡೋ ನ್ಯಾಯ ಯಾತ್ರೆ: ಜಾತಿವಾರು ಜನಸಂಖ್ಯೆ, ತೆರಿಗೆ ಪಾವತಿ ಬಗ್ಗೆ ಬಹಿರಂಗಪಡಿಸಬೇಕು; ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...